Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ವಿಳಂಬಕ್ಕೆ ಕಾರಣವಾಗಿರೋದು ‘ಧನುರ್ಮಾಸ’ವೋ? ಶಾ ಲೆಕ್ಕಾಚಾರವೋ?

ಮಾಜಿ ‘ಅನರ್ಹ’ರ ಮಂತ್ರಿಗಿರಿ ವಿಳಂಬಕ್ಕೆ ಕಾರಣವಾಗಿರೋದು ‘ಧನುರ್ಮಾಸ’ವೋ? ಶಾ ಲೆಕ್ಕಾಚಾರವೋ?

- Advertisement -
- Advertisement -

ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರುವ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರಿಗೆ ಇನ್ನೂ ಒಂದು ತಿಂಗಳು ವಿರಹ ವೇದನೆ ತಪ್ಪಿದ್ದಲ್ಲ ಎಂಬ ಮಾತುಗಳು ಶಕ್ತಿಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿವೆ. ಫಲಿತಾಂಶ ಬಂದು ಮೂರು ದಿನವಾದರು ಇದುವರೆಗೆ ಹೈಕಮಾಂಡ್‌ನಿಂದ ಯಡ್ಯೂರಪ್ಪನವರಿಗೆ ಬುಲಾವ್ ಬಂದಿಲ್ಲ. ದಿಲ್ಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಗದ ಹೊರತು ಸಂಪುಟ ವಿಸ್ತರಣೆಯಾಗದು. ಮಾಧ್ಯಮದವರ ಜೊತೆ ಮಾತನಾಡುತ್ತ ತಾನು ಇನ್ನೂ ಒಂದು ವಾರ ದಿಲ್ಲಿಗೆ ಹೋಗಲ್ಲ ಎಂಬ ಮಾತನ್ನು ಯಡ್ಯೂರಪ್ಪನವರು ಹೇಳಿದ್ದಾರೆ. ಮುಂದಿನ ವಾರದಿಂದ ಧನುರ್ಮಾಸ ಶುರುವಾಗಲಿರುವುದರಿಂದ, ಅಲ್ಲಿಂದ ಒಂದು ತಿಂಗಳು, ಅಂದರೆ ಜನವರಿ ಮೂರನೇ ವಾರದವರೆಗೆ ಯಾವ ಶುಭಕಾರ್ಯಗಳೂ ನಡೆಯುವುದು ಕ್ಷೇಮವಲ್ಲ ಎಂಬ ಮೂಢನಂಬಿಕೆ ಪಂಚಾಂಗದಲ್ಲಿದೆ. ಅದನ್ನು ಅಪಾರವಾಗಿ ನಂಬುವ ಯಡ್ಯೂರಪ್ಪ ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆಗೆ ಕೈಹಾಕಲಾರರು ಎನ್ನುತ್ತಿವೆ ರಾಜಕೀಯ ವಿಶ್ಲೇಷಣೆಗಳು. ಹಾಗಾಗಿ ಉಪಚುನಾವಣೆಯಲ್ಲಿ ಗೆದ್ದು ಬಂದರು ಮಾಜಿ ಅನರ್ಹರು ಮಂತ್ರಿಗಳಾಗಲು ಇನ್ನು ಒಂದು ತಿಂಗಳು ಕಾಯಬೇಕಾಗಬಹುದು.

ಮೇಲ್ನೋಟಕ್ಕೆ ಧನುರ್ಮಾಸವನ್ನು ಈ ವಿಳಂಬಕ್ಕೆ ಕಾರಣವಾಗಿ ತೋರಿಸಲಾಗುತ್ತಿದೆಯಾದರು, ಇದರ ಹಿಂದೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಲೆಕ್ಕಾಚಾರಗಳೂ ಇವೆ  ಎನ್ನಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆಯನ್ನು ತೆರವುಗೊಳಿಸಿ, ಬೆಳ್ಳಂಬೆಳಗಿನ ಚುಮುಚುಮು ಛಳಿಯಲ್ಲೇ ಫಡ್ನವೀಸ್‌ಗೆ ಪ್ರಮಾಣವಚನ ಸ್ವೀಕರಿಸಲು ಗ್ರೀನ್‌ಸಿಗ್ನಲ್ ಕೊಡುವಷ್ಟ ಆತುರ ತೋರಿದ ಬಿಜೆಪಿಗೆ ಕರ್ನಾಟಕದ ಸಂಪುಟ ವಿಸ್ತರಣೆಗೆ ಅನುಮತಿ ಕೊಡಲು ಒಂದು ವಾರ ಕಾಯಿಸುವ ಯಾವ ಘನ ಕಾರಣಗಳೂ ಕಾಣುತ್ತಿಲ್ಲ. ಈಗಾಗಲೇ ಸಿಎಂ ಯಡ್ಯೂರಪ್ಪನವರು ಕೊಟ್ಟ ಮಾತಿನಂತೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಹೈಕಮಾಂಡ್‌ನ ಆಶ್ವಾಸನೆಯಿಂದಲೇ ಅವರು ಇಷ್ಟು ಘಂಟಾಘೋಷವಾಗಿ ಹೇಳುತ್ತಿದ್ದಾರೆ. ಮಂತ್ರಿ ಮಾಡುವುದೇ ದಿಟವೆಂದ ಮೇಲೆ ಕಾಯಿಸುವುದರಿಂದ ಏನು ಪ್ರಯೋಜನ? ಯಾವ ಲೆಕ್ಕಾಚಾರವನ್ನು ಶಾ ಈಡೇರಿಸಿಕೊಳ್ಳಬಹುದು? ಎಂಬ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ.

ಈ ಪ್ರಶ್ನೆಗಳಿಗೆ ಉತ್ತರವಾಗಿ ಹೀಗೊಂದು ವಿಶ್ಲೇಷಣೆ ಹರಿದಾಡುತ್ತಿದೆ. ಯಡ್ಯೂರಪ್ಪನವರು ಮುಖ್ಯಮಂತ್ರಿಯಾಗುವುದು ಬಿಜೆಪಿ ಹೈಕಮಾಂಡ್‌ಗೆ ಮೊದಲಿನಿಂದಲೂ ಇಷ್ಟವಿರಲಿಲ್ಲ. ಅವರು ತೋರಿದ ಅಸಹಕಾರ, ನಿರ್ಲಕ್ಷ್ಯಗಳೇ ಇದನ್ನು ಸಾಬೀತು ಮಾಡುತ್ತವೆ. ಇಂಥಾ ಸಮಯದಲ್ಲಿ ಎದುರಾದ ಉಪಚುನಾವಣೆಯ ಬಗ್ಗೆಯೂ ಹೈಕಮಾಂಡ್ ಹೆಚ್ಚಿನ ಆಸಕ್ತಿಯನ್ನೇನೂ ತೋರಲಿಲ್ಲ. ನೀವು ಮುಖ್ಯಮಂತ್ರಿಯಾಗಿ ನಿಮ್ಮ ಸರ್ಕಾರ ಉಳಿಯಬೇಕೆಂದರೆ ಅನರ್ಹರನ್ನು ನೀವೇ ಗೆಲ್ಲಿಸಿಕೊಳ್ಳಿ ಎಂಬ ವರ್ತನೆಯಷ್ಟೆ ಹೈಕಮಾಂಡ್‌ನಿಂದ ಯಡ್ಯೂರಪ್ಪಗೆ ಸಿಕ್ಕಿದ್ದು.

ಆ ಸವಾಲಿನಲ್ಲಿ ಯಡ್ಯೂರಪ್ಪ ಭರ್ಜರಿಯಾಗೇ ಗೆದ್ದು ತೋರಿಸಿದ್ದಾರೆ. ನಾಯಕರ ಅಸಹಕಾರ, ಟಿಕೇಟ್ ತಪ್ಪಿದವರ ಬಂಡಾಯದ ನಡುವೆಯೂ ಏಕಾಂಗಿಯಾಗಿ ‘ತಂತ್ರ’ಗಾರಿಕೆ ನಡೆಸಿ, ಹದಿನೈದು ಕ್ಷೇತ್ರಗಳ ಪೈಕಿ ಹನ್ನೆರಡರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಸಂಖ್ಯಾಬಲವನ್ನು 117ಕ್ಕೆ ಏರಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಗೆ ಈಗಲೂ ನಾನೇ ವರ್ಚಸ್ವಿ ನಾಯಕ ಎಂಬುದನ್ನಷ್ಟೇ ಅಲ್ಲ, ಲಿಂಗಾಯತ ಓಟ್ ಬ್ಯಾಂಕ್‌ಗೆ ಈಗಲೂ ನಾನೇ ಅಧಿನಾಯಕ ಅನ್ನೋದನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಟ್ಟಿನಲ್ಲಿ ಈ ಉಪಚುನಾವಣೆಯ ಫಲಿತಾಂಶ ಯಡ್ಯೂರಪ್ಪನವರನ್ನು ಪಕ್ಷದೊಳಗೆ ಮತ್ತಷ್ಟು ಬಲಿಷ್ಠಗೊಳಿಸಿದೆ. ಅವರನ್ನು ಮೂಲೆಗುಂಪು ಮಾಡುವ ಹಾದಿಯಲ್ಲಿದ್ದ ಹೈಕಮಾಂಡ್ ಕೊಂಚ ಯೋಚಿಸುವಂತೆ ಮಾಡಿದೆ.

ಯಡ್ಯೂರಪ್ಪ ಎಂಥಾ ಡಾಮಿನೇಟ್ ವ್ಯಕ್ತಿತ್ವದವರು ಅನ್ನೋದು ಅಮಿತ್ ಶಾಗೆ ಗೊತ್ತಿಲ್ಲದ ಸಂಗತಿಯೇನಲ್ಲ. ಕೊಂಚ ಅವಕಾಶ ಸಿಕ್ಕರೂ ಹೈಕಮಾಂಡ್‌ನ ಅಳತೆಮೀರಿ ಬೆಳೆದುಬಿಡುವ ಸಾಧ್ಯತೆಯೂ ಗೊತ್ತಿದೆ.

ಈ ಫಲಿತಾಂಶದಿಂದ ಯಡ್ಯೂರಪ್ಪ ಮೇಲುಗೈ ಸಾಧಿಸಿರೋದ್ರಿಂದ ಪಕ್ಷದೊಳಗೇ ಅವರತ್ತ ಸರಿದುಕೊಳ್ಳುವ ಬೆಂಬಲಿಗರ ಸಂಖ್ಯೆ ಹಿಗ್ಗಲಿದೆ. ಇನ್ನು ತಮ್ಮತಮ್ಮ ಮಾತೃಪಕ್ಷಗಳಿಗೆ ರಾಜೀನಾಮೆ ಕೊಟ್ಟು ಬಂದಿರುವ ಹದಿನೇಳು ಮಂದಿಯೂ ಯಡ್ಯೂರಪ್ಪನವರನ್ನು ನಂಬಿ, ಅವರ ಮೇಲೆ ವಿಶ್ವಾಸವಿಟ್ಟು ಬಂದಿದ್ದಾರೆಯೇ ವಿನಾಃ ಬಿಜೆಪಿ ಪಕ್ಷವನ್ನು ಇಡಿಯಾಗಿ ನಂಬಿಯಾಗಲಿ ಅಥವಾ ಮೋದಿ-ಶಾ ಜೋಡಿಯ ನೇರ ಮಧ್ಯಸ್ಥಿಕೆಯಿಂದಾಗಲಿ ಅಲ್ಲ. ಅವರಿಗೆ ಯಾವ ತ್ರಾಸೂ ಇಲ್ಲದೆ, ಏಕಾಏಕಿ ಮಂತ್ರಿಭಾಗ್ಯ ಕರುಣಿಸಿಬಿಟ್ಟರೆ ಅವರು ತಮ್ಮನ್ನು ಮಂತ್ರಿ ಮಾಡಿದ್ದೇ ಯಡ್ಯೂರಪ್ಪನವರು ಅಂತ ಅವರ ಪಾಳೆಯವನ್ನೇ ಸೇರಿಬಿಡುವ ಸಾಧ್ಯತೆ ಹೆಚ್ಚು. ಯಾಕೆಂದರೆ ತಮ್ಮ ಗೆಲುವಿನಲ್ಲಿ ಯಡ್ಯೂರಪ್ಪನವರ ಮುತುವರ್ಜಿಯನ್ನು ಅವರು ಹತ್ತಿರದಿಂದ ಕಂಡಿದ್ದಾರೆ. ಹುಣಸೂರಿನಲ್ಲಿ ಸೋತಿರುವ ಅನರ್ಹ ಶಾಸಕ ಎಚ್.ವಿಶ್ವನಾಥ್ ’ನಾನು ಚುನಾವಣೆಯಲ್ಲಿ ಸೋತಿರಬಹುದು. ಆದರೆ ನಮಗೆ ಯಡ್ಯೂರಪ್ಪನವರೇ ಹೈಕಮಾಂಡ್’ ಎಂದು ಹೇಳಿರೋದು ಈ ಸಾಧ್ಯತೆಯನ್ನು ರುಜುವಾತು ಮಾಡುತ್ತೆ.

ಹಾಗೇನಾದರು ಆದಲ್ಲಿ, ಸಂಪುಟದ ಮುಕ್ಕಾಲು ಭಾಗ ಯಡ್ಯೂರಪ್ಪನವರ ಬೆಂಬಲಿಗರೇ ತುಂಬಿಕೊಂಡಂತಾಗುತ್ತೆ. ಸರ್ಕಾರದ ಮೇಲಷ್ಟೆ ಅಲ್ಲ, ಪಕ್ಷದ ಮೇಲೂ ಯಡ್ಯೂರಪ್ಪನವರ ಹಿಡಿತ ಬಿಗಿಗೊಳ್ಳುತ್ತದೆ. ಆಗ ಮೂವರು  ಡಿಸಿಎಂಗಳನ್ನು ನೇಮಿಸಿ, ನಳಿನ್ ಕುಮಾರ್ ಕಟೀಲ್ ಥರದ ಅಧ್ಯಕ್ಷರನ್ನು ಆಯ್ಕೆ ಮಾಡಿ ಯಡ್ಯೂರಪ್ಪರನ್ನು ಕಟ್ಟಿಹಾಕಲು ತಾವು ಮಾಡಿದ ಪ್ರಯತ್ನಗಳೆಲ್ಲ ವ್ಯರ್ಥವಾಗಿಬಿಡುತ್ತವೆ ಎಂಬುದು ಹೈಕಮಾಂಡ್‌ಗೆ ಚೆನ್ನಾಗಿಯೇ ಗೊತ್ತು.

ಅದಕ್ಕೋಸ್ಕರವೇ ಈ ವಿಳಂಬ ನೀತಿ ಎನ್ನಲಾಗುತ್ತಿದೆ. ಹೊಸದಾಗಿ ಮಂತ್ರಿಯಾಗುವವರಿಗೆ ‘ಯಡ್ಯೂರಪ್ಪನವರಿಗಿಂತಲೂ ಹೈಕಮಾಂಡ್ ಕೃಪಾಕಟಾಕ್ಷವೇ ತುಂಬಾ ಮುಖ್ಯ’ ಎಂಬ ಬಿಜೆಪಿ ಸಂಸ್ಕೃತಿಯನ್ನು ಮನದಟ್ಟು ಮಾಡಿಸಿ ಅವರು ಸಾರಾಸಗಟು ಯಡ್ಯೂರಪ್ಪನವರ ಹಿಂಬಾಲಕರಾಗದಂತೆ ಸತಾಯಿಸಲು ನಿರ್ಧರಿಸಲಾಗಿದೆ ಎನ್ನುತ್ತಿವೆ ಮೂಲಗಳು.

ಇಲ್ಲಿ ಇನ್ನೂ ಒಂದು ಲೆಕ್ಕಾಚಾರವಿದ್ದಿರಬಹುದು. ಗೆದ್ದ ಕೂಡಲೇ ಅವರನ್ನು ಅನಾಯಾಸವಾಗಿ ಮಂತ್ರಿಮಾಡಿಬಿಟ್ಟರೆ ಪೊಗದಸ್ತಾದ ಖಾತೆಗೇ ಬೇಡಿಕೆ ಇಟ್ಟುಬಿಡುತ್ತಾರೆ. ಈ ಸಂದರ್ಭದಲ್ಲಿ ಇಲ್ಲ ಎನ್ನುವುದೂ ಕಷ್ಟ. ತುಸು ಸತಾಯಿಸಿ, ‘ಮಂತ್ರಿ ಮಾಡಿದರೆ ಸಾಕು, ಖಾತೆ ಯಾವುದಾದರೇನು’ ಎನ್ನುವಲ್ಲಿಗೆ ಬಗ್ಗಿಸಿ ಮಂತ್ರಿಗಿರಿ ಕರುಣಿಸುವ ಆಲೋಚನೆಯೂ ಇರಬಹುದು. ಉಪಚುನಾವಣೆಯಲ್ಲಿ ಗೆದ್ದ ವಲಸಿಗರೆಲ್ಲ ಭರಪೂರ ಖಾತೆಗಳ ಮೇಲೆ ಕಣ್ಣಿಟ್ಟು ಕೂತಿದ್ದಾರೆ. ಅವರಿಗೆ ಅವುಗಳನ್ನು ಬಿಟ್ಟುಕೊಟ್ಟರೆ, ಮೂಲ ಬಿಜೆಪಿಗರಲ್ಲಿ ಬಂಡಾಯ ಶುರುವಾಗುತ್ತೆ. ಅದನ್ನು ತಡೆಯಬೇಕೆಂದರೆ, ಹೀಗೆ ಒಂದಷ್ಟು ಸತಾಯಿಸಿ ಮಂತ್ರಿ ಮಾಡುವುದು ಒಳಿತು ಎಂಬ ತಂತ್ರವೂ ಇದ್ದಿರಬಹುದು. ಬಹುಶಃ ಈ ತಂತ್ರೋಪದೇಶ ಮಾಡಿಯೇ ಯಡ್ಯೂರಪ್ಪನವರನ್ನೂ ಬಿಜೆಪಿ ಹೈಕಮಾಂಡ್ ವಿಳಂಬ ನೀತಿಗೆ ಒಪ್ಪಿಸಿರಲೂಬಹುದು. ಇದು ದಿಟವೇ ಆಗಿದ್ದರೆ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಉರುಳಿಸುವ ಹುನ್ನಾರ ಹೈಕಮಾಂಡ್‌ನದ್ದು. ಯಾವುದನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...