Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...