Homeಮುಖಪುಟಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

ಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

- Advertisement -
- Advertisement -

ಉತ್ತರ ಕನ್ನಡದ ಒಂದು ಕಾಲದ ಕೈಗಾರಿಕಾ ನಗರ ದಾಂಡೇಲಿ ಭೂಮಾಫಿಯಾದ ಆಡಂಬೋಲದಂತಾಗಿ ಹೋಗಿದೆ! ದೈತ್ಯ ರಾಜಕಾರಣಿ ದೇಶಪಾಂಡೆ ದೊಡ್ಡ ಕೈಗಾರಿಕೆಗಳ ಪ್ರಭಾವಿ ಮಂತ್ರಿ ಮಾಂಡಲೀಕನಾಗಿದ್ದಾಗಲೇ ಇಲ್ಲಿಯ ಒಂದೊಂದೇ ಕಾರ್ಖಾನೆಗಳು ಬಾಗಿಲು ಎಳೆದುಕೊಂಡಿರುವುದು ಇವತ್ತಿಗೂ ಬಿಡಿಸಲಾಗದ ಒಗಟಾಗೇ ಉಳಿದಿದೆ. ಈಗೇನಿದ್ದರೂ ದಾಂಡೇಲಿಯಲ್ಲಿ ಪ್ರವಾಸೋದ್ಯಮ “ದಂಧೆ”ಯ ಭಯಾನಕ ಭರಾಟೆ! ದಾಂಡೇಲಿ ಜೋಯಿಡಾದ ನಿತ್ಯಹರಿದ್ವರ್ಣ ಕಾಡಿನ ನೀರವತೆ ಮೃಗ-ಪಕ್ಷಿಗಳ ಕೂಗು-ಕಲರವ, ಕಾಳಿ-ಪಾಂಡರಿ ನದಿಗಳ ನಿನಾದ ತಂಡೋಪತಂಡವಾಗಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಒಂದು ವಾರಕ್ಕೆ ಹಲವು ಕೋಟಿ ವಹಿವಾಟು ಆಗುತ್ತಿದೆ.
ದಾಂಡೇಲಿ-ಜೋಯಿಡಾದ ಸುತ್ತಲೂ ರೆಸಾರ್ಟ್, ಹೋಮ್‍ಸ್ಟೇಗಳದೇ ಹಾವಳಿ. ಪ್ರವಾಸೋದ್ಯಮದ ಮೋಜು-ಮಸ್ತಿ ಭೂ ಮಾಫಿಯಾ ನಿಭಾಯಿಸುತ್ತಿದೆ. ಹೀಗಾಗಿ ದಾಂಡೇಲಿಯ ಕಾಡಿನ ಅಂಚಿನ ಮತ್ತು ಕಾಳಿ ನದಿದಂಡೆಯ ಒಂದಿಂಚು ಜಾಗಕ್ಕೂ ಬಂಗಾರದ ಬೆಲೆ ಬಂದಿದೆ! ಟೂರಿಸಮ್‍ಗೆ ತೆಕ್ಕೆಹಾಕಿಕೊಂಡಿರುವ ಲ್ಯಾಂಡ್ ಲಫಡಾ, ಲಡಾಯಿ ದಾಂಡೇಲಿಯಲ್ಲಿ ನಿತ್ಯನೂತನ ಮುಂಬೈ-ಕೇರಳ-ಬೆಳಗಾವಿ-ಬೆಂಗಳೂರು ಮತ್ತು ಸ್ಥಳೀಯ ಭೂಭಾನ್ಗಡಿದಾರರು ಯಾರ್ಯಾರದೋ ಜಾಗ ಕಬಳಿಸಲು ಹೊಂಚುಹಾಕಿ ಕುಂತಿದ್ದಾರೆ. ಧೋಖಾ ಬಾಜಿಗಳ ಹಿಂದೆ ಸರ್ಕಾರಿ ಏಜೆನ್ಸಿಗಳು, ಕಾನೂನಿನ ಸಿಕ್ಕು ಬಿಡಿಸುವ ನ್ಯಾಯವಾದಿಗಳು, ಖಾಕಿಕಿರಾತಕರೆಲ್ಲ ಅಡಗಿಕೊಂಡಿದ್ದಾರೆ. ರೆಸಾರ್ಟ್ ಉದ್ಯಮಿಯಾಗಿ ಕೊಪ್ಪರಿಗೆ ಕಾಸು ಬಾಚುವ ದುರಾಸೆಯ ಪೈಪೋಟಿಯಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೆ ಈಗ ರಕ್ತದ ಕಲೆಯೂ ಅಂಟಿಬಿಟ್ಟಿದೆ!
ಕಳೆದ ಶುಕ್ರವಾರ, ಜುಲೈ 27ರ ರಾತ್ರಿ 9.30ರ ಹೊತ್ತಿಗೆ ಮುಸುಕುಧಾರಿ ಪಾತಕಿಯ ಮಚ್ಚಿನೇಟಿಗೆ ಹತರಾದ ದಾಂಡೇಲಿಯ ನಾಮಾಂಕಿತ ನ್ಯಾಯವಾದಿಯೂ, ಸಾಮಾಜಿಕ ಹೋರಾಟಗಾರರೂ ಆಗಿದ್ದ ಅಜಿತ್‍ನಾಯಕ್ ಬರ್ಬರ ಹತ್ಯೆ ಪ್ರಕರಣವೂ ಇದೇ ಪ್ರವಾಸೋದ್ಯಮ ನಂಟಿನ ಭೂ ಮಾಫಿಯಾದ ಭೀಭತ್ಸ ಕಾರ್ಯಾಚರಣೆ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಅಜಿತ್ ವಕೀಲಿಕೆಯಿಂದ ಭರ್ಜರಿ ದುಡ್ಡು-ಭೂಮಿ ಮಾಡಿಕೊಂಡಿದ್ದರು. ಸಣ್ಣ ಸೈಜಿನ ರಾಜಕಾರಣಿಯೂ ಆಗಿದ್ದರು. ದಾಂಡೇಲಿ ನಗರಸಭೆಯ ಅರ್ಯರೂ ಒಮ್ಮೆ ಆಗಿದ್ದರು. ಬ್ಲಾಕ್-ಕಾಂಗ್ರೆಸ್ ಕಮಿಟಿಯ ಅಧ್ಯಕ್ಷತೆ ನಿಭಾಯಿಸಿದ್ದರು; ಎಂಪಿಯಾಗಿದ್ದ ಮ್ಯಾಗಿ, ಸಿಎಂ ಆಗಿದ್ದ ‘ಬಂ’ ಬಾಂಧವ್ಯ ಅಜಿತ್‍ಗೆ ಇತ್ತು. ದಾಂಡೇಲಿಯ ಪರಿಸರ, ಸಾಮಾಜಿಕ ವ್ಯವಸ್ಥೆಗೆ ತೊಂದರೆಯಾದಾಗ ಆತ ಸೆಟೆದು ನಿಲ್ಲುತಿದ್ದರು. ಹೋರಾಟ ಕಟ್ಟೆ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.
ದಾಂಡೇಲಿ ತಾಲ್ಲೂಕು ಮಾಡಬೇಕೆಂದು ಸಂಘಟನೆ ಮಾಡಿ ಹೋರಾಟ ಅಜಿತ್‍ನಾಯಕ್ ರೂಪಿಸಿದ್ದರು. ಈಚೆಗೆ ದಾಂಡೇಲಿ ತಾಲ್ಲೂಕು ಘೋಷಣೆಯಾದಾಗ ಆತ ತುಂಬ ಖುಷಿಯಾಗಿದ್ದರು. ದಾಂಡೇಲಿಯ ಜೀವನದಿ ಕಾಳಿ ಬೆನ್ನಿವನ ಮೇಲೆ ಸಾಲಾಗಿ ಕಟ್ಟಲಾಗಿರುವ ಜಲವಿದ್ಯುತ್ ಡ್ಯಾಮ್‍ನಿಂದಾಗುವ ಡ್ಯಾಮೇಜ್ ಅರಿವಿನ ಕಾಳಿ ಬಚಾವ್ ಆಂದೋಲನದಲ್ಲಿ ಅಜಿತ್ ಸಕ್ರಿಯರಾಗಿದ್ದರು; ನದಿಯಿಂದ ಎತ್ತುವ ಮರಳು ಮಾಫಿಯಾ, ಕೈಗಾರಿಕಾ ಮಾಲಿನ್ಯ ಮಾಫಿಯಾದ ಕಣ್ಣುರಿಗೂ ಆತ ಕಾರಣರಾಗಿದ್ದರು. ಆದರೆ ಇದ್ಯಾವುದೂ ಆತನ ಕೊಂದೇ ಹಾಕುವಷ್ಟು ಸೇಡಿನ ಶತ್ರುಗಳನ್ನೇನೂ ಸೃಷ್ಟಿಸಿರಲಿಲ್ಲ. ಹಾಗಂತ ಆತ ಗÀುಣಸ್ವಭಾವ ಕಂಡಿರುವ ದಾಂಡೇಲಿಯ ಜನರು ಹೇಳುತ್ತಾರೆ.
ಹಾಗಿದ್ದರೆ ಅಜಿತ್‍ನಾಯಕ್‍ರ ಕೊಲೆ ಮಾಡುವಂಥ ಹಠದ ಜಿದ್ದಿನ ಹಿನೆÀ್ನಲೆ ಏನಿರಬಹುದು ಎಂದು ಉತ್ತರ ಕನ್ನಡದಲ್ಲಿ ಬಿರುಸಿನ ಚರ್ಚೆಗಳು ನಡೆದಿದೆ. ಪೊಲೀಸರು ಆತನ ವಕೀಲಿ ವೃತ್ತಿಗೆ ಸುತ್ತಿಕೊಂಡಿದ್ದ ಒಂದಿಷ್ಟು ಭೂಮಾಫಿಯಾ ವ್ಯವಹಾರಗಳತ್ತ ತನಿಖೆ ಕೇಂದ್ರೀಕರಿಸಿದ್ದಾರೆ. ಈಚೆಗೆ ಅಜಿತ್‍ನಾಯಕ್‍ಗೆ ಭೂಮಿಯ ಮೋಹ ವಿಪರೀತವಾಗಿತ್ತು. ಆತ ಹಲವು ಕಡೆ ಬೇನಾಮಿಯಾಗಿ ಭೂಖರೀದಿಯೂ ಮಾಡಿದ್ದರು. ರೆಸಾರ್ಟ್ ಬಿಸ್ನೆಸ್‍ನ ಸೆಳೆತಕ್ಕೆ ಬಿದ್ದಿದ್ದರಂತೆ. ಕಾಳಿನದಿ ತೀರದ ಮೌಳಂಗಿ ಎಂಬ ಮನಮೋಹಕ ಪ್ರದೇಶದ ಪ್ರೈಮ್ ಲ್ಯಾಂಡ್ ಮೇಲೆ ಅಜಿತ್ ಕಣ್ಣು ಬಿದ್ದಿತ್ತಂತೆ. ಇದೇ ಆತನಿಗೆ ಗಂಡಾಂತರಕಾರಿ ಆಯ್ತೆಂಬ ಕಾರಾರುವಾಕ್ಕಾದ ಲೆಕ್ಕಾಚಾರದ ಮಾತುಗಳೀಗ ದಾಂಡೇಲಿಯಲ್ಲಿ ಮೊಳಗಲಾರಂಭಿಸಿದೆ!
ಒಂದು ಸುದ್ದಿಯಂತೆ ಮೌಳಂಗಿಯ ಎರಡು ದಲಿತ ಕುಟುಂಬದ ಮಧ್ಯೆ ಭೂವ್ಯಾಜ್ಯ ನಡೆದಿತ್ತು. ಒಂದು ಕಡೆ ವಕೀಲರಾಗಿ ಅಜಿತ್‍ನಾಯಕ್ ನಿಂತಿದ್ದರು. ಎದುರಾಳಿ ತಂಡದ ಪಾಂಡುರಂಗ ಕಾಂಬಳೆಗೆ ಬಲಾಢ್ಯ ಭೂಮಾಫಿಯಾದ ನಂಟಿತ್ತು. ಕಾಂಬಳೆಯ ಜಾಗವನ್ನು ಎದುರುದಾರರು ಕಬ್ಜಾ ಮಾಡಿಕೊಂಡಿದ್ದರು. ಇದು ಘನಘೋರ ಕಾಳಗಕ್ಕೂ ಕಾರಣವಾಗಿಹೋಯ್ತು. ಆಗ ಅಜಿತ್ ನಾಯಕ್ ಮುತುವರ್ಜಿಯಲ್ಲಿ ಸರ್ವೇಯೂ ನಡೆಯಿತು. ತಾವೇ ಖುದ್ದು ನಿಂತು ಮೋಜುಣಿ ಮಾಡಿಸಿದ್ದರಂತೆ. ದೀಪಕ್ ಯಾನೆ ಪಾಂಡುರಂಗ ಕಾಂಬಳೆಯವರ ವಿರುದ್ಧ ಪೊಲೀಸ್ ಕಂಪ್ಲೇಂಟೂ ಆಗಿತ್ತು. ಪೊಲೀಸರು ಅಜಿತ್‍ನಾಯಕ್‍ರ ಪ್ರಭಾವದಿಂದ ಎದುರಾಳಿಗಳನ್ನು ಸತಾಯಿಸಿದ್ದರು. ಅಷ್ಟೇ ಅಲ್ಲ, ಕೆರಳಿದ ಕಾಂಬಳೆ ಪಾಳಯವು ಅಜಿತ್‍ನಾಯಕ್‍ರ ಕಕ್ಷಿದಾರನ ಜಾಗಕ್ಕೆ ಮಾರಕಾಸ್ತ್ರಗಳ ಸಮೇತ ಲಗ್ಗೆಹಾಕಿ ಧಮಕಿ ಹಾಕಿತ್ತು. ಒಂದೆಡೆ ತಗಾದೆ ನ್ಯಾಯಾಲಯ ಮೆಟ್ಟಿಲೇರಿದರೆ, ಮತ್ತೊಂದೆಡೆ ಆರೋಪಿಗಳಿಗೆ ಪೊಲೀಸರು ಜೈಲಿಗೆ ಹಾಕಿ ಬೆಂಡೆತ್ತಿದ್ದರು. ಇದಕ್ಕೆಲ್ಲ ವಕೀಲ ಅಜಿತ್‍ನಾಯಕ್ ಚಿತಾವಣಿಯೇ ಕಾರಣವೆಂಬ ಸಿಟ್ಟು ಕಾಂಬಳೆ ಕುಟುಂಬಕ್ಕಿತ್ತು. ಕೆರಳಿ ಬುಸುಗುಡುತ್ತಿದ್ದ ಕಾಂಬಳೆ ತಂಡ ಅಜಿತ್‍ನಾಯಕ್‍ಗೆ ಬೆದರಿಕೆ ಫೋನ್ ಕರೆಗಳನ್ನು ಆಗಾಗ ಮಾಡುತ್ತಲೇ ಇತ್ತು.
ಇದನ್ನು ಅಜಿತ್ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ ಈಗ ದಾಂಡೇಲಿಯಲ್ಲಿರುವ ಪುಕಾರುಗಳ ಪ್ರಕಾರ ತುಂಬ ಬೆಲೆಬಾಳುವ ಮಹತ್ವದ ಟೂರಿಸಮ್ ಸೈಟಾಗಿದ್ದ ಮೌಳಂಗಿಯ ಜಾಗದಲ್ಲಿ ಬೇನಾಮಿ ರೆಸಾರ್ಟ್ ಮಾಡುವ ಸ್ಕೆಚ್ ಹಾಕಿದ್ದ ಅಜಿತ್‍ನಾಯಕ್ ತುಂಬ ವ್ಯವಸ್ಥಿತವಾಗಿ ಎದುರಾಳಿಗಳ ಹಣಿಯಲು ಹತ್ತಿದ್ದರು. ಆದರೆ ಇದೇ ಜಾಗಕ್ಕಾಗಿ ಬಲಾಢ್ಯ ಭೂಮಾಫಿಯಾ ಒಂದು ಪ್ರಯತ್ನ ನಡೆಸಿ ಮತ್ತೊಂದು ದಲಿತÀ ಕುಟುಂಬದ ಬೆನ್ನಿಗೆ ನಿಂತಿತ್ತು. ಮೌಳಂಗಿಯಲ್ಲಿ ಈಕೋ ಪಾರ್ಕ್ ಆದ ಬಳಿಕ ವಿವಾದಿತ ಜಾಗದ ಕಿಮ್ಮತ್ತು ಜಾಸ್ತಿಯಾಗಿತ್ತು; ಅಜಿತ್ ನಾಯಕ್ ಕೂಡಾ ಸದ್ರಿ ಜಾಗದ ಬಗ್ಗೆ `ವಿಶೇಷ’ ಆಸಕ್ತಿ ವಹಿಸಿದ್ದರು. ಇದು ಪಾಂಡುರಂಗ ಕಾಂಬಳೆಯ ಆಕ್ರೋಶ ಹೆಚ್ಚಿಸಿತ್ತು. ಈ ದ್ವೇಷ ಒಳಗೊಳಗೇ ಹೊಗೆಯಾಡುತ್ತಲೇ ಇತ್ತು. ಅಜಿತ್‍ನಾಯಕ್‍ರ ಕಾನೂನು ತಂತ್ರಗಾರಿಕೆ, ಖಾಕಿಗಳ ಮೇಲಿನ ಹಿಡಿತದಿಂದ ಎದುರಾಳಿ ತಂಡ ಹೈರಾಣಾಗಿಹೋಗಿತ್ತು. ಇದು ಕೊಲೆಗೂ ಪ್ರೇರೇಪಿಸಿತೆಂಬ ತರ್ಕ ನಡೆದಿದೆ. ಇದು ಜನಸಾಮಾನ್ಯರದ್ದಷ್ಟೇ ಅಲ್ಲ, ಪೊಲೀಸರ ತಲೆಯೂ ತಿನ್ನುತ್ತಿದೆ.
ಹಂತಕರು ಹಲವು ದಿನಗಳಿಂದ ಅಜಿತ್‍ನಾಯಕ್ ಚಲನವಲನ, ಚಟುವಟಿಕೆ ಮೇಲೆ ನಿಗಾಯಿಟ್ಟು ನೋಡಿದ್ದಾರೆ. ಆತ ಅಂದು ರಾತ್ರಿ ದಾಂಡೇಲಿಯ ಜೆಎನ್ ರಸ್ತೆಯಲ್ಲಿರುವ ಕಚೇರಿಯಿಂದ ಹೊರಬರುವುದನ್ನೇ ಕಾದು ಕುಳಿತಿದ್ದಾರೆ. ಒಬ್ಬರೇ ಬರುವುದು ಖಾತ್ರಿಯಾಗಿದೆ. ಆತ ಕಾರಿನ ಬಳಿ ಹೋಗುವಾಗ ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ತಲೆಯ ಎಡಭಾಗ ಸೀಳಿಹೋಗಿದೆ. ಕಿವಿಯೂ ಚಿಂದಿಯಾಗಿದೆ. ಕೊಚ್ಚಿದ ರಭಸಕ್ಕೆ ಅಜಿತ್ ನಿಂತಲ್ಲೇ ಕುಸಿದು ರಕ್ತದ ಮಡುವಲ್ಲಿ ಒದ್ದಾಡಿ ಜೀವ ಬಿಟ್ಟಿದ್ದಾರೆ. ಕತ್ತಲಲ್ಲಿ ಹಂತಕ ಕರಗಿಹೋಗಿದ್ದಾನೆ. ಪೊಲೀಸರು ಈ ಲ್ಯಾಂಡ್ ಪ್ರಕರಣದತ್ತಲೇ ತನಿಖೆ ನಡೆಸಿದ್ದಾರೆ. ಹಂತಕನನ್ನು ಬಂಧಿಸಲಾಗಿದೆ ಎಂಬ ಅನಧಿಕೃತ ಸುದ್ದಿಯೂ ಹಬ್ಬಿದೆ ಯಲ್ಲಾಪುರದಲ್ಲಿ ಸೆರೆಸಿಕ್ಕಿರುವ ಹಂತಕ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನಂತೆ!
ಆತ ಅಸ್ತ್ರವಷ್ಟೇ! ಬಳಸಿದ್ದು ಯಾರೆಂಬುದು ಬಹಿರಂಗವಾಗಬೇಕಾಗಿದೆ. ಒಂದಂತೂ ಖರೆ; ಅಜಿತ್‍ನಾಯಕ್ ಕೋಲೆ ದಾಂಡೇಲಿ ಭಾಗದ ರೆಸಾರ್ಟ್ ದಂಧೆಯ ಅನಾಹುತಕಾರಿ ಆಯಾಮ ತೋರಿಸಿದೆ!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...