Homeಮುಖಪುಟಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

ಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

- Advertisement -
- Advertisement -

ಉತ್ತರ ಕನ್ನಡದ ಒಂದು ಕಾಲದ ಕೈಗಾರಿಕಾ ನಗರ ದಾಂಡೇಲಿ ಭೂಮಾಫಿಯಾದ ಆಡಂಬೋಲದಂತಾಗಿ ಹೋಗಿದೆ! ದೈತ್ಯ ರಾಜಕಾರಣಿ ದೇಶಪಾಂಡೆ ದೊಡ್ಡ ಕೈಗಾರಿಕೆಗಳ ಪ್ರಭಾವಿ ಮಂತ್ರಿ ಮಾಂಡಲೀಕನಾಗಿದ್ದಾಗಲೇ ಇಲ್ಲಿಯ ಒಂದೊಂದೇ ಕಾರ್ಖಾನೆಗಳು ಬಾಗಿಲು ಎಳೆದುಕೊಂಡಿರುವುದು ಇವತ್ತಿಗೂ ಬಿಡಿಸಲಾಗದ ಒಗಟಾಗೇ ಉಳಿದಿದೆ. ಈಗೇನಿದ್ದರೂ ದಾಂಡೇಲಿಯಲ್ಲಿ ಪ್ರವಾಸೋದ್ಯಮ “ದಂಧೆ”ಯ ಭಯಾನಕ ಭರಾಟೆ! ದಾಂಡೇಲಿ ಜೋಯಿಡಾದ ನಿತ್ಯಹರಿದ್ವರ್ಣ ಕಾಡಿನ ನೀರವತೆ ಮೃಗ-ಪಕ್ಷಿಗಳ ಕೂಗು-ಕಲರವ, ಕಾಳಿ-ಪಾಂಡರಿ ನದಿಗಳ ನಿನಾದ ತಂಡೋಪತಂಡವಾಗಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಒಂದು ವಾರಕ್ಕೆ ಹಲವು ಕೋಟಿ ವಹಿವಾಟು ಆಗುತ್ತಿದೆ.
ದಾಂಡೇಲಿ-ಜೋಯಿಡಾದ ಸುತ್ತಲೂ ರೆಸಾರ್ಟ್, ಹೋಮ್‍ಸ್ಟೇಗಳದೇ ಹಾವಳಿ. ಪ್ರವಾಸೋದ್ಯಮದ ಮೋಜು-ಮಸ್ತಿ ಭೂ ಮಾಫಿಯಾ ನಿಭಾಯಿಸುತ್ತಿದೆ. ಹೀಗಾಗಿ ದಾಂಡೇಲಿಯ ಕಾಡಿನ ಅಂಚಿನ ಮತ್ತು ಕಾಳಿ ನದಿದಂಡೆಯ ಒಂದಿಂಚು ಜಾಗಕ್ಕೂ ಬಂಗಾರದ ಬೆಲೆ ಬಂದಿದೆ! ಟೂರಿಸಮ್‍ಗೆ ತೆಕ್ಕೆಹಾಕಿಕೊಂಡಿರುವ ಲ್ಯಾಂಡ್ ಲಫಡಾ, ಲಡಾಯಿ ದಾಂಡೇಲಿಯಲ್ಲಿ ನಿತ್ಯನೂತನ ಮುಂಬೈ-ಕೇರಳ-ಬೆಳಗಾವಿ-ಬೆಂಗಳೂರು ಮತ್ತು ಸ್ಥಳೀಯ ಭೂಭಾನ್ಗಡಿದಾರರು ಯಾರ್ಯಾರದೋ ಜಾಗ ಕಬಳಿಸಲು ಹೊಂಚುಹಾಕಿ ಕುಂತಿದ್ದಾರೆ. ಧೋಖಾ ಬಾಜಿಗಳ ಹಿಂದೆ ಸರ್ಕಾರಿ ಏಜೆನ್ಸಿಗಳು, ಕಾನೂನಿನ ಸಿಕ್ಕು ಬಿಡಿಸುವ ನ್ಯಾಯವಾದಿಗಳು, ಖಾಕಿಕಿರಾತಕರೆಲ್ಲ ಅಡಗಿಕೊಂಡಿದ್ದಾರೆ. ರೆಸಾರ್ಟ್ ಉದ್ಯಮಿಯಾಗಿ ಕೊಪ್ಪರಿಗೆ ಕಾಸು ಬಾಚುವ ದುರಾಸೆಯ ಪೈಪೋಟಿಯಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೆ ಈಗ ರಕ್ತದ ಕಲೆಯೂ ಅಂಟಿಬಿಟ್ಟಿದೆ!
ಕಳೆದ ಶುಕ್ರವಾರ, ಜುಲೈ 27ರ ರಾತ್ರಿ 9.30ರ ಹೊತ್ತಿಗೆ ಮುಸುಕುಧಾರಿ ಪಾತಕಿಯ ಮಚ್ಚಿನೇಟಿಗೆ ಹತರಾದ ದಾಂಡೇಲಿಯ ನಾಮಾಂಕಿತ ನ್ಯಾಯವಾದಿಯೂ, ಸಾಮಾಜಿಕ ಹೋರಾಟಗಾರರೂ ಆಗಿದ್ದ ಅಜಿತ್‍ನಾಯಕ್ ಬರ್ಬರ ಹತ್ಯೆ ಪ್ರಕರಣವೂ ಇದೇ ಪ್ರವಾಸೋದ್ಯಮ ನಂಟಿನ ಭೂ ಮಾಫಿಯಾದ ಭೀಭತ್ಸ ಕಾರ್ಯಾಚರಣೆ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಅಜಿತ್ ವಕೀಲಿಕೆಯಿಂದ ಭರ್ಜರಿ ದುಡ್ಡು-ಭೂಮಿ ಮಾಡಿಕೊಂಡಿದ್ದರು. ಸಣ್ಣ ಸೈಜಿನ ರಾಜಕಾರಣಿಯೂ ಆಗಿದ್ದರು. ದಾಂಡೇಲಿ ನಗರಸಭೆಯ ಅರ್ಯರೂ ಒಮ್ಮೆ ಆಗಿದ್ದರು. ಬ್ಲಾಕ್-ಕಾಂಗ್ರೆಸ್ ಕಮಿಟಿಯ ಅಧ್ಯಕ್ಷತೆ ನಿಭಾಯಿಸಿದ್ದರು; ಎಂಪಿಯಾಗಿದ್ದ ಮ್ಯಾಗಿ, ಸಿಎಂ ಆಗಿದ್ದ ‘ಬಂ’ ಬಾಂಧವ್ಯ ಅಜಿತ್‍ಗೆ ಇತ್ತು. ದಾಂಡೇಲಿಯ ಪರಿಸರ, ಸಾಮಾಜಿಕ ವ್ಯವಸ್ಥೆಗೆ ತೊಂದರೆಯಾದಾಗ ಆತ ಸೆಟೆದು ನಿಲ್ಲುತಿದ್ದರು. ಹೋರಾಟ ಕಟ್ಟೆ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.
ದಾಂಡೇಲಿ ತಾಲ್ಲೂಕು ಮಾಡಬೇಕೆಂದು ಸಂಘಟನೆ ಮಾಡಿ ಹೋರಾಟ ಅಜಿತ್‍ನಾಯಕ್ ರೂಪಿಸಿದ್ದರು. ಈಚೆಗೆ ದಾಂಡೇಲಿ ತಾಲ್ಲೂಕು ಘೋಷಣೆಯಾದಾಗ ಆತ ತುಂಬ ಖುಷಿಯಾಗಿದ್ದರು. ದಾಂಡೇಲಿಯ ಜೀವನದಿ ಕಾಳಿ ಬೆನ್ನಿವನ ಮೇಲೆ ಸಾಲಾಗಿ ಕಟ್ಟಲಾಗಿರುವ ಜಲವಿದ್ಯುತ್ ಡ್ಯಾಮ್‍ನಿಂದಾಗುವ ಡ್ಯಾಮೇಜ್ ಅರಿವಿನ ಕಾಳಿ ಬಚಾವ್ ಆಂದೋಲನದಲ್ಲಿ ಅಜಿತ್ ಸಕ್ರಿಯರಾಗಿದ್ದರು; ನದಿಯಿಂದ ಎತ್ತುವ ಮರಳು ಮಾಫಿಯಾ, ಕೈಗಾರಿಕಾ ಮಾಲಿನ್ಯ ಮಾಫಿಯಾದ ಕಣ್ಣುರಿಗೂ ಆತ ಕಾರಣರಾಗಿದ್ದರು. ಆದರೆ ಇದ್ಯಾವುದೂ ಆತನ ಕೊಂದೇ ಹಾಕುವಷ್ಟು ಸೇಡಿನ ಶತ್ರುಗಳನ್ನೇನೂ ಸೃಷ್ಟಿಸಿರಲಿಲ್ಲ. ಹಾಗಂತ ಆತ ಗÀುಣಸ್ವಭಾವ ಕಂಡಿರುವ ದಾಂಡೇಲಿಯ ಜನರು ಹೇಳುತ್ತಾರೆ.
ಹಾಗಿದ್ದರೆ ಅಜಿತ್‍ನಾಯಕ್‍ರ ಕೊಲೆ ಮಾಡುವಂಥ ಹಠದ ಜಿದ್ದಿನ ಹಿನೆÀ್ನಲೆ ಏನಿರಬಹುದು ಎಂದು ಉತ್ತರ ಕನ್ನಡದಲ್ಲಿ ಬಿರುಸಿನ ಚರ್ಚೆಗಳು ನಡೆದಿದೆ. ಪೊಲೀಸರು ಆತನ ವಕೀಲಿ ವೃತ್ತಿಗೆ ಸುತ್ತಿಕೊಂಡಿದ್ದ ಒಂದಿಷ್ಟು ಭೂಮಾಫಿಯಾ ವ್ಯವಹಾರಗಳತ್ತ ತನಿಖೆ ಕೇಂದ್ರೀಕರಿಸಿದ್ದಾರೆ. ಈಚೆಗೆ ಅಜಿತ್‍ನಾಯಕ್‍ಗೆ ಭೂಮಿಯ ಮೋಹ ವಿಪರೀತವಾಗಿತ್ತು. ಆತ ಹಲವು ಕಡೆ ಬೇನಾಮಿಯಾಗಿ ಭೂಖರೀದಿಯೂ ಮಾಡಿದ್ದರು. ರೆಸಾರ್ಟ್ ಬಿಸ್ನೆಸ್‍ನ ಸೆಳೆತಕ್ಕೆ ಬಿದ್ದಿದ್ದರಂತೆ. ಕಾಳಿನದಿ ತೀರದ ಮೌಳಂಗಿ ಎಂಬ ಮನಮೋಹಕ ಪ್ರದೇಶದ ಪ್ರೈಮ್ ಲ್ಯಾಂಡ್ ಮೇಲೆ ಅಜಿತ್ ಕಣ್ಣು ಬಿದ್ದಿತ್ತಂತೆ. ಇದೇ ಆತನಿಗೆ ಗಂಡಾಂತರಕಾರಿ ಆಯ್ತೆಂಬ ಕಾರಾರುವಾಕ್ಕಾದ ಲೆಕ್ಕಾಚಾರದ ಮಾತುಗಳೀಗ ದಾಂಡೇಲಿಯಲ್ಲಿ ಮೊಳಗಲಾರಂಭಿಸಿದೆ!
ಒಂದು ಸುದ್ದಿಯಂತೆ ಮೌಳಂಗಿಯ ಎರಡು ದಲಿತ ಕುಟುಂಬದ ಮಧ್ಯೆ ಭೂವ್ಯಾಜ್ಯ ನಡೆದಿತ್ತು. ಒಂದು ಕಡೆ ವಕೀಲರಾಗಿ ಅಜಿತ್‍ನಾಯಕ್ ನಿಂತಿದ್ದರು. ಎದುರಾಳಿ ತಂಡದ ಪಾಂಡುರಂಗ ಕಾಂಬಳೆಗೆ ಬಲಾಢ್ಯ ಭೂಮಾಫಿಯಾದ ನಂಟಿತ್ತು. ಕಾಂಬಳೆಯ ಜಾಗವನ್ನು ಎದುರುದಾರರು ಕಬ್ಜಾ ಮಾಡಿಕೊಂಡಿದ್ದರು. ಇದು ಘನಘೋರ ಕಾಳಗಕ್ಕೂ ಕಾರಣವಾಗಿಹೋಯ್ತು. ಆಗ ಅಜಿತ್ ನಾಯಕ್ ಮುತುವರ್ಜಿಯಲ್ಲಿ ಸರ್ವೇಯೂ ನಡೆಯಿತು. ತಾವೇ ಖುದ್ದು ನಿಂತು ಮೋಜುಣಿ ಮಾಡಿಸಿದ್ದರಂತೆ. ದೀಪಕ್ ಯಾನೆ ಪಾಂಡುರಂಗ ಕಾಂಬಳೆಯವರ ವಿರುದ್ಧ ಪೊಲೀಸ್ ಕಂಪ್ಲೇಂಟೂ ಆಗಿತ್ತು. ಪೊಲೀಸರು ಅಜಿತ್‍ನಾಯಕ್‍ರ ಪ್ರಭಾವದಿಂದ ಎದುರಾಳಿಗಳನ್ನು ಸತಾಯಿಸಿದ್ದರು. ಅಷ್ಟೇ ಅಲ್ಲ, ಕೆರಳಿದ ಕಾಂಬಳೆ ಪಾಳಯವು ಅಜಿತ್‍ನಾಯಕ್‍ರ ಕಕ್ಷಿದಾರನ ಜಾಗಕ್ಕೆ ಮಾರಕಾಸ್ತ್ರಗಳ ಸಮೇತ ಲಗ್ಗೆಹಾಕಿ ಧಮಕಿ ಹಾಕಿತ್ತು. ಒಂದೆಡೆ ತಗಾದೆ ನ್ಯಾಯಾಲಯ ಮೆಟ್ಟಿಲೇರಿದರೆ, ಮತ್ತೊಂದೆಡೆ ಆರೋಪಿಗಳಿಗೆ ಪೊಲೀಸರು ಜೈಲಿಗೆ ಹಾಕಿ ಬೆಂಡೆತ್ತಿದ್ದರು. ಇದಕ್ಕೆಲ್ಲ ವಕೀಲ ಅಜಿತ್‍ನಾಯಕ್ ಚಿತಾವಣಿಯೇ ಕಾರಣವೆಂಬ ಸಿಟ್ಟು ಕಾಂಬಳೆ ಕುಟುಂಬಕ್ಕಿತ್ತು. ಕೆರಳಿ ಬುಸುಗುಡುತ್ತಿದ್ದ ಕಾಂಬಳೆ ತಂಡ ಅಜಿತ್‍ನಾಯಕ್‍ಗೆ ಬೆದರಿಕೆ ಫೋನ್ ಕರೆಗಳನ್ನು ಆಗಾಗ ಮಾಡುತ್ತಲೇ ಇತ್ತು.
ಇದನ್ನು ಅಜಿತ್ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ ಈಗ ದಾಂಡೇಲಿಯಲ್ಲಿರುವ ಪುಕಾರುಗಳ ಪ್ರಕಾರ ತುಂಬ ಬೆಲೆಬಾಳುವ ಮಹತ್ವದ ಟೂರಿಸಮ್ ಸೈಟಾಗಿದ್ದ ಮೌಳಂಗಿಯ ಜಾಗದಲ್ಲಿ ಬೇನಾಮಿ ರೆಸಾರ್ಟ್ ಮಾಡುವ ಸ್ಕೆಚ್ ಹಾಕಿದ್ದ ಅಜಿತ್‍ನಾಯಕ್ ತುಂಬ ವ್ಯವಸ್ಥಿತವಾಗಿ ಎದುರಾಳಿಗಳ ಹಣಿಯಲು ಹತ್ತಿದ್ದರು. ಆದರೆ ಇದೇ ಜಾಗಕ್ಕಾಗಿ ಬಲಾಢ್ಯ ಭೂಮಾಫಿಯಾ ಒಂದು ಪ್ರಯತ್ನ ನಡೆಸಿ ಮತ್ತೊಂದು ದಲಿತÀ ಕುಟುಂಬದ ಬೆನ್ನಿಗೆ ನಿಂತಿತ್ತು. ಮೌಳಂಗಿಯಲ್ಲಿ ಈಕೋ ಪಾರ್ಕ್ ಆದ ಬಳಿಕ ವಿವಾದಿತ ಜಾಗದ ಕಿಮ್ಮತ್ತು ಜಾಸ್ತಿಯಾಗಿತ್ತು; ಅಜಿತ್ ನಾಯಕ್ ಕೂಡಾ ಸದ್ರಿ ಜಾಗದ ಬಗ್ಗೆ `ವಿಶೇಷ’ ಆಸಕ್ತಿ ವಹಿಸಿದ್ದರು. ಇದು ಪಾಂಡುರಂಗ ಕಾಂಬಳೆಯ ಆಕ್ರೋಶ ಹೆಚ್ಚಿಸಿತ್ತು. ಈ ದ್ವೇಷ ಒಳಗೊಳಗೇ ಹೊಗೆಯಾಡುತ್ತಲೇ ಇತ್ತು. ಅಜಿತ್‍ನಾಯಕ್‍ರ ಕಾನೂನು ತಂತ್ರಗಾರಿಕೆ, ಖಾಕಿಗಳ ಮೇಲಿನ ಹಿಡಿತದಿಂದ ಎದುರಾಳಿ ತಂಡ ಹೈರಾಣಾಗಿಹೋಗಿತ್ತು. ಇದು ಕೊಲೆಗೂ ಪ್ರೇರೇಪಿಸಿತೆಂಬ ತರ್ಕ ನಡೆದಿದೆ. ಇದು ಜನಸಾಮಾನ್ಯರದ್ದಷ್ಟೇ ಅಲ್ಲ, ಪೊಲೀಸರ ತಲೆಯೂ ತಿನ್ನುತ್ತಿದೆ.
ಹಂತಕರು ಹಲವು ದಿನಗಳಿಂದ ಅಜಿತ್‍ನಾಯಕ್ ಚಲನವಲನ, ಚಟುವಟಿಕೆ ಮೇಲೆ ನಿಗಾಯಿಟ್ಟು ನೋಡಿದ್ದಾರೆ. ಆತ ಅಂದು ರಾತ್ರಿ ದಾಂಡೇಲಿಯ ಜೆಎನ್ ರಸ್ತೆಯಲ್ಲಿರುವ ಕಚೇರಿಯಿಂದ ಹೊರಬರುವುದನ್ನೇ ಕಾದು ಕುಳಿತಿದ್ದಾರೆ. ಒಬ್ಬರೇ ಬರುವುದು ಖಾತ್ರಿಯಾಗಿದೆ. ಆತ ಕಾರಿನ ಬಳಿ ಹೋಗುವಾಗ ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ತಲೆಯ ಎಡಭಾಗ ಸೀಳಿಹೋಗಿದೆ. ಕಿವಿಯೂ ಚಿಂದಿಯಾಗಿದೆ. ಕೊಚ್ಚಿದ ರಭಸಕ್ಕೆ ಅಜಿತ್ ನಿಂತಲ್ಲೇ ಕುಸಿದು ರಕ್ತದ ಮಡುವಲ್ಲಿ ಒದ್ದಾಡಿ ಜೀವ ಬಿಟ್ಟಿದ್ದಾರೆ. ಕತ್ತಲಲ್ಲಿ ಹಂತಕ ಕರಗಿಹೋಗಿದ್ದಾನೆ. ಪೊಲೀಸರು ಈ ಲ್ಯಾಂಡ್ ಪ್ರಕರಣದತ್ತಲೇ ತನಿಖೆ ನಡೆಸಿದ್ದಾರೆ. ಹಂತಕನನ್ನು ಬಂಧಿಸಲಾಗಿದೆ ಎಂಬ ಅನಧಿಕೃತ ಸುದ್ದಿಯೂ ಹಬ್ಬಿದೆ ಯಲ್ಲಾಪುರದಲ್ಲಿ ಸೆರೆಸಿಕ್ಕಿರುವ ಹಂತಕ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನಂತೆ!
ಆತ ಅಸ್ತ್ರವಷ್ಟೇ! ಬಳಸಿದ್ದು ಯಾರೆಂಬುದು ಬಹಿರಂಗವಾಗಬೇಕಾಗಿದೆ. ಒಂದಂತೂ ಖರೆ; ಅಜಿತ್‍ನಾಯಕ್ ಕೋಲೆ ದಾಂಡೇಲಿ ಭಾಗದ ರೆಸಾರ್ಟ್ ದಂಧೆಯ ಅನಾಹುತಕಾರಿ ಆಯಾಮ ತೋರಿಸಿದೆ!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...