Homeಕರ್ನಾಟಕಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

ಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಒಂದು ಕಡೆ ಗಣಿಗಾರಿಕೆ ನಡೆಸಲು ಸಮೃದ್ಧ ಜಮೀನನ್ನು ಅರ್ಪಿಸುವುದು. ಸುಂದರ ಕಾಡು ಕಡಿದು ಅಭಿವೃದ್ದಿ ಎನ್ನುವುದು. ಮರ ಉರುಳಿಸಿ ರಸ್ತೆ ಮಾಡುವುದು. ಕೊನೆಗೆ ಮಳೆ ಬರುತ್ತಿಲ್ಲ ಹಾಗಾಗಿ ಸಕಾಲದಲ್ಲಿ ಮಳೆ ಬರಲೆಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಸುತ್ತೋಲೆ ಹೊರಡಿಸುವುದು. ಡೌಟೇ ಬೇಡ ಈ ಸರ್ಕಾರಕ್ಕೆ ಸಂಪೂರ್ಣ ತೆಲೆಕೆಟ್ಟು ಹೋಗಿದೆ.

ಮೇ 31ರಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬೆಳೆಯಾಗದೇ, ರಾಜ್ಯದ ಜನತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಹಾಗಾಗಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಮೇ 6 ರಂದು ಬ್ರಾಹ್ಮೀ ಮೂಹೂರ್ತದೊಂದಿಗೆ ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಿದೆ. 10,001/- ರೂಗಳು ವೆಚ್ಚ ಮೀರದಂತೆ ಆಯಾಯಾ ದೇವಾಲಯಗಳ ನಿಧಿಯಿಂದ ಭರಿಸಲು ಅನುಮತಿ ಸಹ ನೀಡಿದೆ

ದೇವರು ಧರ್ಮಗಳನ್ನು ನಂಬುವು ಮತ್ತು ಪಾಲಿಸುವ, ಪೂಜಿಸುವ ಹಕ್ಕನ್ನು ನಮ್ಮ ಸಂವಿಧಾನ ಎಲ್ಲರಿಗೂ ನೀಡಿದೆ. ಆದರೆ ಅದು ಖಾಸಗಿ ಹಕ್ಕಾಗಿದ್ದು ಖಾಸಗಿ ಸ್ಥಳಗಳಲ್ಲಿ ಯಾರು ಎಷ್ಟು ಬೇಕಾದರೂ ಹೋಮ ಪೂಜೆ ಮಾಡಿದರೆ ನಮಗೇನು ತೊಂದರೆಯಿಲ್ಲ. ಆದರೆ ಚುನಾಯಿತ ಸರ್ಕಾರವೊಂದು, ಸರ್ಕಾರಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಈ ರೀತಿಯ ಆಚರಣೆ ಮಾಡಲು ಆದೇಶ ನೀಡಿರುವುದು ಎಲ್ಲಾ ವಿಧಗಳಿಂದಲೂ ಒಪ್ಪುವಂತಹದಲ್ಲ. ಇದು ಮೌಡ್ಯದ ಪರಮಾವಧಿ ಮಾತ್ರವಲ್ಲ ಇದರಿಂದ ಮಳೆ ಬರದಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ಮರೆಮಾಚಿ ಜನರನ್ನು ದಿಕ್ಕುತಪ್ಪಿಸುವ ಹುನ್ನಾರವೂ ಇದರಿಂದ ಅಡಗಿದೆ.

ಜನರು ಹಲವು ಊರಿನಲ್ಲಿ ಅವರ ನಂಬಿಕೆಗನುಗುಣವಾಗಿ ಈ ರೀತಿ ಮಳೆಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಹೆಚ್ಚು ಖರ್ಚಿಲ್ಲದೇ ತಮಗೆ ಗೊತ್ತಿರುವ ವಿಧಾನಗಳಲ್ಲಿ ಅವರು ಪೂಜೆ ಮಾಡುತ್ತಾರೆ. ಹೀಗಿರುವಾಗ ಮತ್ತೆ ಸರ್ಕಾರ ದೊಡ್ಡ ಮಟ್ಟದಲ್ಲಿ ಈ ರೀತಿ ಪೂಜೆಗೆ ಆದೇಶ ನೀಡುವುದು ಸರಿಯಲ್ಲ. ಅದೇ ಹಣದಿಂದ ಕೆರೆ ಹೂಳೆತ್ತಲು ಬಳಸಿದರೆ ಒಂದಷ್ಟು ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂಬ ಸಾಮಾನ್ಯ ಜ್ಞಾನವೂ ನಮ್ಮ ಸರ್ಕಾರಕ್ಕಿಲ್ಲ.

ಇಷ್ಟೆಲ್ಲಾ ಅವಾಂತರುಗಳು ನಡೆಯುತ್ತಿದ್ದರೆ ಅದರ ಬಗ್ಗೆ ವಿರೋಧ ಪಕ್ಷ ಚಕಾರವನ್ನೇನು ಎತ್ತಿಲ್ಲ. ಅವರಿಗೆ ಸದಾ ಸರ್ಕಾರ ಬೀಳಿಸುವ ಚಿಂತೆ ಬಿಟ್ಟರೆ ಮತ್ತೇನಿಲ್ಲ. ಇದರಿಂದ ನಲುಗುವವರು ಮತ್ತೆ ಬಡವರು, ರೈತರೇ ಆಗಿರುವುದು ದೊಡ್ಡ ದುರಂತ.

ಹೌದು ಇಂದು ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಆಗುತ್ತಿಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಮುಖಕ್ಕೆ ಹೊಡೆದಂತೆ ರಾಚುತ್ತಿವೆ. ಕಾಡುಗಳ ನಾಶ, ಮಿತಿ ಮೀರಿದ ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯ ಕಾರಣದಿಂದ ಮಳೆಯಾಗುತ್ತಿಲ್ಲ. ಇದಕ್ಕೆ ಪರಿಹಾರಗಳು ಸಹ ಅಲ್ಲೆ ಇವೆ. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದು, ಕಾಡುಗಳನ್ನು ಸಂರಕ್ಷಿಸುವುದು, ಮಾಲಿನ್ಯ ಉಂಟು ಮಾಡುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕಡಿವಾಣ ಹಾಕುವುದು, ನೀರಿನ ಮಿತ ಬಳಕೆ ಮತ್ತು ಜಲಸಂರಕ್ಷಣೆಯ ಪಾಠಗಳನ್ನು ಜಾರಿಗೊಳಿಸುವುದು, ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಇತ್ಯಾದಿ

ಈ ಮೇಲಿನ ವಿಧಾನಗಳನ್ನು ಜಾರಿಗೊಳಿಸುವ ಹೊಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದರೂ ಅದರ ಪ್ರಧಾನ ಜವಾಬ್ದಾರಿ ಸರ್ಕಾರದ್ದೆ. ಒಂದು ಕಡೆ ದೊಡ್ಡ ಬಂಡವಾಳಶಾಹಿಗಳು ಮಿತಿಮೀರಿದ ಪರಿಸರ ನಾಶ ಮಾಡುತ್ತಿದ್ದರೆ ಅವರಿಗೆ ಕಡಿವಾಣ ಹಾಕುವ ಬದಲು ಸರ್ಕಾರ ಅವರಿಗೆ ತೆರಿಗೆ ವಿನಾಯಿತಿ, ಹೆಚ್ಚಿನ ಸಾಲ ಸೌಲಭ್ಯ, ಕಡಿಮೆ ಬೆಲೆಗೆ ಭೂಮಿ, ನೀರು ಮತ್ತು ವಿದ್ಯುತ್ ನೀಡಿ ಮತ್ತಷ್ಟು ಕೊಬ್ಬಿಸುತ್ತಿದೆ. ನಮ್ಮ ನಾಡಿನ ಜೀವನಾಡಿಯಾದ ಪಶ್ಚಿಮ ಘಟ್ಟಗಳು ದಿನೇ ದಿನೇ ಬರಿದಾಗುತ್ತಿದೆ. ಇದನ್ನು ತಡೆಗಟ್ಟಬೇಕಾದ ಸರ್ಕಾರ ಪೂಜೆ ಮಾಡಿ ಮಳೆ ತರಲು ಮುಂದಾಗಿರುವುದು ನಮ್ಮೆಲ್ಲರ ದುರಂತವಾಗಿದೆ.

ಅಂದ ಮಾತ್ರಕ್ಕೆ ನಾವು ರಸ್ತೆ ಕಟ್ಟುವುದರ, ದೊಡ್ಡ ಬಿಲ್ಡಿಂಗ್ ಕಟ್ಟುವುದನ್ನು, ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದೇವೆ ಅಂತ ಅಲ್ಲ. ಬದಲಿಗೆ ಆ ಅಭಿವೃದ್ಧಿ ಜನಕ್ಕೆ, ಪರಿಸರಕ್ಕೆ ಧಕ್ಕೆ ತರುವಂತೆ ಇರಬಾರದು. ಪರಿಸರ ಸ್ನೇಹಿ ಅಭಿವೃದ್ದಿ ಮಾದರಿಯನ್ನು ಬೆಂಬಲಿಸಬೇಕು..

ಇನ್ನೊಂದು ಕಡೆ ಮಳೆಗಾಗಿ ಮೋಡ ಬಿತ್ತನೆ ಮಾಡಲು 91ಕೋಟಿ ರೂಗಳ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೋಡ ಬಿತ್ತನೆ ಎಂಬುದು ಬರಗಾಲದಲ್ಲಿಯೂ ಒಂದಷ್ಟು ದುಡ್ಡು ಮಾಡಿಕೊಳ್ಳಲು ಸಚಿವರಿಗೆ, ಅಧಿಕಾರಿಗಳಿಗೆ ಇನ್ನೊಂದು ಮಾರ್ಗವೇ ಹೊರತು ಈ ಮೋಡ ಬಿತ್ತನೆಯಿಂದ ಮಳೆ ಬಂದ ಉದಾಹರಣೆ ಮಾತ್ರ ಇಲ್ಲ.

ಹೆಸರಾಂತ ಪತ್ರಕರ್ತ ಪಿ ಸಾಯಿನಾಥ್‍ರವರು ‘ಬರ ಅಂದ್ರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕ ಬರೆದು ದುರಂತಗಳನ್ನು ಎಳೆ ಎಳೆಯಾಗಿ ವಿವರಿಸಿದ್ದರು. ಆದರೇನು ಮಾಡುವುದು ಬಹುಶಃ ಹೀಗಿನ ಸರ್ಕಾರದ ಯಾವೊಬ್ಬರು ಅದನ್ನು ಓದಿರುವುದಿಲ್ಲ. ಅಷ್ಟು ಮಾತ್ರವಲ್ಲ ಪ್ರತಿ ವಾರ ಪರಿಸರ ಉಳಿಸಿಕೊಳ್ಳುವ ಸರಳ ವಿಧಾನಗಳ ಬಗ್ಗೆ ನಮ್ಮ ನಾಗೇಶ್ ಹೆಗಡೆಯವರು ಲೇಖನ, ಪತ್ರ ಬರೆಯುತ್ತಿರುತ್ತಾರೆ. ನಮ್ಮ ದುರಾದೃಷ್ಟವೋ ಎನೋ ಇವರ್ಯಾರು ಅದನ್ನು ಸಹ ಓದಿದಂತೆ ಕಾಣುವುದಿಲ್ಲ. ಓದಿದರೆ ಇಂತಹ ಪ್ಲಾಪ್ ಶೋ ಮಾಡಲು ಮುಂದಾಗುತ್ತಿರಲಿಲ್ಲ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೌಡ್ಯ ನಿಷೇಧ ಕಾಯ್ದೆ ತರಲು ಹೊರಟಾಗ ವಿರೋಧಿಸಿದರು ಇವರೆ ಇರಬೇಕು. ಪಾಪಾ ಅಂತಹ ಸಿದ್ದರಾಮಯ್ಯನವರು ಸಹ ಈಗ ಮೌನವಾಗಿರುವುದು ದುರಂತದ ಮೇಲೆ ದುರಂತ ಎನ್ನಬಹುದು. ಈಗ ಜನರೆ ಎಚ್ಚೆತ್ತುಕೊಂಡು ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಇಂತಹ ಗಿಮಿಕ್ ಮಾಡುವುದು ಬಿಟ್ಟು ಸರಿಯಾಗಿ ಕೆಲಸ ಮಾಡುವಂತೆ ಸರ್ಕಾರನ್ನು ಆಗ್ರಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...