Homeಅಂಕಣಗಳುಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

ಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮೊನ್ನೆ ಗಾಂಧಿಭವನದಲ್ಲಿ ಮಾತನಾಡುತ್ತಾ ‘ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಹೊರಟರೆ ನನ್ನ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬರಬಹುದು’ ಎಂದು ಹೇಳಿ ‘ನಾನು ವಿಧಾನಸೌಧದ 3ನೇ ಮಹಡಿಗಳಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸಂಕಲ್ಪ ಮಾಡಿದ್ದೇನೆ’ ಎಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ತೀರ್ಮಾನ. ಮುಖ್ಯಮಂತ್ರಿಗಳು ಎಷ್ಟೇ ಬಲಶಾಲಿಗಳಾಗಿರಬಹುದು, 70 ವರ್ಷಗಳಿಂದ ಬೆಳೆದುನಿಂತಿರುವ ಈ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಒಂದೇ ಏಟಿಗೆ ತಡೆಹಿಡಿಯುವುದು ಆಗದ ಮಾತು. ಹಾಗೆ ಹೇಳಿ, ಭ್ರಷ್ಟಾಚಾರವನ್ನೂ ಸಮಾಜದಿಂದ ತೊಲಗಿಸುವುದು ಸಾಧ್ಯವೇ ಇಲ್ಲವೆಂದು ಕೈಕಟ್ಟಿ ಕೂಡುವುದೂ ಸರಿಯಲ್ಲ. ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಂಕಲ್ಪ ಮಾಡಬೇಕು.
ಸರ್ಕಾರದ ಸಿಬ್ಬಂದಿಯ ಭ್ರಷ್ಟಾಚಾರವನ್ನು ನಿಗ್ರಹಿಸಲು ನಿರ್ಧರಿಸಿರುವ ಕುಮಾರಸ್ವಾಮಿಯವರು ಆ ಕ್ರಿಯೆ ಎಲ್ಲಿಂದ ಆರಂಭವಾಗಬೇಕು ಎಂಬುದನ್ನು ಮೊದಲು ತಿಳಿಯಬೇಕು.
ಮೈಸೂರು ಸಂಸ್ಥಾನದ ಕೊನೆಯ ದಿವಾನರಾಗಿದ್ದ ಸರ್. ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಅವರು ದಕ್ಷ ಆಡಳಿತಗಾರರು. ಅವರು ಪೊಲೀಸರಿಗೆ ಹೀಗೆ ಹೇಳುತ್ತಿದ್ದರು: ‘ಭ್ರಷ್ಟಾಚಾರದಲ್ಲಿರುವ ಒಬ್ಬ ನೌಕರ ಅಥವಾ ಸೇವಕನನ್ನು ಹಿಡಿದು ಶಿಕ್ಷಿಸಿ ಪತ್ರಿಕೆಯಲ್ಲಿ ಪ್ರಚಾರ ಗಿಟ್ಟಿಸುವುದರಿಂದ ಏನೂ ಪ್ರಯೋಜನವಿಲ್ಲ. ಭ್ರಷ್ಟ್ಟಾಚಾರ ಕೊನೆಗೊಳ್ಳಬೇಕೆಂಬುದು ನಿಮ್ಮ ಉದ್ದೇಶವಾಗಿದ್ದರೆ, ಉನ್ನತಮಟ್ಟದ ನಾಲ್ಕಾರು ಭ್ರಷ್ಟರನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸಿ. ಆಗ ಭ್ರಷ್ಟಾಚಾರ ತಾನೇ ತಾನಾಗಿ ಕೊನೆಗೊಳ್ಳುತ್ತದೆ’ ಎಂದು. ಕುಮಾರಸ್ವಾಮಿಯವರು ಆದ್ಯತೆಯ ಮೇಲೆ ಈ ಕ್ರಮ ಕೈಗೊಳ್ಳಬೇಕು. ತಳಮಟ್ಟದ ಹುದ್ದೆಯ ನೂರಾರು ನೌಕರರನ್ನು ಹಿಡಿದರೆ. ನೀವು ಪ್ರಚಾರಗಿಟ್ಟಿಸಿಕೊಳ್ಳಬಹುದೇ ಹೊರತು, ಭ್ರಷ್ಟಾಚಾರವನ್ನು ತಡೆಗಟ್ಟಲಾರಿರಿ.
ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ನಿರತರಾಗಿರುವ ಹತ್ತಾರು ಸಾವಿರ ಮಂದಿ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಇದ್ದಾರೆ. ಇವರಲ್ಲಿ ಅನೇಕರು ಮಂತ್ರಿಗಳೂ, ಶಾಸಕರು, ಉನ್ನತಾಧಿಕಾರಿಗಳೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೂ ಇದ್ದಾರೆ. ಸಾರ್ವಜನಿಕ ಭೂಮಿ ಒತ್ತುವರಿಗೆ ಸಂಬಂಧಿಸಿ ಎ.ಟಿ.ರಾಮಸ್ವಾಮಿ ಸಮಿತಿಯ ವರದಿ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಸಿದ್ಧವಾಯಿತು. ಅವರ ವರದಿಯಲ್ಲಿ ನಮೂದಿಸಿರುವವರ ವಿರುದ್ಧ ಖಟ್ಲೆ ನಡೆಸಲು ವಿಶೇಷ ನ್ಯಾಯಾಲಯವೂ ಸ್ಥಾಪನೆಯಾಗಿದೆ. 50-60 ಸಾವಿರ ಕೇಸುಗಳು ಆ ನ್ಯಾಯಾಲಯದ ಮುಂದಿವೆ. ಈಗಿರುವ ಕೋರ್ಟು ಈ ಎಲ್ಲ ಕೇಸುಗಳನ್ನೂ ಕೈಗೆತ್ತಿಕೊಂಡು ನಿರ್ಣಯ ಕೊಡಬೇಕಾದರೆ ಇನ್ನು ಹತ್ತಿಪ್ಪತ್ತು ವರ್ಷಗಳೇ ಬೇಕಾಗಬಹುದು. ನಾಲ್ಕಾರು ವಿಶೇಷ ಕೋರ್ಟುಗಳನ್ನು ಅರಂಭಿಸದ ಹೊರತು ಈ ಖಟ್ಲೆಗಳನ್ನೆಲ್ಲಾ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೂಡಲೇ ವಿಶೇಷ ನ್ಯಾಯಾಲಯಗಳ ಸಂಖ್ಯೆ ಹೆಚ್ಚು ಮಾಡಿ ದುಷ್ಟ ಭೂಗಳ್ಳರಿಗೆ ಶಿಕ್ಷೆ ವಿಧಿಸುವಂತೆ ಮಾಡಲಿ. ಹಾಗೆಯೇ, ಎ.ಸಿ.ಬಿ ತನಿಖಾ ತಂಡವನ್ನು ಕೈಬಿಡುವ ವಿಚಾರ ಕುಮಾರಸ್ವಾಮಿಯವರಿಗಿಲ್ಲ ಎಂದು ಪತ್ರಿಕೆಗಳ ಸುದ್ದಿ ಇದೆ. ಚುನಾವಣಾ ಪ್ರಚಾರ ಕಾಲದಲ್ಲಿ ಘೋಷಣೆ ಮಾಡಿದಂತೆ ಕುಮಾರಸ್ವಾಮಿಯವರು ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕೆಲಸವನ್ನಾದರೂ ಈ ಕೂಡಲೇ ಮಾಡಬೇಕು.
ನ್ಯಾ| ಸಂತೋಷ್ ಹೆಗ್ಡೆಯವರ ಕಾಲದಿಂದ ಇಂದಿನವರೆಗೆ ಲೋಕಾಯುಕ್ತರಿಂದ ಅನೇಕ ಉನ್ನತ ಅಧಿಕಾರಿಗಳ ಮನೆಗಳ ಶೋಧ ನಡೆದಿದೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆಂದು ಲೋಕಾಯುಕ್ತರು ಪತ್ತೆಮಾಡಿ ವರದಿ ತಯಾರಿಸಿ ಈ ಉನ್ನತಾಧಿಕಾರಿಗಳ ಮೇಲೆ ಖಟ್ಲೆ ಹೂಡಲು ಅನುಮತಿ ಕೋರಿ ಸರ್ಕಾರಕ್ಕೆ ಬರೆದಿದ್ದಾರೆ. ಆ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಕೊಳೆಯುತ್ತಾ ಬಿದ್ದಿವೆ. ಭ್ರಷ್ಟಾಚಾರ ತೊಲಗಿಸಬೇಕೆಂದು ತೀರ್ಮಾನಿಸಿರುವ ಕುಮಾರಸ್ವಾಮಿಯವರು ಆ ಎಲ್ಲಾ ಅಧಿಕಾರಿಗಳ ಮೇಲೆ ಖಟ್ಲೆ ಹೂಡಲು ಸೂಚಿಸಿ, ಕೂಡಲೇ ಪತ್ರ ಬರೆದರೆ ಲೋಕಾಯುಕ್ತರು ಕ್ರಮ ಕೈಗೊಳ್ಳಲು ಮುಂದಾಗಬಹುದು.
ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಂದ 40 ಸಾವಿರ ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ. ಅದನ್ನೆಲ್ಲ ಹಿಂಪಡೆಯಬೇಕೆಂದು ಸಿದ್ದರಾಮಯ್ಯನವರ ಸರ್ಕಾರ ತೀರ್ಮಾನಿಸಿ, ಸರ್ಕಾರಿ ಜಮೀನನ್ನು ವಾಪಸ್ ಪಡೆಯಲು ಜಿಲ್ಲಾಧಿಕಾರಿಗಳ ನೆರವಿಗೆ ಇನ್ನಿಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ. ಈ ವಿಶೇಷ ಜಿಲ್ಲಾಧಿಕಾರಿಗಳು ಮಂದಗತಿಯಲ್ಲಿ ಜಮೀನು ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಅವರು ಮಾತ್ರ ಕ್ರಿಯಾಶೀಲರಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಈಗ ಶೇ.25ರಷ್ಟು ಜಮೀನು ವಾಪಸ್ ಪಡೆದಿದ್ದಾರಷ್ಟೆ. ಹೀಗೆ ಹಿಂಪಡೆಯಲಾದ ಜಮೀನಿಗೆ ತಂತಿ ಬೇಲಿ ಬಿಗಿದಿದ್ದರೂ, ಈಗಲೂ ಅಲ್ಲಿ ಕೆಲ ಪ್ರಬಲ ಪಾಲಿಕೆ ಸದಸ್ಯರು ಹಾಗೂ ಕೆಲ ಭೂಕಬಳಿಕೆದಾರರು ತಾವು ಹಾಕಿದ್ದ ಷೆಡ್‍ಗಳನ್ನು ಹಾಗೇ ಉಳಿಸಿಕೊಂಡು ಹತ್ತಾರು ಸಾವಿರ ರೂಗಳ ಬಾಡಿಗೆ ಪಡೆಯುತ್ತಿದ್ದಾರೆ.
ಈ ಅಕ್ರಮಕ್ಕೆ ಕಡಿವಾಣ ಹಾಕುವುದಲ್ಲದೆ ಈ ಎರಡು ಜಿಲ್ಲೆಗಳ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ನಿರ್ದಿಷ್ಟ ಅವಧಿಯೊಳಗೆ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೂ, ವಿಶೇಷ ಜಿಲ್ಲಾಧಿಕಾರಿಗಳಿಗೂ ಕುಮಾರಸ್ವಾಮಿಯವರ ಸರ್ಕಾರ ಕÀಟ್ಟಪ್ಪÀಣೆ ಮಾಡಬೇಕು.
ಇದಲ್ಲದೆ, ದೇವೇಗೌಡರ ನೇತೃತ್ವದಲ್ಲಿ ನೈಸ್ ಕಂಪನಿ ವಿರುದ್ಧ ನಡೆದ ಹೋರಾಟ ಈಗ ಹಾಲಿ ಸ್ಥಗಿತವಾಗಿದೆ. ಸಚಿವ ಜಯಚಂದ್ರ ಸಮಿತಿ ಕೂಡ ನೈಸ್ ಕಂಪನಿಯ ಖೇಣಿಯ ವಿರುದ್ಧ ನೂರಾರು ಪುಟಗಳ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದೂ ಆಗಿದೆ. ಆದರೆ ಸರ್ಕಾರ ಖೇಣಿ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು ಕೂಡಲೇ ಈ ವರದಿಯನ್ವಯ ಕ್ರಮಕೈಗೊಳ್ಳಬೇಕೆಂದು ಅಗ್ರಹ ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
ಈ ಮೇಲೆ ಹೇಳಿದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸಿದರೆ ಭ್ರಷ್ಟಾಚಾರ ನಿರ್ಮೂಲನಕ್ಕಾಗಿ ಒಂದು ದಿಟ್ಟಹೆಜ್ಜೆ ಇಟ್ಟಂತಾಗುತ್ತದೆ; ಮಾತುಗಳನ್ನು ಕೃತಿಗಿಳಿಸಿದಂತಾಗುತ್ತದೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...