Homeಮುಖಪುಟಮಹತ್ವದ ಬೆಳವಣಿಗೆ: ನಾಳೆ ಮಾಯಾವತಿ, ಸೋನಿಯಾ ಮತ್ತು ರಾಹುಲ್ ಸಭೆ.

ಮಹತ್ವದ ಬೆಳವಣಿಗೆ: ನಾಳೆ ಮಾಯಾವತಿ, ಸೋನಿಯಾ ಮತ್ತು ರಾಹುಲ್ ಸಭೆ.

ಇಂದು ಹೊರಬೀಳಲಿರುವ ಮತಗಟ್ಟೆ ಸಮೀಕ್ಷೆಗಳು ಏನು ಹೇಳುತ್ತವೆ ಎಂಬುದನ್ನು ನೋಡುವುದಕ್ಕೆ ಮುಂಚೆಯೇ ನಿಗದಿಯಾಗಿರುವ ಭೇಟಿಯು ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಹೇಳಬಹುದಾಗಿದೆ.

- Advertisement -
- Advertisement -

||ನಾನುಗೌರಿ ಡೆಸ್ಕ್||

ಇಂದು ಹೊರಬೀಳಲಿರುವ ಮತಗಟ್ಟೆ ಸಮೀಕ್ಷೆಗಳು ಏನು ಹೇಳುತ್ತವೆ ಎಂಬುದನ್ನು ನೋಡುವುದಕ್ಕೆ ಮುಂಚೆಯೇ ನಿಗದಿಯಾಗಿರುವ  ಮಾಯಾವತಿಯವರ ಭೇಟಿಯು ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಹೇಳಬಹುದಾಗಿದೆ.

ಇಂದಿನವರೆಗೆ ಒಮ್ಮೆಯೂ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ತೋರದ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿಯವರು ಕಡೆಯ ಹಂತದ ಚುನಾವಣೆ ಮುಗಿದ ತಕ್ಷಣ, ಚುನಾವಣೋತ್ತರ ಮೈತ್ರಿಯ ಕುರಿತ ತಮ್ಮ ಒಲವನ್ನು ಮೊದಲ ಬಾರಿ ವ್ಯಕ್ತಪಡಿಸಿದ್ದಾರೆ. ನಾಳೆ, ಮೇ 20ರಂದು ದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಮಾಯಾವತಿಯವರು ಭೇಟಿಯಾಗಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಆಗದಿದ್ದರೂ, ಪರಸ್ಪರ ಸಹಕಾರಿಯಾಗಿರುವ ಒಪ್ಪಂದ ಇತ್ತು ಎಂಬುದಕ್ಕೆ ಪುಷ್ಟಿ ಕೊಡುವ ಮಾತುಗಳನ್ನು ರಾಹುಲ್ ಗಾಂಧಿ ಆಡಿದ್ದರು. ಒಂದು ವೇಳೆ ಫಲಿತಾಂಶ ಬಂದ ನಂತರ ಮಾಯಾವತಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಭೇಟಿ ನಡೆದಿದ್ದರೆ, ಆಗ ಬೇರೆ ಅರ್ಥ ಬರುತ್ತಿತ್ತು. ಜನರ ಒಲವಿನ ಆಧಾರದ ಮೇಲೆ ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎಂದು ಹೇಳಬಹುದಿತ್ತು.

ಆದರೆ, ಇದೀಗ ತಮ್ಮ ಒಲವು ಬಿಜೆಪಿಯೇತರ ಮೈತ್ರಿಕೂಟಕ್ಕೆ ಎಂಬ ಸಂದೇಶವನ್ನು ಮಾಯಾವತಿಯವರು ನೀಡಿದಂತಾಗಿದೆ. ಅಮೇಥಿ ಮತ್ತು ರಾಯ್ ಬರೇಲಿಗಳಲ್ಲಿ ಮಾತ್ರ ತಮ್ಮ ಅಭ್ಯರ್ಥಿಗಳನ್ನು ಹಾಕದ ಎಸ್ಪಿ – ಬಿಎಸ್ಪಿಗಳು, ಅಲ್ಲಿ ಸೋನಿಯಾ ಮತ್ತು ರಾಹುಲ್ ರನ್ನು ಬೆಂಬಲಿಸುವ ತೀರ್ಮಾನ ಘೋಷಿಸಿದ್ದರು.

ಇಂದು ಹೊರಬೀಳಲಿರುವ ಮತಗಟ್ಟೆ ಸಮೀಕ್ಷೆಗಳು ಏನು ಹೇಳುತ್ತವೆ ಎಂಬುದನ್ನು ನೋಡುವುದಕ್ಕೆ ಮುಂಚೆಯೇ ನಿಗದಿಯಾಗಿರುವ ಭೇಟಿಯು ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಹೇಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...