Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...