Homeಮುಖಪುಟಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

ಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

- Advertisement -
- Advertisement -

ಉತ್ತರ ಕನ್ನಡದ ಒಂದು ಕಾಲದ ಕೈಗಾರಿಕಾ ನಗರ ದಾಂಡೇಲಿ ಭೂಮಾಫಿಯಾದ ಆಡಂಬೋಲದಂತಾಗಿ ಹೋಗಿದೆ! ದೈತ್ಯ ರಾಜಕಾರಣಿ ದೇಶಪಾಂಡೆ ದೊಡ್ಡ ಕೈಗಾರಿಕೆಗಳ ಪ್ರಭಾವಿ ಮಂತ್ರಿ ಮಾಂಡಲೀಕನಾಗಿದ್ದಾಗಲೇ ಇಲ್ಲಿಯ ಒಂದೊಂದೇ ಕಾರ್ಖಾನೆಗಳು ಬಾಗಿಲು ಎಳೆದುಕೊಂಡಿರುವುದು ಇವತ್ತಿಗೂ ಬಿಡಿಸಲಾಗದ ಒಗಟಾಗೇ ಉಳಿದಿದೆ. ಈಗೇನಿದ್ದರೂ ದಾಂಡೇಲಿಯಲ್ಲಿ ಪ್ರವಾಸೋದ್ಯಮ “ದಂಧೆ”ಯ ಭಯಾನಕ ಭರಾಟೆ! ದಾಂಡೇಲಿ ಜೋಯಿಡಾದ ನಿತ್ಯಹರಿದ್ವರ್ಣ ಕಾಡಿನ ನೀರವತೆ ಮೃಗ-ಪಕ್ಷಿಗಳ ಕೂಗು-ಕಲರವ, ಕಾಳಿ-ಪಾಂಡರಿ ನದಿಗಳ ನಿನಾದ ತಂಡೋಪತಂಡವಾಗಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಒಂದು ವಾರಕ್ಕೆ ಹಲವು ಕೋಟಿ ವಹಿವಾಟು ಆಗುತ್ತಿದೆ.
ದಾಂಡೇಲಿ-ಜೋಯಿಡಾದ ಸುತ್ತಲೂ ರೆಸಾರ್ಟ್, ಹೋಮ್‍ಸ್ಟೇಗಳದೇ ಹಾವಳಿ. ಪ್ರವಾಸೋದ್ಯಮದ ಮೋಜು-ಮಸ್ತಿ ಭೂ ಮಾಫಿಯಾ ನಿಭಾಯಿಸುತ್ತಿದೆ. ಹೀಗಾಗಿ ದಾಂಡೇಲಿಯ ಕಾಡಿನ ಅಂಚಿನ ಮತ್ತು ಕಾಳಿ ನದಿದಂಡೆಯ ಒಂದಿಂಚು ಜಾಗಕ್ಕೂ ಬಂಗಾರದ ಬೆಲೆ ಬಂದಿದೆ! ಟೂರಿಸಮ್‍ಗೆ ತೆಕ್ಕೆಹಾಕಿಕೊಂಡಿರುವ ಲ್ಯಾಂಡ್ ಲಫಡಾ, ಲಡಾಯಿ ದಾಂಡೇಲಿಯಲ್ಲಿ ನಿತ್ಯನೂತನ ಮುಂಬೈ-ಕೇರಳ-ಬೆಳಗಾವಿ-ಬೆಂಗಳೂರು ಮತ್ತು ಸ್ಥಳೀಯ ಭೂಭಾನ್ಗಡಿದಾರರು ಯಾರ್ಯಾರದೋ ಜಾಗ ಕಬಳಿಸಲು ಹೊಂಚುಹಾಕಿ ಕುಂತಿದ್ದಾರೆ. ಧೋಖಾ ಬಾಜಿಗಳ ಹಿಂದೆ ಸರ್ಕಾರಿ ಏಜೆನ್ಸಿಗಳು, ಕಾನೂನಿನ ಸಿಕ್ಕು ಬಿಡಿಸುವ ನ್ಯಾಯವಾದಿಗಳು, ಖಾಕಿಕಿರಾತಕರೆಲ್ಲ ಅಡಗಿಕೊಂಡಿದ್ದಾರೆ. ರೆಸಾರ್ಟ್ ಉದ್ಯಮಿಯಾಗಿ ಕೊಪ್ಪರಿಗೆ ಕಾಸು ಬಾಚುವ ದುರಾಸೆಯ ಪೈಪೋಟಿಯಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೆ ಈಗ ರಕ್ತದ ಕಲೆಯೂ ಅಂಟಿಬಿಟ್ಟಿದೆ!
ಕಳೆದ ಶುಕ್ರವಾರ, ಜುಲೈ 27ರ ರಾತ್ರಿ 9.30ರ ಹೊತ್ತಿಗೆ ಮುಸುಕುಧಾರಿ ಪಾತಕಿಯ ಮಚ್ಚಿನೇಟಿಗೆ ಹತರಾದ ದಾಂಡೇಲಿಯ ನಾಮಾಂಕಿತ ನ್ಯಾಯವಾದಿಯೂ, ಸಾಮಾಜಿಕ ಹೋರಾಟಗಾರರೂ ಆಗಿದ್ದ ಅಜಿತ್‍ನಾಯಕ್ ಬರ್ಬರ ಹತ್ಯೆ ಪ್ರಕರಣವೂ ಇದೇ ಪ್ರವಾಸೋದ್ಯಮ ನಂಟಿನ ಭೂ ಮಾಫಿಯಾದ ಭೀಭತ್ಸ ಕಾರ್ಯಾಚರಣೆ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಅಜಿತ್ ವಕೀಲಿಕೆಯಿಂದ ಭರ್ಜರಿ ದುಡ್ಡು-ಭೂಮಿ ಮಾಡಿಕೊಂಡಿದ್ದರು. ಸಣ್ಣ ಸೈಜಿನ ರಾಜಕಾರಣಿಯೂ ಆಗಿದ್ದರು. ದಾಂಡೇಲಿ ನಗರಸಭೆಯ ಅರ್ಯರೂ ಒಮ್ಮೆ ಆಗಿದ್ದರು. ಬ್ಲಾಕ್-ಕಾಂಗ್ರೆಸ್ ಕಮಿಟಿಯ ಅಧ್ಯಕ್ಷತೆ ನಿಭಾಯಿಸಿದ್ದರು; ಎಂಪಿಯಾಗಿದ್ದ ಮ್ಯಾಗಿ, ಸಿಎಂ ಆಗಿದ್ದ ‘ಬಂ’ ಬಾಂಧವ್ಯ ಅಜಿತ್‍ಗೆ ಇತ್ತು. ದಾಂಡೇಲಿಯ ಪರಿಸರ, ಸಾಮಾಜಿಕ ವ್ಯವಸ್ಥೆಗೆ ತೊಂದರೆಯಾದಾಗ ಆತ ಸೆಟೆದು ನಿಲ್ಲುತಿದ್ದರು. ಹೋರಾಟ ಕಟ್ಟೆ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.
ದಾಂಡೇಲಿ ತಾಲ್ಲೂಕು ಮಾಡಬೇಕೆಂದು ಸಂಘಟನೆ ಮಾಡಿ ಹೋರಾಟ ಅಜಿತ್‍ನಾಯಕ್ ರೂಪಿಸಿದ್ದರು. ಈಚೆಗೆ ದಾಂಡೇಲಿ ತಾಲ್ಲೂಕು ಘೋಷಣೆಯಾದಾಗ ಆತ ತುಂಬ ಖುಷಿಯಾಗಿದ್ದರು. ದಾಂಡೇಲಿಯ ಜೀವನದಿ ಕಾಳಿ ಬೆನ್ನಿವನ ಮೇಲೆ ಸಾಲಾಗಿ ಕಟ್ಟಲಾಗಿರುವ ಜಲವಿದ್ಯುತ್ ಡ್ಯಾಮ್‍ನಿಂದಾಗುವ ಡ್ಯಾಮೇಜ್ ಅರಿವಿನ ಕಾಳಿ ಬಚಾವ್ ಆಂದೋಲನದಲ್ಲಿ ಅಜಿತ್ ಸಕ್ರಿಯರಾಗಿದ್ದರು; ನದಿಯಿಂದ ಎತ್ತುವ ಮರಳು ಮಾಫಿಯಾ, ಕೈಗಾರಿಕಾ ಮಾಲಿನ್ಯ ಮಾಫಿಯಾದ ಕಣ್ಣುರಿಗೂ ಆತ ಕಾರಣರಾಗಿದ್ದರು. ಆದರೆ ಇದ್ಯಾವುದೂ ಆತನ ಕೊಂದೇ ಹಾಕುವಷ್ಟು ಸೇಡಿನ ಶತ್ರುಗಳನ್ನೇನೂ ಸೃಷ್ಟಿಸಿರಲಿಲ್ಲ. ಹಾಗಂತ ಆತ ಗÀುಣಸ್ವಭಾವ ಕಂಡಿರುವ ದಾಂಡೇಲಿಯ ಜನರು ಹೇಳುತ್ತಾರೆ.
ಹಾಗಿದ್ದರೆ ಅಜಿತ್‍ನಾಯಕ್‍ರ ಕೊಲೆ ಮಾಡುವಂಥ ಹಠದ ಜಿದ್ದಿನ ಹಿನೆÀ್ನಲೆ ಏನಿರಬಹುದು ಎಂದು ಉತ್ತರ ಕನ್ನಡದಲ್ಲಿ ಬಿರುಸಿನ ಚರ್ಚೆಗಳು ನಡೆದಿದೆ. ಪೊಲೀಸರು ಆತನ ವಕೀಲಿ ವೃತ್ತಿಗೆ ಸುತ್ತಿಕೊಂಡಿದ್ದ ಒಂದಿಷ್ಟು ಭೂಮಾಫಿಯಾ ವ್ಯವಹಾರಗಳತ್ತ ತನಿಖೆ ಕೇಂದ್ರೀಕರಿಸಿದ್ದಾರೆ. ಈಚೆಗೆ ಅಜಿತ್‍ನಾಯಕ್‍ಗೆ ಭೂಮಿಯ ಮೋಹ ವಿಪರೀತವಾಗಿತ್ತು. ಆತ ಹಲವು ಕಡೆ ಬೇನಾಮಿಯಾಗಿ ಭೂಖರೀದಿಯೂ ಮಾಡಿದ್ದರು. ರೆಸಾರ್ಟ್ ಬಿಸ್ನೆಸ್‍ನ ಸೆಳೆತಕ್ಕೆ ಬಿದ್ದಿದ್ದರಂತೆ. ಕಾಳಿನದಿ ತೀರದ ಮೌಳಂಗಿ ಎಂಬ ಮನಮೋಹಕ ಪ್ರದೇಶದ ಪ್ರೈಮ್ ಲ್ಯಾಂಡ್ ಮೇಲೆ ಅಜಿತ್ ಕಣ್ಣು ಬಿದ್ದಿತ್ತಂತೆ. ಇದೇ ಆತನಿಗೆ ಗಂಡಾಂತರಕಾರಿ ಆಯ್ತೆಂಬ ಕಾರಾರುವಾಕ್ಕಾದ ಲೆಕ್ಕಾಚಾರದ ಮಾತುಗಳೀಗ ದಾಂಡೇಲಿಯಲ್ಲಿ ಮೊಳಗಲಾರಂಭಿಸಿದೆ!
ಒಂದು ಸುದ್ದಿಯಂತೆ ಮೌಳಂಗಿಯ ಎರಡು ದಲಿತ ಕುಟುಂಬದ ಮಧ್ಯೆ ಭೂವ್ಯಾಜ್ಯ ನಡೆದಿತ್ತು. ಒಂದು ಕಡೆ ವಕೀಲರಾಗಿ ಅಜಿತ್‍ನಾಯಕ್ ನಿಂತಿದ್ದರು. ಎದುರಾಳಿ ತಂಡದ ಪಾಂಡುರಂಗ ಕಾಂಬಳೆಗೆ ಬಲಾಢ್ಯ ಭೂಮಾಫಿಯಾದ ನಂಟಿತ್ತು. ಕಾಂಬಳೆಯ ಜಾಗವನ್ನು ಎದುರುದಾರರು ಕಬ್ಜಾ ಮಾಡಿಕೊಂಡಿದ್ದರು. ಇದು ಘನಘೋರ ಕಾಳಗಕ್ಕೂ ಕಾರಣವಾಗಿಹೋಯ್ತು. ಆಗ ಅಜಿತ್ ನಾಯಕ್ ಮುತುವರ್ಜಿಯಲ್ಲಿ ಸರ್ವೇಯೂ ನಡೆಯಿತು. ತಾವೇ ಖುದ್ದು ನಿಂತು ಮೋಜುಣಿ ಮಾಡಿಸಿದ್ದರಂತೆ. ದೀಪಕ್ ಯಾನೆ ಪಾಂಡುರಂಗ ಕಾಂಬಳೆಯವರ ವಿರುದ್ಧ ಪೊಲೀಸ್ ಕಂಪ್ಲೇಂಟೂ ಆಗಿತ್ತು. ಪೊಲೀಸರು ಅಜಿತ್‍ನಾಯಕ್‍ರ ಪ್ರಭಾವದಿಂದ ಎದುರಾಳಿಗಳನ್ನು ಸತಾಯಿಸಿದ್ದರು. ಅಷ್ಟೇ ಅಲ್ಲ, ಕೆರಳಿದ ಕಾಂಬಳೆ ಪಾಳಯವು ಅಜಿತ್‍ನಾಯಕ್‍ರ ಕಕ್ಷಿದಾರನ ಜಾಗಕ್ಕೆ ಮಾರಕಾಸ್ತ್ರಗಳ ಸಮೇತ ಲಗ್ಗೆಹಾಕಿ ಧಮಕಿ ಹಾಕಿತ್ತು. ಒಂದೆಡೆ ತಗಾದೆ ನ್ಯಾಯಾಲಯ ಮೆಟ್ಟಿಲೇರಿದರೆ, ಮತ್ತೊಂದೆಡೆ ಆರೋಪಿಗಳಿಗೆ ಪೊಲೀಸರು ಜೈಲಿಗೆ ಹಾಕಿ ಬೆಂಡೆತ್ತಿದ್ದರು. ಇದಕ್ಕೆಲ್ಲ ವಕೀಲ ಅಜಿತ್‍ನಾಯಕ್ ಚಿತಾವಣಿಯೇ ಕಾರಣವೆಂಬ ಸಿಟ್ಟು ಕಾಂಬಳೆ ಕುಟುಂಬಕ್ಕಿತ್ತು. ಕೆರಳಿ ಬುಸುಗುಡುತ್ತಿದ್ದ ಕಾಂಬಳೆ ತಂಡ ಅಜಿತ್‍ನಾಯಕ್‍ಗೆ ಬೆದರಿಕೆ ಫೋನ್ ಕರೆಗಳನ್ನು ಆಗಾಗ ಮಾಡುತ್ತಲೇ ಇತ್ತು.
ಇದನ್ನು ಅಜಿತ್ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ ಈಗ ದಾಂಡೇಲಿಯಲ್ಲಿರುವ ಪುಕಾರುಗಳ ಪ್ರಕಾರ ತುಂಬ ಬೆಲೆಬಾಳುವ ಮಹತ್ವದ ಟೂರಿಸಮ್ ಸೈಟಾಗಿದ್ದ ಮೌಳಂಗಿಯ ಜಾಗದಲ್ಲಿ ಬೇನಾಮಿ ರೆಸಾರ್ಟ್ ಮಾಡುವ ಸ್ಕೆಚ್ ಹಾಕಿದ್ದ ಅಜಿತ್‍ನಾಯಕ್ ತುಂಬ ವ್ಯವಸ್ಥಿತವಾಗಿ ಎದುರಾಳಿಗಳ ಹಣಿಯಲು ಹತ್ತಿದ್ದರು. ಆದರೆ ಇದೇ ಜಾಗಕ್ಕಾಗಿ ಬಲಾಢ್ಯ ಭೂಮಾಫಿಯಾ ಒಂದು ಪ್ರಯತ್ನ ನಡೆಸಿ ಮತ್ತೊಂದು ದಲಿತÀ ಕುಟುಂಬದ ಬೆನ್ನಿಗೆ ನಿಂತಿತ್ತು. ಮೌಳಂಗಿಯಲ್ಲಿ ಈಕೋ ಪಾರ್ಕ್ ಆದ ಬಳಿಕ ವಿವಾದಿತ ಜಾಗದ ಕಿಮ್ಮತ್ತು ಜಾಸ್ತಿಯಾಗಿತ್ತು; ಅಜಿತ್ ನಾಯಕ್ ಕೂಡಾ ಸದ್ರಿ ಜಾಗದ ಬಗ್ಗೆ `ವಿಶೇಷ’ ಆಸಕ್ತಿ ವಹಿಸಿದ್ದರು. ಇದು ಪಾಂಡುರಂಗ ಕಾಂಬಳೆಯ ಆಕ್ರೋಶ ಹೆಚ್ಚಿಸಿತ್ತು. ಈ ದ್ವೇಷ ಒಳಗೊಳಗೇ ಹೊಗೆಯಾಡುತ್ತಲೇ ಇತ್ತು. ಅಜಿತ್‍ನಾಯಕ್‍ರ ಕಾನೂನು ತಂತ್ರಗಾರಿಕೆ, ಖಾಕಿಗಳ ಮೇಲಿನ ಹಿಡಿತದಿಂದ ಎದುರಾಳಿ ತಂಡ ಹೈರಾಣಾಗಿಹೋಗಿತ್ತು. ಇದು ಕೊಲೆಗೂ ಪ್ರೇರೇಪಿಸಿತೆಂಬ ತರ್ಕ ನಡೆದಿದೆ. ಇದು ಜನಸಾಮಾನ್ಯರದ್ದಷ್ಟೇ ಅಲ್ಲ, ಪೊಲೀಸರ ತಲೆಯೂ ತಿನ್ನುತ್ತಿದೆ.
ಹಂತಕರು ಹಲವು ದಿನಗಳಿಂದ ಅಜಿತ್‍ನಾಯಕ್ ಚಲನವಲನ, ಚಟುವಟಿಕೆ ಮೇಲೆ ನಿಗಾಯಿಟ್ಟು ನೋಡಿದ್ದಾರೆ. ಆತ ಅಂದು ರಾತ್ರಿ ದಾಂಡೇಲಿಯ ಜೆಎನ್ ರಸ್ತೆಯಲ್ಲಿರುವ ಕಚೇರಿಯಿಂದ ಹೊರಬರುವುದನ್ನೇ ಕಾದು ಕುಳಿತಿದ್ದಾರೆ. ಒಬ್ಬರೇ ಬರುವುದು ಖಾತ್ರಿಯಾಗಿದೆ. ಆತ ಕಾರಿನ ಬಳಿ ಹೋಗುವಾಗ ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ತಲೆಯ ಎಡಭಾಗ ಸೀಳಿಹೋಗಿದೆ. ಕಿವಿಯೂ ಚಿಂದಿಯಾಗಿದೆ. ಕೊಚ್ಚಿದ ರಭಸಕ್ಕೆ ಅಜಿತ್ ನಿಂತಲ್ಲೇ ಕುಸಿದು ರಕ್ತದ ಮಡುವಲ್ಲಿ ಒದ್ದಾಡಿ ಜೀವ ಬಿಟ್ಟಿದ್ದಾರೆ. ಕತ್ತಲಲ್ಲಿ ಹಂತಕ ಕರಗಿಹೋಗಿದ್ದಾನೆ. ಪೊಲೀಸರು ಈ ಲ್ಯಾಂಡ್ ಪ್ರಕರಣದತ್ತಲೇ ತನಿಖೆ ನಡೆಸಿದ್ದಾರೆ. ಹಂತಕನನ್ನು ಬಂಧಿಸಲಾಗಿದೆ ಎಂಬ ಅನಧಿಕೃತ ಸುದ್ದಿಯೂ ಹಬ್ಬಿದೆ ಯಲ್ಲಾಪುರದಲ್ಲಿ ಸೆರೆಸಿಕ್ಕಿರುವ ಹಂತಕ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನಂತೆ!
ಆತ ಅಸ್ತ್ರವಷ್ಟೇ! ಬಳಸಿದ್ದು ಯಾರೆಂಬುದು ಬಹಿರಂಗವಾಗಬೇಕಾಗಿದೆ. ಒಂದಂತೂ ಖರೆ; ಅಜಿತ್‍ನಾಯಕ್ ಕೋಲೆ ದಾಂಡೇಲಿ ಭಾಗದ ರೆಸಾರ್ಟ್ ದಂಧೆಯ ಅನಾಹುತಕಾರಿ ಆಯಾಮ ತೋರಿಸಿದೆ!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...