Homeಅಂಕಣಗಳುಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

ಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

- Advertisement -
 ಯಾಹೂ |
ನೇರ ನಡೆ ನುಡಿಗೆ ಹೆಸರಾಗಿದ್ದ ಜಿ. ಮಾದೇಗೌಡರು, ಜೆಡಿಎಸ್ ಕಡೆಯಿಂದ ಹಣ ಬರುತ್ತದೆಂದು ಮಂಡ್ಯದ ಗಾಂಧಿಭವನದ ಎದುರು ಕುಳಿತು ಕಾದು ಸಾಕಾಗಿ, ಕಡೆಗೆ ಪುಟ್ಟರಾಜನಿಗೆ ಫೋನು ಮಾಡಿ ‘ಎಲ್ಲೊದುಡ್ಡು’ ಎಂದರಂತಲ್ಲಾ, ಪುಟ್ಟರಾಜನಿಗೆ ಮಾದೇಗೌಡರಿಂದ ಸಾಲ ಪಡೆದು ಬಡ್ಡಿಯನ್ನು ಕೊಡದೆ ಕುಂತವನ ದನಿಯಲ್ಲಿ, “ಅಪ್ಪಾಜಿಆರೇಂಜ್ ಮಾಡ್ತಿನಿ” ಎಂದುಗೋಗರೆದಂತರಲ್ಲಾ.ಮಾದೇಗೌಡರು, ಮಂಡ್ಯದ ಸೊಗಡಿಗೆ ಹೆಸರಾದವರು, ಗಾಂಧಿಮಾರ್ಗಿ ಬೇರೆ, ಅದಕ್ಕಾಗಿ ಗಾಂಧಿ ಭವನ ನಿರ್ಮಿಸಿ ಇಳಿ ಹೊತ್ತಿನಲ್ಲಿ ಅದರ ಮುಂದೆ ಕುಳಿತು ಈ ನಾಡಿನ ಬಗ್ಗೆ ಚಿಂತಿಸದವರು. ಆದರೆ ಸ್ವಂತದ ಬಗ್ಗೆ ತುಂಬಾ ಯೋಚಿಸಿ ದವರು. ಈ ಹಿಂದೆ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ದೂರಿ ಕಾಂಗ್ರೆಸ್ ತೊರೆದು ಬಿ.ಜೆ.ಪಿ ಅವರಿಗೆ ಒಗ್ಗಲಿಲ್ಲ. ಮತ್ತೆ ಕಾಂಗ್ರೆಸ್‍ಗೆ ಮರಳಿ ಮಗನ ಕೈಲಿ ಹಣ ಕಳಿದು. ಇಲ್ಲ ಯಾರು ಕೊಡ್ತಾರೊ ಅವುರೆಸರೇಳು ನಾವೇ ವಸೂಲು ಮಾಡ್ತಿವಿ” ಎಂದಿರೋದು .ವಯಸ್ಸಾದಂತೆ ತಲೆಯೊಳಗಿನ ಸಿದ್ಧಾಂತಗಳು ಸಾಯುತ್ತ, ಕುಟುಂಬದ ವ್ಯಾಮೋಹ ಅಮರಿಕೊಳ್ಳುವುದು, ಈ ಮಾದೇಗೌಡನನ್ನ ಬಿಡಲಿಲ್ಲವಲ್ಲಾ. ಅದೇನಾದರಾಗಲಿ. ಕಡೇಗಳಿಗೆಯಲ್ಲಿ ಚಿಲ್ಲರೆ ಕಾಸಿಗೆ ಪುಟ್ಟರಾಜನನ್ನ ಕೇಳಿ ಮಾದೇಗೌಡನ ಮಾನ ಮೂರು ಕಾಸಿಗೆ ಹರಾಜಾಯ್ತಲ್ಲಾ ಥೂತ್ತೆರಿ.
ಮಂಡ್ಯ ಚುನಾವಣೆಯ ರಂಗು ತಾರಕಕ್ಕೇರಿರುವುದರ ದ್ಯೋತಕವಾಗಿ, ಎನ್.ಡಿ.ಟಿ.ವಿ.ಯ ಮಾಯಾ ಶರ್ಮಾ ಸುಮಲತಾರ ಹಿಂದೆತಿರುಗುತ್ತಿರುವುದು ಗೊತ್ತಾಗಿ, ಮಾಯಾಗೆ ಫೋನ್ ಮಾಡಿದರೆ ಅವರು ಫೋನ್ ತೆಗೆಯಲಿಲ್ಲ. ಎನ್.ಡಿ ಟಿವಿ ಮಾಯಾ ಇವರಿಗಿಂತಲೂ ನಮ್ಮ ವಾಟಿಸ್ಸೆ ಸರಿಯಾಗಿ ಸುದ್ದಿ ನೀಡಲು ಸೂಕ್ತ ವ್ಯಕ್ತಿಯೆಂದು ಫೋನ್ ಮಾಡಲಾಗಿರಿಂಗಾಯ್ತು, ರಿಂಗ್‍ಟೂನ್ “ಬಲೆ ಚಾನ್ಸಿದೆ, ಲಕ್ಕಿ ಚಾನ್ಸಿದೆ, ಬಲೆ ಚಾನ್ಸಿದು’ ‘ಗುಡ್‍ಯುವುನಿಂಗ್ ಸಾರ್’
“ಎಲ್ಲಿದ್ದಿ ವಾಟಿಸ್ಸೆ”
“ಬಿಂಡಿಗನವಿಲೆ ಹೆಸರು ಕೇಳಿದ್ದಿರ ಸಾರ್.”
“ಗೊತ್ತು ಗರುಡಾಚಾರ್ರೂರು”
“ಅಷ್ಟೆ ಅಲ್ಲ ಸಾರ್. ಅಣು ವಿಜ್ಞಾನಿ, ರಾಜಾರಾಮಣ್ಣನ ಊರು. ಸಿನಿಮಾ ಡೈರೆಕ್ಟರು, ಬಿ.ಎಸ್.ರಂಗನ್‍ಊರಿದು”
“ಹೌದಾ”
“ಇಂತ ಪ್ರತಿಭಾವಂತ್ರೆ ಒಂದು ಡಜನ್ ಇರೊ ಊರಿದು”
“ಅಷ್ಟೊಂದು ಪ್ರತಿಭಾವಂತ್ರಿದ್ದರ”
“ನಾವಲ್ಲ ಸಾ ಅವುರ್ಯಲ್ಲ ಅಯ್ಯಂಗಾರ್ರು”
“ಸರಿ ಬುಡು”
“ಈ ಊರಿಗೆ ನಿಖಿಲ್ ಬತ್ತನೆಅಂತ ಭಾರಿಜನ ಸೇರ್ಯವುರೆ”
“ಅಷ್ಟೊಂದು ಜನ ಬಂದವುರಾ”
“ಪರೆಡ್‍ಗೆ ತವುಜೆಂಡಿಂದ ತ್ರೀ ಅಂಡ್ರೆಡ್‍ವರಿಗೂ ಬಟಾವಡೆ ಆಗ್ಯದೆ ಸಾ”
“ಇನ್ನ ಓಟಿಗೆಷ್ಟು ಕೊಡ್ತಾರಪ್ಪ”
“ಅದ ಹೇಳಕ್ಕೆ ಬರದಿಲ್ಲ ಸಾರ್. ಪ್ರತಿಎಮ್ಮೆಲ್ಲೆಗೂ 25 ಕೋಟಿ ಟಾರ್ಗೆಟ್ ಕೊಟ್ಟವುನಂತೆ ಕುಮಾರಣ್ಣ”
“ಅಂದ್ರೆ ಅವುರು ಕೈಯಿಂದ ಖರ್ಚು ಮಾಡಬೇಕಾ”
“ಪುಟ್ಟರಾಜ ತಮ್ಮಣ್ಣ ನಾವೇ ಹಾಯ್ಕಂಡು ಖರ್ಚು ಮಾಡ್ತಿವಿ ಅಂದಿದ್ದರಂತೆ”
“ಅನ್ನಲೇಬೇಕು ಬುಡು. ಇದೇ ತಮ್ಮಣ್ಣನ ಆಸ್ತಿ ವಿಷಯದಲ್ಲಿ ಮಾದೇಗೌಡ್ರು ಹಿಂದೆನೆ ಹೋರಾಡಿದ್ರು”
“ಮಾದೇಗೌಡ ಬುಡಿ ಸಾ. ಅವುನು ಮಾತಾಡಿದ್ರೆ ಅಂಬರೀಶು “ಲೇ ಮುದುಕ ಸುಮ್ಮನಿರು ಇಲ್ಲ ಅಂದ್ರೆ ನಿನ್ನ  ಕತ್ತಿಸಗತಿನಿ ಅಂತಿದ್ನಂತೆ”
“ತಮಾಸಿಗೆ ಅಂಗಂತಿದ್ರು”
“ತಮಾಸಿನೆ ಆದ್ರು ಈ ಮುದುಕ ಹಾಳಾದನಲ್ಲ ಸಾ”
“ಏನು ಹಾಳಾಗಿಲ್ಲ. ಚುನಾವಣೆ ಕರ್ಚಿಗೆ ದುಡ್ಡು ಕೇಳ್ಯವುರೆ ಅಷ್ಟೆ”
“ಮಾದೇಗೌಡ ಪುಟ್ಟರಾಜನ್ನ ಕೇಳಿದಕ್ಕಿಂತ, ಕುಮಾರಣ್ಣನ್ನ ಕೇಳಬೇಕಾಗಿತ್ತು ಸಾ”
“ಕುಮಾರಣ್ಣ ಯಮ್ಮೆಲ್ಲೆಗಳಿಗೆ ವಯಿಸಿಬುಟ್ಟವುನೆ”
“ಮಗನ್ನ ಗೆಲ್ಲಿಸಿಕೊಂಡು ಬರೊ ಜವಾಬ್ದಾರಿಯ ಎಮ್ಮೆಲ್ಲೆಗಳೇ ವಯಿಸಿಕೊಂಡವಂತಲ್ಲ ಸಾ. ಪಾಪ ಆ ಹುಡುಗನಿಗೆ ಬಾಸಣ ಬರವಿಲ್ಲ”
“ವ ಪರವಾಗಿಲ್ಲ ಮಾತಾಡ್ತನೆ”
“ಏನು ಮಾತಾಡ್ತನೆ ಸಾ. ನಾನು ಕುಮಾರಸ್ವಾಮಿ ಹೊಟ್ಟೆಲುಟ್ಟಕ್ಕೆ ಪುಣ್ಯ ಮಾಡಿದ್ದೆಅಂತದೆ.ನಮ್ಮಪ್ಪ ಮಂಡ್ಯಕೆಎಂಟು ಸಾವುರ ಕೋಟಿ ಕೊಟ್ಟವುನೆ ಅಂತದೆ. ನಮ್ಮ ಪಾರ್ಟಿ ಕಾರ್ಯಕರ್ತರಿಗೆ ಯಾರಾದ್ರು ಮೈ ಮುಟ್ಟಿದ್ರೆ ಹುಶಾರು ಅಂದರೆ. ಎಲ್ಲಿತ್ತು ಈ ಕರ್ಮ”
“ಇನ್ನು ಮುಂದೈತೆ ನಿಮಗ್ಯಲ್ಲ”
“ಯಾಕೊ ಅಂಗೆ ಕಾಣ್ತದೆ ಸಾ. ಈ ದ್ಯಾವೇಗೌಡ ಮಕ್ಕಳು ಮರಿನ್ಯಲ್ಲ ರಾಜಕಾರಣಕ್ಕೆ ತರದೇ ಆಗಿದ್ರೆ, ಅವುಕೆ ಒಳ್ಳೆ ಮಾತು, ನಡವಳಿಕೆ, ವಿದ್ಯೆ, ಬುದ್ಧಿ, ಕಲಿಸಿ ಕಳಿಸಬೇಕಾಗಿತ್ತು ಸಾ”
“ದ್ಯಾವೇಗೌಡ್ರೆ ಅಂಗಿದ್ದ ಮೇಲೆ ಅವುಕೆಲ್ಲಿ ಕಲಿಸ್ಯಾರು”
“ಅದು ಸರಿನೆ ಬುಡಿ, ಗೌಡ್ರು ಪಾರ್ಟಿ ಸಿದ್ಧಾಂತಕ್ಕೆ ಒಗ್ಗಿಕಳೊ ಬದ್ಲು ಪಾರ್ಟಿನೆತನಿಗೆ ಬೇಕಾದಂತೆ ಬಗ್ಗಿಸಿಗಂಡ್ರು”
“ಪರವಾಗಿಲ್ಲ ಗೌಡ್ರು ಬಗ್ಗೆ ತಿಳಿಕಂಡಿದ್ದಿ”
“ಯಾವುದಾದ್ರು ಯೂನಿವರ್ಸಿಟಿ ಪರಮಿಷನ್ ಕೊಟ್ರೆ ಡಾಕ್ಟರೇಟ್ ಮಾಡನ ಅಂತ ಇದ್ದಿನಿ ಸಾ”
“ಹಂಪೆ ಯೂನಿವರ್ಸಿಟಿಲಿ ನೊಂದಾಯಿಸಿ ಮಾಡು”
“ಹಂಪೆ ಅಂದೇಟಿಗೆ ಗೆಪ್ತಿಗೆ ಬತ್ತು ಸಾ. ಅಲ್ಲೊಬ್ಬಳು ಮಲ್ಲಿಕಾಗಂಟಿ ಅಂತ ಇದ್ಲು ಈಗ್ಲು ಇದ್ದಳಾ”
“ಇಲ್ಲ ಹೋದ್ಲು. ವಿಶಭಟ್ಟಗೊತ್ತ ನಿಂಗೆ”
“ಗೊತ್ತು ಸಾ. ಇಲ್ಲೆ ನಮ್ಮ ನಾಗ್ತಳ್ಳಿ ಚಂದ್ರನ ಬಗ್ಗೆ ಮಾತಾಡಕ್ಕೆರ ಬಂದಿದ್ದ. ಹುಟ್ಟ ಕಳ್ಳಿದ್ದಂಗಿದ್ದ”
“ಅವುನ್ನ ಈ ನಿಮ್ಮಗಂಟೆ ಸಮಾರಂಭಕ್ಕೆ ಕರೆದಿದ್ಲು”
“ಕರಿಬಾರ್ದ”
“ಕಳ್ಳನಂಗಿದ್ದ ಅಂತಿ ಕರಿಬಾರ್ದ ಅಂತಿ ಯಲ್ಲಯಾ. ಆ ಹುಟ್ಟು ಸುಳ್ಳಪ್ಪ ಕ್ಯಟ್ಟಚೆಡ್ಡಿ”
“ಚೆಡ್ಡಿಲಿ ವಳ್ಳೆ ಚೆಡ್ಡಿನೂ ಇದ್ದವಾ”
“ಅವೆ ಆದ್ರೆ ಇವುನು ಮಾತ್ರ ವಿಶಪಾತಕ .ಇಂಥೊನ್ನ ಆ ಗಂಟಿ ಸಮಾರಂಬಕ್ಕೆ ಕರಿಸಿಗಂಡು ಸರಿಯಾಗಿ ಉಗಿಸಿಗಂಡ್ಳು”
“ನಾವು ಯಾರ ಪರನೂ ಮಾತಾಡಂಗಿಲ್ಲ ಸಾ. ಯಾರು ಯಾವಟೈಮಲ್ಲಿ ಬದ್ಲಾಯ್ತಾರೊ ಏನೊ”
“ಬದಲಾವಣೆ ಕಾಲದ ನಿಯಮ”
“ಅದು ಮನುಸುನ ಮನಸಿಗೂ ಅನ್ವಯಿಸ್ತದಾ”
“ಊ ಮತ್ತೆ ಕರ್ನಾಟಕದಲ್ಲಿ ಈಗ ಯಂತ ಬದಲಾವಣೆ ಆಗ್ಯದೆಗೊತ್ತ”
“ಗೊತ್ತು ಸಾ. ಈ ಡಿಕೆಶಿ, ಕುಮಾರಸ್ವಾಮಿ ಹೊಡದಾಡಿಕಂಡೆ ಸತ್ತೊಯ್ತರೆ ಅನಕಂಡಿದ್ದೆ. ಈಗ ನೋಡಿದ್ರೆ ದ್ಯಾವೇಗೌಡನ ಹಣೆಗೆ ಅಕ್ಷತೆ ಆಗ್ಯವುರೆ”
“ಅಕ್ಷತೆನೆ”
“ಊ ಸಾ. ಡಿಕೆಶಿ ಹರಸಣ ಅಕ್ಕಿ ಸೇರಿದ್ರೆ ಅಕ್ಷತೆ ಅಂದ. ಅದ ಯಾರಿಗಿಡಬೇಕು ದ್ಯಾವೇಗೌಡನಿಗೆ ತಾನೆ”
“ನಿಜಕಣಯ್ಯ”
“ಇನ್ನ ಅಹಿಂದ ಸಭೆಲಿ ಈ ಸಿದ್ದರಾಮಯ್ಯ ದ್ಯಾವೇಗೌಡರನ್ನ ಬೋದಿದ್ದ ನೋಡಿದ್ರೆ, ಇನ್ನ ಮುಗಿತು. ಈ ಜಲುಮದಲ್ಲಿ ಇವುರು ಹಿಂಗೇ ಸತ್ತೋಯ್ತರೆ ಅನ್ನಕಂಡಿದ್ದೆ. ತೀರ ಇತ್ತೀಚಿಗೆ, ಈ ಸಿದ್ದರಾಮಯ್ಯನಂತ ನೀಚ ಮುಕ್ಯಮಂತ್ರಿನ ನೋಡೇ ಇಲ್ಲ ಅಂದ ದ್ಯಾವೇಗೌಡ, ಈಗ ನೋಡಿದ್ರೆ ಜಾತ್ರೆಗೆ ರೆಡಿಯಾಗಿರೋ ಜೋಡೆತ್ತಿನಂಗೆ ಜ್ವತೆಲೆ ನಿಂತವುರೆ ಇದಕೇನೇಳ್ತಿರಿ”
“ಒಳ್ಳೆ ಬದಲಾವಣೆ”
“ಯಾಕೆ ಸಾರ್’
“ಮೋದಿ ಟೀಮಂಗೆ ಯಲ್ಲ ಒಂದಾಗಬೇಕಾಗಿದೆ”
“ಅದೇನೂ ನಿಜಸಾ. ಈ ಹಾಳು ಚೆಡ್ಡಿಗಳು ಈಗ ಏನೇಳ್ತ ಅವುರೆಗೊತ್ತೆ, ಮೋದಿ ಏನಾರ ಸೋತ್ರೆ ಆ ಪಾಕೀಸ್ತಾನದೋರು ನಮ್ಮ ಮ್ಯಾಲೆ ಬಿದ್ದು ಇಚಿಡಿ ಯಾದೇಸನೆಗೆದ್ದ ಕತ್ತರಂತೆ”
“ವಳ್ಳೆದಾಯ್ತಲ್ಲಯ್ಯ”
“ಇದೇನ್ ಸಾ ಹಿಂಗೇಳ್ತಿರಿ”
“ಪಾಕಿಸ್ತಾನ ದೂರು ಇಂಡಿಯಾಗೆದ್ದು ಕೂಡ್ಳೆ ಅದೂ ಇಂಡಿಯಾ ಆಯ್ತದಲ್ಲಯ್ಯ”
“ಅಂಗಾದ್ರೆ ಗೆದ್ಕಳ್ಳಿ ಬುಡಿ ಸಾ”
“ಥೂತ್ತೆರಿ”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...