Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...