Homeಪ್ರಪಂಚಬ್ರೆಜಿಲ್ ಮೋದಿಯ ಕುರಿತ ಕಡೆಯ ಕಂತು

ಬ್ರೆಜಿಲ್ ಮೋದಿಯ ಕುರಿತ ಕಡೆಯ ಕಂತು

- Advertisement -
- Advertisement -

ಭರತ್ ಹೆಬ್ಬಾಳ್ |

ಬ್ರೆಜಿಲ್ ಚುನಾವಣೆಯ ಫಲಿತಾಂಶದ ದಿನ ನವ ಬಲಪಂಥೀಯ ವಿಚಾರಗಳನ್ನು ಪ್ರಪಂಚಾದ್ಯಂತ ಪ್ರತಿಪಾದಿಸುವ ಅಮೆರಿಕಾದ ಪ್ರಚಾರಕ ಸ್ಟೀವ್ ಬ್ಯಾನನ್ ಬ್ರೆಜಿಲ್‌ನ ‘ವ್ಯಾಲರ್ ಎಕೊನೊಮಿಕಾ’ ಪತ್ರಿಕೆಯು ಸಂದರ್ಶನ ಮಾಡುತ್ತದೆ. ಸರ್ವಾಧಿಕಾರಿ ಜೈರ್ ಬೊಲ್ಸಾನರೋ ಗೆಲುವಿನ ಬಗ್ಗೆ ಕೇಳಿದಾಗ “ಜನರ ಮೇಲೆ ಮಾಡುವ ಪರಿಣಾಮಕಾರಿ ಮಾನಸಿಕ ಕಾರ್ಯಾಚರಣೆಯ ಒಂದು ಯಶಸ್ವಿ ನಿದರ್ಶನ ಬ್ರೆಜಿಲ್‌ನ ಚುನಾವಣೆ” ಎನ್ನುತ್ತಾನೆ (ವಿಜ್ಞಾನ ಮತ್ತು ಕಲೆ ಉಪಯೋಗಿಸಿಕೊಂಡು ಒಂದು ವ್ಯವಸ್ಥೆ ಮತ್ತು ಅದಲ್ಲಿರುವವರ ಮಾನಸಿಕ ಆಯಾಮವನ್ನು ನಿಯಂತ್ರಣದಲ್ಲಿಡುವುದನ್ನು ಸೈಕೊಲಾಜಿಕಲ್ ಆಪರೇಶನ್ಸ್ ಎನ್ನುತ್ತಾರೆ). ಈ ಸ್ಟೀವ್ ಬ್ಯಾನನ್ 2016ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್‌ನ ಚುನಾವಣಾ ಪ್ರಚಾರ ಸಂಯೋಜಕ ಮತ್ತು ಗೆದ್ದ ನಂತರ ವೈಟ್ ಹೌಸ್‌ನ ಮುಖ್ಯ ಕಾರ್ಯತಂತ್ರಜ್ಞನಾಗಿ ಕೆಲಸ ಮಾಡಿದ ವ್ಯಕ್ತಿ. ಇವನಿಗೂ ಮತ್ತು ವಿಶ್ವಾದ್ಯಂತ ಅಧಿಕಾರಕ್ಕೇರುತ್ತಿರುವ ತೀವ್ರವಾದ ಬಲಪಂಥೀಯ ಪಕ್ಷ, ಗುಂಪು, ಸರ್ಕಾರಗಳಿಗೂ ನಿಕಟ ಸಂಬಂಧವಿದೆ. ಇವನು ಮತ್ತು ಇವನ ಸಂಪರ್ಕ ಜಾಲದ ಕಂಪನಿಗಳೇ ಜರ್ಮನಿ, ಫಿಲಿಪೈನ್‌ನ ರೊಡ್ರಿಗೊ ಡ್ಯುಟೆರ್ಟಿ, ಅರ್ಜೆಂಟೀನಾದ ಮಾಯರಿಸೀಯೋ ಮಕ್ಕ್ರಿ, ಭಾರತದ ನರೇಂದ್ರ ಮೋದಿ, ಸ್ಕಾಟಿಶ್ ರಾಷ್ಟ್ರೀಯ ಪಾರ್ಟಿ, ಅಮೆರಿಕಾದ ಡೊನಾಲ್ಡ್ ಟ್ರಂಪ್ ಮತ್ತು ಬೊಲ್ಸಾನರೋನ ಸಾಮಾಜಿಕ ಜಾಲತಾಣಗಳ ಪ್ರಚಾರದ ನೇರ ಅಥವಾ ಪರೋಕ್ಷ ನಿರ್ವಹಣೆ ವಹಿಸಿಕೊಂಡಿದ್ದವು. ಇವರೆಲ್ಲರೂ ತಮ್ಮ ತಮ್ಮ ಚುನಾವಣಾ ಕಾರ್ಯತಂತ್ರಕ್ಕೆ ಸಾಮಾಜಿಕ ಜಾಲತಾಣಗಳ ಕಂಪನಿಗಳಾದ ಫೇಸ್ಬುಕ್, ಟ್ವಿಟರ್, ವಾಟ್ಸಾಪ್‌ಗಳಲ್ಲಿ ಏನನ್ನು ಹೇಗೆ ಹರಡಬೇಕೆಂಬುದರ ಬಗ್ಗೆ ಈ ಕೆಲವು ಕಂಪೆನಗಳನ್ನು ಅವಲಂಬಿಸಿದ್ದರು ಮತ್ತು ಅವರ ಸಲಹೆಯ ಮೇರೆಗೆ ತಮ್ಮ ಚುನಾವಣಾ ತಂತ್ರವನ್ನು ಬದಲಿಸುತ್ತಿದ್ದರು.

ಬೊಲ್ಸನಾರೋ ಕೂಡ ಅಮೆರಿಕಾದ ಟ್ರಂಪ್ ಮತ್ತು ಭಾರತದ ಮೋದಿಯ ಹಾಗೆ ತನ್ನನ್ನು ತಾನೇ “ಜಡಗಟ್ಟಿರುವ ಭ್ರಷ್ಟಾಚಾರ ಮತ್ತು ವ್ಯವಸ್ಥೆಯನ್ನು ನಿರ್ಣಾಯಕ ರೀತಿಯಲ್ಲಿ ಬದಲಾಯಿಸುವ ಮತ್ತು ದೇಶವನ್ನು ತೀವ್ರಗತಿಯಲ್ಲಿ ಅಭಿವೃದ್ಧಿ ಪಡಿಸುವ ನೇತಾರ”ನೆಂದು ಬಿಂಬಿಸಿಕೊಂಡ. ಹೊಸ ಆರ್ಥಿಕ ನೀತಿಯು ಮೊದಲಿಗೆ ಅನುಷ್ಠಾನವಾಗಿದ್ದೇ ದಕ್ಷಿಣ ಅಮೆರಿಕಾದ ಚಿಲಿ ದೇಶದಲ್ಲಿ. ಪ್ರಜಾತಾಂತ್ರಿಕವಾಗಿ ಚುನಾಯಿತರಾಗಿ ದೇಶದ ಅಧ್ಯಕ್ಷ ಪಟ್ಟಕ್ಕೇರಿದ್ದ ಸಮಾಜವಾದಿ ಸ್ಯಾಲ್ವಡಾರ್ ಅಲ್ಲೆಂಡೆಯನ್ನು 1973ರ ಸೆಪ್ಟೆಂಬರ್ 11ರಂದು ಸಿಐಎ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕೊಲ್ಲಲಾಗುತ್ತದೆ. ಅವರ ಸ್ಥಾನಕ್ಕೆ ಆಗ್ಯಾಸ್ಟೋ ಪಿನಶೇ ಎಂಬ ಮಿಲಿಟರೀ ಸರ್ವಾಧಿಕಾರಿ ಬಂದು ಅಮೆರಿಕಾದ ಕುಖ್ಯಾತಿಯ ಮಿಲ್ಟನ್ ಫ್ರೀಡ್ಮನ್‌ನ ಶಿಕಾಗೋ ಬಾಯ್ಸ್ ಪಡೆಯ ಪಾಲೊ ಗುಡೆಸ್ ಮೂಲಕ ಕೆಲವು ನೀತಿಗಳನ್ನು ಜಾರಿಗೆ ತರುತ್ತಾರೆ. ಆಘಾತಕಾರಿ ಸಂಗತಿಯೆಂದರೆ ಇದೇ ಪಾಲೊ ಗುಡೆಸ್ ಬೊಲ್ಸಾನರೋನ ಆರ್ಥಿಕ ಸಲಹೆಗಾರರಾಗಿದ್ದಾರೆ.

ಪ್ರಜಾತಂತ್ರವನ್ನು ಪ್ರಜಾತಂತ್ರದಿಂದಲೇ ಹೇಗೆ ಕೆಡವಬಹುದು ಎಂಬುದಕ್ಕೆ ದಕ್ಷಿಣ ಅಮೆರಿಕಾದ ದೇಶಗಳೇ ಉದಾಹರಣೆ. ಇದರಲ್ಲಿ ಬ್ರೆಜಿಲ್ ಒಂದು ಕೆಟ್ಟ ಸಂಪ್ರದಾಯಕ್ಕೆ ಹುಟ್ಟು ಹಾಕಿದೆ. ತನ್ನ ಇತಿಹಾಸದುದ್ದಕ್ಕೂ ಬೊಲ್ಸಾನರೋ ಮಹಿಳಾ, ಕಪ್ಪು ವರ್ಣೀಯ, ಸಲಿಂಗಕಾಮ, ಸಾಮಾಜಿಕ ನ್ಯಾಯದ ವಿರೋಧಿ ಹೇಳಿಕೆಗಳನ್ನು ಕೊಡುತ್ತಲೇ ಬರುತ್ತಿದ್ದಾರೆ. ಉದಾಹರಣೆಗೆ ‘ಕಪ್ಪು ವರ್ಣೀಯರು ಪ್ರಾಣಿಗಳಿಗೆ ಸಮ, ಅವರು ಮೃಗಾಲಯದಲ್ಲಿ ಇರಬೇಕಾದವರು, ಇವರೆಲ್ಲ ಯಾವುದಕ್ಕೂ ಪ್ರಯೋಜನವಿಲ್ಲದ ಗುಲಾಮಿ ಸಂತತಿ, ನನ್ನ ಮಗ ಸಲಿಂಗಕಾಮಿ ಎಂದು ಕೇಳುವುದಕ್ಕಿಂತ ಯಾವುದಾದರೂ ಕಾರು ಅಪಘಾತದಲ್ಲಿ ಮೃತಪಟ್ಟ ಎಂದು ಕೇಳಲು ಬಯಸುತ್ತೇನೆ, ಬ್ರೆಜಿಲ್‌ನ ಮಹಿಳಾ ಸಂಸದೆ ಮರೀಯ ದೊ ರೊಸಾರಿಯೋವನ್ನು ನೀನು ಅತ್ಯಾಚಾರಕ್ಕೂ ಲಾಯಕ್ಕಿಲ್ಲದ ಕುರೂಪಿ’ ಇವೆಲ್ಲವೂ ಬಹಿರಂಗ ಹೇಳಿಕೆಗಳು! ಅಮೆಜಾನ್ ಕಾಡುಗಳನ್ನು ಕಡಿದು ಬೀಫ್ ಮತ್ತು ಅಮೆರಿಕ ಕುಲಾಂತರಿ ಸೋಯಬೀನ್, ಜೋಳದ ಕಾಳು, ಇನ್ನಿತರೆ ಕೃಷಿ ವಿಸ್ತರಿಸಬೇಕು; ಲೇಬರ್ ಪಾರ್ಟಿಯ ಸರ್ಕಾರ ಶುರು ಮಾಡಿದ್ದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ತೆಗೆದು ಹಾಕಬೇಕು, ಸರ್ವಾಧಿಕಾರ ದೇವರು ಕೊಟ್ಟ ವರ. ಎಂದು ಒಂದರ ನಂತರ ಇನ್ನೊಂದು ತಿಕ್ಕಲುತನದ ಹೇಳಿಕೆಗಳನ್ನು ಹರಿಬಿಟ್ಟಿದ್ದ.

ಮಾಧ್ಯಮಗಳು ಖಾಸಗೀಕರಣಗೊಂಡು ಜನ ಬದುಕಿನ ಸಮಸ್ಯೆಯ ಸುದ್ದಿ ಬಿಟ್ಟು ಫೇಕ್, ವಿಕೃತ ಹಾಗೂ ಪ್ರಚೋದನಕಾರಿ ವಿಚಾರಗಳ ಹಿಂದೆ ಬೀಳುತ್ತಾರೆಂಬುದಕ್ಕೆ ಮತ್ತು ಸಾಮಾಜಿಕ ಜಾಲತಾಣಗಳನ್ನು ಅದಕ್ಕೆ ಹೇಗೆ ಪರಿಣಾಮಕಾರಿಯಾಗಿ ಬಳಸಬಹುದೆಂಬುದಕ್ಕೆ ಭಾರತ ಮತ್ತು ಬ್ರೆಜಿಲ್ ಚುನಾವಣೆಗಳೇ ಸಾಕ್ಷಿ. 21 ಕೋಟಿ ಜನಸಂಖ್ಯೆಯ ಬ್ರೆಜಿಲ್‌ನಲ್ಲಿ 12 ಕೋಟಿ ಜನರು ವಾಟ್ಸಾಪ್ ಉಪಯೋಗಿಸುತ್ತಾರೆ. ಭಾರತದಲ್ಲಿ ಈ ಸಂಖ್ಯೆ 70 ಕೋಟಿ ಮುಟ್ಟುತ್ತಿದೆ. ಭಾರತೀಯ ಜನತಾ ಪಕ್ಷ ಹೇಗೆ ರಾಜಕೀಯ ಅಪಪ್ರಚಾರ (ಅನ್ನಭಾಗ್ಯದ ವಿರುದ್ದವೂ ಮಾತಾಡಿ, ನಂತರ ಅದನ್ನು ತಂದಿದ್ದೂ ಮೋದಿಯೇ ಎಂದು ಕರ್ನಾಟಕ ಚುನಾವಣೆಯಲ್ಲಿ ಮಾಡಿದರೋ ಹಾಗೆ) ಮಾಡಿತ್ತೋ ಹಾಗೆಯೇ ಬ್ರೆಜಿಲ್‌ನಲ್ಲೂ ಕೂಡ ಈ ವಿಕೃತರ ಗೆಲುವಿಗೆ ವಾಟ್ಸಾಪ್‌ಸುದ್ದಿಗಳೇ ನಿರ್ಣಾಯಕ ಕಾರಣ ಎನ್ನುತ್ತಿದ್ದಾರೆ. ಈ ರೀತಿಯ ಸುಳ್ಳು ಸುದ್ದಿಗಳು ಪ್ರಣಾಳಿಕೆ ಬಿಟ್ಟು ಎದುರಾಳಿ ಪಕ್ಷದ ತೇಜೋವಧೆಗೆ ಹೆಚ್ಚು ಒತ್ತು ನೀಡಿತ್ತು. ಕಾರ್ಮಿಕ ಪಕ್ಷದ ಹದ್ದದ್‌ರ ಕುರಿತಂತೆ ಮತ್ತು ಪ್ರಗತಿಪರ ಧೋರಣೆಗಳ ವಿರುದ್ದ ಇಲ್ಲಸಲ್ಲದ ಆರೋಪಗಳು, ತಿದ್ದಿದ ಚಿತ್ರ ಮತ್ತು ವಿಡಿಯೋಗಳು ವೈರಲ್ ಆಗಿದ್ದವು. ಒಂದು ತಿದ್ದಿದ ವಿಡಿಯೋವನ್ನು ೩೦ ಲಕ್ಷ ವೀಕ್ಷಣೆಯ ನಂತರ ಯೂಟ್ಯೂಬ್ನಿಂದ ತೆಗೆದುಹಾಕಲಾಗಿತ್ತು. ಈ ಅನಾಮಿಕ ಸುಳ್ಳು ಪ್ರಚಾರದ ಹಾದಿಯನ್ನು ಬಹುಬೇಗ ತಿದ್ದಿಕೊಳ್ಳದಿದ್ದಲ್ಲಿ ದೇಶಗಳ ಸಾರ್ವಭೌಮತ್ವ ಕುಸಿದು ಬೀಳುವ ಆತಂಕ ತಪ್ಪಿದ್ದಲ್ಲ. ವಿಪರ್ಯಾಸವೆಂದರೆ ಯಾರು ರಾಷ್ಟ್ರವಾದಿ ಮತ್ತು ಉಗ್ರ ದೇಶಭಕ್ತಿಯನ್ನು ಅಬ್ಬರದಿಂದ ಪ್ರದರ್ಶಿಸುತ್ತಿದ್ದಾರೋ ಅವರೇ ತಮ್ಮ ದೇಶಗಳ ಆರ್ಥಿಕ, ಸಾಮಾಜಿಕ ಸಾರ್ವಭೌಮತ್ವವನ್ನು ಕಡೆಗಣಿಸುತ್ತಿದ್ದಾರೆ.

ಈ ವಿಕೃತ ಗೆಲುವನ್ನು ಫ್ರೆಂಚ್-ಬ್ರೆಜಿಲ್ ಸಮಾಜಶಾಸ್ತ್ರಜ್ಞ ಮೈಕಲ್ ಲೌಯ್ ರೋಗಗ್ರಸ್ತ ರಾಜಕೀಯದ ದೊಡ್ಡ ಪ್ರಮಾಣದ ಗೆಲುವು ಎಂದು ಬಣ್ಣಿಸಿದ್ದಾರೆ. ಇದು ಬ್ರೆಜಿಲ್ ದೇಶವನ್ನು ಮತ್ತಷ್ಟು ಬಿಕ್ಕಟ್ಟಿನತ್ತ ಕೊಂಡೊಯ್ಯುತ್ತದೆ ಎಂಬುದರಲ್ಲಿ ಯಾವುದೇ ಸಂದೇಹ ಇಲ್ಲ. ಇದು ಅಲ್ಪಾವಧಿಯಲ್ಲಿ ತನ್ನ ಸುತ್ತಮುತ್ತಲಿನ ಎಡಪಂಥೀಯ ಸರ್ಕಾರಗಳ ಪತನವನ್ನು ಮತ್ತು ಕಾರ್ಮಿಕ ಪಕ್ಷ ಮಾಡಿದ ಅಲ್ಪ ಸ್ವಲ್ಪ ಜನಕಲ್ಯಾಣ ಯೋಜನೆಗಳನ್ನು ಸಂಪೂರ್ಣವಾಗಿ ನಾಶ ಮಾಡಬಹುದು. ಆದರೆ ಇವರು ಶುರು ಮಾಡುವ ದೀರ್ಘಾವಧಿ ಕೆಡಕುಗಳು ಬಹಳಷ್ಟಿವೆ. ಈ ಬಲಪಂಥೀಯ ಗೆಲವುಗಳನ್ನು ಸಮಾಜದ ಎಲ್ಲ ಮಾನವಪ್ರೇಮಿ ಹೃದಯಗಳು ಮತ್ತು ಮುಖ್ಯವಾಗಿ ಮೆದುಳುಗಳು ವಿಮರ್ಶಿಸಿ ಪರ್ಯಾಯವನ್ನು ಹುಡುಕಿಕೊಳ್ಳಬೇಕಿದೆ. ಕ್ರಾಂತಿಕಾರಿ ಪಕ್ಷಗಳು ಸಂಸದೀಯ ಸುಧಾರಣಾವಾದಿ ಮಾರ್ಗ ಹುಡುಕಿಕೊಂಡಾಗ ಮತ್ತು ಜನರಲ್ಲಿ ಮೂಲಭೂತ ಬದಲಾವಣೆಯನ್ನು ತರುವಲ್ಲಿ ವಿಫಲರಾದಾಗ ಹೇಗೆ ತೀವ್ರ ಬಲಪಂಥೀಯ ರಾಜಕೀಯಕ್ಕೆ ಆಸ್ಪದ ಮಾಡಿಕೊಡುತ್ತದೆಂಬುದಕ್ಕೆ ಬ್ರೆಜಿಲ್ ರಾಜಕೀಯ ಒಂದು ಸ್ಪಷ್ಟ ಉದಾಹರಣೆ ಮತ್ತು ಬಹುಮುಖ್ಯ ಪಾಠ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...