Homeಕರ್ನಾಟಕಮಠದಲ್ಲಿ ಕೇಸರಿ ಶಾಲು - ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

ಮಠದಲ್ಲಿ ಕೇಸರಿ ಶಾಲು – ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ತುಮಕೂರು ಸಹಜ ಸ್ಥಿತಿಗೆ ಮರಳಿದೆ. ಸ್ಥಬ್ದವಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ದೊಡ್ಡದೊಂದು ಸಂಕಷ್ಟದಿಂದ ಬಿಡುಗಡೆಯಾದವರಂತೆ ಜನ ಚಲನೆಗೊಂಡರು. ಬಿಕೋ ಎನ್ನುತ್ತಿದ್ದ ರಸ್ತೆಗಳ ಜನರಿಂದ ತುಂಬಿದವು. ಲೋಕದ ವ್ಯವಹಾರಗಳು ಸಂಚಲನಗೊಂಡವು. ಎಲ್ಲದಕ್ಕೂ ಜೀವ ಬಂದಂತೆ ಭಾಸವಾಯಿತು. ಪ್ರಧಾನಿಯೊಬ್ಬರು ಬಂದು ಹೋಗಿದ್ದು ಬಂದ್ ನಂತೆ ಇತ್ತು. ಹಿಂದಿನ ಹಲವು ಮಂದಿ ಪ್ರಧಾನಿಗಳು ಬಂದುಹೋಗಿದ್ದಾರೆ. ಎಂದೂ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಹಿರಿಯರು ಮಾತನಾಡಿಕೊಂಡರು.

ಮಠದಲ್ಲಿ ಪ್ರಧಾನಿ ಮೋದಿ ವಿಭೂತಿ ತೀಡಿದ್ದರು. ಕೊರಳಿಗೆ ರುದ್ರಾಕ್ಷಿ ಸರಗಳನ್ನು ಹಾಕಿಕೊಂಡಿದ್ದರು. ಭುಜದ ಮೇಲೆ ಕೇಸರಿಶಾಲು ಹೊದ್ದಿದ್ದರು. ಮಕ್ಕಳ ಮುಂದೆ ಹೇಳಬೇಕಾದ್ದನ್ನೇ ಹೇಳದೆ ಬೇರೊಂದು ವಿಷಯವನ್ನು ಹೇಳಿದರು. ಅಲ್ಲಿಂದ ರೈತ ಸಮಾವೇಶಕ್ಕೆ ಬಂದರು. ಹಸಿರು ಶಾಲು ಹೊದಿಸಲಾಯಿತು. ಶಾಲನ್ನು ಹೆಗಲ ಮೇಲೆ ಹೊದ್ದುಕೊಂಡೇ 40 ನಿಮಿಷಗಳು ಭಾಷಣ ಮಾಡಿದರು. ರೈತರಿಗೆ ಡಾ.ಸ್ವಾಮಿನಾಥನ್ ಶಿಫಾರಸ್ಸು ಅನ್ವಯ ರೈತರು ಮಾಡಿದ ವೆಚ್ಚದ ಒಂದೂವರೆಪಟ್ಟು ಹಣವನ್ನು ಕೊಡುತ್ತೇನೆ ಎಂಬ ಒಂದೇ ಒಂದು ಮಾತು ಕೂಡ ಬರಲಿಲ್ಲ ಎಂದು ರೈತ ಮುಖಂಡರು ದೂರಿದರು.

HAL, ಫುಡ್ ಪಾರ್ಕ್ ಕುರಿತು ಪ್ರಧಾನ ಮಾತನಾಡಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿರುವ ಬಗ್ಗೆ ತುಮಕೂರಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು ಅದರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಬಹುದು ಎಂಬ ಜನರ ನಿರೀಕ್ಷೆಯೂ ಈಡೇರಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಬೆಳೆಯುವ ಬೆಳೆಗಳನ್ನು ರೈತರಿಗೆ ತಿಳಿಸಲು ಬಂದಿದ್ದರೆ ಎಂದು ತುಮಕೂರಿನ ಜನ ಪ್ರಶ್ನಿಸುತ್ತಿದ್ದಾರೆ.

ಜನರಿಗೆ ಒಂದೇ ಒಂದು ಭರವಸೆಯ ಮಾತುಗಳನ್ನು ಹೇಳಲಿಲ್ಲ. ಮಠಕ್ಕೆ ಬಂದರು. ರಾಜಕೀಯ ಮಾತನಾಡಿದರು. ರೈತರ ಸಮಾವೇಶಕ್ಕೆ ಬಂದರು. ಕೃಷಿ ಸನ್ಮಾನ್ ನೀದಿಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದರು. ರೈತರ ಆತ್ಮಹತ್ಯೆ, ಸಾಲಮನ್ನಾ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಕೊಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಬೇಕಾದ ಸಲಕರಣೆ ಕೊಡುವುದಾಗಿ ಹೇಳಿದರು. ತೆಂಗು, ರಬ್ಬರ್, ಅರಿಶಿಣ, ಗುಲಾಬಿ, ದಾಳಿಂಬೆ, ಕಾಫಿ ಹೀಗೆ ಹಲವು ಬೆಳೆಗಳ ಪ್ರಸ್ತಾಪ ಮಾಡಿದರು. ಅವುಗಳಿಗೆ ವೈಜ್ಞಾನಿಕ ಬೆಲೆ ನೀಡುವ ಬಗ್ಗೆ ಹೇಳಲೇ ಇಲ್ಲ. ಇದು ಕೂಡ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೃಷಿ ಸನ್ಮಾನ್ ನಿಧಿ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಲವು ರೈತರ ಮೊಬೈಲ್ ಗಳಿಗೆ ಮೆಸೇಜ್ ಬಂದಿದ್ದು 2 ಸಾವಿರ ರೂಪಾಯಿ ಬಂದಿದೆ ಎಂದು ಕೆಲವರು ಪೋನ್ ಮಾಡಿ ಹೇಳಿದರು. ಈಗ ಹಣ ಬಂದಿರುವುದು ಮೊದಲ ಬಾರಿ ಎಂದು ನಾಗವಲ್ಲಿಯಿಂದ ರೈತರೊಬ್ಬರು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...