Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಮರೆ ಮಾಚಿದ ಇತಿಹಾಸದ ಬಗ್ಗೆ......

ಮರೆ ಮಾಚಿದ ಇತಿಹಾಸದ ಬಗ್ಗೆ……

- Advertisement -
- Advertisement -

ಗೌರಿ ಲಂಕೇಶ್ |

ಮೊನ್ನೆ ಎಡ್ಮಂಡ್ ಹಿಲೇರಿ ತೀರಿಹೋಗಿದ್ದರ ಬಗ್ಗೆ ವರದಿ ಮಾಡಿದ ಎಲ್ಲಾ ಮಾಧ್ಯಮಗಳು ಮೌಂಟ್ ಎವರೆಸ್ಟ್ ಬಗ್ಗೆಯೂ ಬರೆದಿದ್ದೆವು. ಆದರೆ ಬಹಳಷ್ಟು ಜನಕ್ಕೆ ಗೊತ್ತಿಲ್ಲದಿರುವುದೇನೆಂದರೆ ಯಾವುದನ್ನು ನಾವೆಲ್ಲ ಇವತ್ತು ಮೌಂಟ್ ಎವರೆಸ್ಟ್ ಎಂದು ಕರೆಯುತ್ತೇವೋ ಆ ಶಿಖರವನ್ನು ನೇಪಾಳದ ಜನ ಸಾಗರಮಾತಾ ಎಂದೂ, ಟಿಬೆಟ್‌ನ ಜನ ಚಿಮೋಲುಂಗ್ಮಾ ಎಂದೂ, ಭಾರತದ ಜನ ಗೌರಿಶಂಕರ ಎಂದೂ ಕರೆಯುತ್ತಿದ್ದರು.

ಆದರೆ ಯಾವಾಗ 1865ರಲ್ಲಿ ಅಂದಿನ ಬ್ರಿಟಿಷ್ ಸಾಮ್ರಾಜ್ಯದ ಸರ್ವೇಯರ್ ಜನರಲ್ ಆಫ್ ಇಂಡಿಯಾ ಸರ್ ಜಾರ್ಜ್ ಎವರೆಸ್ಟ್ ಎಂಬ ಅಧಿಕಾರಿ ಆ ಶಿಖರವನ್ನು ಅಳತೆ ಮಾಡಿದನೋ, ಆನಂತರ ಅದಕ್ಕೆ ಆತನ ಹೆಸರನ್ನೇ ಬ್ರಿಟಿಷರು ಇಟ್ಟರು. ಈಗ ಅದರ ಸುತ್ತಮುತ್ತಲಿನ ಜನ ಇಟ್ಟಿದ್ದ ಹೆಸರು ಮಾಯವಾಗಿ ಎಲ್ಲರಿಗೂ ಅದು ಮೌಂಟ್ ಎವರೆಸ್ಟ್ ಎಂದೇ ಪರಿಚಿತವಾಗಿದೆ.

ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ ಇತ್ತೀಚಿಗೆ ಎಡ್ವರ್ಡೋ ಗಲಿಯಾನೊ ಎಂಬ ಉರುಗ್ವೇ ದೇಶದ ಖ್ಯಾತ ಪತ್ರಕರ್ತ ಮತ್ತು ಬರಹಗರ ಜನರ ಇತಿಹಾಸವನ್ನು ಹೇಗೆ ಪಟ್ಟಭದ್ರ ಹಿತಾಸಕ್ತಿಗಳು ಮರೆಮಾಚುತ್ತವೆ ಎಂಬುದನ್ನು ಕುರಿತು ಒಂದು ಪುಸ್ತಕ ಬರೆದಿದ್ದಾರೆ.

ಗಲಿಯಾನೊ ಅಂತಹ ಹಲವು ಸತ್ಯಗಳನ್ನು ತಮ್ಮ ಪುಸ್ತಕದಲ್ಲಿ ಪಟ್ಟಿ ಮಾಡಿದ್ದಾರೆ. ವಿಶ್ವ ಇತಿಹಾಸವನ್ನರಿಯಲು ಅವು ನೆರವಾಗಬಹುದೆಂಬ ಕಾರಣಕ್ಕೆ ಇಲ್ಲಿ ಹಲವನ್ನು ನೀಡಿದ್ದೇನೆ.

  • ಅರ್ಜೆಂಟಿನಾದಲ್ಲಿರುವ ಅತಿ ಎತ್ತರದ ಸ್ಮಾರಕಕ್ಕೆ ಜನರಲ್ ರೋಕಾನ ಹೆಸರಿಡಲಾಗಿದೆ. ಈ ಪ್ರದೇಶಕ್ಕೆ ರೋಕಾನ ಕೊಡುಗೆ ಏನೆಂದರೆ ಪಟಗೊನಿಯಾದಲ್ಲಿದ್ದ ಬುಡಕಟ್ಟು ಜನರನ್ನು 19ನೇ ಶತಮಾನದಲ್ಲಿ ನಿರ್ನಾಮ ಮಾಡಿದ್ದು.
  • ಗುಲಾಮರನ್ನು ಸಾಗಿಸಲು ಬಳಸುತ್ತಿದ್ದ ಹಲವು ಹಡಗುಗಳ ಹೆಸರುಗಳು ಪೋಲ್ಫೇರ್, ಜೀಸಸ್, ವಿಶ್ವಾಸ, ಸಮಾನತೆ ಮತ್ತು ಸ್ನೇಹ ಎಂಬುದಾಗಿತ್ತು.
  • ಅಮೆರಿಕವನ್ನು ಸ್ಥಾಪಿಸಿದ ಇಬ್ಬರು ಹಿರಿಯರ ಹೆಸರುಗಳು ಅಧಿಕೃತ ಇತಿಹಾಸದಿಂದಲೇ ಮರೆಯಾಗಿವೆ. ಯಾಕೆಂದರೆ ಅವರಲ್ಲಿ ರಾಬರ್ಟ್ ಕಾರ್ಟರ್ ಎಂಬಾತ ತನಗಾಗಿ ದುಡಿಯುತ್ತಿದ್ದ ಕರಿಯರಿಗೂ ಸ್ವಾತಂತ್ರ್ಯ ನೀಡಿದ್ದ ಮತ್ತು ಗವರ್ನರ್ ಮೋರಿಸ್ ಎಂಬಾತ ಕರಿಯ ಗುಲಾಮರು ಇತರರಿಗಿಂತ ಕೀಳು ಎಂಬ ಅಂಶವನ್ನು ಸಂವಿಧಾನದಲ್ಲಿ ಸೇರಿಸುವುದನ್ನು ವಿರೋಧಿಸಿದ್ದ. ಅವರ ಈ ನಿಲುವಿನಿಂದಾಗಿಯೇ ಅವರಿಬ್ಬರನ್ನು ಈಗ ಸಾಮೂಹಿಕ ನೆನಪಿನಿಂದಲೇ ಗಡಿಪಾರು ಮಾಡಲಾಗಿದೆ.
  • 1234 ರಿಂದ ಏಳು ಶತಮಾನಗಳ ಕಾಲ ಚರ್ಚ್‌ಗಳಲ್ಲಿ ಮಹಿಳೆಯರು ಹಾಡುವುದನ್ನು ನಿಷೇಧಿಸಲಾಗಿತ್ತು. ಕಾರಣ ಅವರ ದನಿಗಳು ಅಪವಿತ್ರವೆಂದು ಭಾವಿಸಲಾಗಿತ್ತು.
  • 1793 ರ ಫ್ರೆಂಚ್ ಕ್ರಾಂತಿಯ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಮೂರು ಸೂತ್ರಗಳನ್ನು ಘೋಷಿಸಿದಾಗ ’ಪುರುಷರ ಹಕ್ಕುಗಳು’ ಎಂಬ ಕಾನೂನನ್ನು ಪ್ರಕಟಿಸಲಾಗಿತ್ತು. ಆಗ ಕ್ರಾಂತಿಕಾರಿ ತೀವ್ರವಾದಿ ಓಲಿಂಪಿಯಾ ದೆ ಗೂಬ್ ಎಂಬಾಕೆ ’ಮಹಿಳೆಯರ ಹಕ್ಕುಗಳು’ ಎಂಬ ಕಾನೂನನ್ನೂ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಳು. ಹಾಗೆ ಕೇಳಿದ್ದಕ್ಕೆ ಅವಳ ಶಿರಛ್ಛೇಧನೆ ಮಾಡಲಾಯಿತು.
  • ರಾಣಿ ಥಿಯೊಡೋರಾಳನ್ನು ಯಾರೂ ಕ್ರಾಂತಿಕಾರಿ, ಮಹಿಳಾವಾದಿ ಎಂದು ನೆನಪಿಸಿಕೊಳ್ಳುವುದಿಲ್ಲ. ಆದರೆ 1500 ವರ್ಷಗಳ ಹಿಂದೆ ಆಳಿದ್ದ ಈಕೆ ಮಹಿಳೆಯರಿಗೆ ಗರ್ಭಪಾತ ಮತ್ತು ವಿಚ್ಛೇದನಾ ಹಕ್ಕುಗಳನ್ನು ನೀಡಿದ್ದ ಪ್ರಥಮ ಮಹಿಳಾವಾದಿ.
  • ಚೀನಾದ ಪೀಕಿಂಗ್‌ನಿಂದ ಯುರೋಪಿಗೆ ತಂದ ಪ್ರಥಮ ಪೀಕಿನೀಸ್ ನಾಯಿಗೆ ಇಂಗ್ಲಿಷರು ’ಲೂಟಿ’ ಎಂದು ಹೆಸರಿಟ್ಟರು. ಬ್ರಿಟಿಷರು ಚೀನಾ ದೇಶವನ್ನು ಲೂಟಿ ಹೊಡೆದದ್ದರ ಸಂಕೇತವಾಗಿ ಆ ಹೆಸರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
  • ಮುಕ್ತ ವ್ಯಾಪಾರ ಮತ್ತು ಸ್ವಾತಂತ್ರ್ಯದ ಹೆಸರಿಲ್ಲಿ ಪರಗ್ವೇ ದೇಶವನ್ನು 1870 ರಲ್ಲಿ ಸಂಪೂರ್ಣವಾಗಿ ನಾಶ ಮಾಡಲಾಯಿತು. ಅಲ್ಲಿಯವರೆಗೂ ಒಂದೇ ಒಂದು ನಯಾಪೈಸೆಯ ಸಾಲವನ್ನು ಮಾಡಿರದಿದ್ದ ಆ ದೇಶ ಐದು ವರ್ಷಗಳ ಯುದ್ಧದ ನಂತರ ಎಷ್ಟು ತತ್ತರಿಸಿತ್ತೆಂದರೆ ಪ್ರಥಮ ಬಾರಿಗೆ ಇಂಗ್ಲೆಂಡಿನಿಂದ ಸಾಲ ಪಡೆದು ಬ್ರೆಜಿಲ್, ಅರ್ಜೆಂಟಿನಾ ಮತ್ತು ಉರುಗ್ವೇ ದೇಶಕ್ಕೆ ನೀಡಿತು, ಕೊಲ್ಲಲ್ಟಟ್ಟ ದೇಶವೇ ತನ್ನ ಕೊಲೆಗಡುಕರಿಂದ ಹಣ ಸಾಲ ಪಡೆಯುವಂತ ಪರಿಸ್ಥಿತಿ ಆದಾಗಿತ್ತು.
  • ಕುಖ್ಯಾತ ಚಿತ್ರಹಿಂಸೆಯ ಯತನಾ ಶಿಬಿರಗಳನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಪ್ರಾರಂಭಿಸಿದವರು ಬ್ರಿಟಿಷರು. ಆನಂತರ 2ನೇ ವಿಶ್ವ ಮಹಾಯುದ್ಧದಲ್ಲಿ ಯಹೂದಿಯರನ್ನು ಕೊಲ್ಲಲು ಅದನ್ನು ಉಪಯೋಗಿಸಿದವರು ಜರ್ಮನರು.
  • 1936ರ ಒಲಂಪಿಕ್ಸ್ ಅನ್ನು ಅಯೀಜಿಸಿದ್ದು ಹಿಟ್ಲರ್. ಅಂದು ಫುಟ್‌ಬಾಲ್‌ನಲ್ಲಿ ಆಸ್ಟ್ರಿಯಾ ದೇಶವನ್ನು ಪೆರು ದೇಶ ಸೋಲಿಸಿತ್ತು. ಹಿಟ್ಲರ್‌ನ ಜನ್ಮಭೂಮಿ ಅಸ್ಟ್ರಿಯಾ ಆಗಿದ್ದರಿಂದ ಆ ಮ್ಯಾಚನ್ನೇ ಒಲಂಪಿಕ್ಸ್ ಸಮಿತಿ ರದ್ದುಗೊಳಿಸಿತ್ತು.
  • 1964ರಲ್ಲಿ ಟಾನ್ಕಿನ್ ಬೇ ಎಂಬಲ್ಲಿ ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕದ ಎರಡು ಹಡಗುಗಳ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿ ಅಮೆರಿಕ ವಿಯಟ್ನಾಮ್ ಮೇಲೆ ಯುದ್ಧ ಸಾರಿತು. ಸಾವಿರಾರು ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕಾದ ರಕ್ಷಣಾ ಸಚಿವ ಟಾನ್ಕಿನ್ ಬೇನಲ್ಲಿ ಯಾವುದೇ ದಾಳಿ ನಡೆದಿರಲಿಲ್ಲ ಎಂದು ಒಪ್ಪಿಕೊಂಡ. ನಲವತ್ತು ವರ್ಷಗಳ ನಂತರ ಇರಾಕ್ ಮೇಲೂ ಇಂತಹದ್ದೇ ಕುತಂತ್ರವನ್ನು ಅಮೆರಿಕಾ ನಡೆಸಿತು.

ಇದು ನಿಜವಾದ ಇತಿಹಾಸ, ಜನರನ್ನು ಬಲಿ ತೆಗೆದುಕೊಂಡ ಇತಿಹಾಸ, ಸಂಸ್ಕೃತಿಗಳನ್ನು ನಾಶ ಮಾಡಿದ ಇತಿಹಾಸ. ಆದರೆ ಪಟ್ಟಭದ್ರದ ದೃಷ್ಠಿಕೋನದಿಂದ ಬರೆದ ಇತಿಹಾಸದಲ್ಲಿ ಈ ಯಾವುದಕ್ಕೂ ಪ್ರಾಮುಖ್ಯತೆ ಇರುವುದಿಲ್ಲ.

30 ಜನವರಿ, 2008 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...