Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...