Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...