Homeಮುಖಪುಟಮಹಾರಾಷ್ಟ್ರದ ನಡೆ ವಿರೋಧಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಕಪ್ಪು ಬ್ಯಾನರ್ ಪ್ರದರ್ಶನ

ಮಹಾರಾಷ್ಟ್ರದ ನಡೆ ವಿರೋಧಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಕಪ್ಪು ಬ್ಯಾನರ್ ಪ್ರದರ್ಶನ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಅಪ್ರಜಾತಾಂತ್ರಿಕವಾಗಿ ಸರ್ಕಾರ ರಚಿಸಿರುವುದನ್ನು ಖಂಡಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಎಬ್ಬಿಸಿದರು. ಕಾಂಗ್ರೆಸ್ ಸದಸ್ಯರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಬಿಜೆಪಿ ಬಿರುದ್ಧ ಘೋಷಣೆ ಕೂಗಿದರು.

ಲೋಕಸಭೆಯಲ್ಲಿ ಇಬ್ಬರು ಕಾಂಗ್ರೆಸ್ ಸದಸ್ಯರು ಮಹಾರಾಷ್ಟ್ರದಲ್ಲಿ ವಾಮಮಾರ್ಗದಲ್ಲಿ ಸರ್ಕಾರ ರಚನೆಯಾಗಿದೆ ಎಂದು ಆರೋಪಿಸಿ ಕಪ್ಪು ಬ್ಯಾನರ್ ಹಿಡಿದು ಸಭಾಧ್ಯಕ್ಷ ಮುಂದಿನ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

ಇದರಿಂದ ಸಿಟ್ಟಾದ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕೂಡಲೇ ಕಪ್ಪು ಬ್ಯಾನರ್ ಕಿತ್ತುಕೊಂಡು ಬ್ಯಾನರ್ ಹಿಡಿದ ಇಬ್ಬರು ಸದಸ್ಯರನ್ನು ಹೊರಹಾಕುವಂತೆ ಮಾರ್ಷಲ್ ಗಳಿಗೆ ಆದೇಶಿಸಿದರು.

ಸಭಾಧ್ಯಕ್ಷರ ಮುಂದಿನ ಬಾವಿಗೆ ಬಂದ ಮಾರ್ಷಲ್ ಗಳು ಬ್ಯಾನರ್ ಹಿಡಿದಿದ್ದ ಹಬಿ ಎಡೆನ್ ಮತ್ತು ಟಿ.ಎನ್.ಪ್ರಾತಾಪನ್ ಅವರನ್ನು ದೈಹಿಕವಾಗಿ ಹಿಡಿದು ಹೊರಹಾಕಲು ಮುಂದಾದರು. ಆಗ ಎಲ್ಲ ಕಾಂಗ್ರೆಸ್ ಸದಸ್ಯರು ಅವರ ಬೆಂಬಲಕ್ಕೆ ಬಂದರು. ಇದರಿಂದ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು. ಹೀಗಾಗಿ ಸಭಾಧ್ಯಕ್ಷರು ಸದನವನ್ನು ಕೆಲ ಕಾಲ ಮುಂದೂಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌದರಿ ಪುರುಷ ಮಾರ್ಷಲ್ ಗಳು ಮಹಿಳಾ ಸಂಸದರನ್ನು ದೈಹಿಕವಾಗಿ ಹಿಡಿದು ಹೊರಹಾಕಲು ಮುಂದಾಗಿರುವುದು ಸರಿಯಲ್ಲ. ಮಹಾರಾಷ್ಟ್ರ ರಾಷ್ಟ್ರದಲ್ಲಿ ಅನೈತಿಕವಾಗಿ ಸರ್ಕಾರ ರಚಿಸಿರುವುದನ್ನು ವಿರೋಧಿಸಿ ಮಹಿಳಾ ಸಂಸದರು ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ಮಾರ್ಷೆಲ್ ಗಳು ಹಿಡಿದೆಳೆದಿರುವುದು ಆಕ್ಷೇಪಾರ್ಹ ಎಂದರು.

ಲೋಸಭೆಯ ಇತಿಹಾಸದಲ್ಲಿ ನಾವು ಎಂದಿಗೂ ಇಂಥದ್ದನ್ನು ಅನುಭವಿಸಿರಲಿಲ್ಲ. ಈ ಘಟನೆ ಬಗ್ಗೆ ಜವಾಬ್ದಾರಿ ಯುತ ವ್ಯಕ್ತಿಗಳು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೋ ಕಾದು ನೋಡುತ್ತಿದ್ದೇವೆ ಎಂದು ಚೌದರಿ ತಿಳಿಸಿದರು.

ಇದೇ ವೇಳೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಂಸತ್ ಭವನದ ಆವರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಹುಲ್ ಗಾಂಧಿ ಮಾನತಾಡಿ ಮಹಾರಾಷ್ಟ್ರದಲ್ಲಿ ಅನೈತಿಕ ಮಾರ್ಗದ ಮೂಲಕ ಸರ್ಕಾರ ರಚನೆ ಮಾಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...