Homeಕರ್ನಾಟಕಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

ಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

- Advertisement -
- Advertisement -

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ಬಳಿಕ ಧ್ಯಾನ ಮಾಡುತ್ತಾರೆಂದು ಸುದ್ದಿಯಾಗಿತ್ತು. ಆದರೆ ಧ್ಯಾನ ಬಿಟ್ಟು ರಾಜಕೀಯ ಭಾಷಣ ಮಾಡಿದರು.

ಕೇಂದ್ರ ಸರ್ಕಾರ ಜಮ್ಮು-ಕಾಸ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದೆ. 370ನೇ ಕಾಲಂ ರದ್ದುಪಡಿಸಿ ಶಾಂತಿಯನ್ನು ಸ್ಥಾಪಿಸಿದ್ದೇವೆ. ಸದಾ ಆತಂಕವಾದಿಗಳ ಗೂಡಾಗಿದ್ದ ಜಮ್ಮುಕಾಶ್ಮೀರದಲ್ಲಿ ಇಂದು ಆತಂಕ ದೂರವಾಗಿದೆ. ಜನ ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಮಾಡಿದ್ದೇವೆ ಎಂದು ಹೇಳಿಕೊಂಡರು.

ಬಹುಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಬಗೆಹರಿಸಿದ್ದೇವೆ. ರಾಮ ಮಂದಿರ ನಿರ್ಮಾಣಕ್ಕೆ ಪ್ರಶಸ್ತ ವಾತಾವರಣ ನಿರ್ಮಾಣವಾಗಿದೆ. ರಾಮಮಂದಿರವನ್ನು ನಿರ್ಮಿಸುತ್ತೇವೆ. ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ ನಲ್ಲಿ ಅಂಗೀಕರಿಸಿದ್ದೇವೆ. ಅದನ್ನು ಜಾರಿಗೊಳಿಸಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ವಿರೋಧ ವ್ಯಕ್ಪತಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಕಾಂಗ್ರೆಸ್ ಪಾಕಿಸ್ತಾನದ ವಿರುದ್ದ ಪ್ರತಿಭಟನೆ ಮಾಡುವುದು ಬಿಟ್ಟು ಸಂಸತ್ ವಿರುದ್ಧವೇ ಮಾತನಾಡುತ್ತಿದೆ ಎಂದು ಆರೋಪಿಸಿದರು.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಬೌದ್ಧರು, ಪಾರ್ಸಿಗಳು, ಕ್ರೈಸ್ತರು, ಜೈನರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಅವರಿಗೆ ಭಾರತದ ಪೌರತ್ವ ನೀಡುತ್ತೇವೆ ಎಂದರೆ, ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ದ್ವೇಷದ ವಾತಾವರಣವನ್ನು ವಿರೋಧ ಪಕ್ಷಗಳು ಹುಟ್ಟುಹಾಕುತ್ತಿವೆ ಎಂದು ಕಿಡಿಕಾರಿದರು.

ಪಾಕಿಸ್ತಾನದಲ್ಲಿ ದಲಿತರು, ಶೋಷಿತರ ಮೇಲೆ ಕ್ರೌರ್ಯ ನಡೆಯುತ್ತಿದ್ದರೂ ಕಾಂಗ್ರೆಸ್ 70 ವರ್ಷಗಳಿಂದ ಸುಮ್ಮನೆ ಕುಳಿತಿದೆ. ಹೋರಾಟವನ್ನೇ ಮಾಡುತ್ತಿಲ್ಲ.ಪಾಕಿಸ್ತಾನದ ಕರಾಳತನಕ್ಕೆ ಬೀಗಬಿದ್ದಿದೆ. ಕಾಂಗ್ರೆಸ್ ಮತ್ತು ಇತರರು ಪಾಕಿಸ್ತಾನದ ಹಿಂದೂಳಿಗೆ ಪೌರತ್ವ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದಗಂಗಾ ಮಠದಲ್ಲಿ ಧಾರ್ಮಿಕ ವಿಷಯಗಳನ್ನು ಪ್ರಸ್ತಾಪಿಸುವುದನ್ನು ಬಿಟ್ಟು ಮೋದಿ ರಾಜಕಾರಣ ಮಾತನಾಡಲು ಬಳಸಿಕೊಂಡರು. ಮಕ್ಕಳಿಗೆ ರಾಜಕೀಯ ಭಾಷಣ ಮಾಡಿದರು. ಮಕ್ಕಳು ಭವಿಷ್ಯದ ಪ್ರಜೆಗಳು ಎಂಬುದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಪ್ರಧಾನಿ ಮಕ್ಕಳು ಚನ್ನಾಗಿ ಓದಬೇಕು. ಉತ್ತಮ ಹುದ್ದೆಗಳನ್ನು ಹಿಡಿಯಬೇಕು. ದೇಶಕ್ಕೆ ಜಿಲ್ಲೆಗೆ ಕೀರ್ತಿ ತರಬೇಕು ಎಂಬಂತಹ ಒಂಂದೇ ಒಂದು ಮಾತನ್ನು ಹೇಳದೆ ಭಾಷಣ ಮುಗಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದನ್ನೇ ಬರೆದು ಕೊಟ್ಟಿರಬೇಕು ಬರೆಯುವವರು.
    ಆಗಾದರೆ ದೆಹಲಿಯಲ್ಲಿ ಹೇಳಿದ್ದು ಏನು?
    ಪೌರತ್ವದ ಬಗ್ಗೆ ಚರ್ಚೆನೇ ಮಾಡಿಲ್ಲ ಎಂದು ಹೇಳಿ.
    ಕರ್ನಾಟಕದಲ್ಲಿ ಪಾಸು ಮಾಡಿದ್ದೇನೆ ಎಂದು

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...