Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...