Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಮರೆ ಮಾಚಿದ ಇತಿಹಾಸದ ಬಗ್ಗೆ......

ಮರೆ ಮಾಚಿದ ಇತಿಹಾಸದ ಬಗ್ಗೆ……

- Advertisement -
- Advertisement -

ಗೌರಿ ಲಂಕೇಶ್ |

ಮೊನ್ನೆ ಎಡ್ಮಂಡ್ ಹಿಲೇರಿ ತೀರಿಹೋಗಿದ್ದರ ಬಗ್ಗೆ ವರದಿ ಮಾಡಿದ ಎಲ್ಲಾ ಮಾಧ್ಯಮಗಳು ಮೌಂಟ್ ಎವರೆಸ್ಟ್ ಬಗ್ಗೆಯೂ ಬರೆದಿದ್ದೆವು. ಆದರೆ ಬಹಳಷ್ಟು ಜನಕ್ಕೆ ಗೊತ್ತಿಲ್ಲದಿರುವುದೇನೆಂದರೆ ಯಾವುದನ್ನು ನಾವೆಲ್ಲ ಇವತ್ತು ಮೌಂಟ್ ಎವರೆಸ್ಟ್ ಎಂದು ಕರೆಯುತ್ತೇವೋ ಆ ಶಿಖರವನ್ನು ನೇಪಾಳದ ಜನ ಸಾಗರಮಾತಾ ಎಂದೂ, ಟಿಬೆಟ್‌ನ ಜನ ಚಿಮೋಲುಂಗ್ಮಾ ಎಂದೂ, ಭಾರತದ ಜನ ಗೌರಿಶಂಕರ ಎಂದೂ ಕರೆಯುತ್ತಿದ್ದರು.

ಆದರೆ ಯಾವಾಗ 1865ರಲ್ಲಿ ಅಂದಿನ ಬ್ರಿಟಿಷ್ ಸಾಮ್ರಾಜ್ಯದ ಸರ್ವೇಯರ್ ಜನರಲ್ ಆಫ್ ಇಂಡಿಯಾ ಸರ್ ಜಾರ್ಜ್ ಎವರೆಸ್ಟ್ ಎಂಬ ಅಧಿಕಾರಿ ಆ ಶಿಖರವನ್ನು ಅಳತೆ ಮಾಡಿದನೋ, ಆನಂತರ ಅದಕ್ಕೆ ಆತನ ಹೆಸರನ್ನೇ ಬ್ರಿಟಿಷರು ಇಟ್ಟರು. ಈಗ ಅದರ ಸುತ್ತಮುತ್ತಲಿನ ಜನ ಇಟ್ಟಿದ್ದ ಹೆಸರು ಮಾಯವಾಗಿ ಎಲ್ಲರಿಗೂ ಅದು ಮೌಂಟ್ ಎವರೆಸ್ಟ್ ಎಂದೇ ಪರಿಚಿತವಾಗಿದೆ.

ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ ಇತ್ತೀಚಿಗೆ ಎಡ್ವರ್ಡೋ ಗಲಿಯಾನೊ ಎಂಬ ಉರುಗ್ವೇ ದೇಶದ ಖ್ಯಾತ ಪತ್ರಕರ್ತ ಮತ್ತು ಬರಹಗರ ಜನರ ಇತಿಹಾಸವನ್ನು ಹೇಗೆ ಪಟ್ಟಭದ್ರ ಹಿತಾಸಕ್ತಿಗಳು ಮರೆಮಾಚುತ್ತವೆ ಎಂಬುದನ್ನು ಕುರಿತು ಒಂದು ಪುಸ್ತಕ ಬರೆದಿದ್ದಾರೆ.

ಗಲಿಯಾನೊ ಅಂತಹ ಹಲವು ಸತ್ಯಗಳನ್ನು ತಮ್ಮ ಪುಸ್ತಕದಲ್ಲಿ ಪಟ್ಟಿ ಮಾಡಿದ್ದಾರೆ. ವಿಶ್ವ ಇತಿಹಾಸವನ್ನರಿಯಲು ಅವು ನೆರವಾಗಬಹುದೆಂಬ ಕಾರಣಕ್ಕೆ ಇಲ್ಲಿ ಹಲವನ್ನು ನೀಡಿದ್ದೇನೆ.

  • ಅರ್ಜೆಂಟಿನಾದಲ್ಲಿರುವ ಅತಿ ಎತ್ತರದ ಸ್ಮಾರಕಕ್ಕೆ ಜನರಲ್ ರೋಕಾನ ಹೆಸರಿಡಲಾಗಿದೆ. ಈ ಪ್ರದೇಶಕ್ಕೆ ರೋಕಾನ ಕೊಡುಗೆ ಏನೆಂದರೆ ಪಟಗೊನಿಯಾದಲ್ಲಿದ್ದ ಬುಡಕಟ್ಟು ಜನರನ್ನು 19ನೇ ಶತಮಾನದಲ್ಲಿ ನಿರ್ನಾಮ ಮಾಡಿದ್ದು.
  • ಗುಲಾಮರನ್ನು ಸಾಗಿಸಲು ಬಳಸುತ್ತಿದ್ದ ಹಲವು ಹಡಗುಗಳ ಹೆಸರುಗಳು ಪೋಲ್ಫೇರ್, ಜೀಸಸ್, ವಿಶ್ವಾಸ, ಸಮಾನತೆ ಮತ್ತು ಸ್ನೇಹ ಎಂಬುದಾಗಿತ್ತು.
  • ಅಮೆರಿಕವನ್ನು ಸ್ಥಾಪಿಸಿದ ಇಬ್ಬರು ಹಿರಿಯರ ಹೆಸರುಗಳು ಅಧಿಕೃತ ಇತಿಹಾಸದಿಂದಲೇ ಮರೆಯಾಗಿವೆ. ಯಾಕೆಂದರೆ ಅವರಲ್ಲಿ ರಾಬರ್ಟ್ ಕಾರ್ಟರ್ ಎಂಬಾತ ತನಗಾಗಿ ದುಡಿಯುತ್ತಿದ್ದ ಕರಿಯರಿಗೂ ಸ್ವಾತಂತ್ರ್ಯ ನೀಡಿದ್ದ ಮತ್ತು ಗವರ್ನರ್ ಮೋರಿಸ್ ಎಂಬಾತ ಕರಿಯ ಗುಲಾಮರು ಇತರರಿಗಿಂತ ಕೀಳು ಎಂಬ ಅಂಶವನ್ನು ಸಂವಿಧಾನದಲ್ಲಿ ಸೇರಿಸುವುದನ್ನು ವಿರೋಧಿಸಿದ್ದ. ಅವರ ಈ ನಿಲುವಿನಿಂದಾಗಿಯೇ ಅವರಿಬ್ಬರನ್ನು ಈಗ ಸಾಮೂಹಿಕ ನೆನಪಿನಿಂದಲೇ ಗಡಿಪಾರು ಮಾಡಲಾಗಿದೆ.
  • 1234 ರಿಂದ ಏಳು ಶತಮಾನಗಳ ಕಾಲ ಚರ್ಚ್‌ಗಳಲ್ಲಿ ಮಹಿಳೆಯರು ಹಾಡುವುದನ್ನು ನಿಷೇಧಿಸಲಾಗಿತ್ತು. ಕಾರಣ ಅವರ ದನಿಗಳು ಅಪವಿತ್ರವೆಂದು ಭಾವಿಸಲಾಗಿತ್ತು.
  • 1793 ರ ಫ್ರೆಂಚ್ ಕ್ರಾಂತಿಯ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಮೂರು ಸೂತ್ರಗಳನ್ನು ಘೋಷಿಸಿದಾಗ ’ಪುರುಷರ ಹಕ್ಕುಗಳು’ ಎಂಬ ಕಾನೂನನ್ನು ಪ್ರಕಟಿಸಲಾಗಿತ್ತು. ಆಗ ಕ್ರಾಂತಿಕಾರಿ ತೀವ್ರವಾದಿ ಓಲಿಂಪಿಯಾ ದೆ ಗೂಬ್ ಎಂಬಾಕೆ ’ಮಹಿಳೆಯರ ಹಕ್ಕುಗಳು’ ಎಂಬ ಕಾನೂನನ್ನೂ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಳು. ಹಾಗೆ ಕೇಳಿದ್ದಕ್ಕೆ ಅವಳ ಶಿರಛ್ಛೇಧನೆ ಮಾಡಲಾಯಿತು.
  • ರಾಣಿ ಥಿಯೊಡೋರಾಳನ್ನು ಯಾರೂ ಕ್ರಾಂತಿಕಾರಿ, ಮಹಿಳಾವಾದಿ ಎಂದು ನೆನಪಿಸಿಕೊಳ್ಳುವುದಿಲ್ಲ. ಆದರೆ 1500 ವರ್ಷಗಳ ಹಿಂದೆ ಆಳಿದ್ದ ಈಕೆ ಮಹಿಳೆಯರಿಗೆ ಗರ್ಭಪಾತ ಮತ್ತು ವಿಚ್ಛೇದನಾ ಹಕ್ಕುಗಳನ್ನು ನೀಡಿದ್ದ ಪ್ರಥಮ ಮಹಿಳಾವಾದಿ.
  • ಚೀನಾದ ಪೀಕಿಂಗ್‌ನಿಂದ ಯುರೋಪಿಗೆ ತಂದ ಪ್ರಥಮ ಪೀಕಿನೀಸ್ ನಾಯಿಗೆ ಇಂಗ್ಲಿಷರು ’ಲೂಟಿ’ ಎಂದು ಹೆಸರಿಟ್ಟರು. ಬ್ರಿಟಿಷರು ಚೀನಾ ದೇಶವನ್ನು ಲೂಟಿ ಹೊಡೆದದ್ದರ ಸಂಕೇತವಾಗಿ ಆ ಹೆಸರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
  • ಮುಕ್ತ ವ್ಯಾಪಾರ ಮತ್ತು ಸ್ವಾತಂತ್ರ್ಯದ ಹೆಸರಿಲ್ಲಿ ಪರಗ್ವೇ ದೇಶವನ್ನು 1870 ರಲ್ಲಿ ಸಂಪೂರ್ಣವಾಗಿ ನಾಶ ಮಾಡಲಾಯಿತು. ಅಲ್ಲಿಯವರೆಗೂ ಒಂದೇ ಒಂದು ನಯಾಪೈಸೆಯ ಸಾಲವನ್ನು ಮಾಡಿರದಿದ್ದ ಆ ದೇಶ ಐದು ವರ್ಷಗಳ ಯುದ್ಧದ ನಂತರ ಎಷ್ಟು ತತ್ತರಿಸಿತ್ತೆಂದರೆ ಪ್ರಥಮ ಬಾರಿಗೆ ಇಂಗ್ಲೆಂಡಿನಿಂದ ಸಾಲ ಪಡೆದು ಬ್ರೆಜಿಲ್, ಅರ್ಜೆಂಟಿನಾ ಮತ್ತು ಉರುಗ್ವೇ ದೇಶಕ್ಕೆ ನೀಡಿತು, ಕೊಲ್ಲಲ್ಟಟ್ಟ ದೇಶವೇ ತನ್ನ ಕೊಲೆಗಡುಕರಿಂದ ಹಣ ಸಾಲ ಪಡೆಯುವಂತ ಪರಿಸ್ಥಿತಿ ಆದಾಗಿತ್ತು.
  • ಕುಖ್ಯಾತ ಚಿತ್ರಹಿಂಸೆಯ ಯತನಾ ಶಿಬಿರಗಳನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಪ್ರಾರಂಭಿಸಿದವರು ಬ್ರಿಟಿಷರು. ಆನಂತರ 2ನೇ ವಿಶ್ವ ಮಹಾಯುದ್ಧದಲ್ಲಿ ಯಹೂದಿಯರನ್ನು ಕೊಲ್ಲಲು ಅದನ್ನು ಉಪಯೋಗಿಸಿದವರು ಜರ್ಮನರು.
  • 1936ರ ಒಲಂಪಿಕ್ಸ್ ಅನ್ನು ಅಯೀಜಿಸಿದ್ದು ಹಿಟ್ಲರ್. ಅಂದು ಫುಟ್‌ಬಾಲ್‌ನಲ್ಲಿ ಆಸ್ಟ್ರಿಯಾ ದೇಶವನ್ನು ಪೆರು ದೇಶ ಸೋಲಿಸಿತ್ತು. ಹಿಟ್ಲರ್‌ನ ಜನ್ಮಭೂಮಿ ಅಸ್ಟ್ರಿಯಾ ಆಗಿದ್ದರಿಂದ ಆ ಮ್ಯಾಚನ್ನೇ ಒಲಂಪಿಕ್ಸ್ ಸಮಿತಿ ರದ್ದುಗೊಳಿಸಿತ್ತು.
  • 1964ರಲ್ಲಿ ಟಾನ್ಕಿನ್ ಬೇ ಎಂಬಲ್ಲಿ ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕದ ಎರಡು ಹಡಗುಗಳ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿ ಅಮೆರಿಕ ವಿಯಟ್ನಾಮ್ ಮೇಲೆ ಯುದ್ಧ ಸಾರಿತು. ಸಾವಿರಾರು ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕಾದ ರಕ್ಷಣಾ ಸಚಿವ ಟಾನ್ಕಿನ್ ಬೇನಲ್ಲಿ ಯಾವುದೇ ದಾಳಿ ನಡೆದಿರಲಿಲ್ಲ ಎಂದು ಒಪ್ಪಿಕೊಂಡ. ನಲವತ್ತು ವರ್ಷಗಳ ನಂತರ ಇರಾಕ್ ಮೇಲೂ ಇಂತಹದ್ದೇ ಕುತಂತ್ರವನ್ನು ಅಮೆರಿಕಾ ನಡೆಸಿತು.

ಇದು ನಿಜವಾದ ಇತಿಹಾಸ, ಜನರನ್ನು ಬಲಿ ತೆಗೆದುಕೊಂಡ ಇತಿಹಾಸ, ಸಂಸ್ಕೃತಿಗಳನ್ನು ನಾಶ ಮಾಡಿದ ಇತಿಹಾಸ. ಆದರೆ ಪಟ್ಟಭದ್ರದ ದೃಷ್ಠಿಕೋನದಿಂದ ಬರೆದ ಇತಿಹಾಸದಲ್ಲಿ ಈ ಯಾವುದಕ್ಕೂ ಪ್ರಾಮುಖ್ಯತೆ ಇರುವುದಿಲ್ಲ.

30 ಜನವರಿ, 2008 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...