Homeಪ್ರಪಂಚಬ್ರೆಜಿಲ್ ಆಳುವ ವರ್ಗ ಮತ್ತು ಪ್ರಜಾತಂತ್ರ

ಬ್ರೆಜಿಲ್ ಆಳುವ ವರ್ಗ ಮತ್ತು ಪ್ರಜಾತಂತ್ರ

- Advertisement -
- Advertisement -

ಭರತ್ ಹೆಬ್ಬಾಳ್ |

2012ರ ಸೆಪ್ಟೆಂಬರ್ ತಿಂಗಳಲ್ಲಿ ‘ಭ್ರಷ್ಟಾಚಾರದ ವಿರುದ್ದ ಭಾರತ’ ಹೋರಾಟದ ಮುಂಚೂಣಿಯಲ್ಲಿದ್ದ ಪ್ರಶಾಂತ್ ಭೂಷಣ್ ಮತ್ತು ಅರವಿಂದ್ ಕೇಜ್ರಿವಾಲ್ ಅವರುಗಳು ಕಾಂಗ್ರೆಸ್ ಮತ್ತು ರಾಬರ್ಟ್ ವಾದ್ರಾ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿದ್ದು ನಿಮಗೆ ನೆನಪಿರಬಹುದು. ಆಗ ವಾದ್ರಾ ಇವರೆಲ್ಲ ‘ಬಾಳೆಹಣ್ಣು ಗಣತಂತ್ರದ ಮಾವಿನ ಪ್ರಜೆಗಳು’ ಎಂದು ಪ್ರತಿಕ್ರಿಯಿಸಿದ್ದರು. ರಾಜಕೀಯ ಶಬ್ದಕೋಶದಲ್ಲಿ ಬನಾನಾ ರಿಪಬ್ಲಿಕ್ (ಬಾಳೆಹಣ್ಣಿನ ಗಣತಂತ್ರ) ಎಂದರೆ ಒಂದು ಸೀಮಿತ ಸಂಪನ್ಮೂಲದ, ಉತ್ಪನ್ನದ ರಫ್ತಿನ (ಬಾಳೆ ಹಣ್ಣು ಅಥವಾ ಅದಿರು) ಮೇಲೆ ಅವಲಂಬಿತವಾಗಿರುವ, ರಾಜಕೀಯವಾಗಿ ಅಸ್ಥಿರವಾದ ದೇಶ ಎಂಬ ಅರ್ಥವನ್ನು ಕೊಡುತ್ತದೆ. ಸಾಮಾನ್ಯವಾಗಿ, ಬಾಳೆಹಣ್ಣಿನ ಗಣರಾಜ್ಯವು ಅತ್ಯಂತ ಶ್ರೇಣೀಕೃತ ಸಾಮಾಜಿಕ ವರ್ಗಗಳ ಸಮಾಜವನ್ನು ಹೊಂದಿರುತ್ತದೆ (ಒಂದು ಕಡೆ ದೊಡ್ಡ ಬಡ ಕಾರ್ಮಿಕ ವರ್ಗ, ಮತ್ತೊಂದು ಕಡೆ ಉದ್ದಿಮೆಪತಿಗಳು, ರಾಜಕಾರಣ ಮತ್ತು ಸೈನ್ಯದ ಗಣ್ಯರನ್ನು ಹೊಂದಿರುವ ಆಳುವ-ವರ್ಗದ ಪ್ರಭುತ್ವ).

ಈ ಪದವನ್ನು ಮೊದಲ ಬಾರಿಗೆ 1901 ರಲ್ಲಿ ಓ ಹೆನ್ರಿ ಎಂಬ ಅಮೆರಿಕಾದ ಬರಹಗಾರ ದಕ್ಷಿಣ ಅಮೆರಿಕಾದ ದೇಶಗಳನ್ನು ತನ್ನ ವಸಾಹುತುಶಾಹಿ ವಿಸ್ತರಣೆಯಿಂದ ಕೊಳ್ಳೆ ಹೊಡೆಯುತ್ತಿದ್ದ ಮತ್ತು ಲಾಭಕ್ಕಾಗಿ ದೇಶಗಳನ್ನೇ ಆಸ್ಥಿರಗೊಳಿಸುತ್ತಿದ್ದ ಅಮೆರಿಕಾದ ಯುನೈಟೆಡ್ ಫ್ರೂಟ್ ಕಂಪನಿ ಬಗ್ಗೆ ಬರೆಯುತ್ತಾ ಬಳಸುತ್ತಾರೆ. ಅಮೆರಿಕಾದ ಸಾಮ್ರಾಜ್ಯಶಾಹಿ ವಿಸ್ತರಣೆಗಾಗಿ ಈ ಇಂತಹ ಕಂಪನಿಗಳು ಮಾಡಿದ ಹತ್ಯಾಕಾಂಡಗಳು ಬಹಳಷ್ಟಿವೆ. ದಕ್ಷಿಣ ಅಮೆರಿಕ ಖಂಡದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಇತಿಹಾಸ ಇದನ್ನೇ ಸೂಚಿಸುತ್ತದೆ.

1964ರಿಂದ 1985ರವರೆಗೂ ಮಿಲಿಟರೀ ಸರ್ವಾಧಿಕಾರದಲ್ಲಿದ್ದ ಬ್ರೆಜಿಲ್ ಕಾನೂನಾತ್ಮಕವಾಗಿ ಗುಲಾಮಗಿರಿ ನಿರ್ಮೂಲನೆ ಮಾಡಿದ ಕೊನೆಯ ದೇಶ (1988ರಲ್ಲಿ). ತನ್ನ ದೇಶದಲ್ಲಿ ಅರ್ಧಕ್ಕಿಂತ ಜನಸಂಖ್ಯೆ ಕಪ್ಪು ಜನರಿದ್ದರೂ, ದೃಶ್ಯಮಾಧ್ಯಮದಲ್ಲಿ ಬಹುತೇಕ ಬಿಳಿಯರನ್ನೇ ತೋರಿಸುವ ದೇಶ. ಮೊದಲಿಂದಲೂ ವಸಾಹುತುಶಾಹಿ ಆಳ್ವಿಕೆಯಲ್ಲಿ ಬ್ರೆಜಿಲ್ಲನ್ನು ಬಿಳಿಯಾಗಿಸುವ ನೀತಿಗಳನ್ನು (ಯುರೋಪಿಯನ್ ಜನರನ್ನು ಬ್ರೆಜಿಲ್ ಮತ್ತಿತರ ದೇಶಗಳಿಗೆ ಕರೆತರುವುದು) ಉತ್ತೇಜಿಸಲಾಗಿತ್ತು. ಇಂತಹ ಇತಿಹಾಸದಿಂದಾಗಿ ಈಗಲೂ ಅದು ಅತ್ಯಂತ ವರ್ಣಭೇದ ಅನುಸರಿಸುವ ವ್ಯವಸ್ಥೆಯನ್ನು ಹೊಂದಿದೆ. ದಕ್ಷಿಣ ಭಾಗದಲ್ಲಿರುವ ಪ್ರದೇಶಗಳು ಬಹುತೇಕ ಬಿಳಿಯರಿಂದ ಕೂಡಿದೆ.

70ರ ದಶಕದಿಂದ ಪ್ರಪಂಚದಾದ್ಯಂತ ಆವರಿಸಿಕೊಂಡಿರುವ ನವಉದಾರೀಕರಣದ ಮೂಲ ಹುಡುಕುತ್ತಾ ಹೋದರೆ ಎಪ್ಪತ್ತರ ದಶಕದಲ್ಲಿ ಲ್ಯಾಟಿನ್ ಅಮೆರಿಕದಲ್ಲಾದ ರಾಜಕೀಯ ಬೆಳವಣಿಗೆಗಳ ಆದಿಯು ಸಿಗುತ್ತದೆ. ಮಿಲಿಟರಿ ಸರ್ವಾಧಿಕಾರ ಹೋಗಿ ಪ್ರಜಾಪ್ರಭುತ್ವ ಬಂದರೂ ಕೂಡ, ಸರ್ವಾಧಿಕಾರದ ಪರಂಪರೆಯು ಹಳೆಯ ದೊಡ್ಡ ದೊಡ್ಡ ಭೂಮಾಲೀಕರು, ಸಾರ್ವಜನಿಕ ಸಂಸ್ಥೆಗಳಲ್ಲಿನ ದೊಡ್ಡ ದೊಡ್ಡ ಕುಳಗಳು, ಮಿಲಿಟರಿಯ ಪ್ರಭಾವಗಳು ರಾಜಕೀಯ ಸಂಸ್ಕೃತಿಯಲ್ಲಿ ಆವರಿಸಿಕೊಂಡಿತ್ತು. ಇದರ ಜೊತೆಗೆ ಬ್ರೆಜಿಲ್‍ನ ಮಾಧ್ಯಮ ಕೂಡ ಯಾವಾಗಲೂ ಸಿರಿವಂತರ ಪರವಾಗಿತ್ತು. ಇಂದಿಗೂ ಬಹುತೇಕ ಬ್ರೆಜಿಲ್ ಮಾಧ್ಯಮ ಖಾಸಗಿ ಹಿಡಿತದಲ್ಲಿದೆ.

1965ರ ಮಿಲಿಟರಿ ಆಡಳಿತದಲ್ಲಿ ಹುಟ್ಟಿಕೊಂಡ ಗ್ಲೋಬೋ ಎನ್ನುವ ಒಂದು ಮಾಧ್ಯಮ ಸಂಸ್ಥೆಯು ಅಲ್ಲಿನ ಅತ್ಯಂತ ದೊಡ್ಡ ಮಾಧ್ಯಮ ಸಂಸ್ಥೆ. ಇದು ಆ ದೇಶದ ಅತ್ಯಂತ ದೊಡ್ಡ ಶ್ರೀಮಂತ ಮನೆತನದ ಮಾಲೀಕತ್ವದಲ್ಲಿದೆ. ದೇಶದ ಅರ್ಧದಷ್ಟು ಜನ ಗ್ಲೋಬೋ ವೀಕ್ಷಿಸುತ್ತಾರೆ (9 ಕೋಟಿಗೂ ಮೇಲೂ). ಭಾರತದ ಮಾಧ್ಯಮಗಳ ಅರ್ನಾಬ್ ಗೋಸ್ವಾಮಿ, ಸುಧಿರ್ ಚೌದರೀ, ರಜತ್ ಶರ್ಮ, ರೋಹಿತ್ ಸರ್ದಾನರಂಥ ಪತ್ರಕರ್ತರು ಸರ್ವಾಧಿಕಾರದ ತುತ್ತೂರಿಯನ್ನು ಇನ್ನೂ ಚೆನ್ನಾಗಿ ಹೇಗೆ ಊದಬೇಕು ಎಂಬ ಪಾಠವನ್ನು ಇವರಿಂದ ಕಲಿಯಬಹುದು ಎಂದರೆ, ಅದು ಇನ್ನೂ ಹೇಗಿರಬೇಕು ಊಹಿಸಿಕೊಳ್ಳಿ. ಬ್ರೆಜಿಲ್‍ನ ಎರಡನೇ ಅತಿದೊಡ್ಡ ಮಾಧ್ಯಮ ಸಂಸ್ಥೆ ‘ಬಾಂಡೆರಸ್ಟೆಸ್’ ಧಾರ್ಮಿಕ ಸಂಸ್ಥೆಯ ಒಡೆತನದಲ್ಲಿದೆ. ಬ್ರೆಜಿಲ್ ದೇಶ ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಕ್ರೈಸ್ತ ಧರ್ಮೀಯರಿರುವ ಕ್ಯಾಥೊಲಿಕ್ ದೇಶ. ಮಿಲಿಟರಿ ಜೊತೆ ಇವೂ ಕೂಡ ಬ್ರೆಜಿಲ್‍ನ ಸ್ಥಾಪಿತ ಹಿತಾಸಕ್ತಿ ಕಾಯುವ ಸಾಂಪ್ರದಾಯಿಕ ಪ್ರತಿಗಾಮಿ ಶಕ್ತಿಗಳು.

ಇವೆಲ್ಲವನ್ನೂ ಃಃಃ ಲಾಬಿ ಎಂದು ಕರೆಯುತ್ತಾರೆ. ಈ ಲಾಬಿಗೆ ಬ್ರೆಜಿಲ್ ಕಾಂಗ್ರೆಸ್ ಮತ್ತು ಸೆನೆಟ್ನಲ್ಲಿ 40% ಸಂಖ್ಯಾಬಲವಿದೆ. ಮೊದಲನೆಯದು ಬೀಫ್ ಲಾಬಿ, ಇದರಲ್ಲಿ ಸಾವಿರಾರು ಅಥವಾ ಲಕ್ಷ ಲಕ್ಷ ಎಕರೆಗಟ್ಟಲೆ ಹೊಂದಿರುವ ಭೂಮಾಲೀಕರು ಬರುತ್ತಾರೆ. ಇವರು ದನದ ಮಾಂಸ ರಫ್ತು ಮಾಡುವ ವ್ಯವಹಾರದ ಜೊತೆಗೆ ಸೋಯಾ ಬೀನ್, ಕಬ್ಬು(ಸಕ್ಕರೆ), ಆರೆಂಜ್, ಬಾಳೆಹಣ್ಣು, ಕಾಫೀ ರಫ್ತು ಮಾಡುವ ಗುಂಪಾಗಿದ್ದಾರೆ. ಚುನಾವಣೆಗೂ ಮುಂಚೆ ಬೊಲ್ಸಾನರೋ ಅಮೆಜಾನ್ ಕಾಡುಗಳನ್ನು ಕಡಿದು ಈ ವ್ಯವಹಾರದ ವಿಸ್ತರಣೆ ಮಾಡುವುದಕ್ಕೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೇಳಿದ್ದ. ಇನ್ನು ಎರಡನೆಯ ಬಿ, ಬುಲೆಟ್ ಲಾಬಿಯಲ್ಲಿ ಸ್ವತಹಃ ಬೊಲ್ಸಾನರೋ ದೊಡ್ಡ ನಾಯಕ. ಇವನ ಪ್ರಕಾರ ಇವನು ಕೂಡ ಪಾಲ್ಗೊಂಡಿದ್ದ ಮಿಲಿಟರಿ ಸರ್ವಾಧಿಕಾರದಲ್ಲಿ ಚಿತ್ರಹಿಂಸೆಯ ಜೊತೆಗೆ ಕಡಿಮೆ ಜನರನ್ನು ಸಾಯಿಸಿದ್ದು ದೊಡ್ಡ ತಪ್ಪು. ಇನ್ನೂ 30 ಸಾವಿರ ಜನರನ್ನು ಸಾಯಿಸಬೇಕಿತ್ತೆಂದು ಸಾರ್ವಜನಿಕವಾಗಿ ಹೇಳಿಕೆ ಕೊಟ್ಟಿದ್ದ. ಇವನ ಜೊತೆ ಇನ್ನೂ ಹಲವು ಮಿಲಿಟರಿ ಅಧಿಕಾರಿಗಳು ಕಾರ್ಮಿಕ ಪಕ್ಷದ ಅಧಿಕಾರದಲ್ಲಿ ಸ್ಥಾಪಿಸಿದ್ದ ‘ಸರ್ವಾಧಿಕಾರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತಾದ ಸತ್ಯ ಆಯೋಗ’ದ ಮುಂದೆ ವಿಚಾರಣೆಗಳನ್ನು ಎದುರುಸುತ್ತಿದ್ದಾರೆ. ಮೂರನೆಯದು ಬೈಬಲ್ ಲಾಬಿ, ಇದು ಕೂಡ ಧಾರ್ಮಿಕ ಮೂಲಭೂತವಾದ ಪ್ರತಿಪಾದಿಸುವ ಒಂದು ಗುಂಪು.

ಇವರೆಲ್ಲರ ಜೊತೆಗೆ ಅಮೆರಿಕ ಬೇಹುಗಾರಿಕೆ ಸಂಸ್ಥೆಗಳ ಸಹಭಾಗಿತ್ವ ಮತ್ತು ಬ್ರೆಜಿಲ್ ನ್ಯಾಯಾಂಗ ವ್ಯವಸ್ಥೆ ಸೇರಿ ಎರಡನೇ ಬಾರಿಗೆ ನ್ಯಾಯಯುತವಾಗಿ ಚುನಾಯಿರಾತಾಗಿದ್ದ ದಿಲ್ಮ ರೌಸೆಫ್‍ರನ್ನು ಒಂದು ಹುಸಿ ಆರೋಪದಡಿ ಅಧಿಕಾರದಿಂದ ಹೊರ ಹಾಕುತ್ತಾರೆ. ಇವರ ವಿರುದ್ದ ದೋಷಾರೋಪ ಮಾಡಿದ್ದ 4 ಜನರಲ್ಲಿ ನಾಲ್ಕು ಜನವೂ ಭ್ರಷ್ಟಾಚಾರದ ಆರೋಪವನ್ನು ಎದುರಿಸುತ್ತಿದ್ದಾರೆ. ದಿಲ್ಮ ಆಡಳಿತದಲ್ಲಿ ಉಪರಾಷ್ಟ್ರಪತಿಯಾಗಿದ್ದ ಮಿಚಿಯಾಲ್ ತೆಮೆರ್ ತಾವು ಕೂಡ ದಿಲ್ಮರನ್ನು ಕೆಳಗಿಳಿಸುವ ಷಡ್ಯಂತ್ರದ ಪಾತ್ರಧಾರಿಯೂ ಆಗಿದ್ದರು ಮತ್ತು ಸ್ವತಃ ಅವರೇ ಭ್ರಷ್ಟಾಚಾರದ ಆರೋಪವನ್ನು ಎದುರಿಸಿ ಅಧಿಕಾರದಿಂದ ಕೆಳೆಗಿಳಿಯಬೇಕಾಗುತ್ತದೆ.

ನಂತರದ ಅಭಿಪ್ರಾಯ ಸಮೀಕ್ಷೆಯಲ್ಲಿ ಎಲ್ಲರಿಗಿಂತಲೂ ಮುಂಚೂಣಿಯಲ್ಲಿದ್ದ ಲೂಲಾರನ್ನು ಕ್ಷುಲ್ಲಕ ಕಾರಣಗಳನ್ನು ಮುಂದೆ ಮಾಡಿ, ನ್ಯಾಯಾಂಗ ವ್ಯವಸ್ಥೆಯನ್ನೂ ದುರ್ಬಳಕೆ ಮಾಡಿಕೊಂಡು ಜೈಲಿಗಟ್ಟುತ್ತಾರೆ. (ಬ್ರೆಜಿಲ್ ಚುನಾವಣೆಗಳಲ್ಲಿ ಒಬ್ಬ ಅಭ್ಯರ್ಥಿ ಸತತ ಎರಡು ಬಾರಿಗೂ ಹೆಚ್ಚು ಚುನಾವಣೆಗೆ ನಿಲ್ಲುವ ಹಾಗಿಲ್ಲ, ಹಾಗಾಗಿ 2010ರ ನಂತರ ಮತ್ತೆ 2018ರಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದರು). ಈ ತೀರ್ಪಿಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿ ತನ್ನ ಮಾನವ ಹಕ್ಕುಗಳ ಸಮಿತಿಯ ವತಿಯಿಂದ ಲೂಲಾರನ್ನು ಚುನಾವಣೆಯಿಂದ ಅನರ್ಹಗೊಳಿಸಬಾರದು ಮತ್ತು ವಿಚಾರಣೆ ನಡೆಯುವವರೆಗೂ ಅವರು ಚುನಾವಣೆಯಲ್ಲಿ ನಿಲ್ಲಬಹುದೆಂದು ಹೇಳಿಕೆ ನೀಡಿತ್ತು. ಈ ಚುನಾವಣೆ ಎಷ್ಟು ಆಳುವ ವರ್ಗದ ಪರವಾಗಿತ್ತೆಂದರೆ ತಮ್ಮ ಅಭ್ಯರ್ಥಿ ಗೆಲ್ಲಲು, ಇವರ ವಿರುದ್ಧ ಇದ್ದ ಗೆಲ್ಲುವ ಅಭ್ಯರ್ಥಿಯನ್ನು ಹೇಗಾದರೂ ಮುಗಿಸಬೇಕಿತ್ತು. ಬ್ರೆಜಿಲ್ ಚುನಾವಣೆಯಲ್ಲಿ ಆದದ್ದು ಅದೇ. ಇಲ್ಲಿ ಭಾರತದಲ್ಲಿ ಸರ್ವಾಧಿಕಾರದ ಹೆಜ್ಜೆಗಳು ದೊಡ್ಡ ದೊಡ್ಡದಾಗುತ್ತಿದ್ದಂತೆ ಇಲ್ಲೂ ಕೂಡ ಪ್ರತಿಪಕ್ಷದ ನಾಯಕರುಗಳನ್ನು ಜೈಲಿಗಟ್ಟಿದರೂ ಅದು ಆಶ್ಚರ್ಯವಲ್ಲ. ಈಗಾಗಲೇ ಇದನ್ನು ಕೆಲವು ನಾಯಕರುಗಳ ಮೇಲೆ ಅದನ್ನು ಉಪಯೋಗಿಸುತ್ತಿದ್ದಾರೆ.

(ಬೊಲ್ಸಾನರೋ ಪ್ರಚಾರ, ಅದರ ಹಿಂದಿನ ಶಕ್ತಿಗಳು, ಮುಂಬರುವ ಚುನಾವಣೆಗಳ ಬಗ್ಗೆ ಕಡೆಯ ಕಂತು ಮುಂದಿನ ಸಂಚಿಕೆಯಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...