Homeಮುಖಪುಟಮಹಾರಾಷ್ಟ್ರ ಬಿಜೆಪಿ ಬಿಕ್ಕಟ್ಟು: ಫಡ್ನವೀಸ್ ವಿರುದ್ಧ ಸಿಡಿದ ಪಂಕಜಾ ಮುಂಡೆಗೆ ಖಡ್ಸೆ, ಮೆಹ್ತಾ ಬಲ!

ಮಹಾರಾಷ್ಟ್ರ ಬಿಜೆಪಿ ಬಿಕ್ಕಟ್ಟು: ಫಡ್ನವೀಸ್ ವಿರುದ್ಧ ಸಿಡಿದ ಪಂಕಜಾ ಮುಂಡೆಗೆ ಖಡ್ಸೆ, ಮೆಹ್ತಾ ಬಲ!

- Advertisement -
- Advertisement -

ಸರ್ಕಾರ ರಚಿಸುವ ವಿಫಲ ಯತ್ನಕ್ಕೆ ಮುಂದಾಗಿ ಕೈಸುಟ್ಟುಕೊಂಡ ನಂತರ ಮಹಾರಾಷ್ಟ್ರ ಬಿಜೆಪಿಯೊಳಗೆ ಎಲ್ಲವೂ ನೆಟ್ಟಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸದೆ, ದೇವೇಂದ್ರ ಫಡ್ನವೀಸ್‌ರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಯತ್ನಿಸಿದ ಹೈಕಮಾಂಡ್‌ನ ಆತುರದ ಕ್ರಮದ ವಿರುದ್ಧ ಈಗ ಒಬ್ಬೊಬ್ಬರೇ ಸಿಡಿದೇಳುತ್ತಿದ್ದಾರೆ. ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ದಿವಂಗತ ಗೋಪಿನಾಥ ಮುಂಡೆಯವರ ಜನ್ಮದಿನದ ಪ್ರಯುಕ್ತ ಭೀಡ್‌ನಲ್ಲಿ ಅವರ ಮಗಳು ಪಂಕಜಾ ಮುಂಡೆ ಇಂದು ಆಯೋಜಿಸಿದ್ದ ರ್‍ಯಾಲಿ ಭಿನ್ನಮತದ ಮತ್ತೊಂದು ಮಜಲಿಗೆ ಸಾಕ್ಷಿಯಾಯಿತು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದ ಭದ್ರ ಕೋಟೆಯಾಗಿದ್ದ ಪಾರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಲನುಭವಿಸಿದ ನಂತರ ಪಂಕಜಾ ಮುಂಡೆ ಬಹಿರಂಗವಾಗಿಯೇ ಪಕ್ಷದ ವಿರುದ್ಧ ಕಿಡಿಕಾರಿದ್ದರು. ತಮ್ಮ ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳ ಬ್ಯಾನರ್‌ಗಳಲ್ಲಿ ಬಿಜೆಪಿ ಚಿಹ್ನೆಯನ್ನು ತೆರವುಗೊಳಿಸಿ ಪಕ್ಷ ತೊರೆಯುವರೇ ಎಂಬ ಅನುಮಾನ ಮೂಡಿಸಿದ್ದರು.

ತನ್ನ ಸೋಲಿಗೆ ಸ್ವಪಕ್ಷೀಯರ, ಮುಖ್ಯವಾಗಿ ದೇವೇಂದ್ರ ಫಡ್ನವೀಸ್‌ರ ಚಿತಾವಣೆಯೇ ಕಾರಣ ಎನ್ನುವ ಬಲವಾದ ಸಂಶಯ ಪಂಕಜಾ ಅವರಿಗಿದೆ. ಹಿಂದಿನ ಫಡ್ನವೀಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ, ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಪಂಕಜಾ ತಮ್ಮ ಕುಟುಂಬದ ಪ್ರಭಾವ ಬಳಸಿಕೊಂಡು ಮುಂದಿನ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದರಿಂದಾಗಿಯೇ ತನಗೆ ಆಕೆ ಪ್ರತಿಸ್ಪರ್ಧಿಯಾಗದಿರಲೆಂದು ಫಡ್ನವೀಸ್, ಪಂಕಜಾರನ್ನು ಸೋಲಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದರಿಂದ ಸಿಟ್ಟಿಗೆದ್ದಿರುವ ಪಂಕಜಾ ಫಲಿತಾಂಶ ಬಂದ ಕ್ಷಣದಿಂದಲೂ ಪಕ್ಷ ತೊರೆಯುವ ಸೂಚನೆಗಳನ್ನು ನೀಡುತ್ತಲೇ ಬಂದಿದ್ದರು. ಪ್ರತಿವರ್ಷದಂತೆ ಈ ವರ್ಷವೂ ತನ್ನ ತಂದೆಯ ಜನ್ಮದಿನವಾದ ಡಿಸೆಂಬರ್ ೧೨ರಂದು ನಡೆಸುವ ರ್‍ಯಾಲಿಯಲ್ಲಿ ತನ್ನ ಮುಂದಿನ ನಿರ್ಧಾರ ಘೋಷಿಸುವುದಾಗಿ ಹೇಳಿದ್ದರು. ಹಾಗಾಗಿ ಇವತ್ತಿನ ರ್‍ಯಾಲಿಗೆ ವಿಶೇಷ ಮಹತ್ವ ಬಂದಿತ್ತು.

ರ್‍ಯಾಲಿಯಲ್ಲಿ ಪಕ್ಷ ತೊರೆಯುವ ಬಗ್ಗೆ ಸ್ಪಷ್ಟವಾಗಿ ಘೋಷಿಸದೆ ಹೋದರು, ತಾನು ಇನ್ಮುಂದೆ ಬಿಜೆಪಿ ಕೋರ್ ಕಮಿಟಿಯ ಸದಸ್ಯೆಯಾಗಿ ಉಳಿದಿಲ್ಲ ಎನ್ನುವ ಮೂಲಕ ಪಕ್ಷದಿಂದ ಈಗ ಮೊದಲಿಗಿಂತ ದೂರ ಸರಿದಿದ್ದೇನೆ ಎಂಬ ಸುಳಿವು ನೀಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಒಳಗೊಂಡಂತೆ ರಾಜ್ಯದ ಘಟಾನುಘಟಿ ನಾಯಕರು ಭಾಗವಹಿಸಿದ್ದ ರ್‍ಯಾಲಿಯ ವೇದಿಕೆಯಲ್ಲಿ ಪರೋಕ್ಷವಾಗಿ ದೇವೇಂದ್ರ ಫಡ್ನವೀಸ್‌ರನ್ನು ಪಂಕಜಾ ತರಾಟೆಗೆ ತೆಗೆದುಕೊಂಡದ್ದು ವಿಶೇಷವಾಗಿತ್ತು.

ಏಕನಾಥ್ ಖಡ್ಸೆ

ಕುಮಾರಿ ಮುಂಡೆ ತರಹ ಬೇರೆಬೇರೆ ಕಾರಣಗಳಿಗೆ ಫಡ್ನವೀಸ್ ನಾಯಕತ್ವದ ಮೇಲೆ ಮುನಿಸಿಕೊಂಡಿರುವ ಏಕನಾಥ್ ಖಡ್ಸೆ ಮತ್ತು ಪ್ರಕಾಶ್ ಮೆಹ್ತಾ ಕೂಡಾ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಪಂಕಜಾ ಮುಂಡೆಯ ಜೊತೆಗೆ ಬಂಡಾಯಕ್ಕೆ ಕೈಜೋಡಿಸಿರುವ ಸೂಚನೆ ನೀಡಿರೋದು ಬಿಜೆಪಿಯ ಭಿನ್ನಮತದ ಬೇಗುದಿಯನ್ನು ಹೆಚ್ಚಿಸಿದೆ.

ಪ್ರಕಾಶ್ ಮೆಹ್ತಾ

“ಒಂದು ಚುನಾವಣೆಯ ಸೋಲಿನ ಬಗ್ಗೆ ನಾನು ಅಷ್ಟಾಗಿ ತಲೆಕೆಡಿಸಿಕೊಳ್ಳುವವಳಲ್ಲ. ಆದರೆ ಪರಿಸ್ಥಿತಿಗಳು ಹೇಗಿವೆಯೆಂದರೆ ನನ್ನನ್ನು ಹತಾಶೆಗೆ ತಳ್ಳುತ್ತಿವೆ. ಆದರೆ ನಾನು ಖಂಡಿತ ಪಕ್ಷ ತೊರೆಯುವುದಿಲ್ಲ. ಬೇಕಾದರೆ ಪಕ್ಷಕ್ಕೆ ನಾನು ಬೇಡವಾಗಿದ್ದರೆ, ಪಕ್ಷವೇ ನಿರ್ಧಾರ ತೆಗೆದುಕೊಳ್ಳಲಿ. ಕೆಲವರು ನನ್ನನ್ನು ‘ಮಹಾತ್ವಾಕಾಂಕ್ಷಿ ಹೆಣ್ಣು’ ಅಂತ ಬ್ರಾಂಡ್ ಮಾಡಿದಾರೆ. ನನ್ನ ವಿರುದ್ಧ ಪಕ್ಷಕ್ಕೆ ಕಿವಿಚುಚ್ಚಿದ್ದಾರೆ. ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಂತ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಯಾವತ್ತೂ ನಾನು ಆ ಮಾತು ಹೇಳಿದವಳಲ್ಲ. ಆದ್ರೆ ನನ್ನದೊಂದು ಪ್ರಶ್ನೆ ಇದೆ. ಒಬ್ಬ ವ್ಯಕ್ತಿ ಮಹತ್ವಾಕಾಂಕ್ಷಿಯಾಗುವುದೇ ತಪ್ಪಾ? ರಾಜ್ಯವನ್ನು ಒಬ್ಬ ಮಹಿಳೆ ಮುನ್ನಡೆಸಬಾರದಾ?” ಎಂದು ರ್‍ಯಾಲಿಯಲ್ಲಿ ಪಂಕಜಾ ಕಿಡಿಕಾರಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಅವರು ಪಾರ್ಲಿ ಕ್ಷೇತ್ರದಲ್ಲಿ ಎನ್‌ಸಿಪಿಯಿಂದ ಸ್ಪರ್ಧಿಸಿದ್ದ ತಮ್ಮ ಸೋದರ ಸಂಬಂಧಿಯಾದ ಧನಂಜಯ್ ಮುಂಡೆ ವಿರುದ್ಧ ಸೋಲನುಭವಿಸಿದ್ದರು. ತನ್ನ ಭಾಷಣದಲ್ಲಿ ಈ ಸೋಲಿಗೆ ನಡೆದಿದ್ದ ತಂತ್ರಗಾರಿಕೆಯ ಪ್ರಚೋದನೆಗಳನ್ನು ಉಲ್ಲೇಖಿಸಿದ್ದ ಪಂಕಜಾ ಮುಂಡೆ ನಮ್ಮದೇ ಕೆಲ ನಾಯಕರಿಗೆ (ದೇವೇಂದ್ರ ಫಡ್ನವೀಸ್‌ರನ್ನು ಪರೋಕ್ಷವಾಗಿ ಉಲ್ಲೇಖಿಸುತ್ತಾ) ನಾನು ಗೆಲ್ಲುವುದು ಇಷ್ಟವಿರಲಿಲ್ಲ. ಹಾಗಾಗಿ ಸೋಲಬೇಕಾಯಿತು ಎಂದಿದ್ದಾರೆ.

“ನಾನು ಪಕ್ಷ ತ್ಯಜಿಸುವುದಿಲ್ಲ. ಆದರೆ 2020ರ ಜನವರಿ 27ರಂದು ಔರಂಗಾಬಾದ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ” ಎಂದು ಸಾರುವ ಮೂಲಕ, ಪಕ್ಷ ತೊರೆದು ತನ್ನನ್ನು ಸೋಲಿಸಿದವರಿಗೆ ಹಾದಿ ಸುಲಭ ಮಾಡಿಕೊಡುವುದಿಲ್ಲ, ಬದಲಿಗೆ ಪಕ್ಷದೊಳಗೆ ಬಂಡಾಯದ ತಿದಿ ಊದುತ್ತೇನೆ ಎಂಬ ಸುಳಿವು ನೀಡಿದ್ದಾರೆ. ಇಂದಿನ ರ್‍ಯಾಲಿಯಲ್ಲಿ ಏಕನಾಥ್ ಖಡ್ಸೆ ಮತ್ತು ಪ್ರಕಾಶ್ ಮೆಹ್ತಾರಂತಹ ಅತೃಪ್ತರ ಉಪಸ್ಥಿತಿ ಅದನ್ನು ಒತ್ತಿಹೇಳುತ್ತಿದೆ.
ಅಂದಹಾಗೆ, ಪಂಕಜಾ ಮುಂಡೆಯ ತಂಗಿ ಪ್ರೀತಮ್ ಮುಂಡೆ ಭೀಡ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ. ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ದಿವಂಗತ ಪ್ರಮೋದ್ ಮಹಾಜನ್‌ರ ಸೋದರ ಸೊಸೆಯೂ ಹೌದು. ಹಾಗಾಗಿ ಮಹಾರಾಷ್ಟ್ರ ರಾಜಕಾರಣದಲ್ಲಿ ಪಂಕಜಾ ಮುಂಡೆ ಕುಟುಂಬಕ್ಕೆ ರಾಜಕೀಯ ಪ್ರಭಾವವಿದೆ. ಪಂಕಜಾ ಮುಂಡೆ ಬಿಜೆಪಿ ತೊರೆದು ಶಿವಸೇನೆ ಸೇರಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...