Homeಸಾಮಾಜಿಕಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

ಪೋಸ್ಟ್ ಕಾರ್ಡ್ ಸೈಜಿನ ಫೇಕ್ ಫ್ಯಾಕ್ಟರಿಗೆ ಬಿತ್ತು ಬೀಗ!

- Advertisement -
- Advertisement -

ಕಡೆಗೂ ಎಚ್ಚೆತ್ತುಕೊಂಡ ಫೇಸ್‍ಬುಕ್ಕು ಕೆಟ್ಟದೊಂದು ಪುಟಕ್ಕೆ ಫುಲ್‍ಸ್ಟಾಪ್ ಇಟ್ಟಿದೆ. ಅದು `ಪೋಸ್ಟ್‍ಕಾರ್ಡ್’! ಮಹೇಶ್ ವಿಕ್ರಮ್ ಹೆಗ್ಡೆ ಎಂಬ ಆರೆಸ್ಸೆಸ್ ಮಾಣಿ ನಡೆಸುತ್ತಿದ್ದ ಫೇಕ್ ನ್ಯೂಸ್‍ಗಳ ಸುಳ್ಳಿನ ಫ್ಯಾಕ್ಟರಿಯಂತಿದ್ದ ಅದು ಬಿತ್ತರಿಸುತ್ತಿದುದ್ದೆಲ್ಲ ಕೋಮು ಪ್ರಚೋದಕ ಸುಳ್ಳುಗಳನ್ನು. ಸಮಾಜದ ಸ್ವಾಸ್ಥ್ಯ ಕದಡುವ, ಇದೇ ಕಾರಣಕ್ಕೆ ಇತ್ತೀಚೆಗಷ್ಟೇ ಸೈಬರ್ ಕ್ರೈಮ್ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆಯನ್ನು ಅರೆಸ್ಟ್ ಮಾಡಿ ಜೈಲಿಗೂ ಗದುಮಿದ್ದರು. ಈಗ ಎಚ್ಚೆತ್ತುಕೊಂಡಿರುವ ಫೇಸ್‍ಬುಕ್ ಕೋಮುಕ್ರಿಮಿಯಿಂದ ತನಗೆ ಅಂಟಬಹುದಾದ ಕಳಂಕವನ್ನು ತೊಳೆದುಕೊಳ್ಳಲು ಆತನ ಪೋಸ್ಟ್‍ಕಾರ್ಡ್ ನ್ಯೂಸ್ ಫೇಸ್‍ಬುಕ್ ಪೇಜನ್ನು ರದ್ದು ಮಾಡಿ ಮಾನಸ್ಥ ಮನುಷ್ಯರ ಕೊಂಚ ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಅಸಲಿಗೆ, ಬಿಜೆಪಿ ಮತ್ತು ಸಂಘ ಪರಿವೆಂದರೇನೆ ಪೇಕ್‍ನ್ಯೂಸ್‍ಗಳ ಪಿತೃಸ್ಥಾನಗಳಂತೆ ಎಂಬ ಆರೋಪವಿದೆ. ಅದನ್ನು ನಿಜ ಮಾಡುವಂತೆಯೇ ಅವರ ವರ್ತನೆಗಳಿರೋದು ದುರಾದೃಷ್ಟ. ರಾಜಕೀಯ ದುರುದ್ದೇಶದಿಂದ ಸೃಷ್ಟಿಸಿ, ಹರಿದಾಡಿಸಲ್ಪಟ್ಟ ಫೇಕ್ ನ್ಯೂಸ್‍ಗಳು ಜನರ ನೆಮ್ಮದಿಯನ್ನೇ ಹಾಳುಗೆಡವುತ್ತಿರೋದು ಈ ಸಂದರ್ಭದ ದುರಂತ. ಕನ್ನಡದ ವಾತಾವರಣದ ಮಟ್ಟಿಗೆ ಅಂತಹ ಸುದ್ದಿಗಳಿಗೆಲ್ಲ ತವರುಮನೆಯಂತಿದ್ದಿದ್ದು ಈ ಪೋಸ್ಟ್‍ಕಾರ್ಡ್ ವೆಬ್‍ಸೈಟು ಮತ್ತದರ ಫೇಸ್‍ಬುಕ್ ಪೇಜು!
ಮಹೇಶ್ ವಿಕ್ರಮ್ ಹೆಗ್ಡೆಯ ಈ ಪೇಜ್‍ನಲ್ಲಿ ಮುಸ್ಲಿಂ ಸಮುದಾಯದ ವಿರುದ್ದ ಹಿಂದೂತ್ವದ ಕೋಮುಭಾವನೆ ಬಿತ್ತುವಂತ ಸುದ್ದಿಗಳದ್ದೇ ಕಾರುಬಾರು. ರಾಣಿ ಚೆನ್ನಮ್ಮ ಮತ್ತು ಒನಕೆ ಓಬವ್ವರ ಬಗ್ಗೆ ಅಶ್ಲೀಲ ಪೋಸ್ಟ್ ಹಾಕಿದ್ದ ಈತ, ಮಾರ್ಚ್ 18ರಂದು ಆಕ್ಸಿಡೆಂಟ್‍ನಲ್ಲಿ ಮರಣ ಹೊಂದಿದ್ದ ಜೈನ ಸನ್ಯಾಸಿಯನ್ನು ಮುಸ್ಲಿಂ ಯುವಕರು ಕೊಲೆ ಮಾಡಿದ್ದಾರೆಂದು ತನ್ನ ಪೋಸ್ಟ್‍ಕಾರ್ಡ್ ಪೇಜ್‍ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ. ಈ ಸುಳ್ಳನ್ನು ಆಧಾರವಾಗಿಟ್ಟುಕೊಂಡೇ ಮಾರ್ಚ್ 29ರಂದು ಸೈಬರ್ ಕ್ರೈಮ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯಿದೆ 66 ಮತ್ತು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅರೆಸ್ಟ್ ಮಾಡಿ, ಸಿಲವರ್ ತಟ್ಟೆಯಲ್ಲಿ ಜೈಲೂಟ ಬಡಿಸಿದ್ದರು. ಈತನನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಕಂ ಕಾಂಟ್ರವರ್ಸಿ ಕಿಂಗ್ ಅನಂತಕುಮಾರ್ ಹೆಗಡೆಯನ್ನೂ ಒಳಗೊಂಡಂತೆ ಬಿಜೆಪಿಯ ಹಲವಾರು ಲೀಡರುಗಳು ಒಂದು ಕ್ಯಾಂಪೇನನ್ನೇ ನಡೆಸಿದ್ದರು! ಮಹೇಶ್ ವಿಕ್ರಂ ಹೆಗ್ಡೆಯ ಫೇಕ್ ನ್ಯೂಸ್‍ಗಳ ಫಲಾನುಭವಿಗಳು ಯಾರು ಅನ್ನೋದಕ್ಕೆ ಇದೊಂದು Phಥಿsiಛಿಚಿಟ ನಿದರ್ಶನವಷ್ಟೆ. ಅಂದಹಾಗೆ, ಬಿಜೆಪಿ ಸಂಸದ ಪ್ರತಾಪ್ ಸಿಂಗ ಹೆಗ್ಡೆ ಈತನ ಅತ್ಯಾಪ್ತ!
ಹಾಗೆ ನೋಡಿದರೆ, 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಭರಪೂರ ಫಸಲು ತಂದುಕೊಡುವಲ್ಲಿ ಇಂಥಾ ಫೇಕ್‍ಸುದ್ದಿ ವೀರರ ಪಾತ್ರವೂ ಇತ್ತೆಂದರೆ ತಪ್ಪಾಗಲಿಕ್ಕಿಲ್ಲ. ಮೋದಿಯ ಸುಳ್ಳು ಪೊಳ್ಳು ಭಾಷಣಗಳನ್ನು ಹೈಲೈಟ್ ಮಾಡಿ, ಫೋಟೋಶಾಪ್‍ನಲ್ಲೇ ಗುಜರಾತ್ ಅಭಿವೃದ್ಧಿಯನ್ನು ಸೃಷ್ಟಿಸಿ ಜನರ ನಡುವೆ ಹರಿಯಬಿಟ್ಟ ಇಂತವರಿಂದಾಗಿಯೇ ಮೋದಿ ಸಲೀಸಾಗಿ ಗದ್ದುಗೆ ಏರಲು ಸಾಧ್ಯವಾದದ್ದು. ಅಂತವರಿಂದ ಪ್ರೇರಣೆ ಪಡೆದೇ ವಿಕ್ರಂ ಹೆಗ್ಡೆ ಪೋಸ್ಟ್‍ಕಾರ್ಡ್‍ಗೆ ಜನ್ಮಕೊಟ್ಟಿದ್ದ. ಹಿಂದೂತ್ವದ, ರಾಷ್ಟ್ರಪ್ರೇಮದ ಹುಸಿ ಸುದ್ದಿಗಳ ಜೊತೆಗೆ ಮುಸ್ಲಿಂ ವಿರೋಧಿ ಒಗ್ಗರಣೆ ಬೆರೆಸಿ ಆತ ಬಿಡುಗಡೆ ಮಾಡುತ್ತಿದ್ದ ಪೋಸ್ಟ್‍ಗಳು ಕೋಮುಗಲಭೆ ಹಬ್ಬಲು ಏನು ಬೇಕೊ ಅದೆಲ್ಲವನ್ನು ಒಳಗೊಂಡಿರುತ್ತಿದ್ದವು. ಅಂತಹ ‘ಪೋಸ್ಟ್‍ಕಾರ್ಡ್ ನ್ಯೂಸ್’ ಫೇಸ್‍ಬುಕ್ ಪೇಜ್‍ನ ವಿರುದ್ಧ ಪ್ರಜ್ಞಾವಂತ ಜನರು ಫೇಸ್‍ಬುಕ್ ಮ್ಯಾನೆಜ್‍ಮೆಂಟ್‍ಗೆ ದೂರುತ್ತಲೇ ಬಂದಿದ್ದರು. ಆದರೆ ಮಾರ್ಕ್ ಜುಗರ್‍ಬರ್ಗ್‍ನ ಫೇಸ್‍ಬುಕ್ಕು ಎಚ್ಚೆತ್ತುಕೊಂಡಿರಲಿಲ್ಲ.
ಯಾವಾಗ ಫೇಕ್‍ಪೇಜ್‍ನ ಪಿತಾಮಹನನ್ನು ಪೊಲೀಸರು ಅರೆಸ್ಟ್ ಮಾಡಿದರೋ ಆಗ ಎಚ್ಚೆತ್ತುಕೊಂಡ ಫೇಸ್‍ಬುಕ್ ಆತನ ವಿರುದ್ಧ ತನಗೆ ಹರಿದುಬಂದ ಬೃಹತ್ ದೂರುಗಳನ್ನು ಮುಂದಿಟ್ಟುಕೊಂಡು ಜುಲೈ 16ರಂದು ಡಿಆಕ್ಟಿವೇಟ್ ಮಾಡಿದೆ. ಪೋಸ್ಟ್ ಕಾರ್ಡು ಇಷ್ಟು ದಿನ ಪ್ರಕಟಿಸಿದ್ದ ಸುದ್ದಿಗಳಲ್ಲಿ ಶೇ. 96ರಷ್ಟು ಸುದ್ದಿಗಳು ಮುಸ್ಲಿಂ ವಿರೋಧಿಯಾಗಿದ್ದವೆನ್ನುವುದು ವಿಕ್ರಂ ಹೆಗ್ಡೆಯ ಉದ್ದೇಶವನ್ನು ಬಿಚ್ಚಿಡುತ್ತದೆ.
ಈ ಕೇಸರಿ ಮಂದಿ ಅದೆಷ್ಟು ದೂ(ದು)ರಾಲೋಚನೆ ಹೊಂದಿರುತ್ತಾರೆಂದರೆ, ಮಾರ್ಚ್‍ನಲ್ಲಿ ವಿಕ್ರಂ ಹೆಗ್ಡೆ ಅರೆಸ್ಟಾಗುತ್ತಿದ್ದಂತೆಯೇ, ಸದ್ಯದಲ್ಲೇ ತಮ್ಮ ಫೇಸ್‍ಬುಕ್ ಪೇಜ್ ಕೂಡಾ ರದ್ದಾಗಬಹುದೆನ್ನುವುದನ್ನು ಅಂದಾಜಿಸಿ, ಏಪ್ರಿಲ್‍ನಲ್ಲಿ ಅದೇ ಹೆಸರಿನಲ್ಲಿ ಮತ್ತೊಂದು ಇಂಗ್ಲಿಷ್ ಭಾಷೆಯ ಪೇಜ್ ಓಪನ್ ಮಾಡಿದ್ದರು. ಪೋಸ್ಟ್‍ಕಾರ್ಡ್ ಇಂಗ್ಲಿಷ್ ನ್ಯೂಸ್ ಎಂಬ ಹೆಸರಿನ ಆ ಪುಟ ಕನ್ನಡ ಪೋಸ್ಟ್‍ಕಾರ್ಡ್ ಪುಟದ ವಿನ್ಯಾಸ, ಲೋಗೊಗಳನ್ನೇ ಹೊಂದಿದೆ. ಇತ್ತ ಫೇಸ್‍ಬುಕ್, ಕನ್ನಡದ ಪೋಸ್ಟ್ ಕಾರ್ಡ್ ರದ್ದು ಮಾಡುತ್ತಿದ್ದಂತೆಯೇ, ಇಂಗ್ಲಿಷ್ ಪುಟದ ಲಿಂಕನ್ನು ಮುಂಚೂಣಿಗೆ ತಂದು, ತಮ್ಮ ಪುಟವನ್ನು ಫೇಸ್‍ಬುಕ್ ರದ್ದು ಮಾಡಿಲ್ಲ, ಇದೆಲ್ಲಾ ಸುಳ್ಳು ಸುದ್ದಿ ಎಂದು ಜನರನ್ನು ಯಾಮಾರಿಸಲು ಯತ್ನಿಸಿತ್ತು. ಆದರೆ ಅಧಿಕೃತ ಮೂಲಗಳೇ ಫೇಸ್‍ಬುಕ್ ನಿರ್ಣಯವನ್ನು ಖಾತ್ರಿಪಡಿಸಿದ ತರುವಾಯ ಇದೀಗ ಅವರ ಬಣ್ಣ ಬಯಲಾಗಿದೆ. ಆದರೇನಂತೆ ಇಂಗ್ಲಿಷ್ ಪುಟದಲ್ಲಿ ಯಥಾ ಪ್ರಕಾರ ತಮ್ಮ ಕೋಮುವಾಂತಿಯನ್ನು ಮುಂದುವರಿಸಿದ್ದಾರೆ. ಫೇಸ್‍ಪುಸ್ತಕ ಅದಕ್ಕೆ ಯಾವಾಗ ಒಂದು ಗತಿ ಕಾಣಿಸುತ್ತೋ ನೋಡಬೇಕು.

-ಸೋಮಶೇಖರ್ ಚೆಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...