Homeಮುಖಪುಟಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

ಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

- Advertisement -
- Advertisement -

ಉತ್ತರ ಕನ್ನಡದ ಒಂದು ಕಾಲದ ಕೈಗಾರಿಕಾ ನಗರ ದಾಂಡೇಲಿ ಭೂಮಾಫಿಯಾದ ಆಡಂಬೋಲದಂತಾಗಿ ಹೋಗಿದೆ! ದೈತ್ಯ ರಾಜಕಾರಣಿ ದೇಶಪಾಂಡೆ ದೊಡ್ಡ ಕೈಗಾರಿಕೆಗಳ ಪ್ರಭಾವಿ ಮಂತ್ರಿ ಮಾಂಡಲೀಕನಾಗಿದ್ದಾಗಲೇ ಇಲ್ಲಿಯ ಒಂದೊಂದೇ ಕಾರ್ಖಾನೆಗಳು ಬಾಗಿಲು ಎಳೆದುಕೊಂಡಿರುವುದು ಇವತ್ತಿಗೂ ಬಿಡಿಸಲಾಗದ ಒಗಟಾಗೇ ಉಳಿದಿದೆ. ಈಗೇನಿದ್ದರೂ ದಾಂಡೇಲಿಯಲ್ಲಿ ಪ್ರವಾಸೋದ್ಯಮ “ದಂಧೆ”ಯ ಭಯಾನಕ ಭರಾಟೆ! ದಾಂಡೇಲಿ ಜೋಯಿಡಾದ ನಿತ್ಯಹರಿದ್ವರ್ಣ ಕಾಡಿನ ನೀರವತೆ ಮೃಗ-ಪಕ್ಷಿಗಳ ಕೂಗು-ಕಲರವ, ಕಾಳಿ-ಪಾಂಡರಿ ನದಿಗಳ ನಿನಾದ ತಂಡೋಪತಂಡವಾಗಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಒಂದು ವಾರಕ್ಕೆ ಹಲವು ಕೋಟಿ ವಹಿವಾಟು ಆಗುತ್ತಿದೆ.
ದಾಂಡೇಲಿ-ಜೋಯಿಡಾದ ಸುತ್ತಲೂ ರೆಸಾರ್ಟ್, ಹೋಮ್‍ಸ್ಟೇಗಳದೇ ಹಾವಳಿ. ಪ್ರವಾಸೋದ್ಯಮದ ಮೋಜು-ಮಸ್ತಿ ಭೂ ಮಾಫಿಯಾ ನಿಭಾಯಿಸುತ್ತಿದೆ. ಹೀಗಾಗಿ ದಾಂಡೇಲಿಯ ಕಾಡಿನ ಅಂಚಿನ ಮತ್ತು ಕಾಳಿ ನದಿದಂಡೆಯ ಒಂದಿಂಚು ಜಾಗಕ್ಕೂ ಬಂಗಾರದ ಬೆಲೆ ಬಂದಿದೆ! ಟೂರಿಸಮ್‍ಗೆ ತೆಕ್ಕೆಹಾಕಿಕೊಂಡಿರುವ ಲ್ಯಾಂಡ್ ಲಫಡಾ, ಲಡಾಯಿ ದಾಂಡೇಲಿಯಲ್ಲಿ ನಿತ್ಯನೂತನ ಮುಂಬೈ-ಕೇರಳ-ಬೆಳಗಾವಿ-ಬೆಂಗಳೂರು ಮತ್ತು ಸ್ಥಳೀಯ ಭೂಭಾನ್ಗಡಿದಾರರು ಯಾರ್ಯಾರದೋ ಜಾಗ ಕಬಳಿಸಲು ಹೊಂಚುಹಾಕಿ ಕುಂತಿದ್ದಾರೆ. ಧೋಖಾ ಬಾಜಿಗಳ ಹಿಂದೆ ಸರ್ಕಾರಿ ಏಜೆನ್ಸಿಗಳು, ಕಾನೂನಿನ ಸಿಕ್ಕು ಬಿಡಿಸುವ ನ್ಯಾಯವಾದಿಗಳು, ಖಾಕಿಕಿರಾತಕರೆಲ್ಲ ಅಡಗಿಕೊಂಡಿದ್ದಾರೆ. ರೆಸಾರ್ಟ್ ಉದ್ಯಮಿಯಾಗಿ ಕೊಪ್ಪರಿಗೆ ಕಾಸು ಬಾಚುವ ದುರಾಸೆಯ ಪೈಪೋಟಿಯಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೆ ಈಗ ರಕ್ತದ ಕಲೆಯೂ ಅಂಟಿಬಿಟ್ಟಿದೆ!
ಕಳೆದ ಶುಕ್ರವಾರ, ಜುಲೈ 27ರ ರಾತ್ರಿ 9.30ರ ಹೊತ್ತಿಗೆ ಮುಸುಕುಧಾರಿ ಪಾತಕಿಯ ಮಚ್ಚಿನೇಟಿಗೆ ಹತರಾದ ದಾಂಡೇಲಿಯ ನಾಮಾಂಕಿತ ನ್ಯಾಯವಾದಿಯೂ, ಸಾಮಾಜಿಕ ಹೋರಾಟಗಾರರೂ ಆಗಿದ್ದ ಅಜಿತ್‍ನಾಯಕ್ ಬರ್ಬರ ಹತ್ಯೆ ಪ್ರಕರಣವೂ ಇದೇ ಪ್ರವಾಸೋದ್ಯಮ ನಂಟಿನ ಭೂ ಮಾಫಿಯಾದ ಭೀಭತ್ಸ ಕಾರ್ಯಾಚರಣೆ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಅಜಿತ್ ವಕೀಲಿಕೆಯಿಂದ ಭರ್ಜರಿ ದುಡ್ಡು-ಭೂಮಿ ಮಾಡಿಕೊಂಡಿದ್ದರು. ಸಣ್ಣ ಸೈಜಿನ ರಾಜಕಾರಣಿಯೂ ಆಗಿದ್ದರು. ದಾಂಡೇಲಿ ನಗರಸಭೆಯ ಅರ್ಯರೂ ಒಮ್ಮೆ ಆಗಿದ್ದರು. ಬ್ಲಾಕ್-ಕಾಂಗ್ರೆಸ್ ಕಮಿಟಿಯ ಅಧ್ಯಕ್ಷತೆ ನಿಭಾಯಿಸಿದ್ದರು; ಎಂಪಿಯಾಗಿದ್ದ ಮ್ಯಾಗಿ, ಸಿಎಂ ಆಗಿದ್ದ ‘ಬಂ’ ಬಾಂಧವ್ಯ ಅಜಿತ್‍ಗೆ ಇತ್ತು. ದಾಂಡೇಲಿಯ ಪರಿಸರ, ಸಾಮಾಜಿಕ ವ್ಯವಸ್ಥೆಗೆ ತೊಂದರೆಯಾದಾಗ ಆತ ಸೆಟೆದು ನಿಲ್ಲುತಿದ್ದರು. ಹೋರಾಟ ಕಟ್ಟೆ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.
ದಾಂಡೇಲಿ ತಾಲ್ಲೂಕು ಮಾಡಬೇಕೆಂದು ಸಂಘಟನೆ ಮಾಡಿ ಹೋರಾಟ ಅಜಿತ್‍ನಾಯಕ್ ರೂಪಿಸಿದ್ದರು. ಈಚೆಗೆ ದಾಂಡೇಲಿ ತಾಲ್ಲೂಕು ಘೋಷಣೆಯಾದಾಗ ಆತ ತುಂಬ ಖುಷಿಯಾಗಿದ್ದರು. ದಾಂಡೇಲಿಯ ಜೀವನದಿ ಕಾಳಿ ಬೆನ್ನಿವನ ಮೇಲೆ ಸಾಲಾಗಿ ಕಟ್ಟಲಾಗಿರುವ ಜಲವಿದ್ಯುತ್ ಡ್ಯಾಮ್‍ನಿಂದಾಗುವ ಡ್ಯಾಮೇಜ್ ಅರಿವಿನ ಕಾಳಿ ಬಚಾವ್ ಆಂದೋಲನದಲ್ಲಿ ಅಜಿತ್ ಸಕ್ರಿಯರಾಗಿದ್ದರು; ನದಿಯಿಂದ ಎತ್ತುವ ಮರಳು ಮಾಫಿಯಾ, ಕೈಗಾರಿಕಾ ಮಾಲಿನ್ಯ ಮಾಫಿಯಾದ ಕಣ್ಣುರಿಗೂ ಆತ ಕಾರಣರಾಗಿದ್ದರು. ಆದರೆ ಇದ್ಯಾವುದೂ ಆತನ ಕೊಂದೇ ಹಾಕುವಷ್ಟು ಸೇಡಿನ ಶತ್ರುಗಳನ್ನೇನೂ ಸೃಷ್ಟಿಸಿರಲಿಲ್ಲ. ಹಾಗಂತ ಆತ ಗÀುಣಸ್ವಭಾವ ಕಂಡಿರುವ ದಾಂಡೇಲಿಯ ಜನರು ಹೇಳುತ್ತಾರೆ.
ಹಾಗಿದ್ದರೆ ಅಜಿತ್‍ನಾಯಕ್‍ರ ಕೊಲೆ ಮಾಡುವಂಥ ಹಠದ ಜಿದ್ದಿನ ಹಿನೆÀ್ನಲೆ ಏನಿರಬಹುದು ಎಂದು ಉತ್ತರ ಕನ್ನಡದಲ್ಲಿ ಬಿರುಸಿನ ಚರ್ಚೆಗಳು ನಡೆದಿದೆ. ಪೊಲೀಸರು ಆತನ ವಕೀಲಿ ವೃತ್ತಿಗೆ ಸುತ್ತಿಕೊಂಡಿದ್ದ ಒಂದಿಷ್ಟು ಭೂಮಾಫಿಯಾ ವ್ಯವಹಾರಗಳತ್ತ ತನಿಖೆ ಕೇಂದ್ರೀಕರಿಸಿದ್ದಾರೆ. ಈಚೆಗೆ ಅಜಿತ್‍ನಾಯಕ್‍ಗೆ ಭೂಮಿಯ ಮೋಹ ವಿಪರೀತವಾಗಿತ್ತು. ಆತ ಹಲವು ಕಡೆ ಬೇನಾಮಿಯಾಗಿ ಭೂಖರೀದಿಯೂ ಮಾಡಿದ್ದರು. ರೆಸಾರ್ಟ್ ಬಿಸ್ನೆಸ್‍ನ ಸೆಳೆತಕ್ಕೆ ಬಿದ್ದಿದ್ದರಂತೆ. ಕಾಳಿನದಿ ತೀರದ ಮೌಳಂಗಿ ಎಂಬ ಮನಮೋಹಕ ಪ್ರದೇಶದ ಪ್ರೈಮ್ ಲ್ಯಾಂಡ್ ಮೇಲೆ ಅಜಿತ್ ಕಣ್ಣು ಬಿದ್ದಿತ್ತಂತೆ. ಇದೇ ಆತನಿಗೆ ಗಂಡಾಂತರಕಾರಿ ಆಯ್ತೆಂಬ ಕಾರಾರುವಾಕ್ಕಾದ ಲೆಕ್ಕಾಚಾರದ ಮಾತುಗಳೀಗ ದಾಂಡೇಲಿಯಲ್ಲಿ ಮೊಳಗಲಾರಂಭಿಸಿದೆ!
ಒಂದು ಸುದ್ದಿಯಂತೆ ಮೌಳಂಗಿಯ ಎರಡು ದಲಿತ ಕುಟುಂಬದ ಮಧ್ಯೆ ಭೂವ್ಯಾಜ್ಯ ನಡೆದಿತ್ತು. ಒಂದು ಕಡೆ ವಕೀಲರಾಗಿ ಅಜಿತ್‍ನಾಯಕ್ ನಿಂತಿದ್ದರು. ಎದುರಾಳಿ ತಂಡದ ಪಾಂಡುರಂಗ ಕಾಂಬಳೆಗೆ ಬಲಾಢ್ಯ ಭೂಮಾಫಿಯಾದ ನಂಟಿತ್ತು. ಕಾಂಬಳೆಯ ಜಾಗವನ್ನು ಎದುರುದಾರರು ಕಬ್ಜಾ ಮಾಡಿಕೊಂಡಿದ್ದರು. ಇದು ಘನಘೋರ ಕಾಳಗಕ್ಕೂ ಕಾರಣವಾಗಿಹೋಯ್ತು. ಆಗ ಅಜಿತ್ ನಾಯಕ್ ಮುತುವರ್ಜಿಯಲ್ಲಿ ಸರ್ವೇಯೂ ನಡೆಯಿತು. ತಾವೇ ಖುದ್ದು ನಿಂತು ಮೋಜುಣಿ ಮಾಡಿಸಿದ್ದರಂತೆ. ದೀಪಕ್ ಯಾನೆ ಪಾಂಡುರಂಗ ಕಾಂಬಳೆಯವರ ವಿರುದ್ಧ ಪೊಲೀಸ್ ಕಂಪ್ಲೇಂಟೂ ಆಗಿತ್ತು. ಪೊಲೀಸರು ಅಜಿತ್‍ನಾಯಕ್‍ರ ಪ್ರಭಾವದಿಂದ ಎದುರಾಳಿಗಳನ್ನು ಸತಾಯಿಸಿದ್ದರು. ಅಷ್ಟೇ ಅಲ್ಲ, ಕೆರಳಿದ ಕಾಂಬಳೆ ಪಾಳಯವು ಅಜಿತ್‍ನಾಯಕ್‍ರ ಕಕ್ಷಿದಾರನ ಜಾಗಕ್ಕೆ ಮಾರಕಾಸ್ತ್ರಗಳ ಸಮೇತ ಲಗ್ಗೆಹಾಕಿ ಧಮಕಿ ಹಾಕಿತ್ತು. ಒಂದೆಡೆ ತಗಾದೆ ನ್ಯಾಯಾಲಯ ಮೆಟ್ಟಿಲೇರಿದರೆ, ಮತ್ತೊಂದೆಡೆ ಆರೋಪಿಗಳಿಗೆ ಪೊಲೀಸರು ಜೈಲಿಗೆ ಹಾಕಿ ಬೆಂಡೆತ್ತಿದ್ದರು. ಇದಕ್ಕೆಲ್ಲ ವಕೀಲ ಅಜಿತ್‍ನಾಯಕ್ ಚಿತಾವಣಿಯೇ ಕಾರಣವೆಂಬ ಸಿಟ್ಟು ಕಾಂಬಳೆ ಕುಟುಂಬಕ್ಕಿತ್ತು. ಕೆರಳಿ ಬುಸುಗುಡುತ್ತಿದ್ದ ಕಾಂಬಳೆ ತಂಡ ಅಜಿತ್‍ನಾಯಕ್‍ಗೆ ಬೆದರಿಕೆ ಫೋನ್ ಕರೆಗಳನ್ನು ಆಗಾಗ ಮಾಡುತ್ತಲೇ ಇತ್ತು.
ಇದನ್ನು ಅಜಿತ್ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ ಈಗ ದಾಂಡೇಲಿಯಲ್ಲಿರುವ ಪುಕಾರುಗಳ ಪ್ರಕಾರ ತುಂಬ ಬೆಲೆಬಾಳುವ ಮಹತ್ವದ ಟೂರಿಸಮ್ ಸೈಟಾಗಿದ್ದ ಮೌಳಂಗಿಯ ಜಾಗದಲ್ಲಿ ಬೇನಾಮಿ ರೆಸಾರ್ಟ್ ಮಾಡುವ ಸ್ಕೆಚ್ ಹಾಕಿದ್ದ ಅಜಿತ್‍ನಾಯಕ್ ತುಂಬ ವ್ಯವಸ್ಥಿತವಾಗಿ ಎದುರಾಳಿಗಳ ಹಣಿಯಲು ಹತ್ತಿದ್ದರು. ಆದರೆ ಇದೇ ಜಾಗಕ್ಕಾಗಿ ಬಲಾಢ್ಯ ಭೂಮಾಫಿಯಾ ಒಂದು ಪ್ರಯತ್ನ ನಡೆಸಿ ಮತ್ತೊಂದು ದಲಿತÀ ಕುಟುಂಬದ ಬೆನ್ನಿಗೆ ನಿಂತಿತ್ತು. ಮೌಳಂಗಿಯಲ್ಲಿ ಈಕೋ ಪಾರ್ಕ್ ಆದ ಬಳಿಕ ವಿವಾದಿತ ಜಾಗದ ಕಿಮ್ಮತ್ತು ಜಾಸ್ತಿಯಾಗಿತ್ತು; ಅಜಿತ್ ನಾಯಕ್ ಕೂಡಾ ಸದ್ರಿ ಜಾಗದ ಬಗ್ಗೆ `ವಿಶೇಷ’ ಆಸಕ್ತಿ ವಹಿಸಿದ್ದರು. ಇದು ಪಾಂಡುರಂಗ ಕಾಂಬಳೆಯ ಆಕ್ರೋಶ ಹೆಚ್ಚಿಸಿತ್ತು. ಈ ದ್ವೇಷ ಒಳಗೊಳಗೇ ಹೊಗೆಯಾಡುತ್ತಲೇ ಇತ್ತು. ಅಜಿತ್‍ನಾಯಕ್‍ರ ಕಾನೂನು ತಂತ್ರಗಾರಿಕೆ, ಖಾಕಿಗಳ ಮೇಲಿನ ಹಿಡಿತದಿಂದ ಎದುರಾಳಿ ತಂಡ ಹೈರಾಣಾಗಿಹೋಗಿತ್ತು. ಇದು ಕೊಲೆಗೂ ಪ್ರೇರೇಪಿಸಿತೆಂಬ ತರ್ಕ ನಡೆದಿದೆ. ಇದು ಜನಸಾಮಾನ್ಯರದ್ದಷ್ಟೇ ಅಲ್ಲ, ಪೊಲೀಸರ ತಲೆಯೂ ತಿನ್ನುತ್ತಿದೆ.
ಹಂತಕರು ಹಲವು ದಿನಗಳಿಂದ ಅಜಿತ್‍ನಾಯಕ್ ಚಲನವಲನ, ಚಟುವಟಿಕೆ ಮೇಲೆ ನಿಗಾಯಿಟ್ಟು ನೋಡಿದ್ದಾರೆ. ಆತ ಅಂದು ರಾತ್ರಿ ದಾಂಡೇಲಿಯ ಜೆಎನ್ ರಸ್ತೆಯಲ್ಲಿರುವ ಕಚೇರಿಯಿಂದ ಹೊರಬರುವುದನ್ನೇ ಕಾದು ಕುಳಿತಿದ್ದಾರೆ. ಒಬ್ಬರೇ ಬರುವುದು ಖಾತ್ರಿಯಾಗಿದೆ. ಆತ ಕಾರಿನ ಬಳಿ ಹೋಗುವಾಗ ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ತಲೆಯ ಎಡಭಾಗ ಸೀಳಿಹೋಗಿದೆ. ಕಿವಿಯೂ ಚಿಂದಿಯಾಗಿದೆ. ಕೊಚ್ಚಿದ ರಭಸಕ್ಕೆ ಅಜಿತ್ ನಿಂತಲ್ಲೇ ಕುಸಿದು ರಕ್ತದ ಮಡುವಲ್ಲಿ ಒದ್ದಾಡಿ ಜೀವ ಬಿಟ್ಟಿದ್ದಾರೆ. ಕತ್ತಲಲ್ಲಿ ಹಂತಕ ಕರಗಿಹೋಗಿದ್ದಾನೆ. ಪೊಲೀಸರು ಈ ಲ್ಯಾಂಡ್ ಪ್ರಕರಣದತ್ತಲೇ ತನಿಖೆ ನಡೆಸಿದ್ದಾರೆ. ಹಂತಕನನ್ನು ಬಂಧಿಸಲಾಗಿದೆ ಎಂಬ ಅನಧಿಕೃತ ಸುದ್ದಿಯೂ ಹಬ್ಬಿದೆ ಯಲ್ಲಾಪುರದಲ್ಲಿ ಸೆರೆಸಿಕ್ಕಿರುವ ಹಂತಕ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನಂತೆ!
ಆತ ಅಸ್ತ್ರವಷ್ಟೇ! ಬಳಸಿದ್ದು ಯಾರೆಂಬುದು ಬಹಿರಂಗವಾಗಬೇಕಾಗಿದೆ. ಒಂದಂತೂ ಖರೆ; ಅಜಿತ್‍ನಾಯಕ್ ಕೋಲೆ ದಾಂಡೇಲಿ ಭಾಗದ ರೆಸಾರ್ಟ್ ದಂಧೆಯ ಅನಾಹುತಕಾರಿ ಆಯಾಮ ತೋರಿಸಿದೆ!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....