Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...