Homeಕರ್ನಾಟಕಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

ಬೆಂಗಳೂರಿಗರೆ ಎದೆಮುಟ್ಟಿ ಕೇಳಿಕೊಳ್ಳಿ: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಬೇಕೆ?

- Advertisement -
- Advertisement -

| ಮುತ್ತುರಾಜು |

ಈಗಾಗಲೇ ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಿಂದ ಯಥೇಚ್ಛವಾಗಿ ಬೆಂಗಳೂರಿಗೆ ನೀರನ್ನು ಕೊಡಲಾಗುತ್ತಿದೆ. ಅದು ಹಣ್ಣು, ತರಕಾರಿ, ಹಾಲು, ಸೊಪ್ಪು, ಹೂವು ಮತ್ತು ಇನ್ನಿತರ ದಿನಬಳಕೆಯ ವಸ್ತುಗಳನ್ನು ಆ ಜಿಲ್ಲೆಗಳಲ್ಲಿ ಉತ್ಪಾದಿಸಿ ಬೆಂಗಳೂರಿಗೆ ಮಾರುವ ಮೂಲಕ ಅವರ ತಮ್ಮ ಜಿಲ್ಲೆಗಳ ಅಂತರ್ಜಲವನ್ನು ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ಮೈಸೂರು, ಕೊಡಗು, ಮಂಡ್ಯದ ಕಾವೇರಿ ನೀರು ಬೆಂಗಳೂರನ್ನು ರಕ್ಷಿಸುತ್ತಿದೆ. ಸಾಲದು ಎಂಬುದಕ್ಕೆ ಕರಾವಳಿಯ ದ.ಕ ಜಿಲ್ಲೆಯಿಂದ ಎತ್ತಿನಹೊಳೆಯಿಂದ ನೀರು ಎತ್ತಲು ಯೋಜಿಸಲಾಗಿದೆ. ನಮ್ಮ ಬೆಂಗಳೂರಿನ ತೀರದ ದಾಹಕ್ಕೆ ಈಗ ಮಲೆನಾಡಿನ ಲಿಂಗನಮಕ್ಕಿಯ ಮೇಲೆಯೂ ಆಳುವವರಿಗೆ ಕಣ್ಣು ಬಿದ್ದಿದೆ. ಇದಕ್ಕೆ ಕೊನೆಯೇ ಇಲ್ಲವೇ?

ಹೌದು ಬೆಂಗಳೂರಿನವರಿಗೆ ಕುಡಿಯಲು ನೀರು ಬೇಕು. ಈಗ ಏಕೆ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಕೇಳಿಕೊಳ್ಳಲು ಯಾರು ಸಿದ್ಧರಿಲ್ಲ. ವಿಚಿತ್ರವೆಂದರೆ ಒಣ ಬಯಲು ಸೀಮೆ ಪ್ರದೇಶಗಳಲ್ಲೇ ಹೆಚ್ಚು ಮಳೆ ಬೀಳುವ ಜಿಲ್ಲೆಯೆಂದರೆ ಬೆಂಗಳೂರು. ಆದರೆ ಹೀಗೆ ಬಿದ್ದ ಮಳೆ ಹಾಗೆ ಹರಿದು ಹೋಗುತ್ತಿದ್ದರೂ ಬೆಂಗಳೂರಿಗರು ಕಣ್ಣು ಮುಚ್ಚಿ ಕುಳಿತಿರುತ್ತಾರೆ. ನಂತರ ನಮಗೆ ನೀರು ಬೇಕೆಂದು ದಬ್ಬಾಳಿಕೆ ಮಾಡುತ್ತಾರೆ. ಹೌದು ಇದು ದಬ್ಬಾಳಿಕೆಯೇ ಹೊರತು ಮತ್ತೇನಲ್ಲ. ಮಲೆನಾಡಿನ ಲಿಂಗನಮಕ್ಕಿಯಿಂದ ಬಲವಂತವಾಗಿ ನೀರು ತರಲು 12 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿ ನಿಂತಿದೆ. ಡಿಪಿಆರ್ ಸಿದ್ದಪಡಿಸುವಂತೆ ಡಿಸಿಎಂ ಪರಮೇಶ್ವರ್ ನಿನ್ನೆ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

ಈಗ ನಾವು ಸಮಸ್ಯೆಯ ಆಳ ಮತ್ತು ಪರಿಹಾರಕ್ಕೆ ಹೋಗೋಣ.

ಬೆಂಗಳೂರಿಗೆ ಬಂದು ಹೋಗುವವರು ಸೇರಿ ಇಲ್ಲಿ ದಿನವೊಂದಕ್ಕೆ ಒಂದೂವರೆ ಕೋಟಿ ಜನ ಇರುತ್ತಾರೆಂದು ಅಂದಾಜಿಸಲಾಗಿದೆ. ಅಂದರೆ ಉದ್ಯೋಗಕ್ಕಾಗಿ ಇಲ್ಲಿಗೆ ಬಂದು ಹೋಗುವವರು ಮತ್ತು ಇಲ್ಲಿಯೇ ನೆಲೆಸಿರುವವರೇ ಹೆಚ್ಚು. ಹಾಗಾಗಿ ಈ ಉದ್ಯೋಗ ಸೃಷ್ಟಿಯ ವಿಕೇಂದ್ರಿಕರಣದ ಪ್ರಶ್ನೆಯನ್ನು ಸರ್ಕಾರ ತನ್ನ ಆದ್ಯತೆಯನ್ನಾಗಿ ಮಾಡಿಕೊಂಡಾಗ ಮಾತ್ರ ಬೆಂಗಳೂರಿಗೆ ನೀರಿನ ಸಮಸ್ಯೆ ಮಾತ್ರವಲ್ಲ, ಟ್ರಾಫಿಕ್, ಮಾಲಿನ್ಯ, ಅಪಘಾತ ಸೇರಿದಂತೆ ಇನ್ನು ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ.

ಎಲ್ಲಾ ಉದ್ಯೋಗಗಳನ್ನು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದನ್ನು, ಬೆಂಗಳೂರು ಕೇಂದ್ರೀತ ಅಭಿವೃದ್ದಿ ಮಾದರಿಯನ್ನು ಕೈಬಿಟ್ಟು ವಿಕೇಂದ್ರಿಕೃತ ಮತ್ತು ಗ್ರಾಮೀಣ ಆಧಾರಿತ ಅಭಿವೃದ್ದಿಗೆ ಮುಂದಾಗಬೇಕು. ಅತ್ಯುತ್ತಮ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕಲಬುರಗಿ, ಧಾರವಾಡ, ಬೆಳಗಾಂ, ಗದಗ ರೀತಿಯ ಜಿಲ್ಲೆಗಳಲ್ಲಿ ಸ್ಥಾಪಿಸಬೇಕು. ಜನ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಪರಿಪಾಟಲು ಪಡುವುದು ತಪ್ಪಬೇಕು. ಕೃಷಿಯನ್ನು ನಿಜವಾಗಿಯೂ ಲಾಭದಾಯಕವಾಗಿಸಲು ಸರ್ಕಾರ ತನ್ನೆಲ್ಲಾ ಶಕ್ತಿ-ಸಂಪನ್ಮೂಲಗಳನ್ನು ವಿನಿಯೋಗಿಸಬೇಕು. ಆಗ ನಿಧಾನವಾಗಿ ವಲಸೆ ಕಡಿಮೆಯಾಗುತ್ತದೆ ಮಾತ್ರವಲ್ಲ, ಬೆಂಗಳೂರಿನಿಂದ ಜನ ತಮ್ಮ ಸ್ವಂತ ಊರುಗಳಿಗೆ ವಾಪಸ್ ಹೋಗುವಂತೆ ಆಗಬೇಕು.

ಎರಡನೆಯದಾಗಿ ತಕ್ಷಣದ ಪರಿಹಾರಕ್ಕೆ ಬರುವುದಾದರೆ ನಾವು ಬೆಂಗಳೂರಿನ ಜನ ಎಷ್ಟೆಲ್ಲಾ ನೀರು ವ್ಯರ್ಥ ಮಾಡುತ್ತಿದ್ದೇವೆ ಎಂಬುದನ್ನು ಅರಿತು ಮಿತಬಳಕೆಗೆ ಮುಂದಾಗಬೇಕು. ಬೆಂಗಳೂರಿನ ಪ್ರತಿ ಮನೆಯು ಮಳೆನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಬೋರ್‍ವೆಲ್‍ಗಳಿಗೆ ಅದರಿಂದ ಮರುಪೂರಣ ವ್ಯವಸ್ಥೆ ಮಾಡಬೇಕು. ಇದು ಎಷ್ಟು ದೊಡ್ಡ ಕೆಲಸವೆಂದರೆ ಇದರಿಂದ ನೀರಿನ ಪರಾವಲಂಬನೆ ಬಹುಮಟ್ಟಿಗೆ ತಪ್ಪಿಸಬಹುದು.
ಜೊತೆಗೆ ಸರ್ಕಾರ ಕೆರೆ ಒತ್ತುವರಿ ಮಾಡಿಕೊಂಡಿರುವವರನ್ನು ಮುಲಾಜು ನೋಡದೆ ಬಿಡಿಸಿ ಕೆರೆಗಳ ಸಮಗ್ರ ಪುನಶ್ಚೇತನಕ್ಕೆ ಮುಂದಾಗಬೇಕು. ರಾಜ್ಯದ ಎಲ್ಲಾ ಕೆರೆಗಳ ಹೂಳೆತ್ತಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು. ಯಮುನಾ ಬಯಲು ಪ್ರದೇಶದಲ್ಲಿ ನೈಸರ್ಗಿಕ ನೀರು ಸಂಗ್ರಹಾಲಯಕ್ಕೆ ದೆಹಲಿ ಸರ್ಕಾರ ಮುಂದಾಗಿದೆ. ಇಂತಹ ಯೋಜನೆಗಳನ್ನು ಅಧ್ಯಯನ ಮಾಡಿ ಜಾರಿಗೊಳಿಸಬೇಕು.

ಹುಡುಕಿದರೆ ಇಂತಹ ಹತ್ತಾರು ದಾರಿಗಳು ಸಿಗುತ್ತವೆ. ಅವನ್ನು ಮಾಡದೇ ನಾವು ನಮ್ಮ ವಿಲಾಸಕ್ಕಾಗಿ, ಮಿತಿಮೀರಿದ ದುರಾಸೆಗಾಗಿ ಎತ್ತಿನಹೊಳೆಯಿಂದಲೋ, ಲಿಂಗನಮಕ್ಕಿಯಿಂದಲೋ ನೀರು ಕದಿಯುವುದು ಸರ್ವಥಾ ಸರಿಯಲ್ಲ. ಲಿಂಗನಮಕ್ಕಿಯಿಂದ ನೀರು ಬೇಡ ಎಂದು ಮಲೆನಾಡಿಗರು ಹೋರಾಟ ಮಾಡುವ ಮುಂಚೆಯೇ ಬೆಂಗಳೂರಿಗರು ದನಿಯೆತ್ತಿ. ಸ್ವಲ್ಪವಾದರೂ ಆತ್ಮಸಾಕ್ಷಿ ಉಳಿಸಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಣ್ಣ ಮಳೆಗೆ ಇಲ್ಲಿನ ದಾರಿಗಳಲ್ಲಿ ನೀರು ತುಂಬಿ ಬಂಡಿಗಳ ಓಡಾಟಕ್ಕೆ ತೊಂದರೆಯಾಗಿ ಪಡುವ ಪಡಿಪಾಟಲು ಅಶ್ಟಿಶ್ಟಲ್ಲ. ನಗರದ ಯೋಜನಾರಹಿತ ಬೆಳವಣಗೆಯೇ ಇದಕ್ಕೆಲ್ಲಾ ಕಾರಣ.
    ದಾರಿಬದಿಯ ಚರಂಡಿಗಳ ಬಾಯಿಗೆ ಅಡ್ಡಲಾಗಿ ಹಾಕಿರುವ ನೀರು,ಕಳಚೆ,ಕರೆಂಟು ಕೊಳವೆಗಳನ್ನು ನಿಯಮದಂತೆ ಬೆಡ್ ಲೆವೆಲ್ ಗಿಂತ ಕೆಳಗೆ ಹಾಕದರೆ ನೂರಾರು ಕೋಟಿ ಹಣ ಉಳಿಸಬಹುದು.

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...