Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...