Homeಕರ್ನಾಟಕಮಠದಲ್ಲಿ ಕೇಸರಿ ಶಾಲು - ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

ಮಠದಲ್ಲಿ ಕೇಸರಿ ಶಾಲು – ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ತುಮಕೂರು ಸಹಜ ಸ್ಥಿತಿಗೆ ಮರಳಿದೆ. ಸ್ಥಬ್ದವಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ದೊಡ್ಡದೊಂದು ಸಂಕಷ್ಟದಿಂದ ಬಿಡುಗಡೆಯಾದವರಂತೆ ಜನ ಚಲನೆಗೊಂಡರು. ಬಿಕೋ ಎನ್ನುತ್ತಿದ್ದ ರಸ್ತೆಗಳ ಜನರಿಂದ ತುಂಬಿದವು. ಲೋಕದ ವ್ಯವಹಾರಗಳು ಸಂಚಲನಗೊಂಡವು. ಎಲ್ಲದಕ್ಕೂ ಜೀವ ಬಂದಂತೆ ಭಾಸವಾಯಿತು. ಪ್ರಧಾನಿಯೊಬ್ಬರು ಬಂದು ಹೋಗಿದ್ದು ಬಂದ್ ನಂತೆ ಇತ್ತು. ಹಿಂದಿನ ಹಲವು ಮಂದಿ ಪ್ರಧಾನಿಗಳು ಬಂದುಹೋಗಿದ್ದಾರೆ. ಎಂದೂ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಹಿರಿಯರು ಮಾತನಾಡಿಕೊಂಡರು.

ಮಠದಲ್ಲಿ ಪ್ರಧಾನಿ ಮೋದಿ ವಿಭೂತಿ ತೀಡಿದ್ದರು. ಕೊರಳಿಗೆ ರುದ್ರಾಕ್ಷಿ ಸರಗಳನ್ನು ಹಾಕಿಕೊಂಡಿದ್ದರು. ಭುಜದ ಮೇಲೆ ಕೇಸರಿಶಾಲು ಹೊದ್ದಿದ್ದರು. ಮಕ್ಕಳ ಮುಂದೆ ಹೇಳಬೇಕಾದ್ದನ್ನೇ ಹೇಳದೆ ಬೇರೊಂದು ವಿಷಯವನ್ನು ಹೇಳಿದರು. ಅಲ್ಲಿಂದ ರೈತ ಸಮಾವೇಶಕ್ಕೆ ಬಂದರು. ಹಸಿರು ಶಾಲು ಹೊದಿಸಲಾಯಿತು. ಶಾಲನ್ನು ಹೆಗಲ ಮೇಲೆ ಹೊದ್ದುಕೊಂಡೇ 40 ನಿಮಿಷಗಳು ಭಾಷಣ ಮಾಡಿದರು. ರೈತರಿಗೆ ಡಾ.ಸ್ವಾಮಿನಾಥನ್ ಶಿಫಾರಸ್ಸು ಅನ್ವಯ ರೈತರು ಮಾಡಿದ ವೆಚ್ಚದ ಒಂದೂವರೆಪಟ್ಟು ಹಣವನ್ನು ಕೊಡುತ್ತೇನೆ ಎಂಬ ಒಂದೇ ಒಂದು ಮಾತು ಕೂಡ ಬರಲಿಲ್ಲ ಎಂದು ರೈತ ಮುಖಂಡರು ದೂರಿದರು.

HAL, ಫುಡ್ ಪಾರ್ಕ್ ಕುರಿತು ಪ್ರಧಾನ ಮಾತನಾಡಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿರುವ ಬಗ್ಗೆ ತುಮಕೂರಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು ಅದರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಬಹುದು ಎಂಬ ಜನರ ನಿರೀಕ್ಷೆಯೂ ಈಡೇರಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಬೆಳೆಯುವ ಬೆಳೆಗಳನ್ನು ರೈತರಿಗೆ ತಿಳಿಸಲು ಬಂದಿದ್ದರೆ ಎಂದು ತುಮಕೂರಿನ ಜನ ಪ್ರಶ್ನಿಸುತ್ತಿದ್ದಾರೆ.

ಜನರಿಗೆ ಒಂದೇ ಒಂದು ಭರವಸೆಯ ಮಾತುಗಳನ್ನು ಹೇಳಲಿಲ್ಲ. ಮಠಕ್ಕೆ ಬಂದರು. ರಾಜಕೀಯ ಮಾತನಾಡಿದರು. ರೈತರ ಸಮಾವೇಶಕ್ಕೆ ಬಂದರು. ಕೃಷಿ ಸನ್ಮಾನ್ ನೀದಿಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದರು. ರೈತರ ಆತ್ಮಹತ್ಯೆ, ಸಾಲಮನ್ನಾ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಕೊಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಬೇಕಾದ ಸಲಕರಣೆ ಕೊಡುವುದಾಗಿ ಹೇಳಿದರು. ತೆಂಗು, ರಬ್ಬರ್, ಅರಿಶಿಣ, ಗುಲಾಬಿ, ದಾಳಿಂಬೆ, ಕಾಫಿ ಹೀಗೆ ಹಲವು ಬೆಳೆಗಳ ಪ್ರಸ್ತಾಪ ಮಾಡಿದರು. ಅವುಗಳಿಗೆ ವೈಜ್ಞಾನಿಕ ಬೆಲೆ ನೀಡುವ ಬಗ್ಗೆ ಹೇಳಲೇ ಇಲ್ಲ. ಇದು ಕೂಡ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೃಷಿ ಸನ್ಮಾನ್ ನಿಧಿ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಲವು ರೈತರ ಮೊಬೈಲ್ ಗಳಿಗೆ ಮೆಸೇಜ್ ಬಂದಿದ್ದು 2 ಸಾವಿರ ರೂಪಾಯಿ ಬಂದಿದೆ ಎಂದು ಕೆಲವರು ಪೋನ್ ಮಾಡಿ ಹೇಳಿದರು. ಈಗ ಹಣ ಬಂದಿರುವುದು ಮೊದಲ ಬಾರಿ ಎಂದು ನಾಗವಲ್ಲಿಯಿಂದ ರೈತರೊಬ್ಬರು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...