Homeಸಾಮಾಜಿಕಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

ಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

- Advertisement -
- Advertisement -

ದು.ಸರಸ್ವತಿ |

ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ ಅನ್ನುವ ಕಾನ್ಸೆಪ್ಟನ್ನು ಮೊದಲು ಕೇಳಿದ್ದು ಉಮಾ ಚಕ್ರವರ್ತಿಯವರ ಜಂಡರಿಂಗ್ ಕಾಸ್ಟ್ ಎನ್ನುವ ಪುಸ್ತಕದಲ್ಲಿ. ಮಂಡಲ್ ಆಯೋಗ ವರದಿ ಜಾರಿಯಾದ ನಂತರ ದೇಶ ಹೊತ್ತಿ ಉರಿವಾಗ ಕೆಲವು ಹೆಣ್ಣು ಮಕ್ಕಳು, ಐಎಎಸ್, ಐಪಿಎಸ್ ಆಫೀಸರ್ ಗಂಡುಗಳು ಸಿಗುವುದಿಲ್ಲ ಎಂದು ಪ್ಲೆಕಾರ್ಡ್ ಹಿಡಿದು ನಿಂತಿದ್ದರು. ಅಂದರೆ ರಿಸರ್ವೇಶನ್ ಇದ್ರೆ ನಾವು ಮದುವೆ ಆಗಲು ಮೇಲ್ಜಾತಿ ಆಫೀಸರ್‌ಗಳು ಸಿಗುವುದಿಲ್ಲ ಎಂದು ಪರೋಕ್ಷವಾಗಿ ಮೀಸಲಾತಿಯ ವಿರುದ್ಧ ದನಿ ಎತ್ತಿದ್ದರು. ಮಹಿಳೆಯರೆಲ್ಲ ದಲಿತರು, ಶೋಷಿತರು ಎಂದು ಹೋರಾಟದಲ್ಲಿದ್ದ ಮಹಿಳಾ ಚಳುವಳಿಗೆ ಇದು ದೊಡ್ಡ ಸವಾಲಾಗಿ ಎದುರಾಯಿತು. ಈ ಸಂದರ್ಭದಲ್ಲಿ ಉಮಾ ಚಕ್ರವರ್ತಿ ‘ಜೆಂಡರಿಂಗ್ ಕಾಸ್ಟ್’ ಪುಸ್ತಕ ಬರೆದರು. ಮಹಾರಾಷ್ಟ್ರದ ದಲಿತ ಸ್ತ್ರೀವಾದಿಗಳು ಅಂಬೇಡ್ಕರ್ ಮತ್ತು ಮಹಿಳೆ ಬಗ್ಗೆ ತುಂಬಾ ಆಳವಾದ ಅಧ್ಯಯನ ಮಾಡಿದರು. ಆಗ, ಅಂಬೇಡ್ಕರ್ ಅವರ ಜಾತಿ ವಿನಾಶ ಚಳುವಳಿಯ ಪರಂಪರೆ ಅಂದರೆ, ಲಿಂಗ ತಾರತಮ್ಯದ ವಿರುದ್ಧವೂ ಹೋರಾಡುವ ಪರಂಪರೆ; ಅದನ್ನ ಯಾಕೆ ಮಹಿಳಾ ಚಳುವಳಿಗಳು ಗುರುತಿಸಲೇ ಇಲ್ಲ ಎಂದು ಮೊದಲನೇ ಬಾರಿ ಎಲ್ಲರೂ ಆಲೋಚಿಸುವಂತಾಯಿತು. ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ, ಅಂಬೇಡ್ಕರ್‌ರ ವಿಚಾರಗಳನ್ನು ಕುರಿತ ಪುಸ್ತಕಗಳು ಬಂದವು. ಅಂಬೇಡ್ಕರ್ ಮತ್ತು ಮಹಿಳೆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣಿಕೆಯ ಪಿತೃಪ್ರಧಾನತೆ ಎಂಬ ಪರಿಕಲ್ಪನೆ ನಮಗೆಲ್ಲ ಸರಿಯಾಗಿ ಅರ್ಥವಾದದ್ದು.

ಈ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಪಿತೃಪ್ರಧಾನವಾದುದ್ದು ಎಂದು ಎಲ್ಲರಿಗೂ ಗೊತ್ತು. ರಾಜ್ಯವನ್ನು, ಆಸ್ತಿಯನ್ನ ಹಾಗೂ ಎಲ್ಲಾ ಅಧಿಕಾರವನ್ನು ಚಲಾಯಿಸುವಂತಹ, ಗಂಡು ನಾನೇ ಸುಪ್ರೀಂ ಎನ್ನುವ ವ್ಯವಸ್ಥೆ ಇದು. ಬ್ಯಾಹ್ಮಣ್ಯದ ಶ್ರೇಣೀಕರಣದಲ್ಲಿ ಬ್ರಾಹ್ಮಣರು ಜಾತಿ ವ್ಯವಸ್ಥೆಯ ಮೇಲ್ದರ್ಜೆಯ ತುತ್ತ ತುದಿಯಲ್ಲಿದ್ದಾರೆ. ಗಂಡು ಎನ್ನುವ ಶ್ರೇಷ್ಠತೆ, ಮೇಲ್ಜಾತಿ ಎನ್ನುವ ಶ್ರೇಷ್ಠತೆ ಎರಡೂ ಕೂಡಿ ಬ್ರಾಹ್ಮಣ ಶ್ರೇಷ್ಠತೆ ಉತ್ಕೃಷ್ಟ ಮಾದರಿಯಾಗಿ ನಿಲ್ಲುತ್ತದೆ. ಹಾಗಾಗಿ ಎಲ್ಲಾ ದೇವಾಲಯಗಳಲ್ಲಿ ಬ್ರಾಹ್ಮಣ ಗಂಡಸರು ಪೂಜೆ ಮಾಡುತ್ತಾರೆ, ಇತರರು ಕೈ ಮುಗಿದು ನಿಲ್ಲುತ್ತಾರೆ, ದಲಿತರು ಹೊರಗಿರಿಸಲ್ಪಡುತ್ತಾರೆ. ಇದು ಎಲ್ಲ ಸಮುದಾಯಗಳ ಒಳಕ್ಕೂ ಇಳಿದುಬಿಟ್ಟಿದೆ. ಮಾದಿಗರ ದಾಸಯ್ಯರು ಪೂಜೆ ಮಾಡ್ತಾರೆ, ಸಮಗಾರರು ಚರ್ಮದ ಕೆಲಸವನ್ನು ಮಾಡ್ತಾರೆ. ಇನ್ನು ಹೈರಾರ್ಕಿಯಲ್ಲಿ ಎಲ್ಲಾ ಸಮುದಾಯದಲ್ಲೂ ಪುರುಷರು ಮೇಲು ಎನ್ನುವುದೂ ಬೆಳೆದು ಬಂದಿದೆ, ಮೇಲ್ ಹೈರಾರ್ಕಿ, ಬ್ರಾಹ್ಮಿಣಿಕಲ್ ಹೈರಾರ್ಕಿಯ ಆಳದಲ್ಲಿ ಕಾಸ್ಟ್ ಸುಪ್ರಿಮಸಿ ಪ್ರಧಾನವಾಗಿದೆ, ಈ ಮೇಲರಿಮೆಯಲ್ಲಿ ಖಾಸಗಿ ಆಸ್ತಿಯೂ ಸೇರಿಕೊಂಡಿದೆ. ಇದು ಬೌದ್ಧಿಕ ಪವರ್‌ನೂ ಹೌದು ಮತ್ತೂ ಮೆಟಿರಿಯಲ್ ಪವರ್ ಕೂಡ ಹೌದು. ಅಕಾಡೆಮಿಕ್ ಬಳಕೆಯಲ್ಲಿ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಬ್ರಾಹ್ಮಣರನ್ನು ವಿರೋಧಿಸುವಂತದ್ದಲ್ಲ, ತಾನೇ ಸುಪ್ರೀಂ ನಾವಿರುವುದೇ ಆಳುವುದಕ್ಕೆ ಎನ್ನುವಂತಹ ವಾದವನ್ನು ಪ್ರಶ್ನಿಸುವಂತದ್ದು. ಈಗ ಮೇಲ್ಜಾತಿ ಎತ್ತಿರುವ ತಕರಾರು ಅಸಮಂಜಸವಾದದ್ದು. ವಿದ್ವತ್ ವಲಯದಲ್ಲಿ ಚರ್ಚೆಯಲ್ಲಿರುವ ಜಾಗತೀಕರಣ, ಆಳುವ ವರ್ಗ, ಫ್ಯೂಡಲಿಸಂ ಎನ್ನುವಂತಹ ಪರಿಕಲ್ಪನೆಗಳನ್ನು ಚರ್ಚೆ ಮಾಡಬೇಡಿ, ಇದರ ಬಗ್ಗೆ ಮಾತನಾಡಬೇಡಿ ಎಂದರೆ ಅದನ್ನೆಲ್ಲ ನಿಲ್ಲಸಲಾಗುತ್ತದೆಯೇ? ಖಂಡಿತಾ ಇಲ್ಲ. ಹಾಗೆಯೆ ಇದು ಕೂಡ. ಬ್ರಾಹ್ಮಣ್ಯದ ವಿರುದ್ಧದ ದನಿಯೇ ಹೊರತು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...