Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...