Homeಸಾಮಾಜಿಕಭಾರತೀಯ ಪುರಾತನ ವೈದ್ಯಶಾಸ್ತ್ರದಲ್ಲಿ ಮಾಂಸದ ಔಷಧಿಗಳು

ಭಾರತೀಯ ಪುರಾತನ ವೈದ್ಯಶಾಸ್ತ್ರದಲ್ಲಿ ಮಾಂಸದ ಔಷಧಿಗಳು

- Advertisement -
- Advertisement -

ಪರಿಮಳಾ ವಾರಿಯರ್ |

ಬಹುಸಂಖ್ಯಾತ ಮಾಂಸಾಹಾರಿಗಳ ದೇಶವಾಗಿರುವ ಭಾರತದಲ್ಲಿ ಮಾಂಸಾಹಾರವನ್ನು ಎರಡನೇ ದರ್ಜೆಯ ಆಹಾರಕ್ರಮವಾಗಿ ನೋಡುವ ರೋಗಪೀಡಿತ ಮನಸ್ಥಿತಿಯನ್ನು ನಿರ್ಮಿಸಲಾಗಿದೆ. ಭಾರತದ ಧಾರ್ಮಿಕತೆ, ನಂಬಿಕೆ, ಸಂಪ್ರದಾಯಗಳನ್ನು ಸಸ್ಯಾಹಾರದ ಮೂಲಕವೇ ಪ್ರಸ್ತುತಪಡಿಸುವ ಕಾಯಿಲೆ ಇವತ್ತು ನಿನ್ನೆಯದಲ್ಲ. ಸಸ್ಯಾಹಾರವೇ ಶ್ರೇಷ್ಠ, ಮಾಂಸಾಹಾರ ಕನಿಷ್ಠ ಎಂಬ ಸುಳ್ಳುಸಿದ್ಧಾಂತವನ್ನು ಜನಗಳ ಮೇಲೆ ಹೇರಿದ ಪರಿಣಾಮವಾಗಿ ಧಾರ್ಮಿಕ ಆಚರಣೆಗಳಲ್ಲಿ ಸಸ್ಯಾಹಾರದ ಶಿಫಾರಸು ಮತ್ತು ಕೆಲವೊಂದು ರಾಷ್ಟ್ರೀಯ ದಿನಾಚರಣೆಗಳು ಮತ್ತು ಹಬ್ಬಗಳಲ್ಲಿ ಮಾಂಸಾಹಾರವನ್ನು ಕಾನೂನಾತ್ಮಕ ವಾಗಿಯೇ ನಿಷೇಧಿಸುವ ಮಟ್ಟಕ್ಕೂ ಸಸ್ಯಾಹಾರದ ವಕಾಲತ್ತುದಾರರು ತಲುಪಿರುವುದು ಈ ದೇಶದ ದುರಂತ.

ದೇಶದ ಮುಕ್ಕಾಲುಪಾಲು ಜನಸಂಖ್ಯೆ ಹೊಂದಿರುವ ದಲಿತ, ಶೂದ್ರ ಮತ್ತು ಬುಡಕಟ್ಟು ವಾಸಿಗಳ ಸಂಪ್ರದಾಯಗಳು ಮಾಂಸಾಹಾರವನ್ನೇ ಅನುಸರಿಸುತ್ತ ಬಂದಿರುವುದು ಮೂಲನಿವಾಸಿ ಭಾರತೀಯರ ಸಂಸ್ಕೃತಿ. ಇದನ್ನು ಲೆಕ್ಕಕ್ಕೇ ತೆಗೆದುಕೊಳ್ಳದ ಭಾರತದ ಮೂಲಭೂತವಾದಿ ಸನಾತನಿಗಳು ಮೂಲತಃ ಮಾಂಸಾಹಾರಿಗಳ ದೇಶವಾಗಿದ್ದ ಭಾರತದಲ್ಲಿ ಸಸ್ಯಾಹಾರವೇ ಶ್ರೇಷ್ಠ ಎಂದು ಬಡಬಡಿಸುವ ಆತುರದಲ್ಲಿ ಈ ಸನಾತನ ಪರಂಪರೆಯವರು ತಮ್ಮ ಮೂಲ ಇತಿಹಾಸದಲ್ಲೇ ಮಾಂಸಾಹಾರ ಶ್ರೇಷ್ಠವಾಗಿದ್ದುದನ್ನು ಮುಚ್ಚಿಡುತ್ತಾರೆ. ಅವುಗಳನ್ನು ಒಂದೊಂದಾಗಿ ನಾವು ನೋಡಿದರೆ ಈ ಸಸ್ಯಾಹಾರಿ ವಕಾಲತ್ತುದಾರರ ಬಣ್ಣ ಬಯಲಾಗುತ್ತದೆ.

ಪ್ರಾಚೀನ ಭಾರತದ ಔಷಧಶಾಸ್ತ್ರದ ಪಿತಾಮಹನೆಂದು ಕರೆಯಲಾಗುವ ‘ಆಚಾರ್ಯ ಚರಕ’ನು ಬರೆದಿರುವ ಚರಕಸಂಹಿತೆ ವೈದ್ಯಗ್ರಂಥವು ಮನುಷ್ಯನನ್ನು ಕಾಡುವ ನಾನಾ ಬಗೆಯ ರೋಗರುಜಿನಗಳಿಗೆ ಮಾಂಸಾಧಾರಿತ ಔಷಧಿಗಳನ್ನು ಶಿಫಾರಸ್ಸು ಮಾಡುತ್ತದೆ. ಯಾವುದೇ ಬಗೆಯ ಪ್ರಾಣಿಯ ಮಾಂಸವನ್ನು ನೀರಿನಲ್ಲಿ ಕುದಿಸಿ ತಯಾರಿಸುವ ಮಾಂಸರಸ (ಸೂಪ್) ಅನ್ನು ಚರಕನು ಸರ್ವರೋಗ ಪ್ರಸ್ಥಾನಂ (ಎಲ್ಲ ಬಗೆಯ ರೋಗಗಳಿಗೂ ಉತ್ತಮ ಔಷಧಿ) ಎಂದು ಬಣ್ಣಿಸಿದ್ದ್ತಾನೆ. ಮುಂದುವರೆದು ಹೇಳುವ ಚರಕನು ಸೂತ್ರಸ್ಥಾನ ಅಧ್ಯಾಯದಲ್ಲಿ ಹಲವು ಬಗೆಯ ಪ್ರಾಣಿಪಕ್ಷಿಗಳ ಮಾಂಸವು ಹಲವು ಬಗೆಯ ಕಾಯಿಲೆಗಳನ್ನು ತಡೆಯುತ್ತದೆಂದು ಹೇಳುತ್ತಾನೆ. ಅದರಂತೆ ಕಣ್ಣಿನ ಆರೋಗ್ಯ, ಕಿವಿಯ ಆರೋಗ್ಯಕ್ಕಾಗಿ ನವಿಲಿನ ಮಾಂಸವನ್ನೂ, ಧ್ವನಿ ಉತ್ತಮತೆ ಮತ್ತು ದೇಹದ ಶಕ್ತಿವರ್ಧನೆಗಾಗಿ ಬಾತುಕೋಳಿಯ ಮಾಂಸವನ್ನೂ, ಪಿತ್ಥ, ಕಫ ನಿವಾರಣೆಗಾಗಿ ಮತ್ತು ರಕ್ತಶುದ್ಧಿಗಾಗಿ ಗೌಜುಗನಹಕ್ಕಿಯ ಮಾಂಸವನ್ನೂ, ಕೆಮ್ಮಿನ ಉಪಶಮನಕ್ಕಾಗಿ ಗಿಣಿಮಾಂಸವನ್ನೂ, ಪುರುಷರ ವೀರ್ಯವೃದ್ಧಿಗಾಗಿ ಗುಬ್ಬಿಯ ಮಾಂಸವನ್ನೂ ತಿನ್ನಬೇಕೆಂದು ಚರಕ ತನ್ನ ಚರಕಸಂಹಿತೆ ವೈದ್ಯಕೃತಿಯಲ್ಲಿ ಹೇಳುತ್ತಾನೆ.

ಚರಕ ಸಂಹಿತೆಯ ಚಿಕಿತ್ಸಾಸ್ಥಾನದ 11ನೇ ಅಧ್ಯಾಯದಲ್ಲಿ ಮನುಷ್ಯರ ಎದೆನೋವಿಗೆ ಮೇಕೆಯ ಚರ್ಬಿಯ ತೈಲವನ್ನು ಮದ್ಯದೊಡನೆ ಬೆರೆಸಿ ಸೇವಿಸಬೇಕೆಂದು ಹೇಳಲಾಗಿದೆ. ತನ್ನ ಸೂತ್ರಸ್ಥಾನ ಕೃತಿಯಲ್ಲಿ ಮೇಕೆಮಾಂಸದ ಆರೋಗ್ಯಕಾರಿ ಉಪಯೋಗಗಳನ್ನು ವಿವರಿಸುವ ಚರಕನು.. ಮೇಕೆ ಮಾಂಸವು ಸರ್ವಋತುಗಳಲ್ಲೂ ಸೇವಿಸಬಹುದಾದ ಶಕ್ತಿಪುಷ್ಟ ಆಹಾರವಾಗಿದೆ, ಮೇಕೆ ಮಾಂಸವು ಶೀತವೂ ಅಲ್ಲದ ಉಷ್ಣವೂ ಅಲ್ಲದ ಆಹಾರವಾಗಿರುವುದರಿಂದ ಮನುಷ್ಯರ ಆರೋಗ್ಯಕ್ಕೆ ಮೇಕೆಮಾಂಸ ಉಪಯೋಗಕಾರಿಯೆಂದು ಚರಕನು ಬಣ್ಣಿಸಿದ್ದಾನೆ.

ಆಯುರ್ವೇದ ಶಾಸ್ತ್ರವನ್ನು ಎಲ್ಲರೂ ಸಸ್ಯಕೇಂದ್ರಿತ ವೈದ್ಯವಿಜ್ಞಾನವೆಂದು ಇವತ್ತಿಗೂ ತಿಳಿದಿದ್ದಾರೆ. ಅದಕ್ಕೆ ವಿರುದ್ಧವಾಗಿ ಆಯುರ್ವೇದವು ಸಸ್ಯ-ಮಾಂಸ ಆಧರಿತ ಔಷಧಜ್ಞಾನವಾಗಿರುವುದಕ್ಕೆ ಪ್ರಾಚೀನ ಆಯುರ್ವೇದ ಕೃತಿಯಲ್ಲೇ ಸಾಕ್ಷಿಗಳಿವೆ. ಆಯುರ್ವೇದ ವೈದ್ಯಪದ್ಧತಿಯಲ್ಲಿ ಮೇಕೆಮಾಂಸದ ಚರ್ಬಿಯ ತೈಲವನ್ನು ‘ಮಹಾಮಾಂಸ ತೈಲ’ವೆಂದು ಗುರುತಿಸಲಾಗಿದೆ. ಈ ತೈಲವನ್ನು ಹಚ್ಚುವುದರಿಂದ ಲಕ್ವ, ಸ್ನಾಯು ಸೆಳೆತ, ತಲೆನೋವು ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸಬಹುದೆಂದು ಆಯುರ್ವೇದ ವೈದ್ಯ ವಿಜ್ಞಾನವು ಪ್ರತಿಪಾದಿಸುತ್ತದೆ. ‘ಅಜಸ್ವಾಗಂಧ ಲೇಹ್ಯಂ’ ಎಂಬ ಮೇಕೆಮಾಂಸದಿಂದ ತಯಾರಿಸಿದ ತೈಲವನ್ನು ದೇಹದಾರ್ಢ್ಯತೆಯನ್ನು ಬೆಳೆಸಿಕೊಳ್ಳಲು ಅತ್ಯವಶ್ಯಕವಾಗಿ ಆಯುರ್ವೇದವು ಶಿಫಾರಸ್ಸು ಮಾಡುತ್ತದೆ. ಆಯುರ್ವೇದದ ‘ಭಾವಪ್ರಕಾಶ’ ಎಂಬ ಅಧ್ಯಾಯದಲ್ಲಿ ಪ್ರಾಣಿಗಳ ಮಾಂಸದ ರಸದ ಉಪಯೋಗಗಳನ್ನು ‘ಪುನರ್ವಾಧ್ಯಾರಿಷ್ಟ’ ಎಂಬ ಹೆಸರಿನಲ್ಲಿ ವಿವರಿಸಲಾಗಿದೆ. ಇದಲ್ಲದೇ ಆಯುರ್ವೇದದ ಬಹಳಷ್ಟು ಔಷಧಿಗಳಲ್ಲಿ ಪ್ರಾಣಿಗಳ ಮಾಂಸವನ್ನು ಬಳಸಿ ತಯಾರಿಸಬೇಕೆಂದು ಆಯುರ್ವೇದವು ಹೇಳುತ್ತದೆ.

‘ಅಮೃತಪ್ರಾತ ಘೃತ’ ಎಂಬ ತುಪ್ಪದ ತಯಾರಿಕೆಯಲ್ಲಿ ಮೇಕೆ ಮಾಂಸವನ್ನು, ರಸಾಯನ ತಯಾರಿಕೆಯಲ್ಲಿ ಹಸುವಿನ ಜಠರದ ಮಾಂಸವನ್ನು, ‘ಅಶ್ವಗಂಧಿ ಲೇಹ್ಯ’ ತಯಾರಿಕೆಯಲ್ಲಿ ಮೇಕೆಮಾಂಸವನ್ನೂ, ‘ಕಸ್ತೂರ್ಯಾದಿ ಗುಳಿಗೆ’, ಕಸ್ತೂರಿ ಭೈರವ ರಸ ಮತ್ತು ಗೋಪಾಲತೈಲ ತಯಾರಿಕೆಯಲ್ಲಿ ಕಸ್ತೂರಿ ಮೃಗದ ಮಾಂಸವನ್ನೂ, ‘ಕಾಮದೂಧ ರಸ’ ತಯಾರಿಕೆಯಲ್ಲಿ ಶಂಖು ಹುಳುವಿನ ಮಾಂಸವನ್ನೂ, ಶೃಂಗಭಸ್ಮ ತಯಾರಿಕೆಯಲ್ಲಿ ಜಿಂಕೆಯ ಕೊಂಬನ್ನೂ ಚುಕ್ಕುಂತಿಪಲ್ಯಾಡಿ ಗುಳಿಗೆ ತಯಾರಿಯಲ್ಲಿ ಕಾಡುಬೆಕ್ಕಿನ ವೀರ್ಯವನ್ನೂ ಬಳಸಬೇಕೆಂದು ಆಯುರ್ವೇದ ಹೇಳುತ್ತದೆ. ಜೊತೆಗೆ ಮಾಂಸಾಹಾರವನ್ನು ಬೆಳಗಿನ 11ರಿಂದ ಮಧ್ಯಾಹ್ನ 2 ಗಂಟೆಯ ಒಳಗೆ ಸೇವಿಸಿದರೆ ಒಳ್ಳೆಯದೆಂದು ಮಾಂಸಾಹಾರವನ್ನು ಪ್ರೋತ್ಸಾಹಿಸುವ ಆಯುರ್ವೇದವು ಈ ಸಮಯದಲ್ಲಿ ಅಗ್ನಿದೇವನ ಶಕ್ತಿ ಹೆಚ್ಚಿರುವುದರಿಂದ ಜೀರ್ಣಶಕ್ತಿಗೆ ಅನುಕೂಲಕರವೆಂದು ಹೇಳುತ್ತದೆ. ಪ್ರಾಚೀನ ಆಯುರ್ವೇದವೇ ಹೇಳುವಂತೆ ಕೋಳಿ ಮತ್ತು ಮೀನಿನ ಸೇವನೆಯಿಂದ ವಾತದೋಷ ನಿವಾರಣೆಯಾಗುತ್ತದೆ, ಹಂದಿಮಾಂಸದ ಸೇವನೆಯಿಂದ ದೇಹದ ತೂಕ ಹೆಚ್ಚಿಸಿಕೊಳ್ಳಬಹುದು, ಸ್ನಾಯು ಮತ್ತು ನರ ಸಂಬಂಧಿತ ಕಾಯಿಲೆಗಳಿಗೆ ಗೋಮಾಂಸ ಸೇವನೆ ಉಪಕಾರಿಯೆಂಬ ಆರೋಗ್ಯ ಸಲಹೆಗಳನ್ನು ಆಯುರ್ವೇದ ನೀಡುತ್ತದೆ.

ಪ್ರಾಚೀನ ಸಮಾಜದ ಕಾನೂನುಮಾಪನವಾಗಿ ಗುರುತಿಸಲ್ಪಟ್ಟಿದ್ದ ಮನುಧರ್ಮಶಾಸ್ತ್ರವು ಮಾಂಸಾಹಾರಕ್ಕೆ ವಿರೋಧಿಯಾಗಿಲ್ಲ. ಇದಕ್ಕೆ ಮನುಶಾಸ್ತ್ರದ ಕೆಲವೊಂದು ಶ್ಲೋಕಗಳೇ ಉದಾಹರಣೆಯಾಗಿವೆ. ಮನುಸ್ಮೃತಿಯ 5ನೇ ಅಧ್ಯಾಯದ 28ನೇ ಶ್ಲೋಕವು ‘ಜಗತ್ತಿನ ಸೃಷ್ಟಿಕರ್ತನಾದ ಪ್ರಜಾಪತಿಯು ಜೀವ ಇರುವ ಜೀವಗಳು ಆಹಾರವಾಗಿ ಬಳಸಲೆಂದು ಎಲ್ಲವನ್ನೂ ಸೃಷ್ಟಿಸಿದ್ದಾನೆ’ ಎನ್ನುತ್ತದೆ. ಇದೇ ಅಧ್ಯಾಯದ 32ನೇ ಶ್ಲೋಕವು ‘ದೇವರಿಗೆ ಪ್ರಸಾದವಾಗಿ ಅರ್ಪಿಸಿದ ಪ್ರಾಣಿಗಳ ಮಾಂಸವನ್ನು ಮನುಷ್ಯರು ತಿನ್ನುವುದು ತಪ್ಪಾಗುವುದಿಲ್ಲ’ ಎನ್ನುತ್ತದೆ. ಆ ಕಾಲಘಟ್ಟದಲ್ಲಿ ಸರ್ವೇ ಸಾಧಾರಣವಾಗಿದ್ದ ಮಾಂಸಾಹಾರವು ಆಹಾರಕ್ರಮದಲ್ಲಿ, ದೇವರಪೂಜೆಯಲ್ಲಿ, ಔಷಧಿಯ ರೂಪದಲ್ಲಿಯೂ ಬಳಕೆಯಾಗುತ್ತಿದ್ದವು ಎನ್ನುವುದಕ್ಕೆ ಮನುಸ್ಮೃತಿಯ ಈ ಉಲ್ಲೇಖಗಳೇ ಸಾಕ್ಷಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...