Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...