HomeUncategorizedಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

- Advertisement -
- Advertisement -

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ದತೆ ನಡೆಸುತ್ತಿರುವಾಗಲೇ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೆಲವು ಹರಕುಬಾಯಿಯ, ಕೊಳಕು ಮಾತುಗಳ ಸರದಾರರನ್ನು
ಸದ್ದಿಲ್ಲದೆ ಕೈಬಿಡಲಾಗಿದೆ. ಜನರನ್ನು ಪ್ರಚೋದಿಸುವುದು ಮತ್ತು ದ್ವಂದ್ವಾರ್ಥದ ಡೈಲಾಗ್ ಹೇಳಿ ಜನರನ್ನು ನಗಿಸುತ್ತಾ ತಾನು ನಗೆಪಾಟಲಿಗೆ ಒಳಗಾಗುತ್ತಿದ್ದ ವ್ಯಕ್ತಿಗಳನ್ನು ಪ್ರಚಾರಸಭೆಗಳಿಂದ ಕೈಬಿಟ್ಟು ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಹೊರಟಿದೆ.

ಹೌದು, ಸಂಸದ ಅನಂತಕುಮಾರ್ ಹೆಗಡೆ ಬಾಯಿ ಬಿಟ್ಟರೆ ಸಾಕು ಬರೀ ದ್ವೇಷದ ಬೆಂಕಿಯನ್ನೇ ಉಗುಳುತ್ತಿದ್ದ ವ್ಯಕ್ತಿ. ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲೀಮರು ಮತ್ತು ದಲಿತರು, ಬಿಜೆಪಿಯೇತರ ಯಾವುದೇ  ಮುಖಂಡರಾಗಲಿ ಅವರ ವಿರುದ್ದ  ಕೆಂಡ ಕಾರುತ್ತಿದ್ದರು.

ಕರಾವಳಿಯವರನ್ನು ಬಿಟ್ಟರೆ ಬೇರೆ ಯಾರಿಗೂ ಕನ್ನಡ ಮಾತನಾಡುವುದೇ ಬರುವುದಿಲ್ಲ ಎಂದು ಹೇಳಿ ಭಾರೀ ಪ್ರಚಾರ ಪಡೆದಿದ್ದರು. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಮೇಲೆ ಹಲ್ಲೆಯೂ ನಡೆಸಿದ್ದರು. ಸಂವಿಧಾನವನ್ನು ಬದಲಾಯಿಸಲೆಂದೇ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಅನಂತಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯ ಮತ್ತು ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇಂತಹ ಪ್ರಚೋದನಾತ್ಮಕ ಮಾತುಗಳಿಂದಲೇ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಬಿಜೆಪಿ ಅದ್ಯಾಕೋ ಅನಂತ ಎಂದರೆ ಅನಂತ ದೂರ ಎಂಬಂತೆ ದೂರದೂರ ಸರಿದಿದೆ.

ಯಾವಾಗಲೇ ಚುನಾವಣೆ ನಡೆಯಲಿ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇರುತ್ತಿತ್ತು. ಆದರೆ ಬಿಜೆಪಿಗೆ ಜ್ಞಾನೋದಯವಾಗಿದೆಯೋ ಅಥವಾ ಬೇಕೆಂದೇ ಅನಂತ ಹೆಗಡೆ ಹೆಸರು ಬಿಟ್ಟಿದೆಯೋ ಗೊತ್ತಿಲ್ಲ. ಆದರೆ ಅವರ ಹೆಸರನ್ನು ಮೆಲ್ಲಗೆ ಇಲ್ಲದಂತೆ ಮಾಡಿದೆ. ಪ್ರಚೋದನೆಯ ಹೇಳಿಕೆಗಳು ಲಾಭವನ್ನು ತಂದುಕೊಡುವುದಿಲ್ಲ ಎಂಬ ಭಾವನೆ ಬಿಜೆಪಿಯಲ್ಲಿ ಬಂದಿದೆಯೋ ಎನ್ನುವ ಅನುಮಾನ ಕಾಡುತ್ತದೆ.

ತಾನು ಹೀಗೆ ಮಾತನಾಡಿದರೆ ಪ್ರಚಾರ ಪಡೆದುಕೊಳ್ಳಬಹುದು ಎಂದುಕೊಂಡಿದ್ದ ಅನಂತಕುಮಾರ್ ಹೆಗಡೆ ಇದೀಗ ಬಾಯಿ ಒಲಿದುಕೊಂಡು ಕೂರುವಂತೆ ಮಾಡಿದೆ ಬಿಜೆಪಿ. ಸಚಿವ ಸ್ಥಾನವೂ ಇಲ್ಲದೆ, ಪ್ರಚಾರ ಸಭೆಗಳಲ್ಲೂ ಭಾಗವಹಿಸದೇ ಅನಂತ ಇರಬೇಕಾಗಿದೆ. ಅಂದರೆ ಇಂತಹ ಹರಕುಬಾಯಿಯಿಂದ ಪಕ್ಷಕ್ಕೆ ಮತಗಳು ಬರುವುದಿಲ್ಲ. ಇವರನ್ನು ಪ್ರಚಾರಕ್ಕೆ ಕರೆದು ತಂದರೆ ಬರುವ ಮತಗಳು ಹೋಗುತ್ತವೆ. ಅವರೇನಿದ್ದರೂ ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತ ಎಂಬ ತೀರ್ಮಾನಕ್ಕೆ ಬಿಜೆಪಿ ಬಂದಂತಿದೆ.

ಇನ್ನೊಂದು ಕಡೆ ಸಿನಿಮಾ ನಟ ಜಗ್ಗೇಶ್ ಅವರ ಹೆಸರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತುರುವೇಕೆರೆ ಜಡೇಮಾಯಸಂದ್ರದ ಜಗ್ಗೇಶಣ್ಣ ಪ್ರಚಾರ ಪಟ್ಟಿಗೆ ಸೇರ್ಪಡೆ ಮಾಡಲು ಬಿಜೆಪಿ ರಾಜ್ಯ ನಾಯಕತ್ವ ಹಿಂದೇಟು ಹಾಕಿದೆ. ನಟಿಯರಾದ ತಾರ ಮತ್ತು ಶ್ರುತಿ ಅವರ ಜೊತೆ ಜಗ್ಗೇಶ್ ಕೂಡ ಇರುತ್ತಿದ್ದರು. ಈಗ ಅವರು ಬಿಜೆಪಿಯಲ್ಲಿ ಲೆಕ್ಕಕ್ಕೂ, ಆಟಕ್ಕೂ ಇಲ್ಲದ ವ್ಯಕ್ತಿಯಾಗಿದ್ದಾರೆ.

ಸಿನಿಮಾ ಡೈಲಾಗ್ ಹೊಡೆದು ಜನರನ್ನು ರಂಜಿಸುತ್ತಿದ್ದ ಜಗ್ಗೇಶ್ ಈಗ ಸ್ಟಾರ್ ಅಲ್ಲ ಎಂಬುದನ್ನು ಬಿಜೆಪಿ ಕಂಡುಕೊಂಡಿದೆ. ಇದುವರೆಗೂ ಚುನಾವಣೆಗಳಲ್ಲಿ ಅವರನ್ನು ಬಳಸಿಕೊಂಡು ಕಸದಂತೆ ಬಿಸಾಕಿದೆ. ಬಿಜೆಪಿಯಲ್ಲಿ ಗಿಮಿಕ್ ಮಾಡಬಹುದು ಅಂದುಕೊಂಡಿದ್ದ ಜಗ್ಗೇಶಣ್ಣ ಸಿನಿಮಾದ ಜಪ ಮಾಡುತ್ತಿದ್ದಾರೆ ಎಂದು ಕೆಲವರು ಗೇಲಿ ಮಾಡುತ್ತಿದ್ದಾರೆ. ಜಗ್ಗೇಶ್ ಕೂಡಾ ಕೊಳಕು ಮಾತುಗಳನ್ನು ಆಡುತ್ತಿದ್ದರು. ಈಗ ಬಿಜೆಪಿಯಲ್ಲಿ ಅವರ ಪಾತ್ರವೇನು ಎನ್ನುವ ಪ್ರಶ್ನೆ ಎದುರಾಗಿದೆ.

ಕುಮಾರಸ್ವಾಮಿ ಸರ್ಕಾರ ಅಧಿಕಾರದಿಂದ ಇಳಿದು ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬಿಜೆಪಿಯನ್ನು ಸಮರ್ಥವಾಗಿ ಸಮರ್ಥಿಸಿಕೊಂಡಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಚಾರಕರ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ. ಆರ್. ಅಶೋಕ ಅವರ ಹೆಸರೂ ಕೂಡ 18ನೇ ಸ್ಥಾನಕ್ಕೆ ಕುಸಿದಿದೆ. ‘ತೆಂಗಿನಕಾಯಿ’ ಬೆಲೆಗಿಂತಲೂ ಕಡಿಮೆ ಎಂದು ಅಶೋಕ್ ಸ್ಥಾನದ ಕುರಿತು ಗೇಲಿ ಮಾಡಿದ್ದಾರೆ.

ಸಜ್ಜನ ರಾಜಕಾರಣಿಯೆಂದು ಘೋಷಿಸಿಕೊಂಡಿರುವ ಎಸ್. ಸುರೇಶ್ ಕುಮಾರ್ ಅವರಿಗೂ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಕಾಂಗ್ರೆಸ್ ನಲ್ಲಿ ಪಾಂಚಜನ್ಯ ಮೊಳಗಿಸಿ ಕೊನೆಗಾಲದಲ್ಲಿ ಬಿಜೆಪಿ ಸೇರ್ಪಡೆಗೊಂಡ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿಯ ಗರ್ಭಗುಡಿಗೆ ಬಿಟ್ಟುಕೊಂಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ಹೊರಹಾಕಿ ಹೊರನಡೆದ ದಲಿತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೂ ಪಕ್ಷದ ಹತ್ತಿರ ಸುಳಿಯಗೊಟ್ಟಿಲ್ಲ.

ಆರ್ ಎಸ್ ಎಸ್ ನಿಂದ ರಾಜಕಾರಣಕ್ಕೆ ಬಂದ ಬಿ.ಎಲ್.ಸಂತೋಷ್, ಎಬಿವಿಪಿಯಿಂದ ಬಂದ ಎನ್. ರವಿಕುಮಾರ್ ಮತ್ತು, ಪ್ರಹ್ಲಾದ ಜೋಶಿ ಸೇರಿದಂತೆ ಪ್ರಮುಖ ಬ್ರಾಹ್ಮಣರು ಮತ್ತು ಲಿಂಗಾಯತ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಾಪ್ ಸಿಂಹ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೂ ಹಿಂದೆ ಕೂರುವಂತಹ ಪರಿಸ್ಥಿತಿ ಇದೆ.

ಗರ್ಭಗುಡಿ ಸಂಸ್ಕೃತಿಯಲ್ಲಿ ಆರ್ ಎಸ್ಎಸ್ ಮೂಲದವರಿಗೆ ಮೊದಲ ಆದ್ಯತೆ ನೀಡಿರುವುದು ಎದ್ದು ಕಾಣುತ್ತದೆ. ಯಡಿಯೂರಪ್ಪ ಬೆಂಬಲಿಗರನ್ನು ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಬಿ.ಎಲ್. ಸಂತೋಷ್ ಮತ್ತು ಅಧ್ಯಕ್ಷರ ಕೈ ಮೇಲಾಗಿರುವುದು ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿದರೆ ಗೊತ್ತಾಗುತ್ತದೆ. ಇನ್ನು ಕಾಂಗ್ರೆಸ್ ನಲ್ಲಿ ಸ್ಟಾರ್ ಪ್ರಚಾರಕರಾಗಿದ್ದ,  ಜೆಡಿಎಸ್ ನಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಎಚ್.ವಿಶ್ವನಾಥ್ ಬಿಜೆಪಿಯಲ್ಲಿ ಕೇವಲ ಸ್ಥಳೀಯ ಮುಖಂಡರಂತೆ ಇರಬೇಕಾಗಿದೆ.

ಗೋವಿಂದ ಕಾರಜೋಳ ಸೇರಿದಂತೆ ಒಂದಿಬ್ಬರು ಮೂವರು ದಲಿತ ನಾಯಕರ ಹೆಸರನ್ನು ಮತ ಗಳಿಕೆಗೆ ಮಾತ್ರ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹಾಕಲಾಗಿದೆ. ಅದು ನೆಪ ಮಾತ್ರ. ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಎ. ನಾರಾಯಣಸ್ವಾಮಿ ಅವರನ್ನು ಪ್ರಚಾರಕರ ಪಟ್ಟಿಯಲ್ಲಿ ಹಾಕಿಕೊಂಡಿದ್ದರು. ಈಗ ಅವರ ಹೆಸರನ್ನು ಕೈಬಿಟ್ಟು ಕೇವಲ ಬ್ರಾಹ್ಮಣರು ಮತ್ತು ಲಿಂಗಾಯತರು ಅದರಲ್ಲೂ ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

ಕೆ.ಈ.ಸಿದ್ದಯ್ಯ

 

(ಅತಿಥಿ ಲೇಖಕರ ಬರಹಗಳಲ್ಲಿನ ಅಭಿಪ್ರಾಯಗಳು ಅವರ ಸ್ವಂತದ್ದೇ ಹೊರತು, ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅನಿಸಿಕೆಗಳಾಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...