Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ವಿಳಂಬಕ್ಕೆ ಕಾರಣವಾಗಿರೋದು ‘ಧನುರ್ಮಾಸ’ವೋ? ಶಾ ಲೆಕ್ಕಾಚಾರವೋ?

ಮಾಜಿ ‘ಅನರ್ಹ’ರ ಮಂತ್ರಿಗಿರಿ ವಿಳಂಬಕ್ಕೆ ಕಾರಣವಾಗಿರೋದು ‘ಧನುರ್ಮಾಸ’ವೋ? ಶಾ ಲೆಕ್ಕಾಚಾರವೋ?

- Advertisement -
- Advertisement -

ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರುವ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರಿಗೆ ಇನ್ನೂ ಒಂದು ತಿಂಗಳು ವಿರಹ ವೇದನೆ ತಪ್ಪಿದ್ದಲ್ಲ ಎಂಬ ಮಾತುಗಳು ಶಕ್ತಿಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿವೆ. ಫಲಿತಾಂಶ ಬಂದು ಮೂರು ದಿನವಾದರು ಇದುವರೆಗೆ ಹೈಕಮಾಂಡ್‌ನಿಂದ ಯಡ್ಯೂರಪ್ಪನವರಿಗೆ ಬುಲಾವ್ ಬಂದಿಲ್ಲ. ದಿಲ್ಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಗದ ಹೊರತು ಸಂಪುಟ ವಿಸ್ತರಣೆಯಾಗದು. ಮಾಧ್ಯಮದವರ ಜೊತೆ ಮಾತನಾಡುತ್ತ ತಾನು ಇನ್ನೂ ಒಂದು ವಾರ ದಿಲ್ಲಿಗೆ ಹೋಗಲ್ಲ ಎಂಬ ಮಾತನ್ನು ಯಡ್ಯೂರಪ್ಪನವರು ಹೇಳಿದ್ದಾರೆ. ಮುಂದಿನ ವಾರದಿಂದ ಧನುರ್ಮಾಸ ಶುರುವಾಗಲಿರುವುದರಿಂದ, ಅಲ್ಲಿಂದ ಒಂದು ತಿಂಗಳು, ಅಂದರೆ ಜನವರಿ ಮೂರನೇ ವಾರದವರೆಗೆ ಯಾವ ಶುಭಕಾರ್ಯಗಳೂ ನಡೆಯುವುದು ಕ್ಷೇಮವಲ್ಲ ಎಂಬ ಮೂಢನಂಬಿಕೆ ಪಂಚಾಂಗದಲ್ಲಿದೆ. ಅದನ್ನು ಅಪಾರವಾಗಿ ನಂಬುವ ಯಡ್ಯೂರಪ್ಪ ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆಗೆ ಕೈಹಾಕಲಾರರು ಎನ್ನುತ್ತಿವೆ ರಾಜಕೀಯ ವಿಶ್ಲೇಷಣೆಗಳು. ಹಾಗಾಗಿ ಉಪಚುನಾವಣೆಯಲ್ಲಿ ಗೆದ್ದು ಬಂದರು ಮಾಜಿ ಅನರ್ಹರು ಮಂತ್ರಿಗಳಾಗಲು ಇನ್ನು ಒಂದು ತಿಂಗಳು ಕಾಯಬೇಕಾಗಬಹುದು.

ಮೇಲ್ನೋಟಕ್ಕೆ ಧನುರ್ಮಾಸವನ್ನು ಈ ವಿಳಂಬಕ್ಕೆ ಕಾರಣವಾಗಿ ತೋರಿಸಲಾಗುತ್ತಿದೆಯಾದರು, ಇದರ ಹಿಂದೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಲೆಕ್ಕಾಚಾರಗಳೂ ಇವೆ  ಎನ್ನಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆಯನ್ನು ತೆರವುಗೊಳಿಸಿ, ಬೆಳ್ಳಂಬೆಳಗಿನ ಚುಮುಚುಮು ಛಳಿಯಲ್ಲೇ ಫಡ್ನವೀಸ್‌ಗೆ ಪ್ರಮಾಣವಚನ ಸ್ವೀಕರಿಸಲು ಗ್ರೀನ್‌ಸಿಗ್ನಲ್ ಕೊಡುವಷ್ಟ ಆತುರ ತೋರಿದ ಬಿಜೆಪಿಗೆ ಕರ್ನಾಟಕದ ಸಂಪುಟ ವಿಸ್ತರಣೆಗೆ ಅನುಮತಿ ಕೊಡಲು ಒಂದು ವಾರ ಕಾಯಿಸುವ ಯಾವ ಘನ ಕಾರಣಗಳೂ ಕಾಣುತ್ತಿಲ್ಲ. ಈಗಾಗಲೇ ಸಿಎಂ ಯಡ್ಯೂರಪ್ಪನವರು ಕೊಟ್ಟ ಮಾತಿನಂತೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಹೈಕಮಾಂಡ್‌ನ ಆಶ್ವಾಸನೆಯಿಂದಲೇ ಅವರು ಇಷ್ಟು ಘಂಟಾಘೋಷವಾಗಿ ಹೇಳುತ್ತಿದ್ದಾರೆ. ಮಂತ್ರಿ ಮಾಡುವುದೇ ದಿಟವೆಂದ ಮೇಲೆ ಕಾಯಿಸುವುದರಿಂದ ಏನು ಪ್ರಯೋಜನ? ಯಾವ ಲೆಕ್ಕಾಚಾರವನ್ನು ಶಾ ಈಡೇರಿಸಿಕೊಳ್ಳಬಹುದು? ಎಂಬ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ.

ಈ ಪ್ರಶ್ನೆಗಳಿಗೆ ಉತ್ತರವಾಗಿ ಹೀಗೊಂದು ವಿಶ್ಲೇಷಣೆ ಹರಿದಾಡುತ್ತಿದೆ. ಯಡ್ಯೂರಪ್ಪನವರು ಮುಖ್ಯಮಂತ್ರಿಯಾಗುವುದು ಬಿಜೆಪಿ ಹೈಕಮಾಂಡ್‌ಗೆ ಮೊದಲಿನಿಂದಲೂ ಇಷ್ಟವಿರಲಿಲ್ಲ. ಅವರು ತೋರಿದ ಅಸಹಕಾರ, ನಿರ್ಲಕ್ಷ್ಯಗಳೇ ಇದನ್ನು ಸಾಬೀತು ಮಾಡುತ್ತವೆ. ಇಂಥಾ ಸಮಯದಲ್ಲಿ ಎದುರಾದ ಉಪಚುನಾವಣೆಯ ಬಗ್ಗೆಯೂ ಹೈಕಮಾಂಡ್ ಹೆಚ್ಚಿನ ಆಸಕ್ತಿಯನ್ನೇನೂ ತೋರಲಿಲ್ಲ. ನೀವು ಮುಖ್ಯಮಂತ್ರಿಯಾಗಿ ನಿಮ್ಮ ಸರ್ಕಾರ ಉಳಿಯಬೇಕೆಂದರೆ ಅನರ್ಹರನ್ನು ನೀವೇ ಗೆಲ್ಲಿಸಿಕೊಳ್ಳಿ ಎಂಬ ವರ್ತನೆಯಷ್ಟೆ ಹೈಕಮಾಂಡ್‌ನಿಂದ ಯಡ್ಯೂರಪ್ಪಗೆ ಸಿಕ್ಕಿದ್ದು.

ಆ ಸವಾಲಿನಲ್ಲಿ ಯಡ್ಯೂರಪ್ಪ ಭರ್ಜರಿಯಾಗೇ ಗೆದ್ದು ತೋರಿಸಿದ್ದಾರೆ. ನಾಯಕರ ಅಸಹಕಾರ, ಟಿಕೇಟ್ ತಪ್ಪಿದವರ ಬಂಡಾಯದ ನಡುವೆಯೂ ಏಕಾಂಗಿಯಾಗಿ ‘ತಂತ್ರ’ಗಾರಿಕೆ ನಡೆಸಿ, ಹದಿನೈದು ಕ್ಷೇತ್ರಗಳ ಪೈಕಿ ಹನ್ನೆರಡರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಸಂಖ್ಯಾಬಲವನ್ನು 117ಕ್ಕೆ ಏರಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಗೆ ಈಗಲೂ ನಾನೇ ವರ್ಚಸ್ವಿ ನಾಯಕ ಎಂಬುದನ್ನಷ್ಟೇ ಅಲ್ಲ, ಲಿಂಗಾಯತ ಓಟ್ ಬ್ಯಾಂಕ್‌ಗೆ ಈಗಲೂ ನಾನೇ ಅಧಿನಾಯಕ ಅನ್ನೋದನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಟ್ಟಿನಲ್ಲಿ ಈ ಉಪಚುನಾವಣೆಯ ಫಲಿತಾಂಶ ಯಡ್ಯೂರಪ್ಪನವರನ್ನು ಪಕ್ಷದೊಳಗೆ ಮತ್ತಷ್ಟು ಬಲಿಷ್ಠಗೊಳಿಸಿದೆ. ಅವರನ್ನು ಮೂಲೆಗುಂಪು ಮಾಡುವ ಹಾದಿಯಲ್ಲಿದ್ದ ಹೈಕಮಾಂಡ್ ಕೊಂಚ ಯೋಚಿಸುವಂತೆ ಮಾಡಿದೆ.

ಯಡ್ಯೂರಪ್ಪ ಎಂಥಾ ಡಾಮಿನೇಟ್ ವ್ಯಕ್ತಿತ್ವದವರು ಅನ್ನೋದು ಅಮಿತ್ ಶಾಗೆ ಗೊತ್ತಿಲ್ಲದ ಸಂಗತಿಯೇನಲ್ಲ. ಕೊಂಚ ಅವಕಾಶ ಸಿಕ್ಕರೂ ಹೈಕಮಾಂಡ್‌ನ ಅಳತೆಮೀರಿ ಬೆಳೆದುಬಿಡುವ ಸಾಧ್ಯತೆಯೂ ಗೊತ್ತಿದೆ.

ಈ ಫಲಿತಾಂಶದಿಂದ ಯಡ್ಯೂರಪ್ಪ ಮೇಲುಗೈ ಸಾಧಿಸಿರೋದ್ರಿಂದ ಪಕ್ಷದೊಳಗೇ ಅವರತ್ತ ಸರಿದುಕೊಳ್ಳುವ ಬೆಂಬಲಿಗರ ಸಂಖ್ಯೆ ಹಿಗ್ಗಲಿದೆ. ಇನ್ನು ತಮ್ಮತಮ್ಮ ಮಾತೃಪಕ್ಷಗಳಿಗೆ ರಾಜೀನಾಮೆ ಕೊಟ್ಟು ಬಂದಿರುವ ಹದಿನೇಳು ಮಂದಿಯೂ ಯಡ್ಯೂರಪ್ಪನವರನ್ನು ನಂಬಿ, ಅವರ ಮೇಲೆ ವಿಶ್ವಾಸವಿಟ್ಟು ಬಂದಿದ್ದಾರೆಯೇ ವಿನಾಃ ಬಿಜೆಪಿ ಪಕ್ಷವನ್ನು ಇಡಿಯಾಗಿ ನಂಬಿಯಾಗಲಿ ಅಥವಾ ಮೋದಿ-ಶಾ ಜೋಡಿಯ ನೇರ ಮಧ್ಯಸ್ಥಿಕೆಯಿಂದಾಗಲಿ ಅಲ್ಲ. ಅವರಿಗೆ ಯಾವ ತ್ರಾಸೂ ಇಲ್ಲದೆ, ಏಕಾಏಕಿ ಮಂತ್ರಿಭಾಗ್ಯ ಕರುಣಿಸಿಬಿಟ್ಟರೆ ಅವರು ತಮ್ಮನ್ನು ಮಂತ್ರಿ ಮಾಡಿದ್ದೇ ಯಡ್ಯೂರಪ್ಪನವರು ಅಂತ ಅವರ ಪಾಳೆಯವನ್ನೇ ಸೇರಿಬಿಡುವ ಸಾಧ್ಯತೆ ಹೆಚ್ಚು. ಯಾಕೆಂದರೆ ತಮ್ಮ ಗೆಲುವಿನಲ್ಲಿ ಯಡ್ಯೂರಪ್ಪನವರ ಮುತುವರ್ಜಿಯನ್ನು ಅವರು ಹತ್ತಿರದಿಂದ ಕಂಡಿದ್ದಾರೆ. ಹುಣಸೂರಿನಲ್ಲಿ ಸೋತಿರುವ ಅನರ್ಹ ಶಾಸಕ ಎಚ್.ವಿಶ್ವನಾಥ್ ’ನಾನು ಚುನಾವಣೆಯಲ್ಲಿ ಸೋತಿರಬಹುದು. ಆದರೆ ನಮಗೆ ಯಡ್ಯೂರಪ್ಪನವರೇ ಹೈಕಮಾಂಡ್’ ಎಂದು ಹೇಳಿರೋದು ಈ ಸಾಧ್ಯತೆಯನ್ನು ರುಜುವಾತು ಮಾಡುತ್ತೆ.

ಹಾಗೇನಾದರು ಆದಲ್ಲಿ, ಸಂಪುಟದ ಮುಕ್ಕಾಲು ಭಾಗ ಯಡ್ಯೂರಪ್ಪನವರ ಬೆಂಬಲಿಗರೇ ತುಂಬಿಕೊಂಡಂತಾಗುತ್ತೆ. ಸರ್ಕಾರದ ಮೇಲಷ್ಟೆ ಅಲ್ಲ, ಪಕ್ಷದ ಮೇಲೂ ಯಡ್ಯೂರಪ್ಪನವರ ಹಿಡಿತ ಬಿಗಿಗೊಳ್ಳುತ್ತದೆ. ಆಗ ಮೂವರು  ಡಿಸಿಎಂಗಳನ್ನು ನೇಮಿಸಿ, ನಳಿನ್ ಕುಮಾರ್ ಕಟೀಲ್ ಥರದ ಅಧ್ಯಕ್ಷರನ್ನು ಆಯ್ಕೆ ಮಾಡಿ ಯಡ್ಯೂರಪ್ಪರನ್ನು ಕಟ್ಟಿಹಾಕಲು ತಾವು ಮಾಡಿದ ಪ್ರಯತ್ನಗಳೆಲ್ಲ ವ್ಯರ್ಥವಾಗಿಬಿಡುತ್ತವೆ ಎಂಬುದು ಹೈಕಮಾಂಡ್‌ಗೆ ಚೆನ್ನಾಗಿಯೇ ಗೊತ್ತು.

ಅದಕ್ಕೋಸ್ಕರವೇ ಈ ವಿಳಂಬ ನೀತಿ ಎನ್ನಲಾಗುತ್ತಿದೆ. ಹೊಸದಾಗಿ ಮಂತ್ರಿಯಾಗುವವರಿಗೆ ‘ಯಡ್ಯೂರಪ್ಪನವರಿಗಿಂತಲೂ ಹೈಕಮಾಂಡ್ ಕೃಪಾಕಟಾಕ್ಷವೇ ತುಂಬಾ ಮುಖ್ಯ’ ಎಂಬ ಬಿಜೆಪಿ ಸಂಸ್ಕೃತಿಯನ್ನು ಮನದಟ್ಟು ಮಾಡಿಸಿ ಅವರು ಸಾರಾಸಗಟು ಯಡ್ಯೂರಪ್ಪನವರ ಹಿಂಬಾಲಕರಾಗದಂತೆ ಸತಾಯಿಸಲು ನಿರ್ಧರಿಸಲಾಗಿದೆ ಎನ್ನುತ್ತಿವೆ ಮೂಲಗಳು.

ಇಲ್ಲಿ ಇನ್ನೂ ಒಂದು ಲೆಕ್ಕಾಚಾರವಿದ್ದಿರಬಹುದು. ಗೆದ್ದ ಕೂಡಲೇ ಅವರನ್ನು ಅನಾಯಾಸವಾಗಿ ಮಂತ್ರಿಮಾಡಿಬಿಟ್ಟರೆ ಪೊಗದಸ್ತಾದ ಖಾತೆಗೇ ಬೇಡಿಕೆ ಇಟ್ಟುಬಿಡುತ್ತಾರೆ. ಈ ಸಂದರ್ಭದಲ್ಲಿ ಇಲ್ಲ ಎನ್ನುವುದೂ ಕಷ್ಟ. ತುಸು ಸತಾಯಿಸಿ, ‘ಮಂತ್ರಿ ಮಾಡಿದರೆ ಸಾಕು, ಖಾತೆ ಯಾವುದಾದರೇನು’ ಎನ್ನುವಲ್ಲಿಗೆ ಬಗ್ಗಿಸಿ ಮಂತ್ರಿಗಿರಿ ಕರುಣಿಸುವ ಆಲೋಚನೆಯೂ ಇರಬಹುದು. ಉಪಚುನಾವಣೆಯಲ್ಲಿ ಗೆದ್ದ ವಲಸಿಗರೆಲ್ಲ ಭರಪೂರ ಖಾತೆಗಳ ಮೇಲೆ ಕಣ್ಣಿಟ್ಟು ಕೂತಿದ್ದಾರೆ. ಅವರಿಗೆ ಅವುಗಳನ್ನು ಬಿಟ್ಟುಕೊಟ್ಟರೆ, ಮೂಲ ಬಿಜೆಪಿಗರಲ್ಲಿ ಬಂಡಾಯ ಶುರುವಾಗುತ್ತೆ. ಅದನ್ನು ತಡೆಯಬೇಕೆಂದರೆ, ಹೀಗೆ ಒಂದಷ್ಟು ಸತಾಯಿಸಿ ಮಂತ್ರಿ ಮಾಡುವುದು ಒಳಿತು ಎಂಬ ತಂತ್ರವೂ ಇದ್ದಿರಬಹುದು. ಬಹುಶಃ ಈ ತಂತ್ರೋಪದೇಶ ಮಾಡಿಯೇ ಯಡ್ಯೂರಪ್ಪನವರನ್ನೂ ಬಿಜೆಪಿ ಹೈಕಮಾಂಡ್ ವಿಳಂಬ ನೀತಿಗೆ ಒಪ್ಪಿಸಿರಲೂಬಹುದು. ಇದು ದಿಟವೇ ಆಗಿದ್ದರೆ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಉರುಳಿಸುವ ಹುನ್ನಾರ ಹೈಕಮಾಂಡ್‌ನದ್ದು. ಯಾವುದನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...