Homeಕರ್ನಾಟಕಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ:...

ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ: ಎಚ್.ಡಿ.ಕೆ

- Advertisement -
- Advertisement -

ನಾನು ಹಳ್ಳಿಗಳಿಗೆ ಹೋದಾಗ ನೀವು ಕೇವರ ಭೂಮಿ ಇರುವ ರೈತರ ಸಾಲ ಮನ್ನಾ ಮಾಡುತ್ತೀರಿ ನಮಗೇನು ಮಾಡಿದ್ದೀರಿ ಎಂದು ಹಲವಾರು ಜನ ಕೇಳುತ್ತಿದ್ದರು. ಅವರ ನೆರವಿಗಾಗಿ ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಇಂದು ಸಿಎಂ ಕಛೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿಯವರು ವಾರ್ಷಿಕ 1.20 ಲಕ್ಷ ಆದಾಯ ಮಿತಿಯೊಳಗಿರುವ ಬಡವರಿಗೆ, ಭೂ ರಹಿತ ಕಾರ್ಮಿಕರು, ರೈತರೂ, 2 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೂ ಸಹ ಈ ಕಾಯ್ದೆಯ ಫಲಾನುಭವಿಗಳಾಗಲಿದ್ದಾರೆ ಎಂದರು.

ರಾಜ್ಯ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳ ಎಲ್ಲರ ಸಹಕಾರದಿಂದ 14 ತಿಂಗಳು ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದರು.

ರೈತರ ಸಾಲಮನ್ನಾ ಯೋಜನೆ, ಸಿದ್ಧತೆಗಳನ್ನು ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಿದ್ದಾರೆ.

ರಾಜಕೀಯ ಅಸ್ಥಿರತೆ ಉಂಟು ಮಾಡುವ ಘಟನೆಗಳು ಪ್ರತಿದಿನ ನಡೆಯುತ್ತಿದ್ದರೂ ಅಧಿಕಾರಿಗಳು ಕೊಟ್ಟ ಸಹಕಾರದಿಂದ ಆರ್ಥಿಕ ಶಿಸ್ತು ಕಾಪಾಡಿದ್ದೇವೆ. ಮುಂದಿನ ದಿನಗಳು ಸಹ ರಾಜಕೀಯ ಅಸ್ಥಿರತೆ ಮುಂದುವರೆಯುತ್ತವೆ. ಏನು ಬೇಕಾದರೂ ಆಗಬಹುದು. ಯಾವುದೇ ಅಸ್ಥಿರತೆ ಇದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ .. ಪ್ರಾಮಾಣಿಕವಾಗಿ ನಿರ್ವಹಣೆ ಮಾಡಿ ಎಂದು ಹೇಳಿದ್ದೇನೆ ಎಂದರು.

ಅಧಿಕಾರದಿಂದ ನಿರ್ಗಮಿಸುವಾಗ ಜನರಿಗೆ ಕೊಡುಗೆ ಕೊಡುವ ಸಲುವಾಗಿ ಈ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದರು. ರೈತರ ಸಾಲಮನ್ನಾ ಮಾಡುವಾಗ ದೇವರಾಜ್ ಅರಸ್ 1976 ಆಕ್ಟ್ ಮುಂದುವರೆಸುವುದು ನಮ್ಮ ಗುರಿ ಎಂದರು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಅಂಕಿತ ಹಾಕಿದ್ದಕ್ಕೆ ಬಡಜನರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು. ಉತ್ತಮ ಕೆಲಸ ಮಾಡಿದ ಆತ್ಮ ತೃಪ್ತಿ ನನಗಿದೆ ಎಂದರು.

ರಿಲೀಫ್ ಆಕ್ಟ್ ಪ್ರಕಾರ ಸಾಲದ ಸಂಪೂರ್ಣ ಮಾಹಿತಿ ಕೊಡಿ. ಜಾಹೀರಾತು ಕೂಡ ಕೊಡುತ್ತಾರೆ. 90 ದಿನದ ಒಳಗೆ ಮನಿ ಲೆಂಡರ್ಸ್ ಹತ್ತಿರ ಸಾಲ ಪಡೆದಿರುವವರು ನೊಡಲ್ ಆಫೀಸರ್ ಬಳಿ ತಲುಪಿಸಿದರೆ ಆ ಸಾಲದಿಂದ ಋಣಮುಕ್ತ ಕಾಯ್ದೆಯನ್ವಯ ಮನ್ನಾ ಆಗುತ್ತದೆ ಎಂದರು. ಇದು ಒಂದು ಟೈಮ್ ಸೆಟ್ಲಮೆಂಟ್ ರಿಲೀಫ್ ಆಗಿದೆ. ಒಂದು ವರ್ಷ ಈ ಆಕ್ಟ್ ಇದೆ.  ಎಲ್ಲಾ ರೀತಿಯ ಸಾಲ ಮನ್ನಾಗೆ ಅವಕಾಶವಿದೆ ಎಂದರು. ಬಂಡೆಪ್ಪ ಕಾಶೆಂಪೂರ್ ರವರು ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಪಾಲಿಗೆ ನಮ್ಮ ಕುಮಾರಣ್ಣನ ಯಾವಾಗಾದ್ರೂ ಇವರನ್ನು ಮುಕ್ತ ತಂದಿದ್ದು ನಮಗೆ ತುಂಬಾ ಸಂತೋಷ ಅವರಿಗೆ ದೇವರು ಆಯುಷ್ಯ ಆರೋಗ್ಯ ಸಂಪತ್ತು ಕೊಡಲಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...