Homeಕರ್ನಾಟಕಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

ಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

- Advertisement -
- Advertisement -

ಜಿಲ್ಲಾಡಳಿತ ಮಧುಗಿರಿ ತಾಲೂಕು ಬ್ಯಾಲ್ಯ ಗ್ರಾಮಠಾಣದಲ್ಲೇ ವಸತಿ ವಂಚಿತರಿಗೆ ನಿವೇಶನ ಕೊಡುವ ಪತ್ರ ನೀಡಿದ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು 14 ದಿನಗಳ ನಂತರ ವಾಪಸ್ ಪಡೆದಿದೆ. ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಧರಣಿ ಕುಳಿತಿದ್ದ ಹೋರಾಟ ಸಮಿತಿಗೆ ಕೊನೆಗೂ ಹೋರಾಟಕ್ಕೆ ಜಯ ದೊರೆತಿರುವುದು ಸಂತಸಕ್ಕೆ ಕಾರಣವಾಗಿದೆ.

ಮಧುಗಿರಿ ತಾಲೂಕಿ ಬ್ಯಾಲ್ಯದ 70 ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡುವಂತೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ನಿರಂತರ 14 ದಿನಗಳು ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಹೋರಾಟಕ್ಕೆ ದಲಿತ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಬಲ ನೀಡಿದ್ದವು. ಬಡಜನರಿಗೆ ನಿವೇಶನ ನೀಡದೆ ಸ್ಥಳದಿಂದ ಕದಲುವುದಿಲ್ಲ ಎಂಬ ಧರಣಿನಿತರ ಪಟ್ಟಿಗೆ ಜಿಲ್ಲಾಡಳಿತ ಕೊನೆಗೆ ಸ್ಪಂದಿಸಿದೆ. ಗ್ರಾಮಠಾಣಾದ 30 ಕುಟುಂಬ ಜಮೀನಿನಲ್ಲಿ ನಿವೇಶನ ನೀಡುವ ಆದೇಶ ಪತ್ರವನ್ನು ನೀಡಿದ ನಂತರ ಧರಣಿ ಕೈಬಿಡಲಾಗಿದೆ.

ಧರಣಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಚಾಲನೆ ನೀಡಿದ್ದರು. ದೇಶದ ಪ್ರತಿಯೊಬ್ಬ ಬಸವರಿಗೆ  ಕೂಡ ವಸತಿ ಕಲ್ಪಿಸುವುದ ಸರ್ಕಾರ ಜವಾಬ್ದಾರಿ. ಬಡವರು ಗೌರವಯುತವಾಗಿ ಬದಕಲು ಸರ್ಕಾರ ಅವಕಾಶ ಮಾಡಿಕೊಡಬೇಕು. ವಸತಿ ಮತ್ತು ಭೂಮಿಯಿಂದ ಯಾರನ್ನೂ ವಂಚಿಸಬಾರದು ಎಂದು ತಾಕೀತು ಮಾಡಿ ಹೋಗಿದ್ದರು. ಆನಂತರ ಜಿಲ್ಲಾಧಿಕಾರಿಗಳು ಎರಡು ಬಾರಿ ಧರಣಿನಿರತರಲ್ಲಿಗೆ ಆಗಮಿಸಿ ನಿವೇಶನ ನೀಡಲು ಕ್ರಮ ಕೈಗೊಳ್ಳುತ್ತೇನೆ. ಧರಣಿ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಧರಣಿನಿರತರು ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಈ ನಡುವೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಿತಿಯ ಮಾರ್ಗದರ್ಶಕರಾದ ಎಚ್.ಎಸ್. ದೊರೆ ಸ್ವಾಮಿ ಅವರನ್ನು ಭೇಟಿಯಾಗಿ ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಿ ಬಂದರು. ಯಾವುದೇ ಕಾರಣಕ್ಕೂ ಸೂಕ್ತ ಪರಿಹಾರ ಕಾಣದೆ ಧರಣಿ ಕೈಬಿಡಬಾರದು ಎಂದು ಸೂಚಿಸಿದರು. ಅವರ ಮಾರ್ಗದರ್ಶನದಂತೆ ಧರಣಿ ಮುಂದುವರಿಸಲಾಯಿತು. ಧರಣಿಗೆ ಬೇರೆ ಬೇರೆ ಸಂಘಟನೆಗಳು ಬೆಂಬಲ ನಿಡಿದರು.

ಸರ್ಕಾರದ ವಿರುದ್ದ ಪದಗಳನ್ನು ಕಟ್ಟಿ ಹಾಡುವುದು ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಧರಣಿಯನ್ನು ವಿಭಿನ್ನವಾಗಿ ನಡೆಸಿದರು. ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ತಮಟೆ ಚಳವಳಿ ಮಾಡಿದರು. ಪತ್ರಚಳವಳಿ ಕೈಗೊಂಡರು. ಆದರೂ ಜಿಲ್ಲಾಡಳಿತದ ಕಿವಿಗೆ ಬಡವರ ಕೂಗು ಮುಟ್ಟಲೇ ಇಲ್ಲ. ಧರಣಿ ಕೈಬಿಡಬಹುದೆಂಬ ಅಧಿಕಾರಿಗಳ ನಿರೀಕ್ಷೆ ಹುಸಿಯಾಯಿತು.

ಜಿಲ್ಲಾಧಿಕಾರಿಗಳು ಬ್ಯಾಲ್ಯಗ್ರಾಮದಿಂದ ಮೂರು ಕಿಲೋ ಮೀಟರ್ ದೂರದಲ್ಲಿ 4 ಎಕರೆ ಭೂಮಿ ನೀಡಿರುವುದಾಗಿ ಪತ್ರಿಕೆಗಳ ಮೂಲಕ ಪ್ರಕಟಿಸಿದರು. ಇದಕ್ಕೂ ಹೋರಾಟ ಸಮಿತಿ ಬಗ್ಗಲಿಲ್ಲ. ಜಿಲ್ಲಾಧಿಕಾರಿಗಳು ಸೂಚಿಸಿದ ಪ್ರದೇಶ ತಗ್ಗುದಿಬ್ಬಗಳಿಂದ ಕೂಡಿತ್ತು. ಗುಡ್ಡದ ಸಮೀಪ ತೋರಿಸಿದ್ದ ಭೂಮಿಯಲ್ಲಿ ಪೊದೆಗಳು ಬೆಳೆದಿದ್ವು. ಅಲ್ಲಿ ಚರತೆ ಮತ್ತು ಕರಡಿಗಳ ಕಾಟ ಅಧಿಕವಿತ್ತು ಎಂಬುದನ್ನು ಹೋರಾಟ ಸಮಿತಿ ಅಧಿಕಾರಿಗಳ ಗಮನ ಸೆಳೆಯಿತು. ಧರಣಿ ನಡೆಸುತ್ತಿದ್ದವರು ಎಷ್ಟೇ ಕಷ್ಟವಿದ್ದರೂ ಪಟ್ಟನ್ನು ಮಾತ್ರ ಸಡಿಸಲೇ ಇಲ್ಲ.

ಕೊನೆಗೂ ಜಿಲ್ಲಾಡಳಿತ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿಯ ಧರಣಿಗೆ ಮಣಿಯಲೇ ಬೇಕಾಯಿತು. 70 ಕುಟುಂಬಗಳ ಸಮಸ್ಯೆ ಗಂಭೀರ ಸ್ವರೂಪದ್ದು ಎಂಬುದನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಹೋರಾಟ ಸಮಿತಿ ಯಶಸ್ವಿಯಾಯಿತು. ಪರಿಣಾಮ ಬ್ಯಾಲ್ಯ ಗ್ರಾಮದ ಗ್ರಾಮಠಾಣದಲ್ಲೇ ಇರುವ ಭೂಮಿಯಲ್ಲಿ ನಿವೇಶನಗಳನ್ನು ನೀಡಲು ಒಪ್ಪಿಕೊಂಡಿತು.

ಬ್ಯಾಲ್ಯ ಗ್ರಾಮದ ಗ್ರಾಮಠಾಣ ಜಾಗದಲ್ಲೇ 30 ಕುಂಟೆ ಜಾಗವನ್ನು ಗುರುತಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲು ಪತ್ರ ಮುಖೇನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ. ಈ ಸಂಬಂಧ ಇದರ ಪ್ರತಿಯನ್ನು  ನಮಗೆ ನೀಡಿದೆ. ನಮಗೆ ಇದರಿಂದ ತೃಪ್ತಿಯಾಗಿದೆ. ಈಗ ನೀಡಿರುವ ಜಾಗದಲ್ಲಿ ಕನಿಷ್ಠ 25 ರಿಂದ 30 ನಿವೇಶನಗಳು ವಿಂಗಡಣೆಯಾಗಲಿವೆ. ಈಗ ತುರ್ತು ಇರುವವರಿಗೆ ನೀವೇಶ ನೀಡುವುದು. 20830 ಅಡಿ ನಿವೇಶ ನೀಡಿದರೆ ಅನುಕೂಲವಾಗುತ್ತದೆ. ಇನ್ನುಳಿದವರಿಗೂ ನಿವೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಜಾಗ ನೋಡಲು ತಿಳಿಸಿದ್ದು, ಮಾರಾಟ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ.  ಅದಕ್ಕೆ ಅವರೂ ಒಪ್ಪಿಕೊಂಡಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡ ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

ಧರಣಿ ಸ್ಥಳಕ್ಕೆ ಬಮದು ನಮ್ಮ ಮನವಿಗೆ ಸ್ಪಂದಿಸಿದ ಅಪರ  ಜಿಲ್ಲಾಧಿಕಾರಿ ಚನ್ನಬಸಪ್ಪ,,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದೇಶ್, ಮಧುಗಿರಿ ತಹಸಿಲ್ದಾರ್ ನಂದೀಶ್ ,ಜೆಸಿಬಿ ವೆಂಕಟೇಶ್,ಟಿ.ಸಿ.ರಾಮಯ್ಯ,ಭರತ್ ಕುಮಾರ್,ಮೋಹನ್ ಕುಮಾರ್,ಯೋಗೀಶ್ ಮೆಳೆಕಲ್ಲಹಳ್ಳಿ,ರಾಮಮೂರ್ತಿ,ಶಿವರಾಜು ಕರ್ನಾಟಕ ರಾಷ್ಟ್ರ ಸಮಿತಿ ಮಲ್ಲಿಕಾರ್ಜುನ್,ತಿಮ್ಮಯ್ಯ ಮೊದಲಾದವರ ಸಮ್ಮುಖದಲ್ಲಿ ಪತ್ರ ನೀಡಿದ ಬಳಿಕ ಧರಣಿ ಹಿಂತೆಗೆದುಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ವಸತಿ ಮತ್ತು ಭೂಮಿ ವಂಚಿತರು ಸಾಕಷ್ಟು ಮಂದಿ ಇದ್ದಾರೆ. ಎಲ್ಲರಿಗೂ ವಸತಿ ದೊರೆಯಬೇಕು.  ಸಾಮಾಜಿಕ ನ್ಯಾಯ ದೊರೆತರೆ ಅನುಕೂಲವಾಗುತ್ತದೆ. ಜಾತಿ, ಮತ, ಲಿಂಗ, ಧರ್ಮಗಳನ್ನು ಮೀರಿ ನಮ್ಮ ಹೋರಾಟ ಮುಂದುವರಿಯುತ್ತದೆ. ಗುಡಿಸಲಲ್ಲಿ ವಾಸಿಸುವವರಿಗು ಮನೆ ದೊರೆಯಬೇಕು. ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ವಸತಿ ಇಲ್ಲದವರು ಇದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರ ಅವರಿಗೂ ನ್ಯಾಯ ಕೊಡಬೇಕು. ಎಲ್ಲ ಕುಟುಂಬಗಳು ನೆಮ್ಮದಿಯಿಂದ ಬದುಕಬೇಕೆಂಬುದೇ ನಮ್ಮ ಉದ್ದೇಶ. ಧರಣಿಯನ್ನು ಬೆಂಬಲಿಸಿದ ಮುಖಂಡರು ಹಾಗೂ ಸುದ್ಧಿ ಮಾಧ್ಯಮಗಳಿಗೆ ಧನ್ಯವಾದಗಳನ್ನು ತಿಳಿಸುವುದನ್ನು ನಾಗಭೂಷಣ್ ಮರೆಯಲಿಲ್ಲ.

ಅಂತೂ ಧರಣಿ ಮುಕ್ತಾಯವಾಧರೂ ನಿವೇಶನ ಮತ್ತು ಭೂಮಿ ವಂಚಿತರಿಗೆ ನ್ಯಾಯ ದೊರೆಯಲಿ ಎಂಬುದು ಪತ್ರಿಕೆಯ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...