Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...