Homeಸಾಮಾಜಿಕಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

ಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

- Advertisement -
- Advertisement -

ದು.ಸರಸ್ವತಿ |

ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ ಅನ್ನುವ ಕಾನ್ಸೆಪ್ಟನ್ನು ಮೊದಲು ಕೇಳಿದ್ದು ಉಮಾ ಚಕ್ರವರ್ತಿಯವರ ಜಂಡರಿಂಗ್ ಕಾಸ್ಟ್ ಎನ್ನುವ ಪುಸ್ತಕದಲ್ಲಿ. ಮಂಡಲ್ ಆಯೋಗ ವರದಿ ಜಾರಿಯಾದ ನಂತರ ದೇಶ ಹೊತ್ತಿ ಉರಿವಾಗ ಕೆಲವು ಹೆಣ್ಣು ಮಕ್ಕಳು, ಐಎಎಸ್, ಐಪಿಎಸ್ ಆಫೀಸರ್ ಗಂಡುಗಳು ಸಿಗುವುದಿಲ್ಲ ಎಂದು ಪ್ಲೆಕಾರ್ಡ್ ಹಿಡಿದು ನಿಂತಿದ್ದರು. ಅಂದರೆ ರಿಸರ್ವೇಶನ್ ಇದ್ರೆ ನಾವು ಮದುವೆ ಆಗಲು ಮೇಲ್ಜಾತಿ ಆಫೀಸರ್‌ಗಳು ಸಿಗುವುದಿಲ್ಲ ಎಂದು ಪರೋಕ್ಷವಾಗಿ ಮೀಸಲಾತಿಯ ವಿರುದ್ಧ ದನಿ ಎತ್ತಿದ್ದರು. ಮಹಿಳೆಯರೆಲ್ಲ ದಲಿತರು, ಶೋಷಿತರು ಎಂದು ಹೋರಾಟದಲ್ಲಿದ್ದ ಮಹಿಳಾ ಚಳುವಳಿಗೆ ಇದು ದೊಡ್ಡ ಸವಾಲಾಗಿ ಎದುರಾಯಿತು. ಈ ಸಂದರ್ಭದಲ್ಲಿ ಉಮಾ ಚಕ್ರವರ್ತಿ ‘ಜೆಂಡರಿಂಗ್ ಕಾಸ್ಟ್’ ಪುಸ್ತಕ ಬರೆದರು. ಮಹಾರಾಷ್ಟ್ರದ ದಲಿತ ಸ್ತ್ರೀವಾದಿಗಳು ಅಂಬೇಡ್ಕರ್ ಮತ್ತು ಮಹಿಳೆ ಬಗ್ಗೆ ತುಂಬಾ ಆಳವಾದ ಅಧ್ಯಯನ ಮಾಡಿದರು. ಆಗ, ಅಂಬೇಡ್ಕರ್ ಅವರ ಜಾತಿ ವಿನಾಶ ಚಳುವಳಿಯ ಪರಂಪರೆ ಅಂದರೆ, ಲಿಂಗ ತಾರತಮ್ಯದ ವಿರುದ್ಧವೂ ಹೋರಾಡುವ ಪರಂಪರೆ; ಅದನ್ನ ಯಾಕೆ ಮಹಿಳಾ ಚಳುವಳಿಗಳು ಗುರುತಿಸಲೇ ಇಲ್ಲ ಎಂದು ಮೊದಲನೇ ಬಾರಿ ಎಲ್ಲರೂ ಆಲೋಚಿಸುವಂತಾಯಿತು. ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ, ಅಂಬೇಡ್ಕರ್‌ರ ವಿಚಾರಗಳನ್ನು ಕುರಿತ ಪುಸ್ತಕಗಳು ಬಂದವು. ಅಂಬೇಡ್ಕರ್ ಮತ್ತು ಮಹಿಳೆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣಿಕೆಯ ಪಿತೃಪ್ರಧಾನತೆ ಎಂಬ ಪರಿಕಲ್ಪನೆ ನಮಗೆಲ್ಲ ಸರಿಯಾಗಿ ಅರ್ಥವಾದದ್ದು.

ಈ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಪಿತೃಪ್ರಧಾನವಾದುದ್ದು ಎಂದು ಎಲ್ಲರಿಗೂ ಗೊತ್ತು. ರಾಜ್ಯವನ್ನು, ಆಸ್ತಿಯನ್ನ ಹಾಗೂ ಎಲ್ಲಾ ಅಧಿಕಾರವನ್ನು ಚಲಾಯಿಸುವಂತಹ, ಗಂಡು ನಾನೇ ಸುಪ್ರೀಂ ಎನ್ನುವ ವ್ಯವಸ್ಥೆ ಇದು. ಬ್ಯಾಹ್ಮಣ್ಯದ ಶ್ರೇಣೀಕರಣದಲ್ಲಿ ಬ್ರಾಹ್ಮಣರು ಜಾತಿ ವ್ಯವಸ್ಥೆಯ ಮೇಲ್ದರ್ಜೆಯ ತುತ್ತ ತುದಿಯಲ್ಲಿದ್ದಾರೆ. ಗಂಡು ಎನ್ನುವ ಶ್ರೇಷ್ಠತೆ, ಮೇಲ್ಜಾತಿ ಎನ್ನುವ ಶ್ರೇಷ್ಠತೆ ಎರಡೂ ಕೂಡಿ ಬ್ರಾಹ್ಮಣ ಶ್ರೇಷ್ಠತೆ ಉತ್ಕೃಷ್ಟ ಮಾದರಿಯಾಗಿ ನಿಲ್ಲುತ್ತದೆ. ಹಾಗಾಗಿ ಎಲ್ಲಾ ದೇವಾಲಯಗಳಲ್ಲಿ ಬ್ರಾಹ್ಮಣ ಗಂಡಸರು ಪೂಜೆ ಮಾಡುತ್ತಾರೆ, ಇತರರು ಕೈ ಮುಗಿದು ನಿಲ್ಲುತ್ತಾರೆ, ದಲಿತರು ಹೊರಗಿರಿಸಲ್ಪಡುತ್ತಾರೆ. ಇದು ಎಲ್ಲ ಸಮುದಾಯಗಳ ಒಳಕ್ಕೂ ಇಳಿದುಬಿಟ್ಟಿದೆ. ಮಾದಿಗರ ದಾಸಯ್ಯರು ಪೂಜೆ ಮಾಡ್ತಾರೆ, ಸಮಗಾರರು ಚರ್ಮದ ಕೆಲಸವನ್ನು ಮಾಡ್ತಾರೆ. ಇನ್ನು ಹೈರಾರ್ಕಿಯಲ್ಲಿ ಎಲ್ಲಾ ಸಮುದಾಯದಲ್ಲೂ ಪುರುಷರು ಮೇಲು ಎನ್ನುವುದೂ ಬೆಳೆದು ಬಂದಿದೆ, ಮೇಲ್ ಹೈರಾರ್ಕಿ, ಬ್ರಾಹ್ಮಿಣಿಕಲ್ ಹೈರಾರ್ಕಿಯ ಆಳದಲ್ಲಿ ಕಾಸ್ಟ್ ಸುಪ್ರಿಮಸಿ ಪ್ರಧಾನವಾಗಿದೆ, ಈ ಮೇಲರಿಮೆಯಲ್ಲಿ ಖಾಸಗಿ ಆಸ್ತಿಯೂ ಸೇರಿಕೊಂಡಿದೆ. ಇದು ಬೌದ್ಧಿಕ ಪವರ್‌ನೂ ಹೌದು ಮತ್ತೂ ಮೆಟಿರಿಯಲ್ ಪವರ್ ಕೂಡ ಹೌದು. ಅಕಾಡೆಮಿಕ್ ಬಳಕೆಯಲ್ಲಿ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಬ್ರಾಹ್ಮಣರನ್ನು ವಿರೋಧಿಸುವಂತದ್ದಲ್ಲ, ತಾನೇ ಸುಪ್ರೀಂ ನಾವಿರುವುದೇ ಆಳುವುದಕ್ಕೆ ಎನ್ನುವಂತಹ ವಾದವನ್ನು ಪ್ರಶ್ನಿಸುವಂತದ್ದು. ಈಗ ಮೇಲ್ಜಾತಿ ಎತ್ತಿರುವ ತಕರಾರು ಅಸಮಂಜಸವಾದದ್ದು. ವಿದ್ವತ್ ವಲಯದಲ್ಲಿ ಚರ್ಚೆಯಲ್ಲಿರುವ ಜಾಗತೀಕರಣ, ಆಳುವ ವರ್ಗ, ಫ್ಯೂಡಲಿಸಂ ಎನ್ನುವಂತಹ ಪರಿಕಲ್ಪನೆಗಳನ್ನು ಚರ್ಚೆ ಮಾಡಬೇಡಿ, ಇದರ ಬಗ್ಗೆ ಮಾತನಾಡಬೇಡಿ ಎಂದರೆ ಅದನ್ನೆಲ್ಲ ನಿಲ್ಲಸಲಾಗುತ್ತದೆಯೇ? ಖಂಡಿತಾ ಇಲ್ಲ. ಹಾಗೆಯೆ ಇದು ಕೂಡ. ಬ್ರಾಹ್ಮಣ್ಯದ ವಿರುದ್ಧದ ದನಿಯೇ ಹೊರತು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...