Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...