Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಮರೆ ಮಾಚಿದ ಇತಿಹಾಸದ ಬಗ್ಗೆ......

ಮರೆ ಮಾಚಿದ ಇತಿಹಾಸದ ಬಗ್ಗೆ……

- Advertisement -
- Advertisement -

ಗೌರಿ ಲಂಕೇಶ್ |

ಮೊನ್ನೆ ಎಡ್ಮಂಡ್ ಹಿಲೇರಿ ತೀರಿಹೋಗಿದ್ದರ ಬಗ್ಗೆ ವರದಿ ಮಾಡಿದ ಎಲ್ಲಾ ಮಾಧ್ಯಮಗಳು ಮೌಂಟ್ ಎವರೆಸ್ಟ್ ಬಗ್ಗೆಯೂ ಬರೆದಿದ್ದೆವು. ಆದರೆ ಬಹಳಷ್ಟು ಜನಕ್ಕೆ ಗೊತ್ತಿಲ್ಲದಿರುವುದೇನೆಂದರೆ ಯಾವುದನ್ನು ನಾವೆಲ್ಲ ಇವತ್ತು ಮೌಂಟ್ ಎವರೆಸ್ಟ್ ಎಂದು ಕರೆಯುತ್ತೇವೋ ಆ ಶಿಖರವನ್ನು ನೇಪಾಳದ ಜನ ಸಾಗರಮಾತಾ ಎಂದೂ, ಟಿಬೆಟ್‌ನ ಜನ ಚಿಮೋಲುಂಗ್ಮಾ ಎಂದೂ, ಭಾರತದ ಜನ ಗೌರಿಶಂಕರ ಎಂದೂ ಕರೆಯುತ್ತಿದ್ದರು.

ಆದರೆ ಯಾವಾಗ 1865ರಲ್ಲಿ ಅಂದಿನ ಬ್ರಿಟಿಷ್ ಸಾಮ್ರಾಜ್ಯದ ಸರ್ವೇಯರ್ ಜನರಲ್ ಆಫ್ ಇಂಡಿಯಾ ಸರ್ ಜಾರ್ಜ್ ಎವರೆಸ್ಟ್ ಎಂಬ ಅಧಿಕಾರಿ ಆ ಶಿಖರವನ್ನು ಅಳತೆ ಮಾಡಿದನೋ, ಆನಂತರ ಅದಕ್ಕೆ ಆತನ ಹೆಸರನ್ನೇ ಬ್ರಿಟಿಷರು ಇಟ್ಟರು. ಈಗ ಅದರ ಸುತ್ತಮುತ್ತಲಿನ ಜನ ಇಟ್ಟಿದ್ದ ಹೆಸರು ಮಾಯವಾಗಿ ಎಲ್ಲರಿಗೂ ಅದು ಮೌಂಟ್ ಎವರೆಸ್ಟ್ ಎಂದೇ ಪರಿಚಿತವಾಗಿದೆ.

ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ ಇತ್ತೀಚಿಗೆ ಎಡ್ವರ್ಡೋ ಗಲಿಯಾನೊ ಎಂಬ ಉರುಗ್ವೇ ದೇಶದ ಖ್ಯಾತ ಪತ್ರಕರ್ತ ಮತ್ತು ಬರಹಗರ ಜನರ ಇತಿಹಾಸವನ್ನು ಹೇಗೆ ಪಟ್ಟಭದ್ರ ಹಿತಾಸಕ್ತಿಗಳು ಮರೆಮಾಚುತ್ತವೆ ಎಂಬುದನ್ನು ಕುರಿತು ಒಂದು ಪುಸ್ತಕ ಬರೆದಿದ್ದಾರೆ.

ಗಲಿಯಾನೊ ಅಂತಹ ಹಲವು ಸತ್ಯಗಳನ್ನು ತಮ್ಮ ಪುಸ್ತಕದಲ್ಲಿ ಪಟ್ಟಿ ಮಾಡಿದ್ದಾರೆ. ವಿಶ್ವ ಇತಿಹಾಸವನ್ನರಿಯಲು ಅವು ನೆರವಾಗಬಹುದೆಂಬ ಕಾರಣಕ್ಕೆ ಇಲ್ಲಿ ಹಲವನ್ನು ನೀಡಿದ್ದೇನೆ.

  • ಅರ್ಜೆಂಟಿನಾದಲ್ಲಿರುವ ಅತಿ ಎತ್ತರದ ಸ್ಮಾರಕಕ್ಕೆ ಜನರಲ್ ರೋಕಾನ ಹೆಸರಿಡಲಾಗಿದೆ. ಈ ಪ್ರದೇಶಕ್ಕೆ ರೋಕಾನ ಕೊಡುಗೆ ಏನೆಂದರೆ ಪಟಗೊನಿಯಾದಲ್ಲಿದ್ದ ಬುಡಕಟ್ಟು ಜನರನ್ನು 19ನೇ ಶತಮಾನದಲ್ಲಿ ನಿರ್ನಾಮ ಮಾಡಿದ್ದು.
  • ಗುಲಾಮರನ್ನು ಸಾಗಿಸಲು ಬಳಸುತ್ತಿದ್ದ ಹಲವು ಹಡಗುಗಳ ಹೆಸರುಗಳು ಪೋಲ್ಫೇರ್, ಜೀಸಸ್, ವಿಶ್ವಾಸ, ಸಮಾನತೆ ಮತ್ತು ಸ್ನೇಹ ಎಂಬುದಾಗಿತ್ತು.
  • ಅಮೆರಿಕವನ್ನು ಸ್ಥಾಪಿಸಿದ ಇಬ್ಬರು ಹಿರಿಯರ ಹೆಸರುಗಳು ಅಧಿಕೃತ ಇತಿಹಾಸದಿಂದಲೇ ಮರೆಯಾಗಿವೆ. ಯಾಕೆಂದರೆ ಅವರಲ್ಲಿ ರಾಬರ್ಟ್ ಕಾರ್ಟರ್ ಎಂಬಾತ ತನಗಾಗಿ ದುಡಿಯುತ್ತಿದ್ದ ಕರಿಯರಿಗೂ ಸ್ವಾತಂತ್ರ್ಯ ನೀಡಿದ್ದ ಮತ್ತು ಗವರ್ನರ್ ಮೋರಿಸ್ ಎಂಬಾತ ಕರಿಯ ಗುಲಾಮರು ಇತರರಿಗಿಂತ ಕೀಳು ಎಂಬ ಅಂಶವನ್ನು ಸಂವಿಧಾನದಲ್ಲಿ ಸೇರಿಸುವುದನ್ನು ವಿರೋಧಿಸಿದ್ದ. ಅವರ ಈ ನಿಲುವಿನಿಂದಾಗಿಯೇ ಅವರಿಬ್ಬರನ್ನು ಈಗ ಸಾಮೂಹಿಕ ನೆನಪಿನಿಂದಲೇ ಗಡಿಪಾರು ಮಾಡಲಾಗಿದೆ.
  • 1234 ರಿಂದ ಏಳು ಶತಮಾನಗಳ ಕಾಲ ಚರ್ಚ್‌ಗಳಲ್ಲಿ ಮಹಿಳೆಯರು ಹಾಡುವುದನ್ನು ನಿಷೇಧಿಸಲಾಗಿತ್ತು. ಕಾರಣ ಅವರ ದನಿಗಳು ಅಪವಿತ್ರವೆಂದು ಭಾವಿಸಲಾಗಿತ್ತು.
  • 1793 ರ ಫ್ರೆಂಚ್ ಕ್ರಾಂತಿಯ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಮೂರು ಸೂತ್ರಗಳನ್ನು ಘೋಷಿಸಿದಾಗ ’ಪುರುಷರ ಹಕ್ಕುಗಳು’ ಎಂಬ ಕಾನೂನನ್ನು ಪ್ರಕಟಿಸಲಾಗಿತ್ತು. ಆಗ ಕ್ರಾಂತಿಕಾರಿ ತೀವ್ರವಾದಿ ಓಲಿಂಪಿಯಾ ದೆ ಗೂಬ್ ಎಂಬಾಕೆ ’ಮಹಿಳೆಯರ ಹಕ್ಕುಗಳು’ ಎಂಬ ಕಾನೂನನ್ನೂ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಳು. ಹಾಗೆ ಕೇಳಿದ್ದಕ್ಕೆ ಅವಳ ಶಿರಛ್ಛೇಧನೆ ಮಾಡಲಾಯಿತು.
  • ರಾಣಿ ಥಿಯೊಡೋರಾಳನ್ನು ಯಾರೂ ಕ್ರಾಂತಿಕಾರಿ, ಮಹಿಳಾವಾದಿ ಎಂದು ನೆನಪಿಸಿಕೊಳ್ಳುವುದಿಲ್ಲ. ಆದರೆ 1500 ವರ್ಷಗಳ ಹಿಂದೆ ಆಳಿದ್ದ ಈಕೆ ಮಹಿಳೆಯರಿಗೆ ಗರ್ಭಪಾತ ಮತ್ತು ವಿಚ್ಛೇದನಾ ಹಕ್ಕುಗಳನ್ನು ನೀಡಿದ್ದ ಪ್ರಥಮ ಮಹಿಳಾವಾದಿ.
  • ಚೀನಾದ ಪೀಕಿಂಗ್‌ನಿಂದ ಯುರೋಪಿಗೆ ತಂದ ಪ್ರಥಮ ಪೀಕಿನೀಸ್ ನಾಯಿಗೆ ಇಂಗ್ಲಿಷರು ’ಲೂಟಿ’ ಎಂದು ಹೆಸರಿಟ್ಟರು. ಬ್ರಿಟಿಷರು ಚೀನಾ ದೇಶವನ್ನು ಲೂಟಿ ಹೊಡೆದದ್ದರ ಸಂಕೇತವಾಗಿ ಆ ಹೆಸರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
  • ಮುಕ್ತ ವ್ಯಾಪಾರ ಮತ್ತು ಸ್ವಾತಂತ್ರ್ಯದ ಹೆಸರಿಲ್ಲಿ ಪರಗ್ವೇ ದೇಶವನ್ನು 1870 ರಲ್ಲಿ ಸಂಪೂರ್ಣವಾಗಿ ನಾಶ ಮಾಡಲಾಯಿತು. ಅಲ್ಲಿಯವರೆಗೂ ಒಂದೇ ಒಂದು ನಯಾಪೈಸೆಯ ಸಾಲವನ್ನು ಮಾಡಿರದಿದ್ದ ಆ ದೇಶ ಐದು ವರ್ಷಗಳ ಯುದ್ಧದ ನಂತರ ಎಷ್ಟು ತತ್ತರಿಸಿತ್ತೆಂದರೆ ಪ್ರಥಮ ಬಾರಿಗೆ ಇಂಗ್ಲೆಂಡಿನಿಂದ ಸಾಲ ಪಡೆದು ಬ್ರೆಜಿಲ್, ಅರ್ಜೆಂಟಿನಾ ಮತ್ತು ಉರುಗ್ವೇ ದೇಶಕ್ಕೆ ನೀಡಿತು, ಕೊಲ್ಲಲ್ಟಟ್ಟ ದೇಶವೇ ತನ್ನ ಕೊಲೆಗಡುಕರಿಂದ ಹಣ ಸಾಲ ಪಡೆಯುವಂತ ಪರಿಸ್ಥಿತಿ ಆದಾಗಿತ್ತು.
  • ಕುಖ್ಯಾತ ಚಿತ್ರಹಿಂಸೆಯ ಯತನಾ ಶಿಬಿರಗಳನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಪ್ರಾರಂಭಿಸಿದವರು ಬ್ರಿಟಿಷರು. ಆನಂತರ 2ನೇ ವಿಶ್ವ ಮಹಾಯುದ್ಧದಲ್ಲಿ ಯಹೂದಿಯರನ್ನು ಕೊಲ್ಲಲು ಅದನ್ನು ಉಪಯೋಗಿಸಿದವರು ಜರ್ಮನರು.
  • 1936ರ ಒಲಂಪಿಕ್ಸ್ ಅನ್ನು ಅಯೀಜಿಸಿದ್ದು ಹಿಟ್ಲರ್. ಅಂದು ಫುಟ್‌ಬಾಲ್‌ನಲ್ಲಿ ಆಸ್ಟ್ರಿಯಾ ದೇಶವನ್ನು ಪೆರು ದೇಶ ಸೋಲಿಸಿತ್ತು. ಹಿಟ್ಲರ್‌ನ ಜನ್ಮಭೂಮಿ ಅಸ್ಟ್ರಿಯಾ ಆಗಿದ್ದರಿಂದ ಆ ಮ್ಯಾಚನ್ನೇ ಒಲಂಪಿಕ್ಸ್ ಸಮಿತಿ ರದ್ದುಗೊಳಿಸಿತ್ತು.
  • 1964ರಲ್ಲಿ ಟಾನ್ಕಿನ್ ಬೇ ಎಂಬಲ್ಲಿ ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕದ ಎರಡು ಹಡಗುಗಳ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿ ಅಮೆರಿಕ ವಿಯಟ್ನಾಮ್ ಮೇಲೆ ಯುದ್ಧ ಸಾರಿತು. ಸಾವಿರಾರು ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕಾದ ರಕ್ಷಣಾ ಸಚಿವ ಟಾನ್ಕಿನ್ ಬೇನಲ್ಲಿ ಯಾವುದೇ ದಾಳಿ ನಡೆದಿರಲಿಲ್ಲ ಎಂದು ಒಪ್ಪಿಕೊಂಡ. ನಲವತ್ತು ವರ್ಷಗಳ ನಂತರ ಇರಾಕ್ ಮೇಲೂ ಇಂತಹದ್ದೇ ಕುತಂತ್ರವನ್ನು ಅಮೆರಿಕಾ ನಡೆಸಿತು.

ಇದು ನಿಜವಾದ ಇತಿಹಾಸ, ಜನರನ್ನು ಬಲಿ ತೆಗೆದುಕೊಂಡ ಇತಿಹಾಸ, ಸಂಸ್ಕೃತಿಗಳನ್ನು ನಾಶ ಮಾಡಿದ ಇತಿಹಾಸ. ಆದರೆ ಪಟ್ಟಭದ್ರದ ದೃಷ್ಠಿಕೋನದಿಂದ ಬರೆದ ಇತಿಹಾಸದಲ್ಲಿ ಈ ಯಾವುದಕ್ಕೂ ಪ್ರಾಮುಖ್ಯತೆ ಇರುವುದಿಲ್ಲ.

30 ಜನವರಿ, 2008 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...