Homeಅಂಕಣಗಳುಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

ಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮೊನ್ನೆ ಗಾಂಧಿಭವನದಲ್ಲಿ ಮಾತನಾಡುತ್ತಾ ‘ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಹೊರಟರೆ ನನ್ನ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬರಬಹುದು’ ಎಂದು ಹೇಳಿ ‘ನಾನು ವಿಧಾನಸೌಧದ 3ನೇ ಮಹಡಿಗಳಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸಂಕಲ್ಪ ಮಾಡಿದ್ದೇನೆ’ ಎಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ತೀರ್ಮಾನ. ಮುಖ್ಯಮಂತ್ರಿಗಳು ಎಷ್ಟೇ ಬಲಶಾಲಿಗಳಾಗಿರಬಹುದು, 70 ವರ್ಷಗಳಿಂದ ಬೆಳೆದುನಿಂತಿರುವ ಈ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಒಂದೇ ಏಟಿಗೆ ತಡೆಹಿಡಿಯುವುದು ಆಗದ ಮಾತು. ಹಾಗೆ ಹೇಳಿ, ಭ್ರಷ್ಟಾಚಾರವನ್ನೂ ಸಮಾಜದಿಂದ ತೊಲಗಿಸುವುದು ಸಾಧ್ಯವೇ ಇಲ್ಲವೆಂದು ಕೈಕಟ್ಟಿ ಕೂಡುವುದೂ ಸರಿಯಲ್ಲ. ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಂಕಲ್ಪ ಮಾಡಬೇಕು.
ಸರ್ಕಾರದ ಸಿಬ್ಬಂದಿಯ ಭ್ರಷ್ಟಾಚಾರವನ್ನು ನಿಗ್ರಹಿಸಲು ನಿರ್ಧರಿಸಿರುವ ಕುಮಾರಸ್ವಾಮಿಯವರು ಆ ಕ್ರಿಯೆ ಎಲ್ಲಿಂದ ಆರಂಭವಾಗಬೇಕು ಎಂಬುದನ್ನು ಮೊದಲು ತಿಳಿಯಬೇಕು.
ಮೈಸೂರು ಸಂಸ್ಥಾನದ ಕೊನೆಯ ದಿವಾನರಾಗಿದ್ದ ಸರ್. ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಅವರು ದಕ್ಷ ಆಡಳಿತಗಾರರು. ಅವರು ಪೊಲೀಸರಿಗೆ ಹೀಗೆ ಹೇಳುತ್ತಿದ್ದರು: ‘ಭ್ರಷ್ಟಾಚಾರದಲ್ಲಿರುವ ಒಬ್ಬ ನೌಕರ ಅಥವಾ ಸೇವಕನನ್ನು ಹಿಡಿದು ಶಿಕ್ಷಿಸಿ ಪತ್ರಿಕೆಯಲ್ಲಿ ಪ್ರಚಾರ ಗಿಟ್ಟಿಸುವುದರಿಂದ ಏನೂ ಪ್ರಯೋಜನವಿಲ್ಲ. ಭ್ರಷ್ಟ್ಟಾಚಾರ ಕೊನೆಗೊಳ್ಳಬೇಕೆಂಬುದು ನಿಮ್ಮ ಉದ್ದೇಶವಾಗಿದ್ದರೆ, ಉನ್ನತಮಟ್ಟದ ನಾಲ್ಕಾರು ಭ್ರಷ್ಟರನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸಿ. ಆಗ ಭ್ರಷ್ಟಾಚಾರ ತಾನೇ ತಾನಾಗಿ ಕೊನೆಗೊಳ್ಳುತ್ತದೆ’ ಎಂದು. ಕುಮಾರಸ್ವಾಮಿಯವರು ಆದ್ಯತೆಯ ಮೇಲೆ ಈ ಕ್ರಮ ಕೈಗೊಳ್ಳಬೇಕು. ತಳಮಟ್ಟದ ಹುದ್ದೆಯ ನೂರಾರು ನೌಕರರನ್ನು ಹಿಡಿದರೆ. ನೀವು ಪ್ರಚಾರಗಿಟ್ಟಿಸಿಕೊಳ್ಳಬಹುದೇ ಹೊರತು, ಭ್ರಷ್ಟಾಚಾರವನ್ನು ತಡೆಗಟ್ಟಲಾರಿರಿ.
ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ನಿರತರಾಗಿರುವ ಹತ್ತಾರು ಸಾವಿರ ಮಂದಿ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಇದ್ದಾರೆ. ಇವರಲ್ಲಿ ಅನೇಕರು ಮಂತ್ರಿಗಳೂ, ಶಾಸಕರು, ಉನ್ನತಾಧಿಕಾರಿಗಳೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೂ ಇದ್ದಾರೆ. ಸಾರ್ವಜನಿಕ ಭೂಮಿ ಒತ್ತುವರಿಗೆ ಸಂಬಂಧಿಸಿ ಎ.ಟಿ.ರಾಮಸ್ವಾಮಿ ಸಮಿತಿಯ ವರದಿ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಸಿದ್ಧವಾಯಿತು. ಅವರ ವರದಿಯಲ್ಲಿ ನಮೂದಿಸಿರುವವರ ವಿರುದ್ಧ ಖಟ್ಲೆ ನಡೆಸಲು ವಿಶೇಷ ನ್ಯಾಯಾಲಯವೂ ಸ್ಥಾಪನೆಯಾಗಿದೆ. 50-60 ಸಾವಿರ ಕೇಸುಗಳು ಆ ನ್ಯಾಯಾಲಯದ ಮುಂದಿವೆ. ಈಗಿರುವ ಕೋರ್ಟು ಈ ಎಲ್ಲ ಕೇಸುಗಳನ್ನೂ ಕೈಗೆತ್ತಿಕೊಂಡು ನಿರ್ಣಯ ಕೊಡಬೇಕಾದರೆ ಇನ್ನು ಹತ್ತಿಪ್ಪತ್ತು ವರ್ಷಗಳೇ ಬೇಕಾಗಬಹುದು. ನಾಲ್ಕಾರು ವಿಶೇಷ ಕೋರ್ಟುಗಳನ್ನು ಅರಂಭಿಸದ ಹೊರತು ಈ ಖಟ್ಲೆಗಳನ್ನೆಲ್ಲಾ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೂಡಲೇ ವಿಶೇಷ ನ್ಯಾಯಾಲಯಗಳ ಸಂಖ್ಯೆ ಹೆಚ್ಚು ಮಾಡಿ ದುಷ್ಟ ಭೂಗಳ್ಳರಿಗೆ ಶಿಕ್ಷೆ ವಿಧಿಸುವಂತೆ ಮಾಡಲಿ. ಹಾಗೆಯೇ, ಎ.ಸಿ.ಬಿ ತನಿಖಾ ತಂಡವನ್ನು ಕೈಬಿಡುವ ವಿಚಾರ ಕುಮಾರಸ್ವಾಮಿಯವರಿಗಿಲ್ಲ ಎಂದು ಪತ್ರಿಕೆಗಳ ಸುದ್ದಿ ಇದೆ. ಚುನಾವಣಾ ಪ್ರಚಾರ ಕಾಲದಲ್ಲಿ ಘೋಷಣೆ ಮಾಡಿದಂತೆ ಕುಮಾರಸ್ವಾಮಿಯವರು ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕೆಲಸವನ್ನಾದರೂ ಈ ಕೂಡಲೇ ಮಾಡಬೇಕು.
ನ್ಯಾ| ಸಂತೋಷ್ ಹೆಗ್ಡೆಯವರ ಕಾಲದಿಂದ ಇಂದಿನವರೆಗೆ ಲೋಕಾಯುಕ್ತರಿಂದ ಅನೇಕ ಉನ್ನತ ಅಧಿಕಾರಿಗಳ ಮನೆಗಳ ಶೋಧ ನಡೆದಿದೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆಂದು ಲೋಕಾಯುಕ್ತರು ಪತ್ತೆಮಾಡಿ ವರದಿ ತಯಾರಿಸಿ ಈ ಉನ್ನತಾಧಿಕಾರಿಗಳ ಮೇಲೆ ಖಟ್ಲೆ ಹೂಡಲು ಅನುಮತಿ ಕೋರಿ ಸರ್ಕಾರಕ್ಕೆ ಬರೆದಿದ್ದಾರೆ. ಆ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಕೊಳೆಯುತ್ತಾ ಬಿದ್ದಿವೆ. ಭ್ರಷ್ಟಾಚಾರ ತೊಲಗಿಸಬೇಕೆಂದು ತೀರ್ಮಾನಿಸಿರುವ ಕುಮಾರಸ್ವಾಮಿಯವರು ಆ ಎಲ್ಲಾ ಅಧಿಕಾರಿಗಳ ಮೇಲೆ ಖಟ್ಲೆ ಹೂಡಲು ಸೂಚಿಸಿ, ಕೂಡಲೇ ಪತ್ರ ಬರೆದರೆ ಲೋಕಾಯುಕ್ತರು ಕ್ರಮ ಕೈಗೊಳ್ಳಲು ಮುಂದಾಗಬಹುದು.
ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಂದ 40 ಸಾವಿರ ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ. ಅದನ್ನೆಲ್ಲ ಹಿಂಪಡೆಯಬೇಕೆಂದು ಸಿದ್ದರಾಮಯ್ಯನವರ ಸರ್ಕಾರ ತೀರ್ಮಾನಿಸಿ, ಸರ್ಕಾರಿ ಜಮೀನನ್ನು ವಾಪಸ್ ಪಡೆಯಲು ಜಿಲ್ಲಾಧಿಕಾರಿಗಳ ನೆರವಿಗೆ ಇನ್ನಿಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ. ಈ ವಿಶೇಷ ಜಿಲ್ಲಾಧಿಕಾರಿಗಳು ಮಂದಗತಿಯಲ್ಲಿ ಜಮೀನು ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಅವರು ಮಾತ್ರ ಕ್ರಿಯಾಶೀಲರಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಈಗ ಶೇ.25ರಷ್ಟು ಜಮೀನು ವಾಪಸ್ ಪಡೆದಿದ್ದಾರಷ್ಟೆ. ಹೀಗೆ ಹಿಂಪಡೆಯಲಾದ ಜಮೀನಿಗೆ ತಂತಿ ಬೇಲಿ ಬಿಗಿದಿದ್ದರೂ, ಈಗಲೂ ಅಲ್ಲಿ ಕೆಲ ಪ್ರಬಲ ಪಾಲಿಕೆ ಸದಸ್ಯರು ಹಾಗೂ ಕೆಲ ಭೂಕಬಳಿಕೆದಾರರು ತಾವು ಹಾಕಿದ್ದ ಷೆಡ್‍ಗಳನ್ನು ಹಾಗೇ ಉಳಿಸಿಕೊಂಡು ಹತ್ತಾರು ಸಾವಿರ ರೂಗಳ ಬಾಡಿಗೆ ಪಡೆಯುತ್ತಿದ್ದಾರೆ.
ಈ ಅಕ್ರಮಕ್ಕೆ ಕಡಿವಾಣ ಹಾಕುವುದಲ್ಲದೆ ಈ ಎರಡು ಜಿಲ್ಲೆಗಳ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ನಿರ್ದಿಷ್ಟ ಅವಧಿಯೊಳಗೆ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೂ, ವಿಶೇಷ ಜಿಲ್ಲಾಧಿಕಾರಿಗಳಿಗೂ ಕುಮಾರಸ್ವಾಮಿಯವರ ಸರ್ಕಾರ ಕÀಟ್ಟಪ್ಪÀಣೆ ಮಾಡಬೇಕು.
ಇದಲ್ಲದೆ, ದೇವೇಗೌಡರ ನೇತೃತ್ವದಲ್ಲಿ ನೈಸ್ ಕಂಪನಿ ವಿರುದ್ಧ ನಡೆದ ಹೋರಾಟ ಈಗ ಹಾಲಿ ಸ್ಥಗಿತವಾಗಿದೆ. ಸಚಿವ ಜಯಚಂದ್ರ ಸಮಿತಿ ಕೂಡ ನೈಸ್ ಕಂಪನಿಯ ಖೇಣಿಯ ವಿರುದ್ಧ ನೂರಾರು ಪುಟಗಳ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದೂ ಆಗಿದೆ. ಆದರೆ ಸರ್ಕಾರ ಖೇಣಿ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು ಕೂಡಲೇ ಈ ವರದಿಯನ್ವಯ ಕ್ರಮಕೈಗೊಳ್ಳಬೇಕೆಂದು ಅಗ್ರಹ ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
ಈ ಮೇಲೆ ಹೇಳಿದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸಿದರೆ ಭ್ರಷ್ಟಾಚಾರ ನಿರ್ಮೂಲನಕ್ಕಾಗಿ ಒಂದು ದಿಟ್ಟಹೆಜ್ಜೆ ಇಟ್ಟಂತಾಗುತ್ತದೆ; ಮಾತುಗಳನ್ನು ಕೃತಿಗಿಳಿಸಿದಂತಾಗುತ್ತದೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...