Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...