Homeಅಂಕಣಗಳುಭಾರತದ ಫ್ಯಾಸಿಸ್ಟ್ ಪ್ರಜಾಪ್ರಭುತ್ವ

ಭಾರತದ ಫ್ಯಾಸಿಸ್ಟ್ ಪ್ರಜಾಪ್ರಭುತ್ವ

- Advertisement -
- Advertisement -

ಭಾರತ ಒಂದು ಪ್ರಜಾಪ್ರಭುತ್ವ ಆಗಿರುವ ಕುರಿತು ಸಿನಿಕರಲ್ಲಿದ್ದ ಅನುಮಾನಗಳನ್ನು ಅಂತಿಮವಾಗಿ ಪ್ರಸಕ್ತ ಆಡಳಿತವು ದೃಢೀಕರಿಸಿದೆ. ಭಾರತದ ಪ್ರಧಾನ ಸರ್ಕಾರಿ ವಕೀಲರಾದ ಮುಕುಲ್ ರೋಹಟಗಿ “ಪ್ರಜೆಗಳು ತಮಗೆ ತಮ್ಮ ದೇಹದ ಮೇಲೆ `ಸಂಪೂರ್ಣ’ ಹಕ್ಕು ಇದೆಯೆಂದು ಸಾಧಿಸಲು ಸಾಧ್ಯವಿಲ್ಲ’’ ಎಂದು ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವೊಂದರ ಮುಂದೆ ಹೇಳಿದ್ದಾರೆ. ಆತ್ಮಹತ್ಯೆ, ಮದ್ಯಪಾನ, ಗರ್ಭಪಾತಗಳಿಗೆ ಸಂಬಂಧಿಸಿದ ಕಾನೂನುಗಳೆ ಮೊದಲಾದ ನಿದರ್ಶನಗಳೊಂದಿಗೆ ಅವರು ಹರಿಬಿಟ್ಟ ಆಡಂಬರಯುತ ವಾಕ್ಪ್ರವಾಹದ ವೈಖರಿ ಹೇಗಿತ್ತೆಂದರೆ ಅದನ್ನು ಆಲಿಸಿದ ನ್ಯಾ| ಎ.ಕೆ.ಸಿಕ್ರಿ ಮತ್ತು ನ್ಯಾ| ಅಶೋಕ್ ಭೂಷಣ್‍ರಿಗೂ ಮುಜುಗರ ಎನಿಸಿದೆ. ಆದರೆ ಪ್ರಾಸಂಗಿಕವಾಗಿ ಸರ್ಕಾರಿ ವಕೀಲರ ಮಾತುಗಳು ಪ್ರಜಾಸತ್ತೆಯ ಮುಖವಾಡ ಧರಿಸಿರುವ ಕ್ರೂರ ಮೃಗದ ಕೋರೆಹಲ್ಲುಗಳ ದರ್ಶನವನ್ನು ಮಾಡಿಸಿದೆ. ವಾಸ್ತವದಲ್ಲಿ ರೋಹಟಗಿ ಹೇಳಿಕೆಯ ಅರ್ಥ ಏನೆಂದರೆ ಭಾರತದ ಪ್ರಭುತ್ವವು ಸಾರ್ವಭೌಮರೆನ್ನಲಾದ ಭಾರತೀಯರನ್ನು ತನಗಿಷ್ಟಬಂದಾಗ ಬಲಿ ತೆಗೆದುಕೊಳ್ಳಬಹುದು.

ಮುಸೊಲಿನಿ ತನ್ನ ಫ್ಯಾಸಿಸ್ಟ್ ಸಿದ್ಧಾಂತದಲ್ಲಿ ಸಾರಿದ್ದೂ ಇದನ್ನೆ. ಫ್ಯಾಸಿಸ್ಟ್ ಸಿದ್ಧಾಂತ ಪ್ರಭುತ್ವದ ಪ್ರಾಧಾನ್ಯವನ್ನು ಒತ್ತಿಹೇಳಿತು. ವ್ಯಕ್ತಿಯ ಹಿತಾಸಕ್ತಿಗಳು ಪ್ರಭುತ್ವದ ಹಿತಾಸಕ್ತಿಗಳ ಜತೆ ತಾಳೆಯಾದಾಗಲಷ್ಟೆ ಅದು ವ್ಯಕ್ತಿಯನ್ನು ಸ್ವೀಕರಿಸಿತು. ಭಾರತದಲ್ಲಿ ಪ್ರಭುತ್ವದಿಂದ ರದ್ದುಪಡಿಸಲಾಗದಂತಹ ನಿರ್ದಿಷ್ಟ ಹಕ್ಕುಗಳನ್ನು ಪ್ರಜೆಗಳಿಗೆ ನೀಡಿರುವ ಒಂದು ಉದಾರವಾದಿ ಪ್ರಜಾಸತ್ತೆ ಇದೆಯೆಂದು ಎಣಿಸಲಾಗಿತ್ತು. ಫ್ಯಾಸಿಸಂ ಈ ಉದಾರವಾದಿ ಕಲ್ಪನೆಯನ್ನು ತಿರಸ್ಕರಿಸಿ ಪ್ರಭುತ್ವದ ಹಕ್ಕುಗಳನ್ನು ಪುನಃ ದೃಢಪಡಿಸುತ್ತದೆ. “ಸ್ವಾತಂತ್ರ್ಯದ ಕಲ್ಪನೆ ಅಬಾಧಿತವಲ್ಲ ಏಕೆಂದರೆ ಜೀವನದಲ್ಲಿ ಯಾವುದೂ ಯಾವತ್ತೂ ನಿರ್ಬಂಧರಹಿತವಲ್ಲ. ಸ್ವಾತಂತ್ರ್ಯ ಒಂದು ಹಕ್ಕಲ್ಲ, ಕರ್ತವ್ಯ. ಅದು ದಾನವಾಗಿ ಸಿಕ್ಕಿರುವುದಲ್ಲ, ಗೆದ್ದುಕೊಂಡದ್ದು. ಅದು ಸಮಾನತೆಯಲ್ಲ, ಸೌಲಭ್ಯ” ಎಂದು ಫ್ಯಾಸಿಸಂ ಸಿದ್ಧಾಂತ ಹೇಳುತ್ತದೆ. ಇತ್ತೀಚಿನ ದಿನಗಳಲ್ಲಿ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್‍ರಂಥವರು ಇದೇ ಸುಪರಿಚಿತ ವಾಕ್ಯಗಳನ್ನು ಹರಿಬಿಡುತ್ತಿದ್ದಾರೆ. ಭಾರತದ ಪ್ರಭುತ್ವ ತನ್ನ ಪುನರಾವರ್ತಿತ ಹೇಳಿಕೆಗಳ ಮೂಲಕ ತಾನು ಫ್ಯಾಸಿಸ್ಟ್ ಸಿದ್ಧಾಂತವನ್ನು ಅಳವಡಿಸಿಕೊಂಡಿರುವುದನ್ನು ದೃಢಪಡಿಸಿದೆ.

ಇಲ್ಲಿಯತನಕ ನಮಗೆ ತಿಳಿಸಿರುವುದೇನೆಂದರೆ ನಮಗೆಲ್ಲ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳೆಂದು ಪ್ರತಿಷ್ಠಾಪಿಸಲಾಗಿರುವ ಕೆಲವು ನಿರ್ದಿಷ್ಟ ಹಕ್ಕುಗಳಿವೆ. ಸಂವಿಧಾನದ ವಿಧಿ 19 ಆರು ಹಕ್ಕುಗಳ ಕುರಿತು ಹೇಳುತ್ತದೆ: ವಾಕ್ಸಾ ್ವತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು; ಶಾಂತಿಯುತವಾಗಿ, ಆಯುಧಗಳಿಲ್ಲದೆ ಸಭೆ ಸೇರುವ ಹಕ್ಕು; ಸಂಘಟನೆ ಅಥವಾ ಕಾರ್ಮಿಕ ಸಂಘಗಳನ್ನು ಸ್ಥಾಪಿಸುವ ಹಕ್ಕು; ಭಾರತದ ಸರಹದ್ದಿನೊಳಗಿರುವ ಯಾವುದೇ ಭಾಗದಲ್ಲಿ ವಾಸ ಮಾಡುವ ಮತ್ತು ನೆಲೆ ನಿಲ್ಲುವ ಹಕ್ಕು; ಯಾವುದೆ ವೃತ್ತಿಯಲ್ಲಿ ತೊಡಗುವ ಅಥವಾ ಯಾವುದೆ ಕಸುಬು, ವ್ಯಾಪಾರ ಅಥವಾ ಉದ್ದಿಮೆ ನಡೆಸುವ ಹಕ್ಕು. ಸಂವಿಧಾನದಲ್ಲಿ ನಮೂದಿಸಲಾಗಿರುವ ನಿರ್ದಿಷ್ಟ ಸಂದರ್ಭಗಳಲ್ಲಿ ಶಾಸನಸಭೆಗಳು ಈ ಹಕ್ಕುಗಳನ್ನು ಮೊಟಕುಗೊಳಿಸಬಹುದು ಎಂಬರ್ಥದಲ್ಲಿ ಅವು ಅನಿರ್ಬಂಧಿತ ಅಲ್ಲವೆಂದು ನಮಗೆ ಗೊತ್ತಿತ್ತು. ಉದಾಹರಣೆಗೆ ರಾಷ್ಟ್ರೀಯ ಭದ್ರತೆ, ವಿದೇಶಿ ರಾಷ್ಟ್ರಗಳೊಂದಿಗೆ ಸ್ನೇಹಯುತ ಸಂಬಂಧ, ಸಾರ್ವಜನಿಕ ಸುವ್ಯವಸ್ಥೆ, ನ್ಯಾಯಾಂಗ ನಿಂದನೆ, ಮಾನನಷ್ಟ, ಅಪರಾಧಕ್ಕೆ ಪ್ರಚೋದನೆ ಮತ್ತು ಭಾರತದ ಸಾರ್ವಭೌಮತೆ ಹಾಗೂ ಸಮಗ್ರತೆಗಳ ಪ್ರಶ್ನೆಗಳಿದ್ದಾಗ ವಿಧಿ 19 (2)ರ ಮೂಲಕ ವಾಕ್ಸಾ ್ವತಂತ್ರ್ಯದ ಮೇಲೆ ನಿರ್ದಿಷ್ಟ ನಿರ್ಬಂಧಗಳನ್ನು ಹೇರುವ ಅಧಿಕಾರವನ್ನು ಶಾಸನಸಭೆಗಳಿಗೆ ನೀಡಲಾಗಿದೆ. ಸಾಕಷ್ಟು ಅಸ್ಪಷ್ಟತೆಯಿಂದ ಕೂಡಿದ ಈ ಅನೇಕ ನಿರ್ಬಂಧಗಳನ್ನು ಆಳ್ವಿಕರು ದುರುಪಯೋಗಪಡಿಸುವ ಸಂಭವವಿದೆಯಾದರೂ ಸಂವಿಧಾನ ಅವರಲ್ಲಿ ಕನಿಷ್ಠ ಮಟ್ಟದ ನೈತಿಕತೆಯನ್ನು ನಿರೀಕ್ಷಿಸುತ್ತದೆ. ಈ ನಿರ್ಬಂಧಗಳನ್ನು ಕ್ರಮಬದ್ಧವಾಗಿ ರಚಿಸಲಾದ ಕಾಯ್ದೆಯ ಮೂಲಕ ಮಾತ್ರ ಹೇರಬಹುದಾಗಿದೆ ಹೊರತು ಕಾರ್ಯಾಂಗದ ಮೂಲಕ ಅಲ್ಲ. ಆದರೆ ಇಂದು ಇದು ಎಷ್ಟೊಂದು ಕೀಳು ಮಟ್ಟಕ್ಕೆ ಇಳಿದಿದೆ ಎಂದರೆ ನೇರವಾಗಿ ಬಾಯ್ಮುಚ್ಚಿಸುವ ವಿದ್ಯಮಾನಗಳು ನಡೆಯುತ್ತಿವೆ.

ನೀವು ಸರ್ಕಾರದ ಸ್ತುತಿಗೀತೆಗಳನ್ನು ಹಾಡಿದರೆ ಓಕೆ. ಅದು ಬಿಟ್ಟು ಬೇರೆ ಏನನ್ನೆ ಹೇಳಿದರೂ ಪ್ರಾಣಾಪಾಯ ಕಾದಿದೆ. ನಿಮ್ಮ ಮೇಲೆ ರಾಜದ್ರೋಹದಡಿ ಅಥವಾ ಅಸ್ತಿತ್ವದಲ್ಲಿರುವ ಹತ್ತುಹಲವು ಕಠೋರ ಕಾಯ್ದೆಗಳ ಪೈಕಿ ಯಾವುದಾದರೂ ಒಂದರಡಿ ಸುಲಭದಲ್ಲಿ ದೂರು ದಾಖಲಾಗಿ ಫಾಸಿಗೆ ಹಾಕಬಹುದು, ತಪ್ಪಿದಲ್ಲಿ ಜೀವಾವಧಿ ಶಿಕ್ಷೆಯಾಗಬಹುದು. ಅಫ್ಜಲ್ ಗುರುವನ್ನು ಅಥವಾ ಯಾಕುಬ್ ಮೆನನ್‍ನನ್ನು ಗಲ್ಲಿಗೇರಿಸಿದುದರ ವಿರುದ್ಧ ಮಾತನಾಡಿದರೆ ಅಥವಾ ಹೈದರಾಬಾದ್ ಕೇಂದ್ರ ವಿಶ್ವವಿದ್ಯಾನಿಲಯದ ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆಯವರು, ನಂತರ ಜೆಎನ್‍ಯುನ ಎಡಪಂಥೀಯ ವಿದ್ಯಾರ್ಥಿಗಳು ಮಾಡಿದ ಹಾಗೆ ಎಬಿವಿಪಿಯ ಗೂಂಡಾಗಿರಿಯನ್ನು ಪ್ರತಿಭಟಿಸಿದರೆ ರೋಹಿತ್ ವೆಮುಲಾನಿಗೆ ಯಾವ ಅವಸ್ಥೆ ಆಗಿತ್ತೊ ಅದೇ ಸ್ಥಿತಿಯತ್ತ ನೀವೂ ತಳ್ಳಲ್ಪಡಬಹುದು ಅಥವಾ ಕನ್ಹಯ್ಯ ಕುಮಾರ್, ಅನಿರ್ಬನ್ ಭಟ್ಟಾಚಾರ್ಯ ಮತ್ತು ಒಮಾರ್ ಖಲೀದರ ಹಾಗೆ ಸೆರೆವಾಸ ಅನುಭವಿಸಬೇಕಾಗಿ ಬರಬಹುದು. ರೂಢಿಯ ಕಾಮಗಾರಿಗಳನ್ನು ಗುತ್ತಿಗೆಗೆ ನೀಡುವ ಕಾರ್ಮಿಕವಿರೋಧಿ ನೀತಿಯ ವಿರುದ್ಧ ಮಾತನಾಡಿದರೆ, ಕಂಪೆನಿಯ ಮ್ಯಾನೇಜ್‍ಮೆಂಟನ್ನು ಟೀಕಿಸಿದರೆ ವರ್ಷಗಳ ಕಾಲ ಜೈಲಲ್ಲಿದ್ದು ಈಗ ಜೀವಾವಧಿ ಶಿಕ್ಷೆಗೊಳಗಾದ ಮಾರುತಿ ಸುಜುಕಿ ಕಾರ್ಮಿಕರ ಗತಿಯೆ ನಿಮಗೂ ಬಂದೊದಗಬಹುದು. ಸರ್ಕಾರ ಬಲವಂತವಾಗಿ ಭೂಸ್ವಾಧೀನ ಮಾಡುತ್ತಿರುವುದರ ವಿರುದ್ಧ ಮಾತಾಡಿದರೆ `ಮಾವೊವಾದಿ’ ಹಣೆಪಟ್ಟಿ ನಿಮ್ಮದಾಗಬಹುದು ಅಥವಾ ನಿಮ್ಮನ್ನು ಸೀದಾ ಪರಲೋಕಕ್ಕೆ ರವಾನಿಸಬಹುದು. ಸಮಾಜದಲ್ಲಿ ‘ಅನ್ಯ’ರಾಗಿರುವ ಮುಸ್ಲಿಮರಂತೂ ಹೇಗೂ ದೇಶದ್ರೋಹಿಗಳು, ಭಯೋತ್ಪಾದಕರು. ಬಸ್ತರ್ ಅಥವಾ ನಿಯಾಮಗಿರಿಯ ಆದಿವಾಸಿಗಳು ಪ್ರಭುತ್ವ ಅರಣ್ಯಗಳನ್ನು ಕಾನೂನುಬಾಹಿರವಾಗಿ ಬಂಡವಾಳಶಾಹಿಗಳಿಗೆ ಹಸ್ತಾಂತರ ಮಾಡುವುದರ ವಿರುದ್ಧ ಮಾತಾಡಿದ ಮಾತ್ರಕ್ಕೆ ಪ್ರಭುತ್ವ ಅವರ ಮೇಲೆ ಕುತ್ಸಿತ ಯುದ್ಧ ನಡೆಸುತ್ತದೆ. ಭದ್ರತಾ ಪಡೆಗಳನ್ನು ಛೂಬಿಟ್ಟು ಅವರ ಸ್ತ್ರೀಯರ ಮೇಲೆ ಅತ್ಯಾಚಾರ ನಡೆಸಿ ಊನರನ್ನಾಗಿಸುತ್ತದೆ, ಶಿಕ್ಷೆಯ ಭಯವಿಲ್ಲದೆ ಅವರ ಯುವಕರನ್ನು ಕೊಲ್ಲುತ್ತದೆ. ನೀವೇನಾದರೂ ಪ್ರಭುತ್ವವು ಮಾನವಹಕ್ಕು ಕಾರ್ಯಕರ್ತರ ಮೇಲೆ ನಡೆಸುವ ಅನ್ಯಾಯಗಳನ್ನು ವಿರೋಧಿಸಿ ಅವರ ಪರ ನಿಂತಿರಾದರೆ ಡಾ| ಬಿನಾಯಕ್ ಸೆನ್, ಸೋನಿ ಸೋರಿ ಅಥವಾ ಜಿ.ಎನ್. ಸಾಯಿಬಾಬಾರಿಗೆ ಆದ ಗತಿಯೆ ನಿಮಗೂ ಬರಬಹುದು. ಕಳೆದ ಡಿಸೆಂಬರ್‍ನಲ್ಲಿ ಬಸ್ತರ್‍ನಲ್ಲಿ ನಡೆಯುತ್ತಿರುವ ಮಾನವಹಕ್ಕು ಉಲ್ಲಂಘನೆಗಳ ಸತ್ಯಶೋಧನೆಗಾಗಿ ತೆರಳುತ್ತಿದ್ದ ತೆಲಂಗಾಣ ಪ್ರಜಾತಾಂತ್ರಿಕ ವೇದಿಕೆಯ ಏಳು ಸದಸ್ಯರ ತಂಡವೊಂದನ್ನು ದಾರಿಮಧ್ಯದಲ್ಲೆ ಬಂಧಿಸಲಾಯಿತು. ಜಾಮೀನು ನಿರಾಕರಿಸಲಾಗಿರುವುದರಿಂದ ಅವರಿನ್ನೂ ಸುಕ್ಮಾ ಜೈಲಿನಲ್ಲಿದ್ದಾರೆ. ಇಲ್ಲಿ ಪೊಲೀಸರು ಕಟ್ಟಿದ ಕತೆಯಷ್ಟೆ ಇದೆ ಹೊರತು ಪುರಾವೆಯ ಸಣ್ಣ ಚೂರಾದರೂ ಇಲ್ಲ. ಇವೆಲ್ಲವೂ ಭಿನ್ನ ಭಿನ್ನ ಘಟನೆಗಳಲ್ಲ, ಇಡೀ ದೇಶಕ್ಕೆ ವ್ಯಾಪಿಸಿರುವ ವಿದ್ಯಮಾನಗಳು.

ನಿಜವಾಗಿ ಇದೆಲ್ಲವೂ ನೀವು ಯಾರೊಡನೆ ಮಾತಾಡಬೇಕು, ಏನು ಮಾತಾಡಬೇಕು; ಏನು ತಿನ್ನಬೇಕು, ಎಲ್ಲಿ ತಿನ್ನಬೇಕು; ಯಾವಾಗ ನಿಲ್ಲಬೇಕು, ಯಾವಾಗ ಕೂರಬೇಕು; ಯಾರನ್ನು ಪ್ರೀತಿಸಬೇಕು, ಯಾರನ್ನು ದ್ವೇಷಿಸಬೇಕು ಎಂದು ಪ್ರಭುತ್ವವು ಜನರಿಗೆ ಹೇಳುವಂತಹ ಕುಲಗೆಟ್ಟ ಮಟ್ಟಕ್ಕೆ ಇಳಿದಿದೆ. ನಮ್ಮನ್ನೆಲ್ಲ ಪ್ರಭುತ್ವದ ಸೇವೆಯಲ್ಲಿರುವ ಯಂತ್ರಮಾನವರನ್ನಾಗಿ ಮಾಡಲಾಗಿದೆ. ಜನರಿಗಿಂತಲೂ ಕದನಶೀಲ ದೇಶಭಕ್ತಿಯ ರಾಷ್ಟ್ರೀಯತೆಯನ್ನೆ ಮುಖ್ಯವಾಗಿಸಿದ ಪ್ರಭುತ್ವ ತನ್ನ ಆಜ್ಞೆಗಳ ಅನುಷ್ಠಾನಕ್ಕೆ ಹಿಂದೂತ್ವವಾದಿ ಗ್ಯಾಂಗುಗಳನ್ನು ಛೂಬಿಟ್ಟಿದೆ. ಇದು ಮುಸೊಲಿನಿಯ ಕರಿಷರಟು ಪಡೆ ಮತ್ತು ಹಿಟ್ಲರನ ಕಂದುಷರಟು ಪಡೆಗಳನ್ನು ನೆನಪಿಸುತ್ತದೆ. ಹಿಂದೂತ್ವದ ಮೂಲಪುರುಷರಾದ ಸಾವರ್ಕರ್, ಮೂಂಜೆ, ಗೋಲ್ವಲ್ಕರರು ಮುಸೊಲಿನಿ, ಹಿಟ್ಲರ್‍ರತ್ತ ಆಕರ್ಷಿತರಾಗಿದ್ದರ ಕುರಿತು ರಾಶಿಗಟ್ಟಲೆ ವಿವರಗಳು ಲಭ್ಯವಿವೆ. ಇದರ ಹೊರತಾಗಿಯೂ ಅದರ ಸಂಘಟನಾ ಉಗಮಸ್ಥಾನವಾದ ಆರೆಸ್ಸೆಸ್‍ಗೂ ಇಟೆಲಿಯ ಎಂವಿಎಸ್‍ಎನ್‍ಗೂ ((ಒiಟiziಚಿ ಗಿoಟoಟಿಣಚಿಡಿiಚಿ ಠಿeಡಿ ಟಚಿ Siಛಿuಡಿezzಚಿ ಓಚಿzioಟಿಚಿಟe;ಒಗಿSಓ; “ಗಿoಟuಟಿಣಚಿಡಿಥಿ ಒiಟiಣiಚಿ ಜಿoಡಿ ಓಚಿಣioಟಿಚಿಟ Seಛಿuಡಿiಣಥಿ “; “ರಾಷ್ಟ್ರೀಯ ಭದ್ರತೆಗಾಗಿ ಸ್ವಇಚ್ಛೆಯ ಪ್ರಜಾಸೇನೆ”É) ಹತ್ತಿರದ ಹೋಲಿಕೆಗಳಿರುವುದು ಗಮನಾರ್ಹ. ಮೂಲತಃ ನ್ಯಾಷನಲ್ ಫ್ಯಾಸಿಸ್ಟ್ ಪಕ್ಷದ ಅರೆಸೇನಾ ಪಡೆಯಾಗಿದ್ದ ಈ ಎಂವಿಎಸ್‍ಎನ್ 1923ರ ನಂತರ ಇಟೆಲಿ ಸಾಮ್ರಾಜ್ಯದ ಸ್ವಇಚ್ಛೆಯ ಪ್ರಜಾಸೇನೆಯಾಗಿ ಪರಿಣಮಿಸಿತ್ತು. ಭಾರತದಲ್ಲಿರುವ ನಾವು ಕಳೆದ ಎರಡೂವರೆ ವರ್ಷಗಳಲ್ಲಿ ಫ್ಯಾಸಿಸ್ಟ್ ಆಡಳಿತ ಹೇಗಿರುತ್ತದೆ ಎಂಬುದರ ಮೂಲ ಕಾರ್ಯಮಾದರಿಯನ್ನು ಕಂಡಿರುವೆವು. ಅದು ಹೆಚ್ಚುಕಡಿಮೆ “ಒಂದು ಜನ, ಒಂದು ಸಾಮ್ರಾಜ್ಯ, ಒಬ್ಬ ನಾಯಕ” ಎನ್ನುವುದರ ಮಾದರಿಯಾಗಿದೆ.

ತಾನೊಂದು ಪ್ರಜಾಪ್ರಭುತ್ವ ಅಥವಾ ಇನ್ನೂ ಖಚಿತವಾಗಿ, ವಿಶ್ವದ ಅತಿ ದೊಡ್ಡ ಕಾರ್ಯನಿರತ ಪ್ರಜಾಪ್ರಭುತ್ವ ಎಂದು ಭಾರತ ಹಕ್ಕುಸಾಧಿಸುತ್ತಿರುವುದು ಕೇವಲ ನಿಯಮಿತವಾಗಿ ನಡೆಸಲಾಗುವ ಚುನಾವಣೆಗಳ ಆಧಾರದಲ್ಲಿ. ಸದರಿ ಚುನಾವಣೆಗಳು ಜನರ ಸಂಕಲ್ಪದ ಅಭಿವ್ಯಕ್ತಿಗಿಂತ ಹೆಚ್ಚಾಗಿ ಭಾರಿ ಧನಬಲ ಮತ್ತು ಜನಬಲದೊಂದಿಗೆ ನಡೆಸುವ ವಾಡಿಕೆಯ ಆಚರಣೆಗಳಾಗಿದ್ದರೂ ಅವು ಪ್ರಜಾತಂತ್ರದ ಭ್ರಮೆಯೊಂದನ್ನು ಮುಂದುವರಿಸುತ್ತಾ ಬಂದಿವೆ. ಭಾರಿ ಹೊಗಳಿಕೆಗೆ ಪಾತ್ರವಾದ ನಮ್ಮ ಸಂವಿಧಾನ ಕೊಟ್ಟಿರುವ ಆ ಇಡೀ ಚೌಕಟ್ಟು ವಾಸ್ತವವಾಗಿ ಸ್ಥಳೀಯ ಆಳುವ ವರ್ಗಗಳ ಜನವಿರೋಧಿ ಒಳಸಂಚುಗಳನ್ನು ಹೊರಗೆಡವುತ್ತದೆ. ಭ್ರಮೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ದಮನಿತರ ಉದ್ಧಾರಕನಾದ ಅಂಬೇಡ್ಕರರು ಚೌಕಟ್ಟಿನ ಪ್ರಧಾನ ಕರ್ತೃ ಎಂದು ಬಿಂಬಿಸಲಾಯಿತು. ಸಂವಿಧಾನ ಜಾರಿಗೆ ಬಂದ ಎರಡು ವರ್ಷಗಳಲ್ಲಿ ಆ ಕೋರೈಸುವ ಹೊಗಳಿಕೆಯ ಬೆಳಕಿನಿಂದ ಹೊರಬಂದ ಅಂಬೇಡ್ಕರರು ಅದನ್ನು ಅತ್ಯಂತ ಕಟು ಶಬ್ದಗಳಲ್ಲಿ ನಿರಾಕರಿಸಿದರಾದರೂ ಅದರಿಂದೇನೂ ಉಪಯೋಗವಾಗಿಲ್ಲ. ಸಂವಿಧಾನ ನೀಡಿರುವುದು ಕೇವಲ ರಾಜಕೀಯ ಪ್ರಜಾಸತ್ತೆ; ಪೂರಕವಾಗಿ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಸತ್ತೆಗಳನ್ನು ಸೇರಿಸದಿದ್ದರೆ ರಾಜಕೀಯ ಪ್ರಜಾಸತ್ತೆ ಉಳಿಯದು ಎಂದು ಎಚ್ಚರಿಸಿದರಾದರೂ ಅದು ಕಾರ್ಯಕಾರಿಯಾಗಿಲ್ಲ. ಕಾನೂನುರೀತ್ಯಾ ಪ್ರಜಾಪ್ರಭುತ್ವವು ಕಾರ್ಯತಃ ಯಾವತ್ತಿಗೂ ಶ್ರೀಮಂತರ ಪ್ರಭುತ್ವವಾಗಿದೆ. ಅದು ವ್ಯವಸ್ಥಿತ, ಕೇಂದ್ರೀಕೃತ, ನಿರಂಕುಶ ಅಧಿಕಾರದ ಪ್ರಜಾಪ್ರಭುತ್ವವಾಗಿ ಮಾರ್ಪಾಡಾಗಲು ಸ್ವಲ್ಪ ಸಮಯ ಬೇಕಿತ್ತು ಅಷ್ಟೆ. ಫ್ಯಾಸಿಸಂ ಅಂದರೆ ಇದೇ – ವ್ಯವಸ್ಥಿತ, ಕೇಂದ್ರೀಕೃತ, ನಿರಂಕುಶ ಅಧಿಕಾರದ ಪ್ರಜಾಪ್ರಭುತ್ವ. ಬೇಸರದ ಸಂಗತಿ ಏನೆಂದರೆ ತಲೆಬರಹದಲ್ಲಿರುವ ವಿರೋಧಾಭಾಸ ಭಾರತದ ನೈಜಸ್ಥಿತಿಯನ್ನು ಯಥಾವತ್ತಾಗಿ ಚಿತ್ರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...