Homeಕರ್ನಾಟಕಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

ಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಒಂದು ಕಡೆ ಗಣಿಗಾರಿಕೆ ನಡೆಸಲು ಸಮೃದ್ಧ ಜಮೀನನ್ನು ಅರ್ಪಿಸುವುದು. ಸುಂದರ ಕಾಡು ಕಡಿದು ಅಭಿವೃದ್ದಿ ಎನ್ನುವುದು. ಮರ ಉರುಳಿಸಿ ರಸ್ತೆ ಮಾಡುವುದು. ಕೊನೆಗೆ ಮಳೆ ಬರುತ್ತಿಲ್ಲ ಹಾಗಾಗಿ ಸಕಾಲದಲ್ಲಿ ಮಳೆ ಬರಲೆಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಸುತ್ತೋಲೆ ಹೊರಡಿಸುವುದು. ಡೌಟೇ ಬೇಡ ಈ ಸರ್ಕಾರಕ್ಕೆ ಸಂಪೂರ್ಣ ತೆಲೆಕೆಟ್ಟು ಹೋಗಿದೆ.

ಮೇ 31ರಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬೆಳೆಯಾಗದೇ, ರಾಜ್ಯದ ಜನತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಹಾಗಾಗಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಮೇ 6 ರಂದು ಬ್ರಾಹ್ಮೀ ಮೂಹೂರ್ತದೊಂದಿಗೆ ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಿದೆ. 10,001/- ರೂಗಳು ವೆಚ್ಚ ಮೀರದಂತೆ ಆಯಾಯಾ ದೇವಾಲಯಗಳ ನಿಧಿಯಿಂದ ಭರಿಸಲು ಅನುಮತಿ ಸಹ ನೀಡಿದೆ

ದೇವರು ಧರ್ಮಗಳನ್ನು ನಂಬುವು ಮತ್ತು ಪಾಲಿಸುವ, ಪೂಜಿಸುವ ಹಕ್ಕನ್ನು ನಮ್ಮ ಸಂವಿಧಾನ ಎಲ್ಲರಿಗೂ ನೀಡಿದೆ. ಆದರೆ ಅದು ಖಾಸಗಿ ಹಕ್ಕಾಗಿದ್ದು ಖಾಸಗಿ ಸ್ಥಳಗಳಲ್ಲಿ ಯಾರು ಎಷ್ಟು ಬೇಕಾದರೂ ಹೋಮ ಪೂಜೆ ಮಾಡಿದರೆ ನಮಗೇನು ತೊಂದರೆಯಿಲ್ಲ. ಆದರೆ ಚುನಾಯಿತ ಸರ್ಕಾರವೊಂದು, ಸರ್ಕಾರಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಈ ರೀತಿಯ ಆಚರಣೆ ಮಾಡಲು ಆದೇಶ ನೀಡಿರುವುದು ಎಲ್ಲಾ ವಿಧಗಳಿಂದಲೂ ಒಪ್ಪುವಂತಹದಲ್ಲ. ಇದು ಮೌಡ್ಯದ ಪರಮಾವಧಿ ಮಾತ್ರವಲ್ಲ ಇದರಿಂದ ಮಳೆ ಬರದಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ಮರೆಮಾಚಿ ಜನರನ್ನು ದಿಕ್ಕುತಪ್ಪಿಸುವ ಹುನ್ನಾರವೂ ಇದರಿಂದ ಅಡಗಿದೆ.

ಜನರು ಹಲವು ಊರಿನಲ್ಲಿ ಅವರ ನಂಬಿಕೆಗನುಗುಣವಾಗಿ ಈ ರೀತಿ ಮಳೆಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಹೆಚ್ಚು ಖರ್ಚಿಲ್ಲದೇ ತಮಗೆ ಗೊತ್ತಿರುವ ವಿಧಾನಗಳಲ್ಲಿ ಅವರು ಪೂಜೆ ಮಾಡುತ್ತಾರೆ. ಹೀಗಿರುವಾಗ ಮತ್ತೆ ಸರ್ಕಾರ ದೊಡ್ಡ ಮಟ್ಟದಲ್ಲಿ ಈ ರೀತಿ ಪೂಜೆಗೆ ಆದೇಶ ನೀಡುವುದು ಸರಿಯಲ್ಲ. ಅದೇ ಹಣದಿಂದ ಕೆರೆ ಹೂಳೆತ್ತಲು ಬಳಸಿದರೆ ಒಂದಷ್ಟು ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂಬ ಸಾಮಾನ್ಯ ಜ್ಞಾನವೂ ನಮ್ಮ ಸರ್ಕಾರಕ್ಕಿಲ್ಲ.

ಇಷ್ಟೆಲ್ಲಾ ಅವಾಂತರುಗಳು ನಡೆಯುತ್ತಿದ್ದರೆ ಅದರ ಬಗ್ಗೆ ವಿರೋಧ ಪಕ್ಷ ಚಕಾರವನ್ನೇನು ಎತ್ತಿಲ್ಲ. ಅವರಿಗೆ ಸದಾ ಸರ್ಕಾರ ಬೀಳಿಸುವ ಚಿಂತೆ ಬಿಟ್ಟರೆ ಮತ್ತೇನಿಲ್ಲ. ಇದರಿಂದ ನಲುಗುವವರು ಮತ್ತೆ ಬಡವರು, ರೈತರೇ ಆಗಿರುವುದು ದೊಡ್ಡ ದುರಂತ.

ಹೌದು ಇಂದು ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಆಗುತ್ತಿಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಮುಖಕ್ಕೆ ಹೊಡೆದಂತೆ ರಾಚುತ್ತಿವೆ. ಕಾಡುಗಳ ನಾಶ, ಮಿತಿ ಮೀರಿದ ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯ ಕಾರಣದಿಂದ ಮಳೆಯಾಗುತ್ತಿಲ್ಲ. ಇದಕ್ಕೆ ಪರಿಹಾರಗಳು ಸಹ ಅಲ್ಲೆ ಇವೆ. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದು, ಕಾಡುಗಳನ್ನು ಸಂರಕ್ಷಿಸುವುದು, ಮಾಲಿನ್ಯ ಉಂಟು ಮಾಡುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕಡಿವಾಣ ಹಾಕುವುದು, ನೀರಿನ ಮಿತ ಬಳಕೆ ಮತ್ತು ಜಲಸಂರಕ್ಷಣೆಯ ಪಾಠಗಳನ್ನು ಜಾರಿಗೊಳಿಸುವುದು, ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಇತ್ಯಾದಿ

ಈ ಮೇಲಿನ ವಿಧಾನಗಳನ್ನು ಜಾರಿಗೊಳಿಸುವ ಹೊಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದರೂ ಅದರ ಪ್ರಧಾನ ಜವಾಬ್ದಾರಿ ಸರ್ಕಾರದ್ದೆ. ಒಂದು ಕಡೆ ದೊಡ್ಡ ಬಂಡವಾಳಶಾಹಿಗಳು ಮಿತಿಮೀರಿದ ಪರಿಸರ ನಾಶ ಮಾಡುತ್ತಿದ್ದರೆ ಅವರಿಗೆ ಕಡಿವಾಣ ಹಾಕುವ ಬದಲು ಸರ್ಕಾರ ಅವರಿಗೆ ತೆರಿಗೆ ವಿನಾಯಿತಿ, ಹೆಚ್ಚಿನ ಸಾಲ ಸೌಲಭ್ಯ, ಕಡಿಮೆ ಬೆಲೆಗೆ ಭೂಮಿ, ನೀರು ಮತ್ತು ವಿದ್ಯುತ್ ನೀಡಿ ಮತ್ತಷ್ಟು ಕೊಬ್ಬಿಸುತ್ತಿದೆ. ನಮ್ಮ ನಾಡಿನ ಜೀವನಾಡಿಯಾದ ಪಶ್ಚಿಮ ಘಟ್ಟಗಳು ದಿನೇ ದಿನೇ ಬರಿದಾಗುತ್ತಿದೆ. ಇದನ್ನು ತಡೆಗಟ್ಟಬೇಕಾದ ಸರ್ಕಾರ ಪೂಜೆ ಮಾಡಿ ಮಳೆ ತರಲು ಮುಂದಾಗಿರುವುದು ನಮ್ಮೆಲ್ಲರ ದುರಂತವಾಗಿದೆ.

ಅಂದ ಮಾತ್ರಕ್ಕೆ ನಾವು ರಸ್ತೆ ಕಟ್ಟುವುದರ, ದೊಡ್ಡ ಬಿಲ್ಡಿಂಗ್ ಕಟ್ಟುವುದನ್ನು, ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದೇವೆ ಅಂತ ಅಲ್ಲ. ಬದಲಿಗೆ ಆ ಅಭಿವೃದ್ಧಿ ಜನಕ್ಕೆ, ಪರಿಸರಕ್ಕೆ ಧಕ್ಕೆ ತರುವಂತೆ ಇರಬಾರದು. ಪರಿಸರ ಸ್ನೇಹಿ ಅಭಿವೃದ್ದಿ ಮಾದರಿಯನ್ನು ಬೆಂಬಲಿಸಬೇಕು..

ಇನ್ನೊಂದು ಕಡೆ ಮಳೆಗಾಗಿ ಮೋಡ ಬಿತ್ತನೆ ಮಾಡಲು 91ಕೋಟಿ ರೂಗಳ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೋಡ ಬಿತ್ತನೆ ಎಂಬುದು ಬರಗಾಲದಲ್ಲಿಯೂ ಒಂದಷ್ಟು ದುಡ್ಡು ಮಾಡಿಕೊಳ್ಳಲು ಸಚಿವರಿಗೆ, ಅಧಿಕಾರಿಗಳಿಗೆ ಇನ್ನೊಂದು ಮಾರ್ಗವೇ ಹೊರತು ಈ ಮೋಡ ಬಿತ್ತನೆಯಿಂದ ಮಳೆ ಬಂದ ಉದಾಹರಣೆ ಮಾತ್ರ ಇಲ್ಲ.

ಹೆಸರಾಂತ ಪತ್ರಕರ್ತ ಪಿ ಸಾಯಿನಾಥ್‍ರವರು ‘ಬರ ಅಂದ್ರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕ ಬರೆದು ದುರಂತಗಳನ್ನು ಎಳೆ ಎಳೆಯಾಗಿ ವಿವರಿಸಿದ್ದರು. ಆದರೇನು ಮಾಡುವುದು ಬಹುಶಃ ಹೀಗಿನ ಸರ್ಕಾರದ ಯಾವೊಬ್ಬರು ಅದನ್ನು ಓದಿರುವುದಿಲ್ಲ. ಅಷ್ಟು ಮಾತ್ರವಲ್ಲ ಪ್ರತಿ ವಾರ ಪರಿಸರ ಉಳಿಸಿಕೊಳ್ಳುವ ಸರಳ ವಿಧಾನಗಳ ಬಗ್ಗೆ ನಮ್ಮ ನಾಗೇಶ್ ಹೆಗಡೆಯವರು ಲೇಖನ, ಪತ್ರ ಬರೆಯುತ್ತಿರುತ್ತಾರೆ. ನಮ್ಮ ದುರಾದೃಷ್ಟವೋ ಎನೋ ಇವರ್ಯಾರು ಅದನ್ನು ಸಹ ಓದಿದಂತೆ ಕಾಣುವುದಿಲ್ಲ. ಓದಿದರೆ ಇಂತಹ ಪ್ಲಾಪ್ ಶೋ ಮಾಡಲು ಮುಂದಾಗುತ್ತಿರಲಿಲ್ಲ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೌಡ್ಯ ನಿಷೇಧ ಕಾಯ್ದೆ ತರಲು ಹೊರಟಾಗ ವಿರೋಧಿಸಿದರು ಇವರೆ ಇರಬೇಕು. ಪಾಪಾ ಅಂತಹ ಸಿದ್ದರಾಮಯ್ಯನವರು ಸಹ ಈಗ ಮೌನವಾಗಿರುವುದು ದುರಂತದ ಮೇಲೆ ದುರಂತ ಎನ್ನಬಹುದು. ಈಗ ಜನರೆ ಎಚ್ಚೆತ್ತುಕೊಂಡು ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಇಂತಹ ಗಿಮಿಕ್ ಮಾಡುವುದು ಬಿಟ್ಟು ಸರಿಯಾಗಿ ಕೆಲಸ ಮಾಡುವಂತೆ ಸರ್ಕಾರನ್ನು ಆಗ್ರಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...