Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...