Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...