Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಮರೆ ಮಾಚಿದ ಇತಿಹಾಸದ ಬಗ್ಗೆ......

ಮರೆ ಮಾಚಿದ ಇತಿಹಾಸದ ಬಗ್ಗೆ……

- Advertisement -
- Advertisement -

ಗೌರಿ ಲಂಕೇಶ್ |

ಮೊನ್ನೆ ಎಡ್ಮಂಡ್ ಹಿಲೇರಿ ತೀರಿಹೋಗಿದ್ದರ ಬಗ್ಗೆ ವರದಿ ಮಾಡಿದ ಎಲ್ಲಾ ಮಾಧ್ಯಮಗಳು ಮೌಂಟ್ ಎವರೆಸ್ಟ್ ಬಗ್ಗೆಯೂ ಬರೆದಿದ್ದೆವು. ಆದರೆ ಬಹಳಷ್ಟು ಜನಕ್ಕೆ ಗೊತ್ತಿಲ್ಲದಿರುವುದೇನೆಂದರೆ ಯಾವುದನ್ನು ನಾವೆಲ್ಲ ಇವತ್ತು ಮೌಂಟ್ ಎವರೆಸ್ಟ್ ಎಂದು ಕರೆಯುತ್ತೇವೋ ಆ ಶಿಖರವನ್ನು ನೇಪಾಳದ ಜನ ಸಾಗರಮಾತಾ ಎಂದೂ, ಟಿಬೆಟ್‌ನ ಜನ ಚಿಮೋಲುಂಗ್ಮಾ ಎಂದೂ, ಭಾರತದ ಜನ ಗೌರಿಶಂಕರ ಎಂದೂ ಕರೆಯುತ್ತಿದ್ದರು.

ಆದರೆ ಯಾವಾಗ 1865ರಲ್ಲಿ ಅಂದಿನ ಬ್ರಿಟಿಷ್ ಸಾಮ್ರಾಜ್ಯದ ಸರ್ವೇಯರ್ ಜನರಲ್ ಆಫ್ ಇಂಡಿಯಾ ಸರ್ ಜಾರ್ಜ್ ಎವರೆಸ್ಟ್ ಎಂಬ ಅಧಿಕಾರಿ ಆ ಶಿಖರವನ್ನು ಅಳತೆ ಮಾಡಿದನೋ, ಆನಂತರ ಅದಕ್ಕೆ ಆತನ ಹೆಸರನ್ನೇ ಬ್ರಿಟಿಷರು ಇಟ್ಟರು. ಈಗ ಅದರ ಸುತ್ತಮುತ್ತಲಿನ ಜನ ಇಟ್ಟಿದ್ದ ಹೆಸರು ಮಾಯವಾಗಿ ಎಲ್ಲರಿಗೂ ಅದು ಮೌಂಟ್ ಎವರೆಸ್ಟ್ ಎಂದೇ ಪರಿಚಿತವಾಗಿದೆ.

ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ ಇತ್ತೀಚಿಗೆ ಎಡ್ವರ್ಡೋ ಗಲಿಯಾನೊ ಎಂಬ ಉರುಗ್ವೇ ದೇಶದ ಖ್ಯಾತ ಪತ್ರಕರ್ತ ಮತ್ತು ಬರಹಗರ ಜನರ ಇತಿಹಾಸವನ್ನು ಹೇಗೆ ಪಟ್ಟಭದ್ರ ಹಿತಾಸಕ್ತಿಗಳು ಮರೆಮಾಚುತ್ತವೆ ಎಂಬುದನ್ನು ಕುರಿತು ಒಂದು ಪುಸ್ತಕ ಬರೆದಿದ್ದಾರೆ.

ಗಲಿಯಾನೊ ಅಂತಹ ಹಲವು ಸತ್ಯಗಳನ್ನು ತಮ್ಮ ಪುಸ್ತಕದಲ್ಲಿ ಪಟ್ಟಿ ಮಾಡಿದ್ದಾರೆ. ವಿಶ್ವ ಇತಿಹಾಸವನ್ನರಿಯಲು ಅವು ನೆರವಾಗಬಹುದೆಂಬ ಕಾರಣಕ್ಕೆ ಇಲ್ಲಿ ಹಲವನ್ನು ನೀಡಿದ್ದೇನೆ.

  • ಅರ್ಜೆಂಟಿನಾದಲ್ಲಿರುವ ಅತಿ ಎತ್ತರದ ಸ್ಮಾರಕಕ್ಕೆ ಜನರಲ್ ರೋಕಾನ ಹೆಸರಿಡಲಾಗಿದೆ. ಈ ಪ್ರದೇಶಕ್ಕೆ ರೋಕಾನ ಕೊಡುಗೆ ಏನೆಂದರೆ ಪಟಗೊನಿಯಾದಲ್ಲಿದ್ದ ಬುಡಕಟ್ಟು ಜನರನ್ನು 19ನೇ ಶತಮಾನದಲ್ಲಿ ನಿರ್ನಾಮ ಮಾಡಿದ್ದು.
  • ಗುಲಾಮರನ್ನು ಸಾಗಿಸಲು ಬಳಸುತ್ತಿದ್ದ ಹಲವು ಹಡಗುಗಳ ಹೆಸರುಗಳು ಪೋಲ್ಫೇರ್, ಜೀಸಸ್, ವಿಶ್ವಾಸ, ಸಮಾನತೆ ಮತ್ತು ಸ್ನೇಹ ಎಂಬುದಾಗಿತ್ತು.
  • ಅಮೆರಿಕವನ್ನು ಸ್ಥಾಪಿಸಿದ ಇಬ್ಬರು ಹಿರಿಯರ ಹೆಸರುಗಳು ಅಧಿಕೃತ ಇತಿಹಾಸದಿಂದಲೇ ಮರೆಯಾಗಿವೆ. ಯಾಕೆಂದರೆ ಅವರಲ್ಲಿ ರಾಬರ್ಟ್ ಕಾರ್ಟರ್ ಎಂಬಾತ ತನಗಾಗಿ ದುಡಿಯುತ್ತಿದ್ದ ಕರಿಯರಿಗೂ ಸ್ವಾತಂತ್ರ್ಯ ನೀಡಿದ್ದ ಮತ್ತು ಗವರ್ನರ್ ಮೋರಿಸ್ ಎಂಬಾತ ಕರಿಯ ಗುಲಾಮರು ಇತರರಿಗಿಂತ ಕೀಳು ಎಂಬ ಅಂಶವನ್ನು ಸಂವಿಧಾನದಲ್ಲಿ ಸೇರಿಸುವುದನ್ನು ವಿರೋಧಿಸಿದ್ದ. ಅವರ ಈ ನಿಲುವಿನಿಂದಾಗಿಯೇ ಅವರಿಬ್ಬರನ್ನು ಈಗ ಸಾಮೂಹಿಕ ನೆನಪಿನಿಂದಲೇ ಗಡಿಪಾರು ಮಾಡಲಾಗಿದೆ.
  • 1234 ರಿಂದ ಏಳು ಶತಮಾನಗಳ ಕಾಲ ಚರ್ಚ್‌ಗಳಲ್ಲಿ ಮಹಿಳೆಯರು ಹಾಡುವುದನ್ನು ನಿಷೇಧಿಸಲಾಗಿತ್ತು. ಕಾರಣ ಅವರ ದನಿಗಳು ಅಪವಿತ್ರವೆಂದು ಭಾವಿಸಲಾಗಿತ್ತು.
  • 1793 ರ ಫ್ರೆಂಚ್ ಕ್ರಾಂತಿಯ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಮೂರು ಸೂತ್ರಗಳನ್ನು ಘೋಷಿಸಿದಾಗ ’ಪುರುಷರ ಹಕ್ಕುಗಳು’ ಎಂಬ ಕಾನೂನನ್ನು ಪ್ರಕಟಿಸಲಾಗಿತ್ತು. ಆಗ ಕ್ರಾಂತಿಕಾರಿ ತೀವ್ರವಾದಿ ಓಲಿಂಪಿಯಾ ದೆ ಗೂಬ್ ಎಂಬಾಕೆ ’ಮಹಿಳೆಯರ ಹಕ್ಕುಗಳು’ ಎಂಬ ಕಾನೂನನ್ನೂ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಳು. ಹಾಗೆ ಕೇಳಿದ್ದಕ್ಕೆ ಅವಳ ಶಿರಛ್ಛೇಧನೆ ಮಾಡಲಾಯಿತು.
  • ರಾಣಿ ಥಿಯೊಡೋರಾಳನ್ನು ಯಾರೂ ಕ್ರಾಂತಿಕಾರಿ, ಮಹಿಳಾವಾದಿ ಎಂದು ನೆನಪಿಸಿಕೊಳ್ಳುವುದಿಲ್ಲ. ಆದರೆ 1500 ವರ್ಷಗಳ ಹಿಂದೆ ಆಳಿದ್ದ ಈಕೆ ಮಹಿಳೆಯರಿಗೆ ಗರ್ಭಪಾತ ಮತ್ತು ವಿಚ್ಛೇದನಾ ಹಕ್ಕುಗಳನ್ನು ನೀಡಿದ್ದ ಪ್ರಥಮ ಮಹಿಳಾವಾದಿ.
  • ಚೀನಾದ ಪೀಕಿಂಗ್‌ನಿಂದ ಯುರೋಪಿಗೆ ತಂದ ಪ್ರಥಮ ಪೀಕಿನೀಸ್ ನಾಯಿಗೆ ಇಂಗ್ಲಿಷರು ’ಲೂಟಿ’ ಎಂದು ಹೆಸರಿಟ್ಟರು. ಬ್ರಿಟಿಷರು ಚೀನಾ ದೇಶವನ್ನು ಲೂಟಿ ಹೊಡೆದದ್ದರ ಸಂಕೇತವಾಗಿ ಆ ಹೆಸರು ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.
  • ಮುಕ್ತ ವ್ಯಾಪಾರ ಮತ್ತು ಸ್ವಾತಂತ್ರ್ಯದ ಹೆಸರಿಲ್ಲಿ ಪರಗ್ವೇ ದೇಶವನ್ನು 1870 ರಲ್ಲಿ ಸಂಪೂರ್ಣವಾಗಿ ನಾಶ ಮಾಡಲಾಯಿತು. ಅಲ್ಲಿಯವರೆಗೂ ಒಂದೇ ಒಂದು ನಯಾಪೈಸೆಯ ಸಾಲವನ್ನು ಮಾಡಿರದಿದ್ದ ಆ ದೇಶ ಐದು ವರ್ಷಗಳ ಯುದ್ಧದ ನಂತರ ಎಷ್ಟು ತತ್ತರಿಸಿತ್ತೆಂದರೆ ಪ್ರಥಮ ಬಾರಿಗೆ ಇಂಗ್ಲೆಂಡಿನಿಂದ ಸಾಲ ಪಡೆದು ಬ್ರೆಜಿಲ್, ಅರ್ಜೆಂಟಿನಾ ಮತ್ತು ಉರುಗ್ವೇ ದೇಶಕ್ಕೆ ನೀಡಿತು, ಕೊಲ್ಲಲ್ಟಟ್ಟ ದೇಶವೇ ತನ್ನ ಕೊಲೆಗಡುಕರಿಂದ ಹಣ ಸಾಲ ಪಡೆಯುವಂತ ಪರಿಸ್ಥಿತಿ ಆದಾಗಿತ್ತು.
  • ಕುಖ್ಯಾತ ಚಿತ್ರಹಿಂಸೆಯ ಯತನಾ ಶಿಬಿರಗಳನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಪ್ರಾರಂಭಿಸಿದವರು ಬ್ರಿಟಿಷರು. ಆನಂತರ 2ನೇ ವಿಶ್ವ ಮಹಾಯುದ್ಧದಲ್ಲಿ ಯಹೂದಿಯರನ್ನು ಕೊಲ್ಲಲು ಅದನ್ನು ಉಪಯೋಗಿಸಿದವರು ಜರ್ಮನರು.
  • 1936ರ ಒಲಂಪಿಕ್ಸ್ ಅನ್ನು ಅಯೀಜಿಸಿದ್ದು ಹಿಟ್ಲರ್. ಅಂದು ಫುಟ್‌ಬಾಲ್‌ನಲ್ಲಿ ಆಸ್ಟ್ರಿಯಾ ದೇಶವನ್ನು ಪೆರು ದೇಶ ಸೋಲಿಸಿತ್ತು. ಹಿಟ್ಲರ್‌ನ ಜನ್ಮಭೂಮಿ ಅಸ್ಟ್ರಿಯಾ ಆಗಿದ್ದರಿಂದ ಆ ಮ್ಯಾಚನ್ನೇ ಒಲಂಪಿಕ್ಸ್ ಸಮಿತಿ ರದ್ದುಗೊಳಿಸಿತ್ತು.
  • 1964ರಲ್ಲಿ ಟಾನ್ಕಿನ್ ಬೇ ಎಂಬಲ್ಲಿ ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕದ ಎರಡು ಹಡಗುಗಳ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿ ಅಮೆರಿಕ ವಿಯಟ್ನಾಮ್ ಮೇಲೆ ಯುದ್ಧ ಸಾರಿತು. ಸಾವಿರಾರು ವಿಯಟ್ನಾಮ್ ಜನರನ್ನು ಹತ್ಯೆ ಮಾಡಿದ ನಂತರ ಅಮೆರಿಕಾದ ರಕ್ಷಣಾ ಸಚಿವ ಟಾನ್ಕಿನ್ ಬೇನಲ್ಲಿ ಯಾವುದೇ ದಾಳಿ ನಡೆದಿರಲಿಲ್ಲ ಎಂದು ಒಪ್ಪಿಕೊಂಡ. ನಲವತ್ತು ವರ್ಷಗಳ ನಂತರ ಇರಾಕ್ ಮೇಲೂ ಇಂತಹದ್ದೇ ಕುತಂತ್ರವನ್ನು ಅಮೆರಿಕಾ ನಡೆಸಿತು.

ಇದು ನಿಜವಾದ ಇತಿಹಾಸ, ಜನರನ್ನು ಬಲಿ ತೆಗೆದುಕೊಂಡ ಇತಿಹಾಸ, ಸಂಸ್ಕೃತಿಗಳನ್ನು ನಾಶ ಮಾಡಿದ ಇತಿಹಾಸ. ಆದರೆ ಪಟ್ಟಭದ್ರದ ದೃಷ್ಠಿಕೋನದಿಂದ ಬರೆದ ಇತಿಹಾಸದಲ್ಲಿ ಈ ಯಾವುದಕ್ಕೂ ಪ್ರಾಮುಖ್ಯತೆ ಇರುವುದಿಲ್ಲ.

30 ಜನವರಿ, 2008 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...