Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...