Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...