Homeಕರ್ನಾಟಕಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

ಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಒಂದು ಕಡೆ ಗಣಿಗಾರಿಕೆ ನಡೆಸಲು ಸಮೃದ್ಧ ಜಮೀನನ್ನು ಅರ್ಪಿಸುವುದು. ಸುಂದರ ಕಾಡು ಕಡಿದು ಅಭಿವೃದ್ದಿ ಎನ್ನುವುದು. ಮರ ಉರುಳಿಸಿ ರಸ್ತೆ ಮಾಡುವುದು. ಕೊನೆಗೆ ಮಳೆ ಬರುತ್ತಿಲ್ಲ ಹಾಗಾಗಿ ಸಕಾಲದಲ್ಲಿ ಮಳೆ ಬರಲೆಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಸುತ್ತೋಲೆ ಹೊರಡಿಸುವುದು. ಡೌಟೇ ಬೇಡ ಈ ಸರ್ಕಾರಕ್ಕೆ ಸಂಪೂರ್ಣ ತೆಲೆಕೆಟ್ಟು ಹೋಗಿದೆ.

ಮೇ 31ರಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬೆಳೆಯಾಗದೇ, ರಾಜ್ಯದ ಜನತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಹಾಗಾಗಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಮೇ 6 ರಂದು ಬ್ರಾಹ್ಮೀ ಮೂಹೂರ್ತದೊಂದಿಗೆ ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಿದೆ. 10,001/- ರೂಗಳು ವೆಚ್ಚ ಮೀರದಂತೆ ಆಯಾಯಾ ದೇವಾಲಯಗಳ ನಿಧಿಯಿಂದ ಭರಿಸಲು ಅನುಮತಿ ಸಹ ನೀಡಿದೆ

ದೇವರು ಧರ್ಮಗಳನ್ನು ನಂಬುವು ಮತ್ತು ಪಾಲಿಸುವ, ಪೂಜಿಸುವ ಹಕ್ಕನ್ನು ನಮ್ಮ ಸಂವಿಧಾನ ಎಲ್ಲರಿಗೂ ನೀಡಿದೆ. ಆದರೆ ಅದು ಖಾಸಗಿ ಹಕ್ಕಾಗಿದ್ದು ಖಾಸಗಿ ಸ್ಥಳಗಳಲ್ಲಿ ಯಾರು ಎಷ್ಟು ಬೇಕಾದರೂ ಹೋಮ ಪೂಜೆ ಮಾಡಿದರೆ ನಮಗೇನು ತೊಂದರೆಯಿಲ್ಲ. ಆದರೆ ಚುನಾಯಿತ ಸರ್ಕಾರವೊಂದು, ಸರ್ಕಾರಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಈ ರೀತಿಯ ಆಚರಣೆ ಮಾಡಲು ಆದೇಶ ನೀಡಿರುವುದು ಎಲ್ಲಾ ವಿಧಗಳಿಂದಲೂ ಒಪ್ಪುವಂತಹದಲ್ಲ. ಇದು ಮೌಡ್ಯದ ಪರಮಾವಧಿ ಮಾತ್ರವಲ್ಲ ಇದರಿಂದ ಮಳೆ ಬರದಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ಮರೆಮಾಚಿ ಜನರನ್ನು ದಿಕ್ಕುತಪ್ಪಿಸುವ ಹುನ್ನಾರವೂ ಇದರಿಂದ ಅಡಗಿದೆ.

ಜನರು ಹಲವು ಊರಿನಲ್ಲಿ ಅವರ ನಂಬಿಕೆಗನುಗುಣವಾಗಿ ಈ ರೀತಿ ಮಳೆಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಹೆಚ್ಚು ಖರ್ಚಿಲ್ಲದೇ ತಮಗೆ ಗೊತ್ತಿರುವ ವಿಧಾನಗಳಲ್ಲಿ ಅವರು ಪೂಜೆ ಮಾಡುತ್ತಾರೆ. ಹೀಗಿರುವಾಗ ಮತ್ತೆ ಸರ್ಕಾರ ದೊಡ್ಡ ಮಟ್ಟದಲ್ಲಿ ಈ ರೀತಿ ಪೂಜೆಗೆ ಆದೇಶ ನೀಡುವುದು ಸರಿಯಲ್ಲ. ಅದೇ ಹಣದಿಂದ ಕೆರೆ ಹೂಳೆತ್ತಲು ಬಳಸಿದರೆ ಒಂದಷ್ಟು ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂಬ ಸಾಮಾನ್ಯ ಜ್ಞಾನವೂ ನಮ್ಮ ಸರ್ಕಾರಕ್ಕಿಲ್ಲ.

ಇಷ್ಟೆಲ್ಲಾ ಅವಾಂತರುಗಳು ನಡೆಯುತ್ತಿದ್ದರೆ ಅದರ ಬಗ್ಗೆ ವಿರೋಧ ಪಕ್ಷ ಚಕಾರವನ್ನೇನು ಎತ್ತಿಲ್ಲ. ಅವರಿಗೆ ಸದಾ ಸರ್ಕಾರ ಬೀಳಿಸುವ ಚಿಂತೆ ಬಿಟ್ಟರೆ ಮತ್ತೇನಿಲ್ಲ. ಇದರಿಂದ ನಲುಗುವವರು ಮತ್ತೆ ಬಡವರು, ರೈತರೇ ಆಗಿರುವುದು ದೊಡ್ಡ ದುರಂತ.

ಹೌದು ಇಂದು ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಆಗುತ್ತಿಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಮುಖಕ್ಕೆ ಹೊಡೆದಂತೆ ರಾಚುತ್ತಿವೆ. ಕಾಡುಗಳ ನಾಶ, ಮಿತಿ ಮೀರಿದ ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯ ಕಾರಣದಿಂದ ಮಳೆಯಾಗುತ್ತಿಲ್ಲ. ಇದಕ್ಕೆ ಪರಿಹಾರಗಳು ಸಹ ಅಲ್ಲೆ ಇವೆ. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದು, ಕಾಡುಗಳನ್ನು ಸಂರಕ್ಷಿಸುವುದು, ಮಾಲಿನ್ಯ ಉಂಟು ಮಾಡುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕಡಿವಾಣ ಹಾಕುವುದು, ನೀರಿನ ಮಿತ ಬಳಕೆ ಮತ್ತು ಜಲಸಂರಕ್ಷಣೆಯ ಪಾಠಗಳನ್ನು ಜಾರಿಗೊಳಿಸುವುದು, ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಇತ್ಯಾದಿ

ಈ ಮೇಲಿನ ವಿಧಾನಗಳನ್ನು ಜಾರಿಗೊಳಿಸುವ ಹೊಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದರೂ ಅದರ ಪ್ರಧಾನ ಜವಾಬ್ದಾರಿ ಸರ್ಕಾರದ್ದೆ. ಒಂದು ಕಡೆ ದೊಡ್ಡ ಬಂಡವಾಳಶಾಹಿಗಳು ಮಿತಿಮೀರಿದ ಪರಿಸರ ನಾಶ ಮಾಡುತ್ತಿದ್ದರೆ ಅವರಿಗೆ ಕಡಿವಾಣ ಹಾಕುವ ಬದಲು ಸರ್ಕಾರ ಅವರಿಗೆ ತೆರಿಗೆ ವಿನಾಯಿತಿ, ಹೆಚ್ಚಿನ ಸಾಲ ಸೌಲಭ್ಯ, ಕಡಿಮೆ ಬೆಲೆಗೆ ಭೂಮಿ, ನೀರು ಮತ್ತು ವಿದ್ಯುತ್ ನೀಡಿ ಮತ್ತಷ್ಟು ಕೊಬ್ಬಿಸುತ್ತಿದೆ. ನಮ್ಮ ನಾಡಿನ ಜೀವನಾಡಿಯಾದ ಪಶ್ಚಿಮ ಘಟ್ಟಗಳು ದಿನೇ ದಿನೇ ಬರಿದಾಗುತ್ತಿದೆ. ಇದನ್ನು ತಡೆಗಟ್ಟಬೇಕಾದ ಸರ್ಕಾರ ಪೂಜೆ ಮಾಡಿ ಮಳೆ ತರಲು ಮುಂದಾಗಿರುವುದು ನಮ್ಮೆಲ್ಲರ ದುರಂತವಾಗಿದೆ.

ಅಂದ ಮಾತ್ರಕ್ಕೆ ನಾವು ರಸ್ತೆ ಕಟ್ಟುವುದರ, ದೊಡ್ಡ ಬಿಲ್ಡಿಂಗ್ ಕಟ್ಟುವುದನ್ನು, ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದೇವೆ ಅಂತ ಅಲ್ಲ. ಬದಲಿಗೆ ಆ ಅಭಿವೃದ್ಧಿ ಜನಕ್ಕೆ, ಪರಿಸರಕ್ಕೆ ಧಕ್ಕೆ ತರುವಂತೆ ಇರಬಾರದು. ಪರಿಸರ ಸ್ನೇಹಿ ಅಭಿವೃದ್ದಿ ಮಾದರಿಯನ್ನು ಬೆಂಬಲಿಸಬೇಕು..

ಇನ್ನೊಂದು ಕಡೆ ಮಳೆಗಾಗಿ ಮೋಡ ಬಿತ್ತನೆ ಮಾಡಲು 91ಕೋಟಿ ರೂಗಳ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೋಡ ಬಿತ್ತನೆ ಎಂಬುದು ಬರಗಾಲದಲ್ಲಿಯೂ ಒಂದಷ್ಟು ದುಡ್ಡು ಮಾಡಿಕೊಳ್ಳಲು ಸಚಿವರಿಗೆ, ಅಧಿಕಾರಿಗಳಿಗೆ ಇನ್ನೊಂದು ಮಾರ್ಗವೇ ಹೊರತು ಈ ಮೋಡ ಬಿತ್ತನೆಯಿಂದ ಮಳೆ ಬಂದ ಉದಾಹರಣೆ ಮಾತ್ರ ಇಲ್ಲ.

ಹೆಸರಾಂತ ಪತ್ರಕರ್ತ ಪಿ ಸಾಯಿನಾಥ್‍ರವರು ‘ಬರ ಅಂದ್ರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕ ಬರೆದು ದುರಂತಗಳನ್ನು ಎಳೆ ಎಳೆಯಾಗಿ ವಿವರಿಸಿದ್ದರು. ಆದರೇನು ಮಾಡುವುದು ಬಹುಶಃ ಹೀಗಿನ ಸರ್ಕಾರದ ಯಾವೊಬ್ಬರು ಅದನ್ನು ಓದಿರುವುದಿಲ್ಲ. ಅಷ್ಟು ಮಾತ್ರವಲ್ಲ ಪ್ರತಿ ವಾರ ಪರಿಸರ ಉಳಿಸಿಕೊಳ್ಳುವ ಸರಳ ವಿಧಾನಗಳ ಬಗ್ಗೆ ನಮ್ಮ ನಾಗೇಶ್ ಹೆಗಡೆಯವರು ಲೇಖನ, ಪತ್ರ ಬರೆಯುತ್ತಿರುತ್ತಾರೆ. ನಮ್ಮ ದುರಾದೃಷ್ಟವೋ ಎನೋ ಇವರ್ಯಾರು ಅದನ್ನು ಸಹ ಓದಿದಂತೆ ಕಾಣುವುದಿಲ್ಲ. ಓದಿದರೆ ಇಂತಹ ಪ್ಲಾಪ್ ಶೋ ಮಾಡಲು ಮುಂದಾಗುತ್ತಿರಲಿಲ್ಲ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೌಡ್ಯ ನಿಷೇಧ ಕಾಯ್ದೆ ತರಲು ಹೊರಟಾಗ ವಿರೋಧಿಸಿದರು ಇವರೆ ಇರಬೇಕು. ಪಾಪಾ ಅಂತಹ ಸಿದ್ದರಾಮಯ್ಯನವರು ಸಹ ಈಗ ಮೌನವಾಗಿರುವುದು ದುರಂತದ ಮೇಲೆ ದುರಂತ ಎನ್ನಬಹುದು. ಈಗ ಜನರೆ ಎಚ್ಚೆತ್ತುಕೊಂಡು ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಇಂತಹ ಗಿಮಿಕ್ ಮಾಡುವುದು ಬಿಟ್ಟು ಸರಿಯಾಗಿ ಕೆಲಸ ಮಾಡುವಂತೆ ಸರ್ಕಾರನ್ನು ಆಗ್ರಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...